Punjalkatte; ಸರಕಾರಿ ಶಾಲೆ ಉಳಿಸಲು ನವರಾತ್ರಿ ವೇಷ!

ದೇವಸ್ಯಮೂಡೂರು ಸರಕಾರಿ ಶಾಲೆಯ ಕಟ್ಟಡ ಶಿಥಿಲ, ಆವರಣ ಗೋಡೆ ಇಲ್ಲ

Team Udayavani, Oct 12, 2024, 1:30 AM IST

14

ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ವಸಂತ ಮುದಿಮಾರ ನೇತೃತ್ವದ ತಂಡ ಶಾರ್ದೂಲವೇಷ ಧರಿಸಿ ನಿಧಿ ಸಂಗ್ರಹಣೆಗೆ ಮುಂದಾಗಿದೆ.

ಪುಂಜಾಲಕಟ್ಟೆ: ಸರಕಾರಿ ಶಾಲೆಗಳನ್ನು ಉಳಿಸಲು ಶಿಕ್ಷಕರು, ಪೋಷ ಕರು ಶಾಲಾಭಿವೃದ್ಧಿ ಸಮಿತಿ ದಾನಿಗಳ ನೆರವು ಯಾಚನೆ ಸೇರಿದಂತೆ ಬೇರೆ ಬೇರೆ ರೀತಿಯಲ್ಲಿ ಪ್ರಯತ್ನಿಸುವುದನ್ನು ನೋಡಿದ್ದೇವೆ. ಇಲ್ಲೊಂದು ಶಾಲೆಯ ಶಾಲಾಭಿವೃದ್ಧಿ ಸಮಿತಿ ನವರಾತ್ರಿ ವೇಷ ಧರಿಸಿ ನಿಧಿ ಸಂಗ್ರಹಿಸಿ ಶಾಲೆಯ ಅಭಿವೃದ್ಧಿಗೆ ಮುಂದಾಗಿದೆ.

ಬಂಟ್ವಾಳ ತಾಲೂಕಿನ ಗ್ರಾಮೀಣ ಪ್ರದೇಶವಾದ ದೇವಸ್ಯಮೂಡೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ವಸಂತ ಮುದಿಮಾರ ಮತ್ತು ಇಬ್ಬರು ಸದಸ್ಯರು ಹಾಗೂ ಹಿರಿಯ ವಿದ್ಯಾರ್ಥಿಗಳ ತಂಡ ವಿದ್ಯಾ ದೇಗುಲ ಸೇವಾ ಯೋಜನೆ ಎಂಬ ಹೆಸರಿನಲ್ಲಿ ಶಾರ್ದೂಲವೇಷ ಧರಿಸಿ ಗಮನ ಸೆಳೆದಿದ್ದಾರೆ.

ನವರಾತ್ರಿ ಪ್ರಾರಂಭದ ದಿನ ಅ. 3ರಂದು ಶಾಲಾ ಆವರಣದಲ್ಲಿ ಶಾರ್ದೂಲವೇಷ ಧಾರಣೆ ಮತ್ತು ಪರ್ಯಟನೆಗೆ ಚಾಲನೆ ನೀಡಲಾಯಿತು. ಶಾಲಾ ಮುಖ್ಯ ಶಿಕ್ಷಕಿ ಹರಿಣಾಕ್ಷಿ, ಶಾಲಾಭಿವೃದ್ಧಿ ಸಮಿತಿಸದಸ್ಯೆ ಪ್ರಮೀಳಾ, ಮೇಲ್ಪತ್ತರ ಹಿ.ಪ್ರಾ.ಶಾಲಾ ಮುಖ್ಯಶಿಕ್ಷಕ ಸೀತಾರಾಮ ಬಿ.ಕೆ. ಮತ್ತಿತರರು ಉಪಸ್ಥಿತರಿದ್ದರು.

ಶಾಲೆಗೆ ಸೌಕರ್ಯ ಕೊರತೆ
1955ರಲ್ಲಿ ಆರಂಭಗೊಂಡ ದೇವಸ್ಯ ಮೂಡೂರು ಶಾಲೆಗೆ ಈಗ 70ರ ಹರೆಯ. ಈ ಶಾಲೆಗೆ ಸುಮಾರು 1.20 ಎಕ್ರೆ ಸ್ವಂತ ಜಮೀನು ಇದೆಯಾದರೂ ಹತ್ತಾರು ಸಮಸ್ಯೆಗಳಿಂದ ಅದು ಕಷ್ಟದಲ್ಲಿ ಸಿಲುಕಿಕೊಂಡಿದೆ. ರಾಜ್ಯದಲ್ಲಿ ಅದೆಷ್ಟೋ ಶಾಲೆಗಳು ಮೂಲ ಸೌಕರ್ಯದ ಕೊರತೆಯಿಂದ, ವಿದ್ಯಾರ್ಥಿಗಳ ಸಂಖ್ಯೆ ಕುಸಿತದಿಂದ ಮುಚ್ಚಿಹೋಗಿವೆ. ತಮ್ಮ ಊರಿನ ಶಾಲೆ ಕೂಡಾ ಹಾಗಾಗಬಾರದು ಎಂಬ ಕಾಳಜಿಯನ್ನು ಎಸ್‌ಡಿಎಂಸಿ ಮತ್ತು ಊರವರು ಹೊಂದಿದ್ದಾರೆ.

ಈ ಶಾಲೆಯ ಕಟ್ಟಡ ಶಿಥಿಲವಾಗಿದೆ. ಜಾಗದ ಸುತ್ತ ಆವರಣ ಗೋಡೆಯೂ ಇಲ್ಲ. ಶಾಲೆಗೆ ಬೇಕಾದ ಪರಿಕರಗಳು ಕೂಡಾ ಇಲ್ಲ. ಆದರೂ ಈ ಶಾಲೆಯಲ್ಲಿ 84 ವಿದ್ಯಾರ್ಥಿಗಳಿದ್ದಾರೆ. ಈ ಸಂಖ್ಯೆಯನ್ನು ಉಳಿಸಿ ಬೆಳೆಸಬೇಕು ಎಂದರೆ ಮೂಲ ಸೌಕರ್ಯ ಹೆಚ್ಚಬೇಕು ಎನ್ನುವುದು ಎಸ್‌ಡಿಎಂಸಿ ನಿಲುವು.

ಶಾಲೆ ಉಳಿಸುವುದು ಊರಿನ ಹೊಣೆ
ಸರಕಾರಿ ಶಾಲೆ ಉಳಿಸಲು ಜನಪ್ರತಿನಿಧಿಗಳು ಮತ್ತು ಸರಕಾರವನ್ನು ನಂಬಿಕೊಳ್ಳುವ ಬದಲು ಊರವರೇ ತೊಡಗಿಸಿಕೊಳ್ಳುವುದು ಅನಿವಾರ್ಯ ಎನ್ನುತ್ತಾರೆ ಇಲ್ಲಿನ ಶಾಲಾಭಿವೃದ್ಧಿ ಸಮಿತಿಯವರು. ಶಾಲಾಭಿವೃದ್ಧಿ ಸಮಿತಿ ಮತ್ತು ಹಳೆ ವಿದ್ಯಾರ್ಥಿಗಳ ತಂಡ ಈಗಾಗಲೇ ದಾನಿಗಳ ನೆರವಿನಿಂದ ಮೂಲ ಸೌಕರ್ಯಕ್ಕಾಗಿ ಪ್ರಯತ್ನಿಸುತ್ತಿದೆ. ಅದರ ಜತೆಗೆ ಈಗ ನವರಾತ್ರಿ ವೇಷ ಧರಿಸಿ ಹೊರಟಿದೆ. ಎಸ್‌ಡಿಎಂಸಿ ಅಧ್ಯಕ್ಷ ವಸಂತ ಮುದಿಮಾರ ಅವರು ವೃತ್ತಿಯಲ್ಲಿ ಕೂಲಿ ಕಾರ್ಮಿಕರಾಗಿದ್ದು ಈ ಕೆಲಸದಲ್ಲಿ ಆಸಕ್ತರಾಗಿದ್ದಾರೆ.

ಗ್ರಾಮೀಣ ಜನರ ಶಿಕ್ಷಣ ದೇಗುಲವನ್ನು ಉಳಿಸುವುದು ನಮ್ಮೆಲ್ಲರ ಕರ್ತವ್ಯ ಎಂಬ ನಿಟ್ಟಿನಲ್ಲಿ ಒಟ್ಟು 5 ದಿನಗಳಲ್ಲಿ ಶಾರ್ದೂಲ ವೇಷ ಧರಿಸಿ ಹಣ ಸಂಗ್ರಹಿಸುತ್ತೇವೆ. ಇಲ್ಲಿನ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಯಶವಂತ ಕಾಂದ್ರೋಡಿ ಮತ್ತು ಶಾಲಾಭಿವೃದ್ಧಿ ಸಮಿತಿ ಸದಸ್ಯ ಹರೀಶ ನಾಯ್ಕ ಹಾಗೂ ಕೆಲವೊಂದು ಹಿರಿಯ ವಿದ್ಯಾರ್ಥಿಗಳು ಕೂಡಾ ನನಗೆ ಸಾಥ್‌ ನೀಡುತ್ತಿದ್ದಾರೆ.
-ವಸಂತ ಮುದಿಮಾರ ಎಸ್‌ಡಿಎಂಸಿ ಅಧ್ಯಕ್ಷರು

-ರತ್ನದೇವ್‌ ಪುಂಜಾಲಕಟ್ಟೆ

ಟಾಪ್ ನ್ಯೂಸ್

1-aaatttt

Tamil Nadu; ಎಕ್ಸ್‌ಪ್ರೆಸ್ ರೈಲು ಗೂಡ್ಸ್ ರೈಲಿಗೆ ಢಿಕ್ಕಿ: ಹೊತ್ತಿ ಉರಿದ ಬೆಂಕಿ

1-air-india

Emergency; ಟೇಕ್ ಆಫ್ ಆದ ಕೂಡಲೇ ತೊಂದರೆ: ತಪ್ಪಿದ ಭಾರಿ ವಿಮಾನ ಅವಘಡ

1-kajol

Viral video; ದುರ್ಗಾ ಪೂಜೆ ಸ್ಥಳದಲ್ಲೇ ಕಿಡಿ ಕಿಡಿಯಾದ ನಟಿ ಕಾಜೋಲ್!

1-agni

Agniveer; ಫೈರಿಂಗ್ ತರಬೇತಿ ವೇಳೆ ಪ್ರಾಣ ಕಳೆದುಕೊಂಡ ಇಬ್ಬರು ಅಗ್ನಿವೀರ್ ಗಳು

ISREL

UN posts ಮೇಲೆಯೇ ಇಸ್ರೇಲ್ ದಾಳಿ! ; 600 ಭಾರತೀಯ ಸೈನಿಕರು ಅಪಾಯದಲ್ಲಿ!!

Kunigal: ಬೈಕ್ ಗೆ ಮಿನಿ ಗೂಡ್ಸ್ ವಾಹನ ಡಿಕ್ಕಿ… ಪಿಗ್ಮಿ ಸಂಗ್ರಹಗಾರ ಮೃತ್ಯು

Kunigal: ಬೈಕ್ ಗೆ ಮಿನಿ ಗೂಡ್ಸ್ ವಾಹನ ಡಿಕ್ಕಿ… ಪಿಗ್ಮಿ ಸಂಗ್ರಹಗಾರ ಮೃತ್ಯು

Haveri: ಆಕಾಶದತ್ತ ಚಿಗರಿತಲೇ ಬೇರು ಮುತ್ತಾಯಿತಲೇ ಪರಾಕ್… ಗೊರವಯ್ಯ ಕಾರ್ಣಿಕದ ನುಡಿ

Haveri: ಆಕಾಶದತ್ತ ಚಿಗರಿತಲೇ ಬೇರು ಮುತ್ತಾಯಿತಲೇ ಪರಾಕ್… ಗೊರವಯ್ಯ ಕಾರ್ಣಿಕದ ನುಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

21

Kuluru: ಹೆಚ್ಚುತ್ತಿರುವ ಆತ್ಮಹತ್ಯೆ ಹಿನ್ನೆಲೆಯಲ್ಲಿ ಕ್ರಮಕ್ಕೆ ಆಗ್ರಹ; ಸಿಸಿಟಿವಿಗೂ ಬೇಡಿಕೆ

20

Mangaluru ಜಂಕ್ಷನ್‌ ರೈಲು ನಿಲ್ದಾಣ: ಸಂಪರ್ಕ ರಸ್ತೆ ಅಭಿವೃದ್ಧಿ

9

Mangaluru: ಜರ್ಮನಿ ಪಾರ್ಲಿಮೆಂಟ್‌ ಪುಸ್ತಕದಲ್ಲಿ ಸ್ಪೀಕರ್‌ ಖಾದರ್‌ ಸಹಿ

5

Mangaluru: ಅ.15: ಬಂಟ್ವಾಳ ಬಿಜೆಪಿ ಸಮಾವೇಶಕ್ಕೆ ವಿಜಯೇಂದ್ರ

Mangaluru: ತೋಟಬೆಂಗ್ರೆಯಲ್ಲಿ ಸರಕಾರಿ ಜಾಗದಿಂದ ಅಕ್ರಮ ಮರಳು ಸಾಗಾಟ

Mangaluru: ತೋಟಬೆಂಗ್ರೆಯಲ್ಲಿ ಸರಕಾರಿ ಜಾಗದಿಂದ ಅಕ್ರಮ ಮರಳು ಸಾಗಾಟ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

14

Punjalkatte; ಸರಕಾರಿ ಶಾಲೆ ಉಳಿಸಲು ನವರಾತ್ರಿ ವೇಷ!

1-aaatttt

Tamil Nadu; ಎಕ್ಸ್‌ಪ್ರೆಸ್ ರೈಲು ಗೂಡ್ಸ್ ರೈಲಿಗೆ ಢಿಕ್ಕಿ: ಹೊತ್ತಿ ಉರಿದ ಬೆಂಕಿ

1-air-india

Emergency; ಟೇಕ್ ಆಫ್ ಆದ ಕೂಡಲೇ ತೊಂದರೆ: ತಪ್ಪಿದ ಭಾರಿ ವಿಮಾನ ಅವಘಡ

1-kajol

Viral video; ದುರ್ಗಾ ಪೂಜೆ ಸ್ಥಳದಲ್ಲೇ ಕಿಡಿ ಕಿಡಿಯಾದ ನಟಿ ಕಾಜೋಲ್!

1-agni

Agniveer; ಫೈರಿಂಗ್ ತರಬೇತಿ ವೇಳೆ ಪ್ರಾಣ ಕಳೆದುಕೊಂಡ ಇಬ್ಬರು ಅಗ್ನಿವೀರ್ ಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.