![Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?](https://www.udayavani.com/wp-content/uploads/2025/02/6-20-415x249.jpg)
![Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?](https://www.udayavani.com/wp-content/uploads/2025/02/6-20-415x249.jpg)
Team Udayavani, Sep 10, 2022, 7:40 PM IST
ಮಂಗಳೂರು: ಇಲ್ಲಿನ ಅಂತಾ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸೆಪ್ಟೆಂಬರ್ 6 ರಿಂದ 10 ರವರೆಗೆ ಕಸ್ಟಮ್ಸ್ ಅಧಿಕಾರಿಗಳು 44 ಲಕ್ಷ ರೂಪಾಯಿಗೂ ಹೆಚ್ಚು ಮೌಲ್ಯದ ಕಳ್ಳಸಾಗಣೆ ಮಾಡುತ್ತಿದ್ದ ಚಿನ್ನವನ್ನು ಜಪ್ತಿ ಮಾಡಿದ್ದಾರೆ.
ಮಂಗಳೂರು ಮತ್ತು ಕಾಸರಗೋಡಿನ ಮಹಿಳೆ ಸೇರಿದಂತೆ 5 ಪ್ರಯಾಣಿಕರಿಂದ 24 ಕ್ಯಾರೆಟ್ ಶುದ್ಧತೆಯ 869 ಗ್ರಾಂ ತೂಕದ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ಇವರೆಲ್ಲರೂ ದುಬೈನಿಂದ ಬಂದವರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಜೀನ್ಸ್ ಪ್ಯಾಂಟ್, ಒಳಉಡುಪು, ವೆಸ್ಟ್ (ಬನಿಯನ್), ಬೂಟುಗಳು ಮತ್ತು ಗುದನಾಳದಲ್ಲಿ ಇರಿಸಲಾಗಿರುವ ಪೇಸ್ಟ್ ಮತ್ತು ಪೌಡರ್ ರೂಪದಲ್ಲಿ ಮರೆಮಾಚಿ ಕಳ್ಳಸಾಗಾಣಿಕೆದಾರರು ಅಕ್ರಮ ಸಾಗಾಟ ಮಾಡುತ್ತಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
You seem to have an Ad Blocker on.
To continue reading, please turn it off or whitelist Udayavani.