ಸುರತ್ಕಲ್ ಪಾಲಿಕೆ ವಲಯ ಕಟ್ಟಡಕ್ಕೆ ಅಂತಿಮ‌ ಸ್ಪರ್ಶ

5.50 ಕೋಟಿ ರೂ. ಮಿಕ್ಕಿ ಅನುದಾನದಲ್ಲಿ ಕಾಮಗಾರಿ

Team Udayavani, Aug 12, 2022, 3:54 PM IST

15

ಸುರತ್ಕಲ್‌: ಮಂಗಳೂರು ಮಹಾನಗರ ಪಾಲಿಕೆ ಸುರತ್ಕಲ್‌ ವಲಯವಾಗಿ ಐದು ವರ್ಷ ಸಮೀಪಿಸುತ್ತಿದ್ದು, ಜನ ನಿಭಿಡ ವಲಯ ಕಚೇರಿಗೆ ಇದೀಗ ನೂತನ ಕಟ್ಟಡ ನಿರ್ಮಾಣವಾಗುತ್ತಿದ್ದು ಕಾಮಗಾರಿ ಅಂತಿಮ ಹಂತದಲ್ಲಿದೆ.

ಈಗಾಗಲೇ ಕಟ್ಟಡ ಕಾಮಗಾರಿ ಮುಗಿದಿದ್ದು, ಪೀಠೊ ಪಕರಣ ಜೋಡಿಸುವ ಕಾರ್ಯ ನಡೆಯುತ್ತಿದೆ. ಒಟ್ಟು ಎರಡು ಅಂತಸ್ತುಗಳ ಈ ಕಟ್ಟಡದಲ್ಲಿ ನೆಲ ಅಂತಸ್ತಿನಲ್ಲಿ ಪಾರ್ಕಿಂಗ್‌ ಅವಕಾಶ ನೀಡಲಾಗಿದೆ. ಉಳಿದಂತೆ ಮೊದಲ ಅಂತಸ್ತಿನಲ್ಲಿ ವಿವಿಧ ವಿಭಾಗಗಳ ಕಚೇರಿ ಇರಲಿದೆ.

ಶಾಸಕ ಡಾ| ಭರತ್‌ ಶೆಟ್ಟಿ ವೈ., ವಲಯ ಆಯುಕ್ತರಿಗೆ, ಎಂಜಿನಿಯರ್‌ ಗಳಿಗೆ ಕೊಠಡಿ ಹಾಗೂ ಸಭೆ ನಡೆಸಲು ಸಭಾಂಗಣವಿದೆ. ಪಾಲಿಕೆ ಸದಸ್ಯರಿಗೆ ಪ್ರತ್ಯೇಕ ಆಸನದ ವ್ಯವಸ್ಥೆ ಜನರ ಭೇಟಿಗಾಗಿ ಅವಕಾಶ ಕಲ್ಪಿಸಲಾಗಿದೆ.

ಈಗಿರುವ ಕಚೇರಿ ಕಿರಿದಾಗಿದ್ದು, ಹತ್ತೈವತ್ತು ನಾಗರಿಕರು ಸೇರಲು ಸ್ಥಳಾವಕಾಶವಿಲ್ಲ. ಹೀಗಾಗಿ ಆಡಳಿತ ಯಂತ್ರ ಸುಗಮವಾಗಿ ಸಾಗಲು ಬೃಹತ್‌ ಕಟ್ಟಡ ಅಂದಾಜು 5.50 ಕೋಟಿ ರೂ. ಮಿಕ್ಕಿ ಅನುದಾನದಲ್ಲಿ ಕಟ್ಟಡ ನಿರ್ಮಾಣವಾಗುತ್ತಿದೆ.

ಪ್ರಯೋಜನವೇನು?

ಮಂಗಳೂರು ಲಾಲ್‌ ಬಾಗ್‌ನಲ್ಲಿರುವ ಕೇಂದ್ರ ಕಚೇರಿ ಸದಾ ಜನಜಂಗುಳಿಯಿಂದ ಕೂಡಿರುತ್ತದೆ ಮಾತ್ರವಲ್ಲ, ಸಣ್ಣ ಕೆಲಸಕ್ಕೂ ಹೊರವಲಯದ ಜನತೆ ನಗರಕ್ಕೆ ಬರಬೇಕಾಗುತ್ತದೆ. ಒಂದು ಬಾರಿಗೆ ಆಗದಿದ್ದಲ್ಲಿ ಹಲವು ಬಾರಿ ಅಲ್ಲಿಗೆ ಅಲೆದಾಡಬೇಕಾಗುತ್ತದೆ. ಅಭಿವೃದ್ಧಿ ಕಾರ್ಯ ಚುರುಕು ಗೊಳಿಸುವ ನಿಟ್ಟಿನಲ್ಲಿ ಕಡತ ವಿಲೇವಾಗಿ ಶೀಘ್ರವಾಗಲು ವಲಯ ಕಚೇರಿ ನಿರ್ಮಾಣಕ್ಕೆ ಆದ್ಯತೆ ನೀಡಲಾಗಿದೆ. ಆಯಾ ವ್ಯಾಪ್ತಿಯ ನಿವಾಸಿಗಳಿಗೆ ವಲಯ ಕಚೇರಿಯಲ್ಲಿ ಸೌಲಭ್ಯ ದೊರಕುವಂತೆ ಮಾಡುವುದು ಇದರ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ ಸುರತ್ಕಲ್‌ ವಲಯ ಕಚೇರಿಯನ್ನು ಮೇಲ್ದರ್ಜೆಗೆ ಏರಿಸಲಾಗಿದೆ.

ನೂತನ ಕಟ್ಟಡ ನಿರ್ಮಾಣದಿಂದ ಜನತೆಗೆ ಸಾಕಷ್ಟು ಸ್ಥಳಾವಕಾಶ ದೊರಕಲಿದ್ದು ಕುಳಿತುಕೊಳ್ಳಲು ಆಸನ, ಟೋಕನ್‌ ವ್ಯವಸ್ಥೆ, ಶೌಚಾಲಯದ ವ್ಯವಸ್ಥೆ, ಒಂದೇ ಸೂರಿನಡಿ ಅಧಿಕಾರಿಗಳ ಭೇಟಿ ಮತ್ತಿತರ ವ್ಯವಸ್ಥೆಗಳು ಸಿಗಲಿವೆ. ಶಾಸಕರ ಭೇಟಿಗೂ ಅವಕಾಶ ಇರುವುದರಿಂದ ತ್ವರಿತವಾಗಿ ಪಾಲಿಕೆ ಕೆಲಸ ಕಾರ್ಯವಾಗಲು ಪ್ರಯೋಜನವಾಗಲಿದೆ.

ಯಾವೆಲ್ಲ ಅನುಮತಿ ಸಿಗುತ್ತಿದೆ

ನಗರ ಯೋಜನೆಯಡಿ 500 ಚ.ಮೀ. ವಾಸ, ವಾಣಿಜ್ಯ ಕಟ್ಟಡಕ್ಕೆ ಪರವಾನಿಗೆ, ಪ್ರಮಾಣ ಪತ್ರ, ನವೀಕರಣ ಇತ್ಯಾದಿ, ಇದರ ಜತೆಗೆ ಖಾತಾ ನೋಂದಣಿ, ಕಟ್ಟಡ ನಂಬ್ರ ವಿತರಣೆ ಸಹಿತ ಆರೋಗ್ಯ ಶಾಖೆಯಡಿ ಪರವಾನಿಗೆ, ಉದ್ದಿಮೆ ಪರವಾನಿಗೆ ಮತ್ತಿತರ ಜವಾಬ್ದಾರಿ ನೀಡಲಾಗಿದೆ.

ಜನಸ್ನೇಹಿ ಆಡಳಿತ ವ್ಯವಸ್ಥೆಗೆ ಕ್ರಮ: ಜನತಾ ದರ್ಶನಕ್ಕೆ ಸ್ಥಳಾವಕಾಶವನ್ನು ನನ್ನ ಕಚೇರಿಯಲ್ಲಿಯೇ ನೀಡಲಾಗಿದೆ. ಸಂದರ್ಶನಕ್ಕೆ ಸಾರ್ವಜನಿಕರು ಬಂದಲ್ಲಿ ಎಲ್ಲ ಸೌಲಭ್ಯ ಸಿಗುವಂತಾಗಲು ಹೊಸಕಟ್ಟಡದಲ್ಲಿ ವ್ಯವಸ್ಥೆ ಮಾಡಲಾಗಿದೆ. ಆ. 25ರ ಒಳಗಾಗಿ ಇದನ್ನು ಸಾರ್ವಜನಿಕರ ಬಳಕೆಗೆ ಉಪಯೋಗಿಸಲು ತೀರ್ಮಾನಿಸಲಾಗಿದೆ. ಜನಸ್ನೇಹಿ ಆಡಳಿತ ವ್ಯವಸ್ಥೆ ಮಾಡಲು ಎಲ್ಲ ಕ್ರಮ ಕೈಗೊಳ್ಳಲಾಗಿದೆ. –ಡಾ| ಭರತ್‌ ಶೆಟ್ಟಿ ವೈ., ಶಾಸಕರು

ಪರಿಶೀಲಿಸಿ ಉದ್ಘಾಟನೆಗೆ ದಿನ ನಿಗದಿ: ಉದ್ಘಾಟನೆಗೂ ಮುನ್ನ ಆನ್‌ಲೈನ್‌ ವ್ಯವಸ್ಥೆ ಹಾಗೂ ಕಟ್ಟಡದಲ್ಲಿ ಸಮರ್ಪಕ ಕಾರ್ಯಚಟುವಟಿಕೆ ಸರಿಯಿದೆಯೇ ಎಂಬುದನ್ನು ಪರಿಶೀಲಿಸಲ್ಲಿದ್ದೇವೆ. ಬಳಿಕ ಉದ್ಘಾಟನೆಗೆ ದಿನ ನಿಗದಿ ಮಾಡಲಾಗುವುದು. – ವಾಣಿ ವಿ. ಆಳ್ವ, ವಲಯ ಆಯುಕ್ತರು ಸುರತ್ಕಲ್

ಟಾಪ್ ನ್ಯೂಸ್

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Dinesh-Gundurao

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.