Mangaluru: ಟ್ರಾಫಿಕ್‌ ಸಮಸ್ಯೆ: ಶಾಲಾ ಸಮಯ ವ್ಯತ್ಯಾಸ ಸೂತ್ರ ಮತ್ತೆ ಚರ್ಚೆಗೆ

ಶಾಲೆ ಆರಂಭ, ಮುಕ್ತಾಯದ ವೇಳೆ ವಿಪರೀತ ವಾಹನ ದಟ್ಟಣೆ, ಸಂಚಾರ ಸ್ತಬ್ಧ | ಪೊಲೀಸರ ಸಲಹೆಗೆ ಸಿಗದ ಸ್ಪಂದನೆ

Team Udayavani, Sep 25, 2024, 4:37 PM IST

9(1)

ಮಹಾನಗರ: ಮಂಗಳೂರು ನಗರದಲ್ಲಿ ಶಾಲಾ ಕಾಲೇಜುಗಳ ಆರಂಭ ಮತ್ತು ಮುಕ್ತಾಯದ ವೇಳೆ ಉಂಟಾಗುತ್ತಿರುವ ಟ್ರಾಫಿಕ್‌ ಜಾಮ್‌ಗೆ ‘ಶಾಲಾ ಕಾಲೇಜುಗಳ ಸಮಯ ವ್ಯತ್ಯಾಸ’ ಪರಿಕಲ್ಪನೆ ಪರಿಹಾರವಾಗಬಲ್ಲುದು ಎಂಬ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ. ಈ ಹಿಂದೆಯೂ ಇದರ ಬಗ್ಗೆ ಚರ್ಚೆ ನಡೆದು ಪೊಲೀಸ್‌ ಇಲಾಖೆ ಕೆಲವೊಂದು ಸೂಚನೆಗಳನ್ನು ನೀಡಿದ್ದರೂ ಶಿಕ್ಷಣ ಸಂಸ್ಥೆಗಳು ಆಸಕ್ತಿ ತೋರಿಸಿರಲಿಲ್ಲ.

ಬೆಳಗ್ಗೆ ತರಗತಿಗಳು ಆರಂಭವಾಗುವ ಮತ್ತು ಸಂಜೆ ಮುಕ್ತಾಯದ ವೇಳೆ ಶಾಲಾ ಕಾಲೇಜುಗಳಿಗೆ ಹೊಂದಿಕೊಂಡಿರುವ ರಸ್ತೆ, ಜಂಕ್ಷನ್‌ಗಳಲ್ಲಿ ಭಾರೀ ವಾಹನ ದಟ್ಟಣೆ ಉಂಟಾಗುತ್ತಿದೆ. ಏಕಕಾಲದಲ್ಲಿ ಸಾವಿರಾರು ಮಂದಿ ವಿದ್ಯಾರ್ಥಿಗಳು ರಸ್ತೆಗಿಳಿಯುವುದೇ ಇದಕ್ಕೆ ಮುಖ್ಯ ಕಾರಣ ಎಂಬುದಾಗಿ ಸಂಚಾರಿ ಪೊಲೀಸರು ಕಂಡುಕೊಂಡಿದ್ದು ಇದಕ್ಕೆ ಪರಿಹಾರವಾಗಿ ‘ಸಮಯ ವ್ಯತ್ಯಾಸದ ಸೂತ್ರ’ವನ್ನು ಶಾಲಾಡಳಿತ ಮಂಡಳಿಗಳ ಮುಂದಿಟ್ಟಿದ್ದಾರೆ.

ನಗರದ ಕೆಲವೆಡೆ ಹಲವಾರು ಶಾಲಾ ಕಾಲೇಜುಗಳು ಒಂದೇ ಪ್ರದೇಶದಲ್ಲಿ ಕೇಂದ್ರೀಕೃತವಾಗಿವೆ. ಇವುಗಳಲ್ಲಿ ಹೆಚ್ಚಿನವು ಶಾಲಾ ಬಸ್‌ಗಳನ್ನು ಹೊಂದಿವೆ. ಸಾಮಾನ್ಯ ಬಸ್‌ ಮತ್ತು ಸ್ಕೂಲ್‌ ಬಸ್‌ಗಳು ಏಕಕಾಲದಲ್ಲಿ ಕಾರ್ಯಾಚರಣೆ ನಡೆಸುವುದರಿಂದ ದಟ್ಟಣೆ ಹೆಚ್ಚಾಗುತ್ತದೆ. ಏಕಕಾಲದಲ್ಲಿ ಎಲ್ಲ ವಿದ್ಯಾರ್ಥಿಗಳಿಗೆ ಶಾಲೆ-ಕಾಲೇಜು ಬಿಡುವುದರಿಂದ ಸಾರಿಗೆ ಬಸ್‌ಗಳಲ್ಲೂ ಒತ್ತಡ ಜೋರಾಗುತ್ತದೆ. ಸಮಯದ ಬದಲಾವಣೆ ಈ ಸಮಸ್ಯೆಗೆ ಶೇ.50ರಷ್ಟು ಪರಿಹಾರ ಒದಗಿಸಬಹುದು ಎಂಬುದು ನಗರದ ಸಂಚಾರ ಪೊಲೀಸರ ಲೆಕ್ಕಾಚಾರ.

ಒಂದೇ ಪ್ರದೇಶದಲ್ಲಿರುವ ಎರಡು ಶಿಕ್ಷಣ ಸಂಸ್ಥೆಗಳು ಸಮಯದಲ್ಲಿ ಒಂದು ಸಣ್ಣ ಬದಲಾವಣೆ ಮಾಡಿಕೊಂಡರೂ ದೊಡ್ಡ ಸಮಸ್ಯೆ ಪರಿಹಾರವಾಗುತ್ತದೆ. ಅಥವಾ ಒಂದೇ ಶಾಲೆ, ಕಾಲೇಜಿನ ಬೇರೆ ಬೇರೆ ವಿಭಾಗ (ಉದಾ: ಪ್ರಾಥಮಿಕ, ಪ್ರೌಢ, ಕಾಲೇಜು)ಗಳಿದ್ದರೆ ಅವುಗಳಿಗೆ ಪ್ರತ್ಯೇಕ ಸಮಯ ನಿಗದಿ ಮಾಡಬಹುದು ಎನ್ನುವುದು ಪೊಲೀಸರ ಸಲಹೆ.

ಶನಿವಾರದ ಟ್ರಾಫಿಕ್‌ ಸಂತೆ !
ಇತರ ದಿನಗಳಲ್ಲಿ ಬೆಳಗ್ಗೆ ಮತ್ತು ಸಂಜೆ ಟ್ರಾಫಿಕ್‌ ಜಾಮ್‌ ಇದ್ದರೆ, ಪ್ರತಿ ಶನಿವಾರ ಮಧ್ಯಾಹ್ನ ನಗರದ ಬಹುತೇಕ ಎಲ್ಲ ಕಡೆ ಟ್ರಾಫಿಕ್‌ ಜಾಮ್‌. ಏಕಕಾಲದಲ್ಲಿ ಮಕ್ಕಳು ಹೊರಗೆ ಬರುವುದರಿಂದ ಶನಿವಾರ ಮಧ್ಯಾಹ್ನ 12ರಿಂದ 3 ಗಂಟೆಯವರೆಗೆ ಶಾಲಾ ಕಾಲೇಜುಗಳ ಪಕ್ಕದ ರಸ್ತೆಗಳಲ್ಲಿ ವಾಹನ ಸಂಚಾರ ಸ್ತಬ್ಧವಾಗುತ್ತದೆ.

ಪರಿಹಾರ ಹೇಗೆ?

  • ಒಂದೇ ಪರಿಸರದಲ್ಲಿ ಹಲವಾರು ಶಿಕ್ಷಣ ಸಂಸ್ಥೆಗಳಿದ್ದರೆ ಅಂತಹ ಶಿಕ್ಷಣ ಸಂಸ್ಥೆಗಳ ಆರಂಭ/ಮುಕ್ತಾಯದ ಅವಧಿಯಲ್ಲಿ ವ್ಯತ್ಯಾಸ ಮಾಡಬೇಕು.
  • ಒಂದೇ ಶಿಕ್ಷಣ ಸಂಸ್ಥೆಯಲ್ಲಿ ಹಲವು ವಿಭಾಗಗಳಿದ್ದರೆ (ಶಾಲೆ, ಕಾಲೇಜು, ಸ್ನಾತಕೋತ್ತರ ಇತ್ಯಾದಿ) ಒಂದೊಂದು ವಿಭಾಗಗಳ ಆರಂಭ/ಮುಕ್ತಾಯದ ಅವಧಿ ಬದಲಾಯಿಸಬೇಕು.
  • ಶಾಲೆ/ ಕಾಲೇಜು ಆರಂಭ ಅಥವಾ ಮುಕ್ತಾಯದ ಅವಧಿಯ ಬಗ್ಗೆ ಜಿಲ್ಲಾಧಿಕಾರಿಯವರು ಶಿಕ್ಷಣ ಸಂಸ್ಥೆಗಳಿಗೆ ಸೂಚನೆ ನೀಡಬಹುದು.
  • ಸಂಬಂಧಿಸಿದ ಶಿಕ್ಷಣ ಸಂಸ್ಥೆಗಳು ಒಂದಾಗಿ ಒಮ್ಮತದ ತೀರ್ಮಾನ ತೆಗೆದುಕೊಳ್ಳಬಹುದು.

ಜಿಲ್ಲಾಧಿಕಾರಿ ಆದೇಶ ಹೊರಡಿಸಲಿ
ತರಗತಿಗಳ ಆರಂಭ, ಅಂತ್ಯದ ಅವಧಿಯನ್ನು 10-15 ನಿಮಿಷಗಳಷ್ಟು ವ್ಯತ್ಯಾಸ ಮಾಡಿದರೂ ‘ಪೀಕ್‌ ಅವರ್‌’ನ ಸಂಚಾರ ದಟ್ಟಣೆ ಸಾಕಷ್ಟು ಮಟ್ಟಿಗೆ ಕಡಿಮೆಯಾಗಬಹುದು. ಇದರಿಂದ ಸುಗಮ, ಸುರಕ್ಷಿತ ಸಂಚಾರವೂ ಸಾಧ್ಯ. ಇದಕ್ಕೆ ಶಿಕ್ಷಣ ಸಂಸ್ಥೆಗಳು ಇಚ್ಛಾಶಕ್ತಿ ತೋರಿಸಬೇಕು. ಪೊಲೀಸರು ಸೂಚನೆ ನೀಡಿದ್ದರೂ ಪ್ರಯೋಜನವಾಗಿಲ್ಲ. ಡಿಸಿಯವರು ಆದೇಶ ಹೊರಡಿಸುವುದು ಸೂಕ್ತ.
-ಜಿ.ಕೆ. ಭಟ್‌ ಸದಸ್ಯರು, ರಸ್ತೆ ಸುರಕ್ಷ ಸಮಿತಿ, ಮಂಗಳೂರು

ಸೂಚನೆ ಪಾಲನೆಯಾಗಲಿ
ಏಕಕಾಲದಲ್ಲಿ ಶಾಲೆಗಳ ಆರಂಭ, ಮುಕ್ತಾಯ ಮಾಡದೆ ಸಮಯದಲ್ಲಿ ವ್ಯತ್ಯಾಸ ಮಾಡಬೇಕು ಎಂಬುದಾಗಿ ಈಗಾಗಲೇ ಶಾಲಾಡಳಿತ ಮಂಡಳಿಯವರಿಗೆ ಸೂಚನೆ ನೀಡಿದ್ದೇವೆ. ಆದರೆ ಅದು ಪಾಲನೆಯಾಗಿಲ್ಲ. ಈ ಬಗ್ಗೆ ಜಿಲ್ಲಾಧಿಕಾರಿ ಮಟ್ಟದಲ್ಲೇ ಚರ್ಚೆಯಾಗಿ ಆದೇಶ ಜಾರಿಗೆ ಬಂದರೆ ಪ್ರಯೋಜನವಾದೀತು.
-ದಿನೇಶ್‌ ಕುಮಾರ್‌ ಬಿ.ಪಿ. ಡಿಸಿಪಿ ಸಂಚಾರ ಮತ್ತು ಅಪರಾಧ ವಿಭಾಗ ಮಂಗಳೂರು

– ಸಂತೋಷ್‌ ಬೊಳ್ಳೆಟ್ಟು

ಟಾಪ್ ನ್ಯೂಸ್

vijayaendra

MUDA Case: ಭಂಡತನ ಬಿಟ್ಟು ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಬಿ.ವೈ.ವಿಜಯೇಂದ್ರ

ಎಲೆಕ್ಷನ್ ಬಾಂಡ್ ಪ್ರಕರಣದಲ್ಲಿ ಪ್ರಧಾನಿ ರಾಜೀನಾಮೆ ಕೊಡಬೇಕಲ್ವಾ?: ಎಂ.ಬಿ.ಪಾಟೀಲ್ ಪ್ರಶ್ನೆ

ಎಲೆಕ್ಷನ್ ಬಾಂಡ್ ಪ್ರಕರಣದಲ್ಲಿ ಪ್ರಧಾನಿ ರಾಜೀನಾಮೆ ಕೊಡಬೇಕಲ್ವಾ?: ಎಂ.ಬಿ.ಪಾಟೀಲ್ ಪ್ರಶ್ನೆ

Yuva Dasara: ಅ.6 -10 ರವರೆಗೆ ಯಾವೆಲ್ಲಾ ಕಾರ್ಯಕ್ರಮಗಳು ನಡೆಯಲಿವೆ; ಇಲ್ಲಿದೆ ವಿವರ

Yuva Dasara: ಅ.6 -10 ರವರೆಗೆ ಯಾವೆಲ್ಲಾ ಕಾರ್ಯಕ್ರಮಗಳು ನಡೆಯಲಿವೆ; ಇಲ್ಲಿದೆ ವಿವರ

17-v-somanna

Hubli: ಈ ಆರೋಪದಿಂದ ಹೊರಬರುವವರೆಗೂ ಸಿ.ಎಂ. ಸ್ಥಾನಕ್ಕೆ ರಾಜೀನಾಮೆ ನೀಡಬೇಕು: ವಿ.ಸೋಮಣ್ಣ

Israel: ಲೈವ್‌ ಸಂದರ್ಶನದ ವೇಳೆಯೇ ಪತ್ರಕರ್ತನ ಮನೆ ಮೇಲೆ ಇಸ್ರೇಲ್‌ ಮಿಸೈಲ್‌ ದಾಳಿ!

Israel: ಲೈವ್‌ ಸಂದರ್ಶನದ ವೇಳೆಯೇ ಪತ್ರಕರ್ತನ ಮನೆ ಮೇಲೆ ಇಸ್ರೇಲ್‌ ಮಿಸೈಲ್‌ ದಾಳಿ!

High-Court

High Court Order: ಕೋರ್ಟ್‌ ಕಲಾಪ ವೀಡಿಯೋ ಬಳಕೆಗೆ ನಿಷೇಧ

Yadgir: ಸಿಎಂ ಸಿದ್ದರಾಮಯ್ಯನವರ ಜೊತೆ ಕರ್ನಾಟಕದ ಜನ‌ ಇದ್ದಾರೆ… ಸಚಿವ ಮಧು ಬಂಗಾರಪ್ಪ

Yadgir: ಸಿಎಂ ಸಿದ್ದರಾಮಯ್ಯನವರ ಜೊತೆ ಕರ್ನಾಟಕದ ಜನ‌ ಇದ್ದಾರೆ… ಸಚಿವ ಮಧು ಬಂಗಾರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10

Kodailbail: ಕೆ.ಎಸ್‌.ರಾವ್‌ ರಸ್ತೆ; ಪಾದಚಾರಿಗಳಿಗಿಲ್ಲ ಸುರಕ್ಷತೆ !

5(1)

Surathkal: ಹೊಸ ಆಕರ್ಷಣೆಗಳಿಲ್ಲದೆ ಸೊರಗುತ್ತಿವೆ ಬೀಚುಗಳು!

Western Ghats: ಅರಣ್ಯ ನಾಶ ಅಬಾಧಿತ, ತಾಪ ಏರಿಕೆಗೆ ಇಲ್ಲ ಅಂಕುಶ

Western Ghats: ಅರಣ್ಯ ನಾಶ ಅಬಾಧಿತ, ತಾಪ ಏರಿಕೆಗೆ ಇಲ್ಲ ಅಂಕುಶ

ಯುವತಿಯರೊಂದಿಗೆ ಅನುಚಿತ ವರ್ತನೆ: ಯುವಕನ ಶರ್ಟ್‌ ಬಿಚ್ಚಿಸಿ ಪೊಲೀಸರಿಗೊಪ್ಪಿಸಿದರು

ಯುವತಿಯರೊಂದಿಗೆ ಅನುಚಿತ ವರ್ತನೆ: ಯುವಕನ ಶರ್ಟ್‌ ಬಿಚ್ಚಿಸಿ ಪೊಲೀಸರಿಗೊಪ್ಪಿಸಿದರು

Rain: ಚುರುಕಾದ ಮುಂಗಾರು; ವಿವಿಧೆಡೆ ಮಳೆ

Rain: ಚುರುಕಾದ ಮುಂಗಾರು; ವಿವಿಧೆಡೆ ಮಳೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

vijayaendra

MUDA Case: ಭಂಡತನ ಬಿಟ್ಟು ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಬಿ.ವೈ.ವಿಜಯೇಂದ್ರ

Kaalapatthar Celebrity Show: ಸೆಲೆಬ್ರೆಟಿ ಶೋನಲ್ಲಿ ಕಾಲಾಪತ್ಥರ್‌

Kaalapatthar Celebrity Show: ಸೆಲೆಬ್ರೆಟಿ ಶೋನಲ್ಲಿ ಕಾಲಾಪತ್ಥರ್‌

15

Container Kannada Movie: ಕಂಟೈನರ್‌ನೊಳಗೆ ಹೊಸಬರ ಕನಸು

14

Life Of Mrudula Kannada Movie: ಮೃದುಲಾಗೆ ಮೆಚ್ಚುಗೆ

Gopilola Trailer: ನೈಸರ್ಗಿಕ ಕೃಷಿಯತ್ತ ಗೋಪಿಲೋಲ

Gopilola Trailer: ನೈಸರ್ಗಿಕ ಕೃಷಿಯತ್ತ ಗೋಪಿಲೋಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.