![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Apr 20, 2020, 6:54 PM IST
ಮಂಗಳೂರು: ಹೊರ ರಾಜ್ಯಗಳಿಂದ ಮಂಗಳೂರಿಗೆ ಬೃಹತ್ ಲಾರಿಗಳ ಮೂಲಕ ಆಗಮಿಸುವ ಮೀನುಗಳನ್ನು ಚಿಲ್ಲರೆ ವ್ಯಾಪಾರಿಗಳಿಗೆ ಮಾರಾಟ ಮಾಡಲು ಹಳೆಬಂದರಿನ ಒಂದು ಪಾರ್ಶ್ವದಲ್ಲಿ ಶನಿವಾರದಿಂದ ಅವಕಾಶ ನೀಡಲಾಗುವುದು. ಆದರೆ ಇಲ್ಲಿಗೆ ಸಾರ್ವಜನಿಕರಿಗೆ ಪ್ರವೇಶವಿಲ್ಲ ಎಂದು ಶಾಸಕ ವೇದವ್ಯಾಸ ಕಾಮತ್ ಹೇಳಿದರು.
ಹಳೆಬಂದರು ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿ ಸುದ್ದಿಗಾರರ ಜತೆಗೆ ಮಾತನಾಡಿದ ಅವರು ಹೊರರಾಜ್ಯಗಳ ಸುಮಾರು 25ರಷ್ಟು ಬೃಹತ್ ಲಾರಿಗಳು ಮೀನುಗಳ ಸಮೇತ ಮಂಗಳೂರಿಗೆ ಆಗಮಿಸುತ್ತಿವೆ . ಆದರೆ ಸದ್ಯ ಅವರಿಗೆ ಸೂಕ್ತ ಸ್ಥಳಾವಕಾಶವಿರಲಿಲ್ಲ ಹೀಗಾಗಿ ಹಳೆ ಬಂದರಿನಲ್ಲಿ ಶನಿವಾರ ರಾತ್ರಿಯಿಂದ ಚಿಲ್ಲರೆ ಮಾರಾಟಗಾರರಿಗೆ ಮೀನು ಅನ್ಲೋಡ್ ಮಾಡಿ ಮಾರಾಟ ಮಾಡಲು ಅವಕಾಶ ಕಲ್ಪಿಸಲಾಗಿದೆ. ಮುಂಜಾವ 3 ಗಂಟೆಯಿಂದ ಬೆಳಗ್ಗೆ 8 ಗಂಟೆಯ ಒಳಗೆ ಈ ಪ್ರಕ್ರಿಯೆ ನಡೆಯಬೇಕು. ಟೆಂಪೋದಲ್ಲಿ ಬರುವ ಸಣ್ಣ ವ್ಯಾಪಾರಸ್ಥರಿಗೆ ಮಾತ್ರ ಇಲ್ಲಿಗೆ ಪ್ರವೇಶವಿದ್ದು ಸಾರ್ವಜನಿಕರಿಗೆ ಪ್ರವೇಶವಿಲ್ಲ ಸಾಮಾಜಿಕ ಅಂತರ ಪಾಲಿಸಿಕೊಂಡು ಮಾರಾಟಗಾರರು ಇಲ್ಲಿಂದ ಮೀನು ಖರೀದಿಸಿ ತೆರಳಬೇಕು ಎಂದರು .
ಆ ಬಳಿಕ ಸೆಂಟ್ರಲ್ ಮಾರುಕಟ್ಟೆ ಪುರಭವನದ ಬದಿ, ಹಳೆಯ ಬಸ್ ನಿಲ್ದಾಣಕ್ಕೆ ಭೇಟಿ ನೀಡಿದ ಶಾಸಕರ ತಂಡ ತರಕಾರಿ, ಹಣ್ಣು ಮಾರಾಟ ಮಾಡುವವರಿಗೆ ಆಗಬೇಕಾದ ವ್ಯವಸ್ಥೆಗಳ ಬಗ್ಗೆ ಪರಿಶೀಲಿಸಿತು.
ಈ ಸಂಧರ್ಭದಲ್ಲಿ ಶಾಸಕ ಯು. ಟಿ. ಖಾದರ್, ಮೇಯರ್ ದಿವಾಕರ್ ಪಾಂಡೇಶ್ವರ, ಸ್ಥಾಯಿ ಸಮಿತಿ ಅಧ್ಯಕ್ಷೆ ಪೂರ್ಣಿಮಾ, ಸ್ಮಾರ್ಟ್ಸಿಟಿ ವ್ಯವಸ್ಥಾಪಕ ನಿರ್ದೇಶಕ ಮೊಹಮ್ಮದ್ ನಜೀರ್, ಮೀನುಗಾರಿಕಾ ಇಲಾಖೆಯ ಉಪನಿರ್ದೇಶಕ ಹರೀಶ್ ಕುಮಾರ್, ಸಹಾಯಕ ಉಪನಿರ್ದೇಶಕ ದಿಲೀಪ್ ಕುಮಾರ್ ಮಾಜಿ ಮೇಯರ್ ಅಶ್ರಫ್, ಮುಸ್ತಫ, ಇಬ್ರಾಹಿಂ ಮೊದಲಾದವರಿದ್ದರು .
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ
You seem to have an Ad Blocker on.
To continue reading, please turn it off or whitelist Udayavani.