ರಾಜ್ಯದ 2ನೇ ಅತೀದೊಡ್ಡ ಸರಕಾರಿ ಪಾಲಿಟೆಕ್ನಿಕ್‌…ಕೆಪಿಟಿಗೆ ಈಗ ಅಮೃತ ಘಳಿಗೆ


Team Udayavani, Jul 3, 2024, 3:43 PM IST

ರಾಜ್ಯದ 2ನೇ ಅತೀದೊಡ್ಡ ಸರಕಾರಿ ಪಾಲಿಟೆಕ್ನಿಕ್‌…ಕೆಪಿಟಿಗೆ ಈಗ ಅಮೃತ ಘಳಿಗೆ

ಕೆಪಿಟಿ: ಕರಾವಳಿಯಲ್ಲಿ ತಾಂತ್ರಿಕ ಕ್ರಾಂತಿಗೆ ಮುನ್ನುಡಿ ಬರೆದ, ಸ್ವಾತಂತ್ರ್ಯ ಪೂರ್ವ ಕಾಲದಿಂದ ಇದುವರೆಗೆ ಲಕ್ಷಾಂತರ ತಂತ್ರಜ್ಞರನ್ನು ರೂಪಿಸಿ ದೇಶಕ್ಕೆ ಸಮರ್ಪಿಸಿದ ಮಂಗಳೂರಿನ ಹೆಮ್ಮೆಯ ಸಂಸ್ಥೆ ಕರ್ನಾಟಕ ಪಾಲಿಟೆಕ್ನಿಕ್‌(ಕೆಪಿಟಿ)ಗೆ ಈಗ “ಅಮೃತ’ ಕಾಲ!

1946ರಲ್ಲಿ ಸಿವಿಲ್‌, ಮೆಕ್ಯಾನಿಕಲ್‌, ಎಲೆಕ್ಟ್ರಿಕಲ್‌ ಮತ್ತು ಆಟೋಮೊಬೈಲ್‌ ಎಂಬ 4 ಡಿಪ್ಲೊಮಾ ಎಂಜಿನಿಯರಿಂಗ್‌ ಶಾಖೆಗಳೊಂದಿಗೆ ಸ್ಥಾಪನೆಯಾದ ಸಂಸ್ಥೆ ಅಮೃತ ಮಹೋ ತ್ಸವದ ಸಂಭ್ರಮದಲ್ಲಿದೆ. ರಾಜ್ಯದ ಎರಡನೇ ಅತಿದೊಡ್ಡ ಪಾಲಿಟೆಕ್ನಿಕ್‌ ಆಗಿ 1946ರಲ್ಲಿ ಜನ್ಮ ತಳೆದ ಕೆಪಿಟಿ 2021ರಲ್ಲಿ 75 ವರ್ಷಕ್ಕೆ ಕಾಲಿಟ್ಟಿತ್ತು. ಆದರೆ ಕೊರೊನಾ ಕಾರಣದಿಂದ ಆಚರಣೆ ಆಗಿರಲಿಲ್ಲ. ಈ ವರ್ಷ 75ರ ಸಂಭ್ರಮವನ್ನು ವಿಶೇಷ ರೀತಿಯಲ್ಲಿ ಆಚರಿಸಲು ತೀರ್ಮಾನಿಸಲಾಗಿದೆ. ಹಳೆ ವಿದ್ಯಾರ್ಥಿ ಸಂಘದ
ಮುತುವರ್ಜಿಯಲ್ಲಿ ಶಾಲಾ ಆಡಳಿತ ವ್ಯವಸ್ಥೆಯ ಸಹಕಾರದೊಂದಿಗೆ ಕಾರ್ಯಕ್ರಮ ನಡೆಸಲು ಉದ್ದೇಶಿಸಲಾಗಿದೆ.

ಇಲ್ಲಿ ಕಲಿತ ಸಾವಿರಾರು ವಿದ್ಯಾರ್ಥಿಗಳು ದೇಶ-ವಿದೇಶದಲ್ಲಿ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಕರಾವಳಿಯ ವಿವಿಧ ಭಾಗದಿಂದ ಇಲ್ಲಿಗೆ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಆಗಮಿಸುತ್ತಾರೆ. ಹೊಸ ಕೋರ್ಸ್‌ಗಳನ್ನು ಕೂಡ ಇಲ್ಲಿ ನೀಡಲಾಗುತ್ತಿದ್ದು ಅಧ್ಯಾಪಕರು ಸಹಿತ ಸಿಬಂದಿ-ಹಳೆ ವಿದ್ಯಾರ್ಥಿಗಳ ಸಂಘಟಿತ ಶ್ರಮದಿಂದಾಗಿ ಇದು ಸಾಧ್ಯವಾಗಿದೆ.

ಅಮೃತ ಮಹೋತ್ಸವ ವಿಶೇಷ
ಹಳೆ ವಿದ್ಯಾರ್ಥಿಗಳ ಸಂಘದ ವತಿಯಿಂದ ಸುಮಾರು 3 ಕೋ.ರೂ. ವೆಚ್ಚದಲ್ಲಿ ಕೆಪಿಟಿಯಲ್ಲಿ ಸುಸಜ್ಜಿತ “ಆಡಿಟೋರಿಯಂ’ ಮಾಡುವ ಬಗ್ಗೆ ಚಿಂತನೆ ನಡೆಸಲಾಗಿದೆ. ಸಿಎಂ ಸಿದ್ದರಾಮಯ್ಯ ಅವರಿಂದ ಇದಕ್ಕೆ ಶಿಲಾನ್ಯಾಸ ನಡೆಸಲು ಮಾತುಕತೆ ನಡೆಯುತ್ತಿದೆ. ಅದೇ ರೀತಿ, ಕೆಪಿಟಿಯಲ್ಲಿ ಕಲಿತ ಎಲ್ಲ ವಿದ್ಯಾರ್ಥಿಗಳನ್ನು ಜತೆಯಾಗಿ ಸೇರಿಸಿಕೊಂಡು ಹಳೆ ವಿದ್ಯಾರ್ಥಿಗಳ ಬೃಹತ್‌ “ಪುನರ್‌ ಮಿಲನ’ ಕಾರ್ಯಕ್ರಮ ಆಯೋಜಿಸಲು ಚಿಂತನೆ ನಡೆದಿದೆ.

ಸಂಸ್ಥೆಯ ರಿಜಿಸ್ಟ್ರಾರ್‌ ಪುಸ್ತಕದಲ್ಲಿರುವ ಮಕ್ಕಳ ಹೆಸರು-ಸಂಖ್ಯೆಯ ಆಧಾರಿತವಾಗಿ ಅವರಿಗೆ ಪ್ರತ್ಯೇಕ ಪತ್ರ ಬರೆದು ಈ ವಿಚಾರವನ್ನು ತಿಳಿಸುವ ಕಾರ್ಯ ಸದ್ಯ ನಡೆಯುತ್ತಿದೆ.

ಪಾಂಡೇಶರದಲ್ಲಿ ಆರಂಭವಾದ ಕೆಪಿಟಿ!
ಕರ್ನಾಟಕ (ಸರಕಾರಿ) ಪಾಲಿಟೆಕ್ನಿಕ್‌ ಮಂಗಳೂರು 1946ರಲ್ಲಿ ಹಿಂದಿನ ಮದ್ರಾಸ್‌ ರಾಜ್ಯ ಸರಕಾರದ ಅಡಿಯಲ್ಲಿ ಪಾಂಡೇಶ್ವರದಲ್ಲಿ ಬಾಡಿಗೆ ಕಟ್ಟಡದಲ್ಲಿ ಪ್ರಾರಂಭವಾಯಿತು. 1954ರಿಂದ ಮಂಗಳೂರಿನ ಕದ್ರಿ ಹಿಲ್ಸ್‌ನಲ್ಲಿರುವ ಪ್ರಸ್ತುತ ಕ್ಯಾಂಪಸ್‌ನಲ್ಲಿ ಕಾರ್ಯನಿರ್ವಹಿಸಲು ಪ್ರಾರಂಭಿಸಿತು. ಸುಮಾರು 20 ಎಕ್ರೆ ವಿಸ್ತಾರವಾದ ಕ್ಯಾಂಪಸ್‌ನಲ್ಲಿದೆ. ಸಂಸ್ಥೆಯು ಎಂಜಿನಿಯರಿಂಗ್‌ ಶಿಕ್ಷಣದ ಮೂಲಕ ಮಂಗಳೂರು ಮತ್ತು ಸುತ್ತಮುತ್ತಲಿನ ನಾಗರಿಕರಿಗೆ ಅತ್ಯುತ್ತಮ ಸೇವೆಯನ್ನು ಸಲ್ಲಿಸುತ್ತಿದೆ. ಪಾಲಿಟೆಕ್ನಿಕ್‌ ಸಂಪೂರ್ಣವಾಗಿ ಕರ್ನಾಟಕ ಸರಕಾರದಿಂದ ನಡೆಸಲ್ಪಡುತ್ತದೆ ಮತ್ತು ತಾಂತ್ರಿಕ ಶಿಕ್ಷಣ  ನಿರ್ದೇಶನಾಲಯದ ವ್ಯಾಪ್ತಿಯಲ್ಲಿದೆ.

ನವೆಂಬರ್‌ನಲ್ಲಿ “ಸಂಭ್ರಮ’ ಆಚರಣೆ

ಮಂಗಳೂರಿನ ಕೆಪಿಟಿಯ 75ರ ಸಂಭ್ರಮವನ್ನು ಅದ್ವಿತೀಯ ನೆಲೆಯಲ್ಲಿ ಆಚರಿಸಲು ಹಳೆ ವಿದ್ಯಾರ್ಥಿಗಳೆಲ್ಲರು ಸಂಕಲ್ಪ ತೊಟ್ಟಿದ್ದೇವೆ. ಆಡಿಟೋರಿಯಂ ರಚನೆಗೆ ಚಿಂತನೆ ಇದೆ. ಇಲ್ಲಿ ಕಲಿತ ಎಲ್ಲಾ ಹಳೆ ವಿದ್ಯಾರ್ಥಿಗಳನ್ನು ಕರೆದು ಪುನರ್‌ ಮಿಲನ ಕಾರ್ಯಕ್ರಮ ರೂಪಿಸಲು ಕೂಡ ಉದ್ದೇಶಿಸಲಾಗಿದೆ. ನವೆಂಬರ್‌ನಲ್ಲಿ ಈ ಎಲ್ಲಾ ಕಾರ್ಯಕ್ರಮ ಆಚರಿಸಲು ತೀರ್ಮಾನ
ಕೈಗೊಳ್ಳಲಾಗುವುದು.
ದೇವಾನಂದ ಎಂ.ಸಿ.,
ಅಧ್ಯಕ್ಷರು, ಹಳೆ ವಿದ್ಯಾರ್ಥಿಗಳ ಸಂಘ-ಕೆಪಿಟಿ

75ನೇ ಸಂಭ್ರಮ ಸಂಕಲ್ಪ

ಕೆಪಿಟಿಯಲ್ಲಿ 8 ಡಿಪ್ಲೊಮಾ ಎಂಜಿನಿಯರಿಂಗ್‌ ಕಾರ್ಯಕ್ರಮಗಳನ್ನು ನೀಡಲಾಗುತ್ತಿದೆ. ಈ ವರ್ಷ ಸಂಸ್ಥೆಯ 75ನೇ ವರ್ಷಾಚರಣೆಯನ್ನು ಆಚರಿಸಲಾಗುತ್ತಿದೆ. ಹಳೆ ವಿದ್ಯಾರ್ಥಿ ಸಂಘದ ನೆಲೆಯಲ್ಲಿ ವಿವಿಧ ಕಾರ್ಯಕ್ರಮ ಆಯೋಜನೆಗೆ ಸಿದ್ಧತೆಗಳು ನಡೆಯುತ್ತಿದೆ. ಹಳೆ ವಿದ್ಯಾರ್ಥಿಗಳೆಲ್ಲರ ಸಮ್ಮಿಲನಕ್ಕೂ ಉದ್ದೇಶಿಸಲಾಗಿದೆ.
*ಹರೀಶ್‌ ಶೆಟ್ಟಿ,
ಪ್ರಾಂಶುಪಾಲರು-ಕೆಪಿಟಿ

ಟಾಪ್ ನ್ಯೂಸ್

vidhana-Soudha

Karnataka Government: 21 ಐಎಎಸ್‌ ಅಧಿಕಾರಿಗಳ ವರ್ಗ

rahul gandhi (2)

UP; ಹಾಥರಸ್‌ ಕಾಲ್ತುಳಿತಕ್ಕೆ ಆಡಳಿತ ವೈಫ‌ಲ್ಯ ಕಾರಣ: ರಾಹುಲ್‌

1-weww

Bhojashala dispute: ಜೈನರ ಪರ ಸಲ್ಲಿಸಿದ್ದ ಅರ್ಜಿ ಹಿಂದಕ್ಕೆ

Punjalkatte ನೇಲ್ಯಕುಮೇರ್‌: ನಾಪತ್ತೆಯಾದ ರಿಕ್ಷಾ ಚಾಲಕ ಮೃತದೇಹ ಪತ್ತೆ

Punjalkatte ನೇಲ್ಯಕುಮೇರ್‌: ನಾಪತ್ತೆಯಾದ ರಿಕ್ಷಾ ಚಾಲಕ ಮೃತದೇಹ ಪತ್ತೆ

Puduvettu: ಪಿಯು ವಿದ್ಯಾರ್ಥಿನಿ ಆತ್ಮಹತ್ಯೆ; ಡೆತ್‌ನೋಟ್‌ ಪತ್ತೆ

Puduvettu: ಪಿಯು ವಿದ್ಯಾರ್ಥಿನಿ ಆತ್ಮಹತ್ಯೆ; ಡೆತ್‌ನೋಟ್‌ ಪತ್ತೆ

Mangaluru ವಸತಿ ಯೋಜನೆ: 4 ವರ್ಷಗಳಿಂದ ದ.ಕ.ಕ್ಕೆ ಮನೆಯೇ ಸಿಕ್ಕಿಲ್ಲ!

Mangaluru ವಸತಿ ಯೋಜನೆ: 4 ವರ್ಷಗಳಿಂದ ದ.ಕ.ಕ್ಕೆ ಮನೆಯೇ ಸಿಕ್ಕಿಲ್ಲ!

“Dengue ಪರೀಕ್ಷೆಗೆ ಹೆಚ್ಚು ಶುಲ್ಕ ಪಡೆದಲ್ಲಿ ಕ್ರಮ’: ಸಚಿವ ದಿನೇಶ್‌ ಗುಂಡೂರಾವ್‌

“Dengue ಪರೀಕ್ಷೆಗೆ ಹೆಚ್ಚು ಶುಲ್ಕ ಪಡೆದಲ್ಲಿ ಕ್ರಮ’: ಸಚಿವ ದಿನೇಶ್‌ ಗುಂಡೂರಾವ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ವಸತಿ ಯೋಜನೆ: 4 ವರ್ಷಗಳಿಂದ ದ.ಕ.ಕ್ಕೆ ಮನೆಯೇ ಸಿಕ್ಕಿಲ್ಲ!

Mangaluru ವಸತಿ ಯೋಜನೆ: 4 ವರ್ಷಗಳಿಂದ ದ.ಕ.ಕ್ಕೆ ಮನೆಯೇ ಸಿಕ್ಕಿಲ್ಲ!

“Dengue ಪರೀಕ್ಷೆಗೆ ಹೆಚ್ಚು ಶುಲ್ಕ ಪಡೆದಲ್ಲಿ ಕ್ರಮ’: ಸಚಿವ ದಿನೇಶ್‌ ಗುಂಡೂರಾವ್‌

“Dengue ಪರೀಕ್ಷೆಗೆ ಹೆಚ್ಚು ಶುಲ್ಕ ಪಡೆದಲ್ಲಿ ಕ್ರಮ’: ಸಚಿವ ದಿನೇಶ್‌ ಗುಂಡೂರಾವ್‌

Dakshina Kannada ಡೆಂಗ್ಯೂ ಹೆಚ್ಚಳ; ಲಾರ್ವಾ ಸಮೀಕ್ಷೆಗೆ ಆದ್ಯತೆ

Dakshina Kannada ಡೆಂಗ್ಯೂ ಹೆಚ್ಚಳ; ಲಾರ್ವಾ ಸಮೀಕ್ಷೆಗೆ ಆದ್ಯತೆ

Tulu Cinema ಕರಾವಳಿಯಾದ್ಯಂತ “ಧರ್ಮದೈವ’ ತುಳು ಸಿನೆಮಾ ತೆರೆಗೆ

Tulu Cinema ಕರಾವಳಿಯಾದ್ಯಂತ “ಧರ್ಮದೈವ’ ತುಳು ಸಿನೆಮಾ ತೆರೆಗೆ

Pavoor ಉಳಿಯ ಅಕ್ರಮ ಮರಳುಗಾರಿಕೆ ತನಿಖೆಗೆ ಸಮಿತಿ ರಚಿಸಿದ ಜಿಲ್ಲಾಧಿಕಾರಿ

Pavoor ಉಳಿಯ ಅಕ್ರಮ ಮರಳುಗಾರಿಕೆ ತನಿಖೆಗೆ ಸಮಿತಿ ರಚಿಸಿದ ಜಿಲ್ಲಾಧಿಕಾರಿ

MUST WATCH

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

udayavani youtube

ಅಬ್ಬಬ್ಬಾ ನೀವೆಂದೂ ಕಂಡಿರದ Coin Collection ನೋಡಿ

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

ಹೊಸ ಸೇರ್ಪಡೆ

1-ree

Sworn in; ಜೈಲಲ್ಲಿದ್ದೇ ಆಯ್ಕೆ ಆಗಿದ್ದ ಅಮೃತ್‌ಪಾಲ್‌, ರಶೀದ್‌ ಸಂಸದರಾಗಿ ಪ್ರಮಾಣ

Exam

FMGE ಪರೀಕ್ಷೆ: ಮೋಸದ ಜಾಲಕ್ಕೆ ಬಲಿ ಆಗದಂತೆ ಕೇಂದ್ರ ಮನವಿ

vidhana-Soudha

Karnataka Government: 21 ಐಎಎಸ್‌ ಅಧಿಕಾರಿಗಳ ವರ್ಗ

congress

BRSಗೆ ಶಾಕ್‌: 6 ಎಂಎಲ್‌ಸಿಗಳು ಕಾಂಗ್ರೆಸ್‌ ಸೇರ್ಪಡೆ!

rahul gandhi (2)

UP; ಹಾಥರಸ್‌ ಕಾಲ್ತುಳಿತಕ್ಕೆ ಆಡಳಿತ ವೈಫ‌ಲ್ಯ ಕಾರಣ: ರಾಹುಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.