ಡಿಸಿ ಸಂಕೀರ್ಣಕ್ಕೆ “ಸ್ಮಾರ್ಟ್‌ ಸಿಟಿ’ ನೆರವು: 20 ಕೋಟಿ ರೂ. ಮೀಸಲು


Team Udayavani, Jul 2, 2024, 6:03 PM IST

ಡಿಸಿ ಸಂಕೀರ್ಣಕ್ಕೆ “ಸ್ಮಾರ್ಟ್‌ ಸಿಟಿ’ ನೆರವು: 20 ಕೋಟಿ ರೂ. ಮೀಸಲು

ಮಹಾನಗರ: ಸುಮಾರು ಆರು ವರ್ಷಗಳಿಂದ ಕುಂಟುತ್ತಾ ಸಾಗುತ್ತಿರುವ ಪಡೀಲ್‌ ನ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ ನಿರ್ಮಾಣ ಕಾಮಗಾರಿಗೆ ಶೀಘ್ರವೇ ವೇಗ ಸಿಗುವ ಲಕ್ಷಣ ಕಾಣಿಸುತ್ತಿದೆ. ಬಾಕಿ ಉಳಿದಿರುವ ಕಾಮಗಾರಿಯನ್ನು ಮಂಗಳೂರು ಸ್ಮಾರ್ಟ್‌ ಸಿಟಿ
ಸಹಕಾರದಲ್ಲಿ ಪೂರ್ಣಗೊಳಿಸುವ ನಿಟ್ಟನಲ್ಲಿ ಪ್ರಕ್ರಿಯೆಗಳು ಈಗಾಗಲೇ ಆರಂಭವಾಗಿವೆ.

ಸಂಕೀರ್ಣದ ಒಂದು ಹಂತದ ಕಾಮಗಾರಿ ಈಗಾಗಲೇ ಪೂರ್ಣಗೊಂಡಿದ್ದು, ಎರಡನೇ ಹಂತದ ಕಾಮಗಾರಿ ಬಾಕಿ ಇದೆ. ಎರಡನೇ
ಹಂತವನ್ನು ಪೂರ್ಣಗೊಳಿಸಲು ಅಂದಾಜಿನ ಪ್ರಕಾರ ಸುಮಾರು 32 ಕೋ.ರೂ.ಗಳ  ಅಗತ್ಯವಿದೆ. ರಾಜ್ಯ ಸರಕಾರದಿಂದ ಅನುದಾನ ಬಿಡುಗಡೆಯಾಗದೇ ಇರುವುದರಿಂದ ಕಾಮಗಾರಿಗೆ ಅಡ್ಡಿಯಾಗಿದೆ. ಇದೀಗ ಅಂತಿಮವಾಗಿ ಸರಕಾರದ ಮಟ್ಟದಲ್ಲಿ
ಹಲವು ಸುತ್ತಿನ ಮಾತುಕತೆಗಳು ನಡೆದು, ಮಂಗಳೂರು ಸ್ಮಾರ್ಟ್‌ ಸಿಟಿ ಲಿ. ಸಹಕಾರದಿಂದ ಯೋಜನೆಯನ್ನು ಪೂರ್ಣಗೊಳಿಸಲು
ಜಿಲ್ಲಾಡಳಿತ ನಿರ್ಧರಿಸಿದೆ.

ಯೋಜನೆ ಪೂರ್ಣಗೊಳಿಸಲು ಸ್ಮಾರ್ಟ್‌ ಸಿಟಿ 20 ಕೋ.ರೂ. ಮೀಸಲಿರಿಸಲು ಉದ್ದೇಶಿಸಿದೆ. ಇದರಲ್ಲಿ ಅಗತ್ಯವಿರುವ ಮೂಲ ಸೌಕರ್ಯಗಳನ್ನು ಕಟ್ಟಡಕ್ಕೆ ಕಲ್ಪಿಸಲಾಗುತ್ತದೆ. ಮುಖ್ಯವಾಗಿ ಸುಸಜ್ಜಿತ ಆವರಣಗೋಡೆ, ಯಾರ್ಡ್‌, ಫ್ಲೋರಿಂಗ್‌, ಡಿಸಿ ಕಚೇರಿಗೆ ಸಂಬಂಧಿಸಿದ ಪೀಠೊಪಕರಣಗಳು, ಸಭಾಂಗಣದ ವಿನ್ಯಾಸ, ಪೈಂಟಿಂಗ್‌, ಇಲೆಕ್ಟ್ರಿಕಲ್‌- ಕೇಬಲ್‌ ನೆಟ್‌ವರ್ಕ್‌ ಮೊದಲಾದ ಕೆಲಸಗಳು ನಡೆಯಲಿದೆ. ಇದಕ್ಕಾಗಿ ಪ್ರತ್ಯೇಕ ಟೆಂಡರ್‌ ಕರೆದು ಯೋಜನೆ ಮುಂದುವರಿಸಲಾಗುತ್ತದೆ ಎನ್ನುತ್ತಾರೆ ಅಧಿಕಾರಿಗಳು.

20 ಕೋ.ರೂ. ನೆರವು ಯೋಜನೆ
ನೂತನ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿ ಬಾಕಿ ಉಳಿದಿರುವ ಕಾಮಗಾರಿಗೆ ಸಂಬಂಧಿಸಿದಂತೆ ಜಿಲ್ಲಾಡಳಿತ ಸ್ಮಾರ್ಟ್‌ ಸಿಟಿಯ ಸಹಕಾರ ಕೋರಿದ್ದು, ಈಗಾಗಲೇ ಮಾತುಕತೆಗಳು ನಡೆದಿವೆ. ಸ್ಮಾರ್ಟ್‌ ಸಿಟಿ ವತಿಯಿಂದ 20 ಕೋ.ರೂ. ಮೊತ್ತವನ್ನು “ಡೆಪಾಸಿಟ್‌ ಕಾಂಟ್ರಿಬ್ಯೂಶನ್‌’ ಎಂದು ಯೋಜನೆಗೆ ಒದಗಿಸಲು ಉದ್ದೇಶಿಸಲಾಗಿದೆ.
*ರಾಜು ಕೆ.,
ವ್ಯವಸ್ಥಾಪಕ ನಿರ್ದೇಶಕರು, ಮಂಗಳೂರು ಸ್ಮಾರ್ಟ್‌ ಸಿಟಿ

ಡಿಸಿ ಕಚೇರಿ ನಿರ್ಮಾಣ:ಸಾಗಿ ಬಂದ ಹಾದಿ  
*2014ರಲ್ಲಿ ಪಡೀಲ್‌ನಲ್ಲಿ ಜಿಲ್ಲಾಧಿಕಾರಿ ಕಚೇರಿ ಸಂಕಿರ್ಣ ನಿರ್ಮಾಣಕ್ಕೆ ಸರಕಾರದಿಂದ ಆಡಳಿತಾತ್ಮಕ ಮಂಜೂರಾತಿ.

*ಅರಣ್ಯ ಇಲಾಖೆ ಇಲಾಖೆ ಜಾಗದ ಹಸ್ತಾಂತರ, ಮರ ಕಡಿಯಲು ಎನ್‌ಜಿಟಿ ವ್ಯಾಜ್ಯ ಮುಗಿದದ್ದು 2018ರಲ್ಲಿ.

*2018ರಲ್ಲಿ ಕರ್ನಾಟಕ ಗೃಹ ನಿರ್ಮಾಣ ಮಂಡಳಿ ಮೂಲಕ ಕಾಮಗಾರಿ ಆರಂಭ

*ಆರಂಭದಲ್ಲಿ ಮೊದಲ ಹಂತಕ್ಕೆ 41 ಕೋ.ರೂ. ಮೊತ್ತದ ಯೋಜನೆ. ಅನಂತರ ಈ ಮೊತ್ತ 55 ಕೋ.ರೂ.ಗೆ ಏರಿಕೆ.

*ಮೊದಲ ಹಂತದ ಕಾಮಗಾರಿ ಮುಕ್ತಾಯ ವಾಗಿದೆ, ಇನ್ನು 2ನೇ ಹಂತ ಆರಂಭ

ಡಿಸಿ ಕಚೇರಿ ಶೀಘ್ರ ಸಳಾಂತರಿಸುವ ಉದ್ದೇಶ
ಜಿಲ್ಲಾಡಳಿತ ಶೀಘ್ರವೇ ಕಟ್ಟಡ ನಿರ್ಮಾಣ ಪೂರ್ಣಗೊಳಿಸಿ, ಮೊದಲ ಹಂತದಲ್ಲಿ ಜಿಲ್ಲಾಧಿಕಾರಿ ಕಚೇರಿಯನ್ನು ಕಟ್ಟಡಕ್ಕೆ ಸ್ಥಳಾಂತರಿಸಲು ಉದ್ದೇಶಿಸಲಾಗಿದೆ. ಬಳಿಕ ಹಂತಹಂತವಾಗಿ ಸುಮಾರು 38 ವಿವಿಧ ಇಲಾಖೆಗಳ ಕಚೇರಿಗಳನ್ನೂ ಹೊಸ ಕಟ್ಟಡಕ್ಕೆ ಸ್ಥಳಾಂತರಿಸಲಾಗುತ್ತದೆ. ಲೋಕಸಭಾ ಸದಸ್ಯರು, ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿಗೂ ಇಲ್ಲಿ ಸ್ಥಳಾವಕಾಶ ಒದಗಿಸಲಾಗಿದೆ. 2.26 ಲಕ್ಷ ಚ.ಅ. ವಿಸ್ತೀರ್ಣ ಹೊಂದಿರುವ ಗ್ರೌಂಡ್‌ ಪ್ಲಸ್‌ 3 ಮಾದರಿಯ ಸಾಂಪ್ರದಾಯಿಕ ಶೈಲಿಯ ಕಟ್ಟಡ ಇದ್ದಾಗಿದ್ದು, 5.8 ಎಕ್ರೆ ಪ್ರದೇಶವನ್ನು ಹೊಂದಿದೆ. ಸುಮಾರು 200 ವಾಹನಗಳ ಪಾರ್ಕಿಂಗ್‌ಗೆ ವ್ಯವಸ್ಥೆ ಮಾಡಲಾಗಿದೆ.

ಟಾಪ್ ನ್ಯೂಸ್

1-dssd

Heavy Rain; ಜುಲೈ 5 ರಂದು ಉಡುಪಿಯ 3 ತಾಲೂಕುಗಳಲ್ಲಿ ಪಿಯುಸಿವರೆಗೆ ರಜೆ

1-wewqewqe

Rajasthan; ಮೋದಿಗೆ ಕೊಟ್ಟ ಭರವಸೆ ಈಡೇರದ್ದಕ್ಕೆ ಪ್ರಭಾವಿ ಸಚಿವ ರಾಜೀನಾಮೆ

Kollur: ಸೊಸೈಟಿ ಗುಡ್ಡೆ ಬಳಿ ಧರೆ ಕುಸಿದು ಮಣ್ಣಿನಡಿ ಸಿಲುಕಿ ಮಹಿಳೆ ಸಾವು

Kollur: ಸೊಸೈಟಿ ಗುಡ್ಡೆ ಬಳಿ ಧರೆ ಕುಸಿದು ಮಣ್ಣಿನಡಿ ಸಿಲುಕಿ ಮಹಿಳೆ ಸಾವು

Dengue-nagendra

Hunasuru: ಡೆಂಗ್ಯೂಗೆ ಆರೋಗ್ಯಾಧಿಕಾರಿಯೇ ಮೃತ್ಯು!

1983ರ ಕಥೆ! ಅಂದು ಅವಮಾನದಿಂದ ಬಿಸಿಸಿಐಯನ್ನು ಕಾಪಾಡಿದ್ದು ಲತಾ ಮಂಗೇಶ್ಕರ್

1983ರ ಕಥೆ! ಅಂದು ಅವಮಾನದಿಂದ ಬಿಸಿಸಿಐಯನ್ನು ಕಾಪಾಡಿದ್ದು ಲತಾ ಮಂಗೇಶ್ಕರ್

Sagara ಹಣ ಬಿಡುಗಡೆ ಮಾಡಿಸದೆ ಅವಧಿ ಪೂರೈಸಿದ ಹಾಲಪ್ಪ; ಬೇಳೂರು ವ್ಯಂಗ್ಯ

Sagara ಹಣ ಬಿಡುಗಡೆ ಮಾಡಿಸದೆ ಅವಧಿ ಪೂರೈಸಿದ ಹಾಲಪ್ಪ; ಬೇಳೂರು ವ್ಯಂಗ್ಯ

Hosanagar; ವಿಪರೀತ ಮಳೆ: ಸಂಕ ದಾಟುವ ವೇಳೆ ಕೊಚ್ಚಿ ಹೋದ ಮಹಿಳೆ ಸಾವು

Hosanagar; ವಿಪರೀತ ಮಳೆ: ಸಂಕ ದಾಟುವ ವೇಳೆ ಕೊಚ್ಚಿ ಹೋದ ಮಹಿಳೆ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sa-dsadsa

Mangaluru; ಮಣ್ಣುಕುಸಿತದಿಂದ ಸಾವನ್ನಪ್ಪಿದ ಕಾರ್ಮಿಕನ ಕುಟುಂಬಕ್ಕೆ 4 ಲಕ್ಷ ರೂ. ಪರಿಹಾರ

ಎಕ್ಕಾರು ಪಂಚಾಯತ್‌ ಸ್ಥಿತಿ ; ಗ್ರಾಪಂ ಕಟ್ಟಡವೇ ಸೋರಿಕೆ, ಪ್ಲಾಸಿಕ್‌ ಹೊದಿಕೆ!

ಎಕ್ಕಾರು ಪಂಚಾಯತ್‌ ಸ್ಥಿತಿ ; ಗ್ರಾಪಂ ಕಟ್ಟಡವೇ ಸೋರಿಕೆ, ಪ್ಲಾಸಿಕ್‌ ಹೊದಿಕೆ!

Mangaluru ಮಣ್ಣು ಕುಸಿತ: ಕೆಲಸ ಹೊಸತಲ್ಲ, ದುರದೃಷ್ಟ ಹೊಸತು !

Mangaluru ಮಣ್ಣು ಕುಸಿತ: ಕೆಲಸ ಹೊಸತಲ್ಲ, ದುರದೃಷ್ಟ ಹೊಸತು !

Bantwal: ಅರಣ್ಯ ಮಿತ್ರ ಪ್ರಶಸ್ತಿ ಪ್ರದಾನ

Bantwal: ಅರಣ್ಯ ಮಿತ್ರ ಪ್ರಶಸ್ತಿ ಪ್ರದಾನ

Mangaluru ಪ್ರತ್ಯೇಕ ರೈಲ್ವೇ ವಿಭಾಗಕ್ಕೆ ಅಭಿಯಾನ ಆರಂಭ

Mangaluru ಪ್ರತ್ಯೇಕ ರೈಲ್ವೇ ವಿಭಾಗಕ್ಕೆ ಅಭಿಯಾನ ಆರಂಭ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

1-dssd

Heavy Rain; ಜುಲೈ 5 ರಂದು ಉಡುಪಿಯ 3 ತಾಲೂಕುಗಳಲ್ಲಿ ಪಿಯುಸಿವರೆಗೆ ರಜೆ

1-wewqewqe

Rajasthan; ಮೋದಿಗೆ ಕೊಟ್ಟ ಭರವಸೆ ಈಡೇರದ್ದಕ್ಕೆ ಪ್ರಭಾವಿ ಸಚಿವ ರಾಜೀನಾಮೆ

1-sa-dsadsa

Mangaluru; ಮಣ್ಣುಕುಸಿತದಿಂದ ಸಾವನ್ನಪ್ಪಿದ ಕಾರ್ಮಿಕನ ಕುಟುಂಬಕ್ಕೆ 4 ಲಕ್ಷ ರೂ. ಪರಿಹಾರ

Kollur: ಸೊಸೈಟಿ ಗುಡ್ಡೆ ಬಳಿ ಧರೆ ಕುಸಿದು ಮಣ್ಣಿನಡಿ ಸಿಲುಕಿ ಮಹಿಳೆ ಸಾವು

Kollur: ಸೊಸೈಟಿ ಗುಡ್ಡೆ ಬಳಿ ಧರೆ ಕುಸಿದು ಮಣ್ಣಿನಡಿ ಸಿಲುಕಿ ಮಹಿಳೆ ಸಾವು

Dengue-nagendra

Hunasuru: ಡೆಂಗ್ಯೂಗೆ ಆರೋಗ್ಯಾಧಿಕಾರಿಯೇ ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.