![Karnataka ಸೇರಿ ವಿವಿಧ ರಾಜ್ಯದ ಸಾಧಕರ ಜತೆ ರಾಷ್ಟ್ರಪತಿ ಭೇಟಿ](https://www.udayavani.com/wp-content/uploads/2024/12/President-415x274.jpg)
ಉಳ್ಳಾಲ ಠಾಣೆಯಲ್ಲಿ ಮುಂದುವರಿದ ಕೋವಿಡ್ ಆರ್ಭಟ: ಮತ್ತೆ ಆರು ಸಿಬ್ಬಂದಿಗೆ ಸೋಂಕು
Team Udayavani, Jun 29, 2020, 1:43 PM IST
![ಉಳ್ಳಾಲ ಠಾಣೆಯಲ್ಲಿ ಮುಂದುವರಿದ ಕೋವಿಡ್ ಆರ್ಭಟ: ಮತ್ತೆ ಆರು ಸಿಬ್ಬಂದಿಗೆ ಸೋಂಕು](https://www.udayavani.com/wp-content/uploads/2020/06/ullala-4-620x348.jpg)
ಉಳ್ಳಾಲ: ಇಲ್ಲಿನ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಸೋಂಕಿನ ಆರ್ಭಟ ಮತ್ತೆ ಮುಂದುವರಿದಿದೆ. ಈ ಮೊದಲು ಆರು ಮಂದಿಗೆ ಸೋಂಕು ದೃಢವಾಗಿದ್ದರೆ, ಇಂದು ಮತ್ತೆ ಆರು ಜನರ ದೇಹಕ್ಕೆ ಕೋವಿಡ್ -19 ಸೋಂಕು ಲಗ್ಗೆಯಿಟ್ಟಿದೆ.
ಇಂದು ಠಾಣೆಯ ಓರ್ವ ಹೋಂ ಗಾರ್ಡ್ ಮತ್ತು ಐವರು ಪೊಲೀಸ್ ಸಿಬ್ಬಂದಿಗೆ ಕೋವಿಡ್-19 ಸೋಂಕು ದೃಢವಾಗಿದೆ. ಇದರಿಂದ ಠಾಣೆಯ ಹತ್ತು ಆರಕ್ಷಕರು ಮತ್ತು ಇಬ್ಬರು ಆರೋಪಿಗಳಿಗೆ ಕೋವಿಡ್ ಸೋಂಕು ದೃಢವಾಗಿದೆ.
ಈ ಹಿಂದೆ ಠಾಣೆಯ ಎಸ್ ಐ, ಎಎಸ್ ಐ, ಇಬ್ಬರು ಡ್ರೈವರ್ ಗಳು ಮತ್ತು ಠಾಣೆಯಲ್ಲಿದ್ದ ಇಬ್ಬರು ಆರೋಪಿಗಳಿಗೆ ಕೋವಿಡ್-19 ಸೋಂಕು ತಾಗಿತ್ತು. ಸದ್ಯ ಠಾಣೆಯನ್ನು ಭಾಗಶಃ ಸೀಲ್ ಡೌನ್ ಮಾಡಲಾಗಿದೆ.
ಖಾಸಗಿ ಆಸ್ಪತ್ರೆಯಲ್ಲಿ ಸೋಂಕು: ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಅನಾರೋಗ್ಯ ಕಾರಣದಿಂದ ದಾಖಲಾಗಿದ್ದ ಎಂಟು ಮಂದಿಯಲ್ಲಿ ಕೋವಿಡ್ 19 ಸೋಂಕು ಪತ್ತೆಯಾಗಿದೆ ಎನ್ನಲಾಗಿದೆ.
ಉಳ್ಳಾಲ ಕ್ಷೇತ್ರ ವ್ಯಾಪ್ತಿಯಲ್ಲಿ ಕೋವಿಡ್-19 ಸೋಂಕು ಮಹಾಮಾರಿ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದೆ. ಇದುವರೆಗೆ ಕ್ಷೇತ್ರದಲ್ಲಿ 47 ಜನರಿಗೆ ಕೋವಿಡ್ -19 ಸೋಂಕು ದೃಢವಾಗಿದ್ದು, ಇಬ್ಬರು ಮೃತಪಟ್ಟಿದ್ದಾರೆ. ಇಂದು ಮುಂಜಾನೆ 60 ವರ್ಷದ ಮಹಿಳೆ ಸೋಂಕಿಗೆ ಬಲಿಯಾಗಿದ್ದಾರೆ.
ಟಾಪ್ ನ್ಯೂಸ್
![Karnataka ಸೇರಿ ವಿವಿಧ ರಾಜ್ಯದ ಸಾಧಕರ ಜತೆ ರಾಷ್ಟ್ರಪತಿ ಭೇಟಿ](https://www.udayavani.com/wp-content/uploads/2024/12/President-415x274.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
![udayavani youtube](https://i.ytimg.com/vi/NdljxpTr0n8/mqdefault.jpg)
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
![udayavani youtube](https://i.ytimg.com/vi/Ge2mbEcT0j0/mqdefault.jpg)
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
![udayavani youtube](https://i.ytimg.com/vi/qW7fcwKh15I/mqdefault.jpg)
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
![udayavani youtube](https://i.ytimg.com/vi/rXflDn9gBE4/mqdefault.jpg)
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
![udayavani youtube](https://i.ytimg.com/vi/OPoFL9bnOqc/mqdefault.jpg)
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.