ಸುರತ್ಕಲ್‌-ಕಾನಾ-ಕಾರ್ಗೋಗೇಟ್‌ ಚತುಷ್ಪಥ ಕಾಮಗಾರಿಗೆ ವೇಗ

19.85 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ

Team Udayavani, Nov 4, 2022, 1:34 PM IST

news-10

ಸುರತ್ಕಲ್‌: ನಿತ್ಯ ಸಾವಿರಾರು ಟ್ಯಾಂಕರ್‌, ಬುಲೆಟ್‌ ಟ್ಯಾಂಕರ್‌, ಸಿಲಿಂಡರ್‌ ಹೊತ್ತ ಲಾರಿಗಳ ಓಡಾಟವಿರುವ ಸುರತ್ಕಲ್‌ ಕಾರ್ಗೋಗೇಟ್‌ವರೆಗಿನ ಚತುಷ್ಪಥ ರಸ್ತೆ ಕಾಮಗಾರಿಗೆ ವೇಗ ದೊರಕಿದೆ.

ಸೆಪ್ಟಂಬರ್‌ 26ರಂದು ಶಾಸಕ ಡಾ| ಭರತ್‌ ಶೆಟ್ಟಿ ವೈ. ಅವರು ಕಾಮಗಾರಿಗೆ ಚಾಲನೆ ನೀಡಿದ ಬಳಿಕ ಒಂದು ತಿಂಗಳಿನಿಂದ ರಸ್ತೆಯ ಇಕ್ಕೆಲಗಳನ್ನು ವಿಸ್ತರಿಸುವ ಕಾರ್ಯ ನಡೆಯುತ್ತಿದೆ. ಎಂಆರ್‌ ಪಿಎಲ್‌ ಕಾರ್ಗೋಗೆಟ್‌ ನಿಂದ ಮತ್ತು ಸುರತ್ಕಲ್‌ ರೈಲ್ವೇ ಬ್ರಿಡ್ಜ್ ಪಾಯಿಂಟ್‌ ನಿಂದ ಕಾಮಗಾರಿ ಆರಂಭಿಸಲಾಗಿದೆ. ರಸ್ತೆ ವಿಸ್ತರಣೆಗೆ ಈ ಭಾಗದಲ್ಲಿ ಸರಕಾರಿ ಜಾಗವೇ ಇರುವುದರಿಂದ ಹೆಚ್ಚಿನ ಶ್ರಮವಿಲ್ಲದೆ ಕಾಮಗಾರಿ ನಡೆಯುತ್ತಿದೆ. ಮಳೆ ನೀರು ಹರಿದು ಹೋಗಲು ಕಲ್ವರ್ಟ್‌, ಚರಂಡಿ ನಿರ್ಮಾ ಣಕ್ಕೆ ಬೇಕಾದ ಕ್ರಮ ಕೈಗೊಳ್ಳಲಾಗಿದೆ. ವಿದ್ಯುತ್‌ ಕಂಬಗಳನ್ನು ಸ್ಥಳಾಂತರಿಸುವ ಕಾರ್ಯವೂ ನಡೆಯಲಿದೆ. ನಿತ್ಯ ವಾಹನ ಓಡಾಟಕ್ಕೆ ಅಡಚಣೆಯಾದಂತೆ ಒಂದು ಕಡೆಯಿಂದ ಅವಕಾಶ ಕಲ್ಪಿಸಲಾಗಿದೆ.

ಒಳಚರಂಡಿ ವ್ಯವಸ್ಥೆಯ ಸಮಸ್ಯೆ ಕಾನಾ ಬಳಿಯ ಮಸೀದಿ ಬಳಿಯಿಂದ ಮಿಸ್ಕಿತ್‌ ಆಸ್ಪತ್ರೆಯ ವರೆಗೆ ಸೂಕ್ತ ಒಳಚರಂಡಿ ವ್ಯವಸ್ಥೆಯ ಸಮಸ್ಯೆಯಿದ್ದು, ನೀರನ್ನು ನೇರವಾಗಿ ರಸ್ತೆ ಬದಿಗೆ ಬಿಡಲಾಗುತ್ತಿರುವ ಪರಿಣಾಮ ದುರ್ವಾಸನೆ ಬೀರುತ್ತಿದೆ. ಇದಕ್ಕೂ ವ್ಯವಸ್ಥೆ ಯೋಜನೆ ರೂಪಿಸಿ ಸ್ವಚ್ಛತೆಗೆ ಆದ್ಯತೆ ನೀಡುವ ಕೆಲಸವೂ ನಡೆಯಲಿದೆ.

ಮಂಗಳೂರು ಮಹಾನಗರ ಪಾಲಿಕೆ ಇಲ್ಲವೇ ಸ್ಮಾರ್ಟ್‌ ಸಿಟಿ ಅನುದಾನದಿಂದ ಸುಸಜ್ಜಿತ ಬಸ್‌ ತಂಗುದಾಣ ನಿರ್ಮಿಸಲು ಸ್ಥಳ ಗುರುತು ನಡೆಯಲಿದೆ. ಇನ್ನು ಈ ಭಾಗದಲ್ಲಿ ರಸ್ತೆ ವಿಸ್ತರಣೆಗೆ ಅಡ್ಡಿಯಾದ ಅತಿಕ್ರಮಣ ತೆರವು ನಡೆದಿದ್ದು, ಕಾಮಗಾರಿ ನಿರಾತಂಕವಾಗಿ, ನಿಗದಿತ ಸಮಯದೊಳಗೆ ಮುಗಿಸುವಂತೆ ಲೋಕೋಪಯೋಗಿ ಇಲಾಖೆಗೆ ನಿರ್ದೇಶನ ನೀಡಲಾಗಿದೆ.

ಸುರತ್ಕಲ್‌ನ ರೈಲ್ವೇ ಮೇಲ್ಸೇತುವೆ ಬಳಿಯಿಂದ ಎಂಆರ್‌ಪಿಎಲ್‌ ಕಾರ್ಗೋಗೇಟ್‌ವರೆಗೆ ರಾಜ್ಯ ಹೆದ್ದಾರಿ ಅಭಿವೃದ್ಧಿ ಅನುದಾನದ 10 ಕೋ. ರೂ. ಮತ್ತು ಲೋಕೋಪಯೋಗಿ ಇಲಾಖೆಯ ವತಿಯಿಂದ 9.85 ಕೋ. ರೂ. ಅನುದಾನದಲ್ಲಿ ಕಾಮಗಾರಿ ನಡೆಯುತ್ತಿದೆ.

ಮೂಲಸೌಕರ್ಯಕ್ಕೆ ಒತ್ತು: ಸುರತ್ಕಲ್‌ ಕಾರ್ಗೋಗೇಟ್‌, ಗುಡ್ಡೆಕೊಪ್ಲ ಬೀಚ್‌, ಚಿತ್ರಾಪುರ ಬೀಚ್‌ ಪ್ರಮುಖ ರಸ್ತೆಯಾಗಿದ್ದು, ವಿಸ್ತರಣೆ ಹಾಗೂ ಕಾಂಕ್ರೀಟ್‌ ಹಾಕುವ ಕೆಲಸ ನಡೆಯುತ್ತಿದೆ. ಇದರ ಜತೆಗೆ ಮಳೆ ನೀರು ಹರಿಯುವ ತೋಡು, ಒಳಚರಂಡಿ, ಅಗತ್ಯವಿದ್ದಲ್ಲಿ ಬಸ್‌ ತಂಗುದಾಣ ನಿರ್ಮಾಣದಂತಹ ಮೂಲಸೌಕರ್ಯಕ್ಕೂ ಒತ್ತು ನೀಡಲಾಗಿದೆ. ಕಾಮಗಾರಿಗಳನ್ನು ವಿಳಂಬ ಮಾಡದೆ ಮುಗಿಸಬೇಕೆಂದು ನಿರ್ದೇಶನ ನೀಡಲಾಗಿದೆ. ತಾಂತ್ರಿಕ ಕಾರಣದಿಂದ ಸಮಸ್ಯೆಯಾದಲ್ಲಿ ಆದನ್ನು ಬಗೆ ಹರಿಸಿ ಕೆಲಸಕ್ಕೆ ವೇಗ ನೀಡಲಾಗುವುದು. –ಡಾ| ಭರತ್‌ ಶೆಟ್ಟಿ ವೈ., ಶಾಸಕರು

ಟಾಪ್ ನ್ಯೂಸ್

2-chikkamagaluru

Chikkamagaluru: ಸಮಾಜ ಕಲ್ಯಾಣ ಇಲಾಖೆಯಲ್ಲಿ ಲಂಚ ಪಡೆಯುವಾಗ ಲೋಕಾಯುಕ್ತ ದಾಳಿ

ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ… ನಾವು ಆ ರೀತಿ ರಾಜಕಾರಣ ಮಾಡಲ್ಲ: ಜಿ. ಪರಮೇಶ್ವರ್

ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ… ನಾವು ಆ ರೀತಿ ರಾಜಕಾರಣ ಮಾಡಲ್ಲ: ಜಿ. ಪರಮೇಶ್ವರ್

revenge

Revange: ತಂದೆ ಹಂತಕನನ್ನು 22 ವರ್ಷ ಕಾದು ಕೊಂದು ಸೇಡು ತೀರಿಸಿಕೊಂಡ!

Sanatana Dharma Warning: ಆಂಧ್ರ, ತಮಿಳುನಾಡು ಡಿಸಿಎಂಗಳ ನಡುವೆ ಸನಾತನ ಜಟಾಪಟಿ!

Sanatana Dharma Warning: ಆಂಧ್ರ, ತಮಿಳುನಾಡು ಡಿಸಿಎಂಗಳ ನಡುವೆ ಸನಾತನ ಜಟಾಪಟಿ!

Tirupati Laddu Controversy: ತಿರುಪತಿ ಲಡ್ಡು ವಿವಾದ ಸ್ವತಂತ್ರ ತನಿಖೆಗೆ SIT: ಸುಪ್ರೀಂ

Tirupati Laddu Controversy: ತಿರುಪತಿ ಲಡ್ಡು ವಿವಾದ ಸ್ವತಂತ್ರ ತನಿಖೆಗೆ SIT: ಸುಪ್ರೀಂ

Hockey India League: 7 ವರ್ಷ ಬಳಿಕ ಹಾಕಿ ಇಂಡಿಯಾ ಲೀಗ್‌ ಪುನಾರಂಭ.. ಡಿ.28ಕ್ಕೆ ಕೂಟ ಶುರು

Hockey India League: 7 ವರ್ಷ ಬಳಿಕ ಹಾಕಿ ಇಂಡಿಯಾ ಲೀಗ್‌ ಪುನಾರಂಭ.. ಡಿ.28ಕ್ಕೆ ಕೂಟ ಶುರು

Haryana: ಯಾರಿಗೆ ಗೆಲುವಿನ ಹರಿವಾಣ? ಬಿಜೆಪಿಗೆ ಆಡಳಿತ ವಿರೋಧ ಅಲೆ ಭೀತಿ

Haryana: ಯಾರಿಗೆ ಗೆಲುವಿನ ಹರಿವಾಣ? ಬಿಜೆಪಿಗೆ ಆಡಳಿತ ವಿರೋಧ ಅಲೆ ಭೀತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Speaker UT Khader: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಶೀಘ್ರ ಸಿಎಂ, ಕಾನೂನು ಸಚಿವರ ಭೇಟಿ

Speaker UT Khader: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಶೀಘ್ರ ಸಿಎಂ, ಕಾನೂನು ಸಚಿವರ ಭೇಟಿ

MNG-Deeraj

Mangaluru: ಒಂದೂವರೆ ಕೋಟಿಗೂ ಅಧಿಕ ಬಿಜೆಪಿ ಸದಸ್ಯತ್ವ ಗುರಿ: ಧೀರಜ್‌ ಮುನಿರಾಜು

Mangaluru: ತ್ರಿಶಾ ಪದವಿ ಕಾಲೇಜಿನ ನೂತನ ಕಟ್ಟಡ ಉದ್ಘಾಟನೆ

Mangaluru: ತ್ರಿಶಾ ಪದವಿ ಕಾಲೇಜಿನ ನೂತನ ಕಟ್ಟಡ ಉದ್ಘಾಟನೆ

Mangaluru: ಹುಲಿ ವೇಷ ಬಣ್ಣಗಾರಿಕೆ ಹಿಂದಿದೆ ಶ್ರದ್ಧೆ, ಭಕ್ತಿ, ವಿಜ್ಞಾನ!

Mangaluru: ಹುಲಿ ವೇಷ ಬಣ್ಣಗಾರಿಕೆ ಹಿಂದಿದೆ ಶ್ರದ್ಧೆ, ಭಕ್ತಿ, ವಿಜ್ಞಾನ!

courts-s

Court: ವಾಹನ ಅಪಘಾತ: ಮೃತ ವ್ಯಕ್ತಿಯ ಆಶ್ರಿತರಿಗೆ 1.35 ಕೋ.ರೂ. ಪರಿಹಾರ: ನ್ಯಾಯಾಲಯ ಆದೇಶ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

2-chikkamagaluru

Chikkamagaluru: ಸಮಾಜ ಕಲ್ಯಾಣ ಇಲಾಖೆಯಲ್ಲಿ ಲಂಚ ಪಡೆಯುವಾಗ ಲೋಕಾಯುಕ್ತ ದಾಳಿ

ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ… ನಾವು ಆ ರೀತಿ ರಾಜಕಾರಣ ಮಾಡಲ್ಲ: ಜಿ. ಪರಮೇಶ್ವರ್

ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ… ನಾವು ಆ ರೀತಿ ರಾಜಕಾರಣ ಮಾಡಲ್ಲ: ಜಿ. ಪರಮೇಶ್ವರ್

revenge

Revange: ತಂದೆ ಹಂತಕನನ್ನು 22 ವರ್ಷ ಕಾದು ಕೊಂದು ಸೇಡು ತೀರಿಸಿಕೊಂಡ!

Sanatana Dharma Warning: ಆಂಧ್ರ, ತಮಿಳುನಾಡು ಡಿಸಿಎಂಗಳ ನಡುವೆ ಸನಾತನ ಜಟಾಪಟಿ!

Sanatana Dharma Warning: ಆಂಧ್ರ, ತಮಿಳುನಾಡು ಡಿಸಿಎಂಗಳ ನಡುವೆ ಸನಾತನ ಜಟಾಪಟಿ!

Tirupati Laddu Controversy: ತಿರುಪತಿ ಲಡ್ಡು ವಿವಾದ ಸ್ವತಂತ್ರ ತನಿಖೆಗೆ SIT: ಸುಪ್ರೀಂ

Tirupati Laddu Controversy: ತಿರುಪತಿ ಲಡ್ಡು ವಿವಾದ ಸ್ವತಂತ್ರ ತನಿಖೆಗೆ SIT: ಸುಪ್ರೀಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.