Tokottu ಒಳಪೇಟೆ ರಸ್ತೆ ವಿಸ್ತರಣೆಗೆ ವರ್ತಕರು ಸಹಕರಿಸಿ: ಖಾದರ್‌

ತೊಕ್ಕೊಟ್ಟು ಒಳಪೇಟೆ ಅಭಿವೃದ್ಧಿ ಕಾಮಗಾರಿಗಾಗಿ ಸ್ಪೀಕರ್‌ ಅವರಿಂದ ಸ್ಥಳ ಪರಿಶೀಲನೆ

Team Udayavani, Jul 30, 2024, 12:18 PM IST

Screenshot (24)

ಉಳ್ಳಾಲ: ತೊಕ್ಕೊಟ್ಟು ಒಳಪೇಟೆ ಮತ್ತು ಜಂಕ್ಷನ್‌ ಉಳ್ಳಾಲ ನಗರದ ಹೃದಯಭಾಗ ಶಾಲಾ ಕಾಲೇಜು ಸೇರಿದಂತೆ ಹಲವು ಪ್ರಮುಖ ಪ್ರದೇಶಗಳನ್ನು ಸಂಪರ್ಕಿಸುವ ಒಳಪೇಟೆ ರಸ್ತೆ ಅಭಿವೃದ್ಧಿ ಮತ್ತು ವಿಸ್ತರಣೆ ಈಗಾಗಲೇ ನೀಲ ನಕಾಶೆ ತಯಾರಿಸಿದ್ದು, ಸ್ಥಳೀಯ ಜನಪ್ರತಿನಿಧಿಗಳು, ಸಾರ್ವಜನಿಕರು ಮತ್ತು ವರ್ತಕರೊಂದಿಗೆ ಚರ್ಚಿಸಿ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಯೋಜನೆಯಡಿ ರಸ್ತೆ ವಿಸ್ತರಣೆಗೆ ಚಾಲನೆ ನೀಡಲಾಗುವುದು ಎಂದು ಮಂಗಳೂರು ಶಾಸಕ, ವಿಧಾನಸಭಾ ಸ್ಪೀಕರ್‌ ಯು.ಟಿ. ಖಾದರ್‌ ತಿಳಿಸಿದರು.

ಅವರು ತೊಕ್ಕೊಟ್ಟು ಒಳಪೇಟೆಯಲ್ಲಿ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ಮತ್ತು ವಿವಿಧ ಯೋಜನೆಯಡಿ ರಸ್ತೆ ವಿಸ್ತರಣೆ, ಸುಂದರಗೊಳಿಸಲು ಮತ್ತು ಅಭಿವೃದ್ಧಿ ಕುರಿತು ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿ ನೀಲನಕಾಶೆ ವೀಕ್ಷಿಸಿ ಮಾತನಾಡಿ ಒಳಪೇಟೆಯಲ್ಲಿ ಬೆಳಗ್ಗೆ ಮತ್ತು ಸಂಜೆಯ ಅವಧಿಗೆ ಸಂಚಾರ ಅಸ್ತವ್ಯಸ್ತದಿಂದ ಜನರು ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ರಸ್ತೆ ವಿಸ್ತರಣೆ ಇಂದಿನ ಆವಶ್ಯಕತೆಗಳಲ್ಲಿ ಒಂದಾಗಿದ್ದು, ಇದರೊಂದಿಗೆ ಜಂಕ್ಷನ್ ಅಭಿವೃದ್ಧಿ ಮಾಡಲಾಗುವುದು ಎಂದರು.

ವರ್ತಕರೇ ಒತ್ತುವರಿ ತೆರವು ಮಾಡಿ

ಹಲವು ದಶಕಗಳಿಂದ ವ್ಯಾಪಾರ ನಡೆಸುತ್ತಿರುವ ವರ್ತಕರು ತಮ್ಮ ಅಂಗಡಿ ಕಟ್ಟಡಗಳ ಎದುರು ಹೆಚ್ಚುವರಿ ಜಾಗವನ್ನು ಒತ್ತುವರಿ ಮಾಡಿ ವ್ಯಾಪಾರ ನಡೆಸುತ್ತಿದ್ದಾರೆ. ಈವರೆಗೆ ಯಾರು ಕೂಡ ಈ ವಿಚಾರದಲ್ಲಿ ವರ್ತಕರಿಗೆ ಸಮಸ್ಯೆ ಮಾಡಿಲ್ಲ. ಆದರೆ ವಿಸ್ತರಣೆ ಹಿನ್ನೆಲೆಯಲ್ಲಿ ರಸ್ತೆ ಬದಿಯ ಹೆಚ್ಚುವರಿ ಒತ್ತುವರಿಯನ್ನು ವರ್ತಕರೇ ಮುಂದೆ ಬಂದು ತೆರವು ಮಾಡಿ ವಿಸ್ತರಣೆಗೆ ಬೆಂಬಲ ನೀಡಬೇಕು ಎಂದು ಸ್ಪೀಕರ್‌ ಯು.ಟಿ. ಖಾದರ್‌ ಮನವಿ ಮಾಡಿದರು.

ಮುಂದಿನ ಹಲವು ವರುಷಗಳ ಮುಂದಾಲೋಚನೆಯಿಂದ ಒಳಪೇಟೆಯನ್ನು ಅಭಿವೃದ್ಧಿ ನಡೆಸಲು ಯೋಜನೆ ರೂಪಿಸಿದ್ದು, ಹಂತ ಹಂತವಾಗಿ ಈ ಪ್ರದೇಶವನ್ನು ಅಭಿವೃದ್ಧಿ ಪಡಿಸಲಾಗುವುದು ಎಂದು ಸ್ಪೀಕರ್‌ ಯು.ಟಿ. ಖಾದರ್‌ ತಿಳಿಸಿದರು.

ಸಹಾಯಕ ಆಯುಕ್ತ ಹರ್ಷವರ್ಧನ್‌, ತಹಶೀಲ್ದಾರ್‌ ಪುಟ್ಟರಾಜು, ಉಳ್ಳಾಲ ತಾಲೂಕು ಕಂದಾಯ ಅಧಿಕಾರಿ ಪ್ರಮೋದ್‌ ಕುಮಾರ್‌, ಮೂಡಾ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸದಾಶಿವ ಉಳ್ಳಾಲ್‌, ಆಯುಕ್ತೆ ನೂರ್‌ ಝಹರಾ ಖಾನಂ, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಅಕ್ಬರ್‌ ಪಾಷಾ ಅಫ್ತಾರ್‌, ಉಳ್ಳಾಲ ನಗರಸಭಾ ಕಮಿಷನರ್‌ ವಾಣಿ ವಿ. ಆಳ್ವ, ಅಭಿಯಂತ ತುಳಸಿದಾಸ್‌, ಕಂದಾಯ ಅಧಿಕಾರಿ ಚಂದ್ರಹಾಸ್‌, ಧಾರ್ಮಿಕ ಪರಿಷತ್‌ ಸದಸ್ಯ ಸುರೇಶ್‌ ಭಟ್ನಗರ, ಉಳ್ಳಾಲ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ರಮೇಶ್‌ ಶೆಟ್ಟಿ, ಮಾಜಿ ಅಧ್ಯಕ್ಷ ಈಶ್ವರ ಉಳ್ಳಾಲ, ಮಾಜಿ ಉಪಾಧ್ಯಕ್ಷರಾದ ಆಯೂಬ್‌ ಮಂಚಿಲ, ರಝೀಯಾ ಇಬ್ರಾಹಿಂ, ಕೌನ್ಸಿಲರ್‌ಗಳಾದ ಅಝೀಝ್ ಕೋಡಿ, ಖಲೀಲ್‌ ಇಬ್ರಾಹಿಂ, ರವಿಚಂದ್ರ ಗಟ್ಟಿ, ಅಬ್ದುಲ್‌ ಜಬ್ಟಾರ್‌, ನಾಮನಿರ್ದೇಶಿತ ಸದಸ್ಯರಾದ ರಶೀದ್‌ ಕೋಡಿ, ಚಂದ್ರಹಾಸ, ರವಿ ಗಾಂಧಿನಗರ, ಕಿಶೋರ್‌ ತೊಕ್ಕೊಟ್ಟು, ಮನ್ಸೂರು ಮಂಚಿಲ, ರಾಜಾ ಬಂಡಸಾಲೆ, ವಿಶಾಲ್‌ ಕೊಲ್ಯ ಮತ್ತಿತರರು ಉಪಸ್ಥಿತರಿದ್ದರು.

ರೈಲ್ವೇ ಕ್ರಾಸ್‌ ರೈಲ್ವೇ ಸಚಿವರಿಗೆ ಮನವಿ

ಉಳ್ಳಾಲ ಒಳಪೇಟೆಯಲ್ಲಿ ವಾಹನ ದಟ್ಟಣೆಗೆ ರೈಲ್ವೇ ಹಳಿ ಬಳಿ ತಡೆ ಬೇಲಿ ಹಾಕಿರುವುದು ಒಂದು ಕಾರಣವಾಗಿದ್ದು, ಇಲ್ಲಿ ಅನೇಕ ಅವಘಡಗಳು ಸಂಭವಿಸಿದ್ದರಿಂದ ರೈಲ್ವೇ ಇಲಾಖೆ ಕಾನೂನು ಬದ್ಧವಾಗಿ ತಡೆ ಬೇಲಿ ಹಾಕಿದೆ. ಪ್ರತೀ ದಿನ ಸಂಚರಿಸುವ ಸಾರ್ವಜನಿಕರ ಉಪಯೋಗಕ್ಕಾಗಿ ಫೂಟ್‌ ಬ್ರಿಡ್ಜ್ ನಿರ್ಮಾಣಕ್ಕೆ ಸಂಬಂಧಿಸಿದಂತೆ ರೈಲ್ವೇ ಸಚಿವ ಸೋಮಣ್ಣ ಅವರಿಗೆ ಮನವಿ ಮಾಡಿದ್ದು, ಈ ವಿಚಾರದಲ್ಲಿ ಸಂಸದ ಕ್ಯಾ| ಬ್ರಿಜೇಶ್‌ ಚೌಟ ಅವರೊಂದಿಗೆ ಚರ್ಚಿಸಿ ಶಾಶ್ವತ ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪೀಕರ್‌ ಯು.ಟಿ. ಖಾದರ್‌ ತಿಳಿಸಿದರು.

ಟಾಪ್ ನ್ಯೂಸ್

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

11

Surathkal: ಅಡುಗೆ ಅನಿಲ ಸೋರಿಕೆ ಪ್ರಕರಣ; ಸುಧಾರಿಸದ ಗಾಯಾಳುಗಳ ಆರೋಗ್ಯ

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

6

Mangaluru: ನಂತೂರು ವೃತ್ತ; ಸಂಚಾರ ಸ್ವಲ್ಪ ನಿರಾಳ

3

Belma: ಕುಸಿತ ಭೀತಿಯಲ್ಲಿರುವ ಮನೆ; ಕಾಂಕ್ರೀಟ್‌ ತಡೆಗೋಡೆಗೆ ಪಿಡಬ್ಲ್ಯುಡಿ ಪ್ರಸ್ತಾವ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Brahmavar

Siddapura: ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.