Mangaluru: ತುಂಬೆ ಡ್ಯಾಂ ಗೇಟುಗಳು ಈಗಲೇ ಬಂದ್‌!

ಮಳೆಗಾಲ ಇನ್ನೂ ಬಾಕಿ ಇದೆ; ಆತಂಕ ಆರಂಭವಾಗಿದೆ !

Team Udayavani, Sep 1, 2023, 11:28 AM IST

Mangaluru: ತುಂಬೆ ಡ್ಯಾಂ ಗೇಟುಗಳು ಈಗಲೇ ಬಂದ್‌!

ಮಂಗಳೂರು: ಮಂಗಳೂರು ಮಹಾ ನಗರ ಪಾಲಿಕೆ ವ್ಯಾಪ್ತಿ ಸೇರಿದಂತೆ ಸುತ್ತಲಿನ ಪ್ರದೇಶಗಳಿಗೆ ನೀರು ಪೂರೈಸುವ ನೇತ್ರಾವತಿ ನದಿಯ ತುಂಬೆ ಅಣೆಕಟ್ಟಿನಲ್ಲಿ ಮಳೆಗಾಲದ ಈ ಸಮಯದಲ್ಲಿ ನೀರಿನ ಒಳ ಹರಿವು ಹೆಚ್ಚಿರುವ ಕಾರಣ 7-8 ಅಥವಾ ಅದಕ್ಕಿಂತಲೂ ಹೆಚ್ಚಿನ ಗೇಟ್‌ಗಳನ್ನು ತೆರೆದಿಡುವುದು ವಾಡಿಕೆ. ಆದರೆ ಈ ಬಾರಿ 30 ಗೇಟ್‌ಗಳ ಪೈಕಿ ಒಂದನ್ನು ಮಾತ್ರ ತೆರೆದಿಡಲಾಗಿದೆ!

ಪ್ರಸ್ತುತ 5 ಮೀ. ವರೆಗೆ ನೀರು ಸಂಗ್ರಹಿಸಲಾಗಿದೆ. ಮುಂದಿನ ಒಂದು ತಿಂಗಳವರೆಗೆ ಪರಿಸ್ಥಿತಿ ಇದೇ ರೀತಿ ಮುಂದುವರಿದರೆ ಕಷ್ಟ ಎನ್ನುತ್ತಾರೆ ಅಧಿಕಾರಿಗಳು. ಹಾಲಿ ಇರುವ ನೀರಿನ ಪ್ರಮಾಣ ಜನವರಿ-ಫೆಬ್ರವರಿ ವರೆಗೆ ಸಾಕಾದೀತು ಎಂದು ತಿಳಿಸಿದ್ದಾರೆ.

ಕಳೆದ ವರ್ಷ ಹೇಗಿತ್ತು?
ತುಂಬೆಯಲ್ಲಿ ಕಳೆದ ವರ್ಷ ಈ ಸಮಯದಲ್ಲಿ ಸುಮಾರು 6 ಗೇಟ್‌ಗಳ ಮೂಲಕ ನೀರು ಹೊರ ಹೋಗುತ್ತಿತ್ತು. 4 ಮೀ. ನೀರು ಸಂಗ್ರಹಿಸಲಾಗಿತ್ತು. ಆದರೆ ಈ ಬಾರಿ ಒಳ ಹರಿವು ಕುಸಿದಿದೆ. ಇದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಮೇಲ್ಭಾಗದಲ್ಲಿರುವ ಎಎಂಆರ್‌ ಸೇರಿದಂತೆ ವಿವಿಧ ಅಣೆಕಟ್ಟುಗಳಲ್ಲಿ ನೀರು ಸಂಗ್ರಹಿಸುತ್ತಿದ್ದಾರೆ. ಮತ್ತೆ ಮಳೆ ಬಿರುಸಾದರೆ ಮಾತ್ರ ಆತಂಕ ದೂರವಾಗಬಹುದು.
ನದಿಗಳಲ್ಲಿ ತಿಳಿ ನೀರು ಮಳೆಯ ಅಬ್ಬರಕ್ಕೆ ಕೆಂಬಣ್ಣದ ನೀರು ಹರಿಯ ಬೇಕಿದ್ದ ನದಿಗಳಲ್ಲಿ ಸದ್ಯ ಕಾಣುತ್ತಿರುವುದು ಶುಭ್ರವಾದ ತಿಳಿ ನೀರು. ಅಣೆಕಟ್ಟಿನಲ್ಲೂ ಸರೋವರದಂತೆ ಶುಭ್ರ ನೀರಿನ ಸಂಗ್ರಹವಿದೆ. ಸುಮಾರು 10-15 ದಿನಗಳಿಂದ ಜಿಲ್ಲೆಯ ಘಟ್ಟ ಪ್ರದೇಶವೂ ಸೇರಿದಂತೆ ನದಿಪಾತ್ರದ ಎಲ್ಲೂ ಬಿರುಸಿನ ಮಳೆಯೇ ಸುರಿದಿಲ್ಲ.

ಅಡ್ಯಾರ್‌ ಅಣೆಕಟ್ಟಿನಲ್ಲಿ ನೀರು ಸಂಗ್ರಹವಿಲ್ಲ
ಅಡ್ಯಾರ್‌- ಹರೇಕಳ ಪಾವೂರು ನಡುವೆ ನೇತ್ರಾವತಿ ನದಿಗೆ ನಿರ್ಮಿಸಿರುವ ಅಣೆಕಟ್ಟಿನ ಎಲ್ಲ ಗೇಟ್‌ಗಳನ್ನು ತೆಗೆದು ನೀರು ಹೊರಕ್ಕೆ ಹರಿಯಬಿಡಲಾಗುತ್ತಿದೆ. ಇದರಿಂದಾಗಿ ಅಣೆಕಟ್ಟಿನ ಒಳಭಾಗದಲ್ಲಿ ನೀರಿನ ಮಟ್ಟ ಕುಸಿದಿದೆ. ನೀರು ಪೂರೈಕೆಗೆ ಬೇಕಾದ ವ್ಯವಸ್ಥೆ ಮಾಡದಿರುವ ಕಾರಣ ನೀರು ಸಂಗ್ರಹಿಸುತ್ತಿಲ್ಲ ಎನ್ನುವುದು ಅಧಿಕಾರಿಗಳ ಮಾತು.

ಈ ಬಾರಿ ಮಳೆಯ ಪ್ರಮಾಣದಲ್ಲಿ ತೀವ್ರ ಕುಸಿತ ಉಂಟಾಗಿರುವುದು ಆತಂಕಕ್ಕೆ ಕಾರಣವಾಗಿದೆ. ಆದರೆ ಈಗಲೇ ಅಂದಾಜಿಸುವುದು ಕಷ್ಟ. ಸದ್ಯ ನದಿಯಲ್ಲಿ ನೀರಿನ ಹರಿ ವಿನ ಪ್ರಮಾಣದ ಮೇಲೆ ನಿಗಾ ಅಗತ್ಯ. ಮುಂದಿನ ದಿನಗಳಲ್ಲಿ ಪಾಲಿಕೆಯು ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು.
-ಪ್ರೇಮಾನಂದ ಶೆಟ್ಟಿ, ಮನಪಾ ಮುಖ್ಯ ಸಚೇತಕ

ಇದನ್ನೂ ಓದಿ: BL Santhosh ಮೊದಲು ತಮ್ಮ ಪಕ್ಷದ ಅಸ್ತಿತ್ವ ಉಳಿಸಿಕೊಳ್ಳಲಿ: ಜಗದೀಶ ಶೆಟ್ಟರ್

ಟಾಪ್ ನ್ಯೂಸ್

Glasgow Commonwealth Games: No place to Hockey, Cricket, Wrestling, Badminton

Glasgow Commonwealth Games: ಹಾಕಿ, ಕ್ರಿಕೆಟ್‌, ಕುಸ್ತಿ, ಬ್ಯಾಡ್ಮಿಂಟನ್‌ಗೆ ಖೋ

Channapatna By-Election: ಯೋಗೇಶ್ವರ್‌ ಎನ್‌ಡಿಎ ಅಭ್ಯರ್ಥಿ?

Channapatna By-Election: ಯೋಗೇಶ್ವರ್‌ ಎನ್‌ಡಿಎ ಅಭ್ಯರ್ಥಿ?

Belagavi: ಅಧಿವೇಶನ ವೇಳೆ 10 ಲಕ್ಷ ಜನರ ಜತೆ ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕುತ್ತೇವೆ…

Belagavi:ಅಧಿವೇಶನ ವೇಳೆ 10 ಲಕ್ಷ ಜನರ ಜತೆ ಸುವರ್ಣವಿಧಾನಸೌಧಕ್ಕೆ ಮುತ್ತಿಗೆ ಹಾಕುತ್ತೇವೆ…

fake court in gujarat

Gujarat: ನಕಲಿ ಪೊಲೀಸ್‌ ಆಯ್ತು, ಅರೆಸ್ಟ್‌ ಆಯ್ತು.. ಈಗ ನಕಲಿ ಕೋರ್ಟ್‌!

hockey; India playing against Germany

Hockey: ಜರ್ಮನಿ ವಿರುದ್ಧ “ಪ್ಯಾರಿಸ್‌ ಪ್ರತಿಕಾರ’ಕ್ಕೆ ಸಿದ್ಧತೆ

13 thousand recruitment in top 5 IT firms in first half of this year

IT: ಈ ವರ್ಷದ ಮೊದಲಾರ್ಧದಲ್ಲಿ ಅಗ್ರ 5 ಐಟಿ ಸಂಸ್ಥೆಗಳಲ್ಲಿ 13 ಸಾವಿರ ನೇಮಕ

Prime Minister Modi preached peace mantra to Putin again!

Narendra Modi: ಪುತಿನ್‌ಗೆ ಮತ್ತೆ ಶಾಂತಿ ಮಂತ್ರ ಬೋಧಿಸಿದ ಪ್ರಧಾನಿ ಮೋದಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

Mangaluru: ಹಳೆಯ ಹೆಲ್ಮೆಟ್‌ ಇಟ್ಟು ಹೊಸ ಹೆಲ್ಮೆಟ್‌ ಕಳವು!

High-Court

Mangaladevi Temple: ಹೈಕೋರ್ಟ್‌ ತಡೆಯಾಜ್ಞೆ ಆದೇಶಕ್ಕೆ ಆಡಳಿತ ಮಂಡಳಿಯಿಂದ ಅರ್ಜಿ

CHowta

Mangaluru: ರೈಲು ಹಳಿ ಮೇಲೆ ಕಲ್ಲಿಟ್ಟ ಆರೋಪಿಗಳ ತಕ್ಷಣ ಬಂಧಿಸಿ: ಸಂಸದ ಕ್ಯಾ. ಚೌಟ ಆಗ್ರಹ

M.Bhandary

Costal: ಡ್ರಗ್ಸ್‌ ಮಟ್ಟ ಹಾಕಲು ಕಾನೂನು ಬದಲಾವಣೆ ಚರ್ಚೆ: ಎಂಎಲ್‌ಸಿ ಮಂಜುನಾಥ ಭಂಡಾರಿ

Mangaluru-VV

Mangaluru: ಸರಕಾರಿ ಕಾಲೇಜಿನ ಎಂಎಸ್‌ಡಬ್ಲ್ಯು ವಿದ್ಯಾರ್ಥಿಗಳಿಗೆ ಸಂಕಷ್ಟ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Glasgow Commonwealth Games: No place to Hockey, Cricket, Wrestling, Badminton

Glasgow Commonwealth Games: ಹಾಕಿ, ಕ್ರಿಕೆಟ್‌, ಕುಸ್ತಿ, ಬ್ಯಾಡ್ಮಿಂಟನ್‌ಗೆ ಖೋ

16

Mangaluru: ಹಳೆಯ ಹೆಲ್ಮೆಟ್‌ ಇಟ್ಟು ಹೊಸ ಹೆಲ್ಮೆಟ್‌ ಕಳವು!

Channapatna By-Election: ಯೋಗೇಶ್ವರ್‌ ಎನ್‌ಡಿಎ ಅಭ್ಯರ್ಥಿ?

Channapatna By-Election: ಯೋಗೇಶ್ವರ್‌ ಎನ್‌ಡಿಎ ಅಭ್ಯರ್ಥಿ?

Belagavi: ಅಧಿವೇಶನ ವೇಳೆ 10 ಲಕ್ಷ ಜನರ ಜತೆ ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕುತ್ತೇವೆ…

Belagavi:ಅಧಿವೇಶನ ವೇಳೆ 10 ಲಕ್ಷ ಜನರ ಜತೆ ಸುವರ್ಣವಿಧಾನಸೌಧಕ್ಕೆ ಮುತ್ತಿಗೆ ಹಾಕುತ್ತೇವೆ…

fake court in gujarat

Gujarat: ನಕಲಿ ಪೊಲೀಸ್‌ ಆಯ್ತು, ಅರೆಸ್ಟ್‌ ಆಯ್ತು.. ಈಗ ನಕಲಿ ಕೋರ್ಟ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.