![naki](https://www.udayavani.com/wp-content/uploads/2025/02/naki-415x221.png)
![naki](https://www.udayavani.com/wp-content/uploads/2025/02/naki-415x221.png)
Team Udayavani, Jun 2, 2020, 11:41 AM IST
ಉಳ್ಳಾಲ : ಇಲ್ಲಿನ ದೇರಳಕಟ್ಟೆ ಬಿಎಸ್ಎನ್ಎಲ್ ಉಪ ಕೇಂದ್ರದಲ್ಲಿ ಸರ್ವರ್ ರೂಂನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಅಗ್ನಿಶಾಮಕ ಸಿಬ್ಬಂದಿಗಳು ಮತ್ತು ಸ್ಥಳೀಯರು ಆಗಮಿಸಿ ಬೆಂಕಿ ನಂದಿಸಿದ್ದು ಸ್ಥಳದಲ್ಲಿಹೊಗೆಯ ವಾತಾವರಣವಿದೆ.
ಉಪಕೇಂದ್ರದಲ್ಲಿನ ಸರ್ವರ್ ರೂಂನಲ್ಲಿ ಕೂಲಿಂಗ್ ವ್ಯವಸ್ಥೆಯ ತಾಂತ್ರಿಕ ತೊಂದರೆಯಿಂದ ಉಷ್ಣತೆ ಹೆಚ್ಚಾಗಿ ಬೆಂಕಿ ಉತ್ಪತ್ತಿಯಾಗಿರುವ ಕುರಿತು ಸಂಶಯ ವ್ಯಕ್ತಪಡಿಸಲಾಗಿದೆ. ಈ ಅವಘಡದಿಂದಾಗಿ ಸುಮಾರು ನಾಲ್ಕು ಲಕ್ಷ ರೂ. ನಷ್ಟ ಅಂದಾಜಿಸಲಾಗಿದೆ.
ರಾತ್ರಿ ವೇಳೆ ಸಿಬಂದಿಗಳ ವ್ಯವಸ್ಥೆ ಇಲ್ಲದೆ ಸಮಸ್ಯೆ ಉದ್ಭವಿಸಿದೆ. ಖಾಸಗಿ ಕಟ್ಟಡದಲ್ಲಿ ಈ ಕೇಂದ್ರ ಕಾರ್ಯನಿರ್ವಹಿಸುತ್ತಿದ್ದು ದೇರಳಕಟ್ಟೆ ಜಂಕ್ಷನ್ ನಲ್ಲಿ ಕೇಂದ್ರ ಇರುವುದರಿಂದ ಸ್ಥಳೀಯವಾಗಿ ಮನೆ, ಅಂಗಡಿಮುಗ್ಗಟ್ಟು ಇರುವುದರಿಂದ ಸ್ಥಳೀಯರು ಭಯಭೀತರಾಗಿದ್ದಾರೆ.
ಬಿಎಸ್ಎನ್ಎಲ್ ಉಪಕೇಂದ್ರ ಅವಘಡದಿಂದ ಸ್ಥಳೀಯ ಬ್ಯಾಂಕ್ ಆಸ್ಪತ್ರೆಗಳ ಸರ್ವರ್, ಇಂಟರ್ ನೆಟ್ ಸೇರಿದಂತೆ ಸ್ಥಿರ ದೂರವಾಣಿ ಸ್ಥಗಿತಗೊಂಡಿದೆ.
ಕೊಣಾಜೆ ಪೊಲೀಸರು ಮತ್ತು ಸಂಚಾರಿ ಪೊಲೀಸ್ ಸಿಬಂದಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
You seem to have an Ad Blocker on.
To continue reading, please turn it off or whitelist Udayavani.