ಎಪಿಎಂಸಿಯಿಂದ ರೂಫ್‌ಟಾಪ್‌ ಸೋಲಾರ್‌ ಯೋಜನೆ

ವರ್ಷಕ್ಕೆ 20 ಲ.ರೂ ಉಳಿತಾಯಕ್ಕೆ ಚಿಂತನೆ

Team Udayavani, Mar 25, 2022, 11:21 AM IST

solar

ಬೈಕಂಪಾಡಿ: ಇಂಧನ ಬೆಲೆ ಹೆಚ್ಚುತ್ತಿದ್ದಂತೆಯೇ ವಿದ್ಯುತ್‌ ದರ ಏರುತ್ತಿದ್ದು, ಈ ನಿಟ್ಟಿನಲ್ಲಿ ವಿದ್ಯುತ್‌ ಉಳಿತಾಯದ ಜತೆಗೆ ಖರ್ಚು ಕಡಿಮೆ ಮಾಡಿ ಆದಾಯ ಹೆಚ್ಚುವ ಸಲುವಾಗಿ ಎಪಿಎಂಸಿ 100 ಕಿ.ವ್ಯಾ. ಸೋಲಾರ್‌ ವಿದ್ಯುತ್‌ ಉತ್ಪಾದನೆ ಮಾಡಲು ಯೋಜನೆ ರೂಪಿಸಿದೆ.

ಬೈಕಂಪಾಡಿ ಎಪಿಎಂಸಿ ಪ್ರಾಂಗಣದಲ್ಲಿರುವ ವಾಣಿಜ್ಯ ಕಟ್ಟಡದ ಮೇಲೆ ಸೋಲಾರ್‌ ಅಳವಡಿಕೆಗೆ ಸಿದ್ಧತೆ ಮಾಡಲಾಗಿದ್ದು, ಟ್ರಾನ್ಸ್‌ ಫಾರ್ಮರ್‌ ಅಳವಡಿಸಲು ಟೆಂಡರ್‌ ಕರೆಯಲಾಗಿದೆ. ಮಂಗಳೂರು ಸ್ಮಾರ್ಟ್‌ ಸಿಟಿ ಯೋಜನೆಯಡಿ 60 ಲಕ್ಷ ರೂ. ವೆಚ್ಚದಲ್ಲಿ ಸೋಲಾರ್‌ ಅಳವಡಿಕೆಯಾಗುತ್ತಿದ್ದು, ಎಸ್‌ಬಿ ರಿನಿವೇಬಲ್‌ ಎನರ್ಜಿ ಒಟ್ಟಿಗೆ ಒಡಂಬಡಿಕೆ ಮಾಡಿದೆ. ಎಪಿಎಂಸಿ ಶೂನ್ಯ ಬಂಡವಾಳದಲ್ಲಿ ವಿದ್ಯುತ್‌ ಪಡೆಯಲಿದೆ. 20 ಲಕ್ಷ ರೂ. ಟ್ರಾನ್ಸ್‌ಫಾರ್ಮರ್‌ಗೆ ವೆಚ್ಚವಾಗಲಿದೆ.

ವರ್ಷಕ್ಕೆ 20 ಲಕ್ಷ ರೂ. ಉಳಿತಾಯ

ಕೇಂದ್ರ ಸರಕಾರದಿಂದ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತಂದ ಬಳಿಕ ಆದಾಯದಲ್ಲಿ ಕೋಟ್ಯಂತರ ರೂ. ಇಳಿಕೆಯಾಗಿದ್ದು, ಎಪಿಎಂಸಿ ನಡೆಸುವುದೇ ಕಷ್ಟವಾಗಿದೆ. ಇದರ ನಡುವೆ ಸೋಲಾರ್‌ ವಿದ್ಯುತ್‌ ಯೋಜನೆಯಿಂದ ಕನಿಷ್ಠ ವರ್ಷಕ್ಕೆ 20 ಲಕ್ಷ ರೂ.ಉಳಿಸಿ ತನ್ನ ಕೊಡುಗೆ ನೀಡಲು ಮುಂದಾಗಿದೆ. ಸೋಲಾರ್‌ನಿಂದ ಎಪಿಎಂಸಿಯು ತನ್ನ ಕಚೇರಿ, ಬೀದಿ ದೀಪ ಮತ್ತಿತರ ವ್ಯವಸ್ಥೆಗೆ ಬಳಸಿ ಉಳಿದ ವಿದ್ಯುತ್‌ ಅನ್ನು ಮೆಸ್ಕಾಂಗೆ ಮಾರಾಟ ಮಾಡಲಿದೆ.

ಮಾರಾಟ ದಲ್ಲಿಯೂ ಶೇ. 50ರಷ್ಟು ಆದಾಯ ಪಡೆಯಲಿದೆ. ಎಪಿಎಂಸಿಯಲ್ಲಿ ಆದಾಯ ಕುಸಿತದ ನಡುವೆ ಬೇರೆ ಬೇರೆ ಮೂಲಗಳಿಂದ ಆದಾಯ ಗಳಿಸಲು ಯೋಚಿಸಿದಾಗ ಸೋಲಾರ್‌ ಯೋಜನೆ ಮನಸ್ಸಿಗೆ ಬಂತು. ಕೇಂದ್ರ ಸರಕಾರವು ರಾಷ್ಟ್ರೀಯ ಯೋಜನೆಯ ಅನ್ವಯ ಸೋಲಾರ್‌ ವಿದ್ಯುತ್‌ ವ್ಯವಸ್ಥೆಗೆ ಆದ್ಯತೆ ನೀಡಿ ಪ್ರೋತ್ಸಾಹಿ ಸುತ್ತಿದ್ದು, ಸ್ಮಾರ್ಟ್‌ ಸಿಟಿ ಅಧಿಕಾರಿಗಳೊಂದಿಗೆ ಮಾತನಾಡಿ, ಈ ಯೋಜನೆ ಜಾರಿ ಮಾಡಿದ್ದೇನೆ ಎನ್ನುತ್ತಾರೆ ಎಪಿಎಂಸಿಯ ನಿ.ಪೂ. ಅಧ್ಯಕ್ಷ ಕೃಷ್ಣರಾಜ ಹೆಗ್ಡೆ.

ಇಂಧನ ಉಳಿತಾಯಕ್ಕೆ ಆದ್ಯತೆ ಸರಕಾರಿ ವ್ಯವಸ್ಥೆಗಳಲ್ಲಿ ಮಾದರಿಯಾಗಿ ವಿದ್ಯುತ್‌, ಇಂಧನ ಉಳಿತಾಯಕ್ಕೆ ಆದ್ಯತೆ ನೀಡಿದಾಗ ಇತರರಿಗೂ ಪ್ರೋತ್ಸಾಹ ನೀಡಿದಂತಾಗುತ್ತದೆ. ಹೆಚ್ಚುತ್ತಿರುವ ತಾಪಮಾನದ ನಿಯಂತ್ರಣಕ್ಕೆ ಸಾಂಪ್ರದಾಯಿಕವಲ್ಲದ ಮೂಲಗಳಿಗೆ ಹೆಚ್ಚಿನ ಆದ್ಯತೆ ನೀಡುವತ್ತ ಕೇಂದ್ರ ಸರಕಾರ ಗಮನ ಹರಿಸುತ್ತಿದೆ. ಎಪಿಎಂಸಿಯಲ್ಲಿ ಸೋಲಾರ್‌ ಅಳವಡಿಕೆ ಉತ್ತಮ ಹೆಜ್ಜೆ. – ಡಾ| ಭರತ್‌ ಶೆಟ್ಟಿ ವೈ, ಶಾಸಕರು, ಮಂಗಳೂರು ಉತ್ತರ

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.