ಉಳ್ಳಾಲ ಸೇತುವೆ: ರಕ್ಷಣಾ ಬೇಲಿಗೆ ಟೆಂಡರ್‌

58 ಲಕ್ಷ ರೂ. ಮೊತ್ತ ; ಶೀಘ್ರ ಕಾಮಗಾರಿ ಆರಂಭಕ್ಕೆ ಸಿದ್ಧತೆ

Team Udayavani, May 6, 2020, 5:50 AM IST

ಉಳ್ಳಾಲ ಸೇತುವೆ: ರಕ್ಷಣಾ ಬೇಲಿಗೆ ಟೆಂಡರ್‌

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 66ರ ಉಳ್ಳಾಲ ಸೇತುವೆಯ ಮೇಲೆ ನಡೆಯುತ್ತಿರುವ ಅನಾಹುತಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಸೇತುವೆಯ ಇಕ್ಕೆಲಗಳಲ್ಲಿ ರಕ್ಷಣಾ ಬೇಲಿ ಅಳವಡಿಸುವ ಕಾಮಗಾರಿಗೆ ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ವತಿಯಿಂದ ಟೆಂಡರ್‌ ಕರೆಯಲಾಗಿದೆ. ಹಾಗಾಗಿ ಶೀಘ್ರದಲ್ಲಿಯೇ ಕಾಮಗಾರಿ ಆರಂಭವಾಗುವ ನಿರೀಕ್ಷೆ ಇದೆ.

ಕಳೆದ ಎ. 15ರಂದು ರಾತ್ರಿ ಕೊಲ್ಯದ ವಿಕ್ರಂ ಗಟ್ಟಿ ಅವರು ಈ ಸೇತುವೆಯ ಬಳಿ ತನ್ನ ಕಾರು ನಿಲ್ಲಿಸಿ ನಾಪತ್ತೆಯಾಗಿದ್ದು, ಎ. 17ರಂದು ಅವರ ಮೃತದೇಹ ಉಳ್ಳಾಲ ಹೊಯಿಗೆಯಲ್ಲಿ ನೇತ್ರಾವತಿ ನದಿಯ ತೀರದಲ್ಲಿ ಪತ್ತೆಯಾಗಿತ್ತು. ವಿಕ್ರಂ ಗಟ್ಟಿ ಉಳ್ಳಾಲ ಸೇತುವೆಯ ಮೇಲಿಂದ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು ಎನ್ನಲಾಗಿದೆ. ಈ ಸೇತುವೆ ಮೇಲಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡುವವರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸೇತುವೆಯ ಎರಡೂ ಬದಿ ರಕ್ಷಣಾ ಬೇಲಿ ನಿರ್ಮಾಣ ಮಾಡಬೇಕೆಂಬ ಬೇಡಿಕೆ 2019ರ ಆಗಸ್ಟ್‌ನಿಂದಲೇ ಬಲವಾಗಿ ಕೇಳಿ ಬಂದಿತ್ತು.

ಭರವಸೆ ಈಡೇರಿಕೆ
ವಿಕ್ರಂ ಗಟ್ಟಿ ಈ ಸೇತುವೆ ಬಳಿ ಕಾರು ನಿಲ್ಲಿಸಿ ನಾಪತ್ತೆಯಾದ ಬಗ್ಗೆ ಎ. 16ರಂದು ಸುದ್ದಿಯಾಗಿದ್ದು, ಈ ಸಂದರ್ಭದಲ್ಲಿ ಸ್ಥಳೀಯ ಶಾಸಕ ಡಿ. ವೇದವ್ಯಾಸ ಕಾಮತ್‌ ಅವರು 10 ದಿನಗಳಲ್ಲಿ ಸೇತುವೆಯ ಇಕ್ಕೆಲಗಳಲ್ಲಿ ಮುಡಾ ವತಿಯಿಂದ ರಕ್ಷಣಾ ಬೇಲಿ ನಿರ್ಮಾಣ ಹಾಗೂ ಸಿಸಿ ಕೆಮರಾ ಅಳವಡಿಸುವ ಕುರಿತಂತೆ ಟೆಂಡರ್‌ ಕರೆಯುವುದಾಗಿ ಭರವಸೆ ನೀಡಿದ್ದರು. ಇದೀಗ ಟೆಂಡರ್‌ ಮುಡಾ ಕರೆಯುವ ಮೂಲಕ ಶಾಸಕರು ತಮ್ಮ ಮಾತನ್ನು ಉಳಿಸಿಕೊಂಡಿದ್ದಾರೆ.

ಕಾಮಗಾರಿ ಶೀಘ್ರ
ಸೇತುವೆಯ ಇಕ್ಕೆಲ ಬೇಲಿ ನಿರ್ಮಾಣ ಮಾಡುವ ಬಗ್ಗೆ 58 ಲಕ್ಷ ರೂ. ಮೊತ್ತದ ಟೆಂಡರ್‌ ಆಹ್ವಾನಿಸಲಾಗಿದ್ದು, ಕನಿಷ್ಠ ಮೊತ್ತದ ಬಿಡ್‌ದಾರರಿಗೆ ಟೆಂಡರ್‌ ವಹಿಸಿ ಶೀಘ್ರ ಕಾಮಗಾರಿ ಆರಂಭಿಸಲಾಗುವುದು ಎಂದು ಶಾಸಕರು ತಿಳಿಸಿದ್ದಾರೆ.

ಸಿ.ಸಿ. ಕೆಮರಾ ಅಳವಡಿಕೆಗೂ ಟೆಂಡರ್‌
ಸೇತುವೆಯ ಎರಡೂ ದಿಕ್ಕುಗಳಲ್ಲಿ ಸಿ.ಸಿ. ಕೆಮರಾ ಅಳವಡಿಸುವ ಕಾಮಗಾರಿಗೆ 5 ಲಕ್ಷ ರೂ. ಮೊತ್ತದ ಟೆಂಡರ್‌ ಆಹ್ವಾನಿಸಲಾಗುವುದು. ಸಿ.ಸಿ. ಕೆಮರಾದ ಮಾನಿಟರಿಂಗ್‌ ಪೊಲೀಸರ ಕೈಯಲ್ಲಿ ಇರುವುದರಿಂದ ಇದಕ್ಕೆ ಪೊಲೀಸ್‌ ಇಲಾಖೆಯ ಪೂರ್ವಾನುಮತಿ ಬೇಕಾಗುತ್ತದೆ. ಅನುಮತಿಗಾಗಿ ಪೊಲೀಸ್‌ ಇಲಾಖೆಗೆ ಬರೆಯಲಾಗಿದ್ದು, ಒಂದೆರಡು ದಿನಗಳಲ್ಲಿ ಅನುಮತಿ ಲಭಿಸುವ ನಿರೀಕ್ಷೆ ಇದೆ. ಪೊಲೀಸ್‌ ಇಲಾಖೆಯ ಅನುಮತಿ ಲಭಿಸಿದ ಕೂಡಲೇ ಕಾಮಗಾರಿಗೆ ಟೆಂಡರ್‌ ಕರೆಯಲಾಗುವುದು ಎಂದು ಶಾಸಕ ವೇದವ್ಯಾಸ ಕಾಮತ್‌ ಅವರು ಪತ್ರಿಕೆಗೆ ಮಾಹಿತಿ ನೀಡಿದ್ದಾರೆ.

ಇಂದು ಟೆಂಡರ್‌ ಓಪನ್‌
58 ಲಕ್ಷ ರೂ. ಮೊತ್ತದ ಟೆಂಡರ್‌ ಕರೆಯಲಾಗಿದ್ದು, ಮೇ 6ರಂದು ಟೆಂಡರ್‌ ಓಪನ್‌ ಮಾಡಿ ಅತ್ಯಂತ ಕಡಿಮೆ ಮೊತ್ತದ ಬಿಡ್‌ ಸಲ್ಲಿಸಿದವರಿಗೆ ಟೆಂಡರ್‌ ವಹಿಸಿಕೊಡಲಾಗುವುದು. ಬಳಿಕ ಒಪ್ಪಂದವನ್ನು ಮಾಡಿಕೊಂಡು ಆದಷ್ಟು ಶೀಘ್ರದಲ್ಲಿ ಕಾಮಗಾರಿ ಆರಂಭಿಸಲಾಗುವುದು.
– ಡಿ. ವೇದವ್ಯಾಸ ಕಾಮತ್‌,
ಶಾಸಕರು, ಮಂಗಳೂರು ದಕ್ಷಿಣ

ಟಾಪ್ ನ್ಯೂಸ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Dinesh-Gundurao

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.