Yoga-ದ.ಕ.ದಲ್ಲಿ 80 ಸಾವಿರ ಮಂದಿಗೆ ತರಬೇತಿ :ಮಹಾಯೋಗಕ್ಕೆ ಸಜ್ಜಾಗಿದೆ ‌ಮಹಾನಗರ…

ಉತ್ತಮ ಆರೋಗ್ಯಕ್ಕಾಗಿ ಯೋಗ..

Team Udayavani, Jun 20, 2024, 1:25 PM IST

Yoga-ದ.ಕ.ದಲ್ಲಿ 80 ಸಾವಿರ ಮಂದಿಗೆ ತರಬೇತಿ :ಮಹಾಯೋಗಕ್ಕೆ ಸಜ್ಜಾಗಿದೆ ‌ಮಹಾನಗರ…

ಮಹಾನಗರ: ಜೂನ್‌ 21ರ ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಮಂಗಳೂರು ನಗರ ಸಹಿತ ಇಡೀ ದ.ಕ. ಜಿಲ್ಲೆ ಸಿದ್ಧವಾಗುತ್ತಿದೆ. ಈ ಬಾರಿ “ಮಹಿಳಾ ಸಬಲೀಕರಣಕ್ಕಾಗಿ ಯೋಗ’ ಎಂಬ ಧ್ಯೇಯ ಇರುವುದರಿಂದ ಮಹಿಳೆಯರೇ ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗುವ ನಿರೀಕ್ಷೆ ಇದೆ. ಕರ್ನಾಟಕ ಸರಕಾರ,ಜಿಲ್ಲಾಡಳಿತ, ಆಯುಷ್‌ ಇಲಾಖೆ, ದಕ್ಷಿಣ ಕನ್ನಡ ಆಯುಷ್‌ ಕಾಲೇಜು ಗಳು, ವಿವಿಧ ಇಲಾಖೆಗಳು, ವಿವಿಧ ಯೋಗ ಸಂಘಟನೆಗಳ ಸಹ ಯೋಗದೊಂದಿಗೆ ಯೋಗ ದಿನಾಚರಣೆ ನಡೆಯಲಿದೆ.

ಜಿಲ್ಲೆಯ ಮುಖ್ಯ ಕಾರ್ಯಕ್ರಮ ಮಂಗಳೂರಿನ ಕುದ್ಮುಲ್‌ ರಂಗರಾವ್‌ ಪುರಭವನದ ಮಿನಿ ಸಭಾಂಗಣದಲ್ಲಿ ಬೆಳಗ್ಗೆ 8 ಗಂಟೆ ಗೆ ಆರಂಭ ವಾಗಲಿದೆ. ಸ್ಪೀಕರ್‌ ಯು.ಟಿ. ಖಾದರ್‌, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗೂಂಡೂರಾವ್‌ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಶಾಸಕ ವೇದವ್ಯಾಸ ಕಾಮತ್‌ ಅಧ್ಯಕ್ಷತೆ ವಹಿಸಲಿದ್ದಾರೆ. ಸಂಸದ ಕ್ಯಾ| ಬ್ರಿಜೇಶ್‌ ಚೌಟ ಸಹಿತ ಜಿಲ್ಲೆಯ
ಅಧಿಕಾರಿಗಳು ಗಣ್ಯರು, ಸಾರ್ವಜನಿಕರು ಭಾಗವಹಿಸುವರು.

ದಶಮ ಸಂಭ್ರಮಕ್ಕೆ ಭಾರಿ ಜಾಗೃತಿ
ಯೋಗ ದಿನಾಚರಣೆಯ ದಶ ವರ್ಷದ ಸಂಭ್ರಮಕ್ಕೆ ಜಿಲ್ಲೆಯಲ್ಲಿ ಸಾಕಷ್ಟು ಸಿದ್ಧತೆ ನಡೆ ಸಿದ್ದು, 1 ಲಕ್ಷ ಜನ ಯೋಗ  ದಿನಾಚರಣೆಯಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಶಾಲೆ, ಕಾಲೇಜು ಗಳು, ವಿ.ವಿ., ಯೋಗ ಸಂಘಟನೆಗಳು, ಆಯುಷ್‌ ಕಾಲೇಜುಗಳ ವಿದ್ಯಾರ್ಥಿಗಳು, ಸಾರ್ವಜನಿಕರು, ಪೊಲೀಸ್‌ ಇಲಾಖೆ, ಗೃಹ ರಕ್ಷಕ ದಳದವರು, ಎನ್‌ಸಿಸಿ, ಎನ್‌ ಎಸ್‌ ಎಸ್‌ ಘಟಕಗಳು, ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಸರಕಾರಿ ವಸತಿ ನಿಲಯದ ವಿದ್ಯಾರ್ಥಿಗಳು, ಸ್ಫೋರ್ಟ್ಸ್ ಹಾಸ್ಟೆಲ್‌ ವಿದ್ಯಾರ್ಥಿಗಳು, ಸಾರ್ವಜನಿಕರು ಭಾಗಿಯಾಗಲಿದ್ದಾರೆ.

10 ದಿನಗಳ ಉಚಿತ ತರಬೇತಿ
ಆಯುಷ್‌ ಇಲಾಖೆ ಸಹಿತೆ ವಿವಿಧ ಸಂಘ – ಸಂಸ್ಥೆಗಳು ಯೋಗ ದಿನಾಚರಣೆಗೆ ಸರಿಸುಮಾರು 80 ಸಾವಿರ ಜನರಿಗೆ 10 ದಿನಗಳ ಉಚಿತ ತರಬೇತಿ ನೀಡಿವೆ. ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಲ್ಲೂ ಯೋಗ ದಿನಾಚರಣೆ ನಡೆಯಲಿದೆ.
*ಡಾ| ಮುಹಮ್ಮದ್‌ ಇಕ್ಬಾಲ್‌, ಜಿಲ್ಲಾ ಆಯುಷ್‌ ಅಧಿಕಾರಿ

ಉತ್ತಮ ಆರೋಗ್ಯಕ್ಕೆ ಯೋಗ
ಯೋಗದಿಂದ ರೋಗ ನಿರೋಧಕ ಶಕ್ತಿ ಹೆಚ್ಚಳವಾಗುತ್ತದೆ. ಮಂಡಿ ನೋವು, ತಲೆನೋವು, ಗ್ಯಾಸ್ಟ್ರಿಕ್‌, ಹೊಟ್ಟೆ ನೋವು ಸೇರಿದಂತೆ ವಿವಿಧ ಕಾಯಿಲೆಗಳಿಂದ ದೂರ ಇರಬಹುದು. ಇತ್ತೀಚೆಗೆ ಕಡಿಮೆಯಾಗುತ್ತಿರುವ ಮಾನಸಿಕ ನೆಮ್ಮದಿ, ಶಾಂತಿ ಪಡೆಯಲು ಯೋಗ ಅತ್ಯುತ್ತಮ ಸಾಧನ.
*ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿ, ಯೋಗಗುರು

ಎಲ್ಲೆಲ್ಲಿ ಸಾರ್ವಜನಿಕ ಯೋಗ?
*ಬೆಳಗ್ಗೆ 8 ಗಂಟೆಗೆ ಮಂಗಳೂರು ಪುರಭವನ ಮಿನಿಸಭಾಂಗಣ: ಆಯುಷ್‌ ಇಲಾಖೆ
*ಬೆಳಗ್ಗೆ 5-7: ಉರ್ವ ಬೋಳೂರಿನ ಶ್ರೀ ಮಾರಿಯಮ್ಮ ದೇವಸ್ಥಾನ: ಪತಂಜಲಿ ಸಂಸ್ಥೆ
*ಬೆಳಗ್ಗೆ 7: ಸಂಘ ನಿಕೇತನ: ಕೇಶವ ಯೋಗ ಕೇಂದ್ರ ಹಾಗೂ ಪತಂಜಲಿ ಸಂಸ್ಥೆ
*ಸಂಜೆ 4-6: ಜೈಲುರಸ್ತೆಯ ಸುಬ್ರಹ್ಮಣ್ಯ ಸಭಾ ಸದನ: ಪಿರಮಿಡ್‌ ಧ್ಯಾನ ಕೇಂದ್ರ
*ಸಂಜೆ 6: ಮಂಗಳಾದೇವಿಯ ರಾಮಕೃಷ್ಣ ಮಠ: ಯೋಗಗುರು ಗೋಪಾಲಕೃಷ್ಣ ದೇಲಂಪಾಡಿ

ಟಾಪ್ ನ್ಯೂಸ್

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.