ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ


Team Udayavani, Nov 5, 2024, 9:52 AM IST

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

ಉಳ್ಳಾಲ: ಉಚ್ಚಿಲ ಬಟ್ಟಪ್ಪಾಡಿಯಲ್ಲಿ ತಿಂಗಳುಗಳ ಹಿಂದೆ ಅಕ್ರಮ ಮರಳುಗಾರಿಕೆಗೆ ಸಿಸಿಬಿ ಪೊಲೀಸರು ದಾಳಿ ನಡೆಸಿದ ಪ್ರಕರಣಕ್ಕೆಸಂಬಂಧಿಸಿದಂತೆ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ ಎಂದು ಆರೋಪಿಸಿ ವ್ಯಕ್ತಿಯೋರ್ವರಿಗೆ ಕಬ್ಬಿಣದ ಸಲಾಕೆಯಿಂದ ಹಲ್ಲೆಗೈಯ್ದು ಚಾಕುವಿನಿಂದ ಇರಿಯಲು ಯತ್ನಿಸಿದ ಘಟನೆ ಸೋಮೇಶ್ವರ ಪುರಸಭಾ ಕಚೇರಿಯ ಬಳಿ ಸೋಮವಾರ(ನ.4) ನಡೆದಿದೆ.

ಸೋಮೇಶ್ವರ ಉಚ್ಚಿಲದ, ಫಿಶರೀಶ್ ರೋಡ್ ನಿವಾಸಿ ಸೋಮೇಶ್ವರ ಸೋಮನಾಥ ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ಸದಸ್ಯ ಕಿಶೋರ್ ಎಮ್ ಉಚ್ಚಿಲ (53) ಹಲ್ಲೆಗೊಳಗಾದ ವ್ಯಕ್ತಿ. ಉಚ್ಚಿಲ ಬಟ್ಟಪ್ಪಾಡಿ ಪ್ರದೇಶದಲ್ಲಿ ಅಕ್ರಮ ಮರಳುಗಾರಿಕೆ ನಡೆಸುತ್ತಿರುವ ಸುನಿಲ್ ಪೂಜಾರಿ ಹಲ್ಲೆಗೈದಿದ್ದು, ಕಿಶೋರ್ ಸ್ಥಳೀಯ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.

ಕಿಶೋರ್ ಅವರು ಸೋಮವಾರ ಸ್ನೇಹಿತ ಪುಷ್ಪರಾಜ್ ಎಂಬವರ ಜತೆಯಲ್ಲಿ ಸೋಮೇಶ್ವರದ ಹೊಟೇಲ್ ನಲ್ಲಿ ಚಹಾ ಕುಡಿದು ಸ್ಕೂಟರ್ ನಲ್ಲಿ ಸಹ ಸವಾರನಾಗಿ ಮನೆಗೆ ಹಿಂತಿರುಗುತ್ತಿದ್ದ ವೇಳೆ ಸೋಮೇಶ್ವರ ಪುರಸಭಾ ಕಚೇರಿ ಬಳಿ ಸುನಿಲ್ ಪೂಜಾರಿ ಸ್ಕೂಟರ್ ತಡೆದು ಮರಳುಗಾರಿಕೆಯ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡುತ್ತೀಯ ಎಂದು ಕೊಲೆ ಬೆದರಿಕೆ ನೀಡಿದ್ದು, ಭುಜ ಮತ್ತು ಸೊಂಟಕ್ಕೆ ಹಲ್ಲೆ ನಡೆಸಿದ್ದಾನೆ.ಬಳಿಕ ಸೊಂಟದಿಂದ ಚಾಕು ಹೊರ ತೆಗೆದು ಇರಿಯಲು ಮುಂದಾಗಿದ್ದಾನೆ.ಈ ವೇಳೆ ಸ್ನೇಹಿತ ಪುಷ್ಪರಾಜ್ ಅವರು ಸ್ಕೂಟರನ್ಬು ವೇಗವಾಗಿ ಚಲಾಯಿಸಿದರ ಪರಿಣಾಮ ನಾನು ಪ್ರಾಣಾಪಾಯದಿಂದ ಪಾರಾಗಿದ್ದೇನೆಂದು ಹಲ್ಲೆಗೊಳಗಾದ ಕಿಶೋರ್ ದೂರಿನಲ್ಲಿ ತಿಳಿಸಿದ್ದಾರೆ.

ಉಚ್ಚಿಲ ಬಟ್ಟಂಪಾಡಿ ಪ್ರದೇಶದಲ್ಲಿ ಅಕ್ರಮ ಮರಳುಗಾರಿಕೆ ಅಡ್ಡೆಗೆ ದಾಳಿ ನಡೆಸಿ ಅಪಾರ ಪ್ರಮಾಣದ ಮರಳನ್ನ ವಶಪಡಿಸಿದ್ದು, ಆ ಪ್ರಕರಣದಲ್ಲಿ ಮರಳುಗಾರಿಕೆ ನಡೆಸುತ್ತಿದ್ದ ಆರೋಪದಲ್ಲಿ ಸುನಿಲ್ ಪೂಜಾರಿ ವಿರುದ್ಧವೂ ಪ್ರಕರಣ ದಾಖಲಾಗಿತ್ತು.

ಉಳ್ಳಾಲ ಠಾಣೆಯಲ್ಲಿ ಆರೋಪಿ ಸುನಿಲ್ ಪೂಜಾರಿ ವಿರುದ್ಧ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: BBK11: ಕ್ಯಾಪ್ಟನ್‌ ಹನುಮಂತುಗೆ ನಿಯತ್ತಿನ ಪ್ರಶ್ನೆ ಹಾಕಿ, ರೇಗಾಡಿದ ಚೈತ್ರಾ

ಟಾಪ್ ನ್ಯೂಸ್

Belagavi: Kalloli-based soldier Praveen passed away while on duty

Belagavi: ಕರ್ತವ್ಯದಲ್ಲಿದ್ದ ವೇಳೆ ಕಲ್ಲೋಳಿ ಮೂಲದ ಯೋಧ ಪ್ರವೀಣ್ ನಿಧನ

2024-25ರ ರಾಷ್ಟ್ರೀಯ, ರಾಜ್ಯ ಪ್ರಶಸ್ತಿ ಘೋಷಣೆ-S.R.ಗುಂಜಾಳರಿಗೆ ಬಸವ ರಾಷ್ಟ್ರೀಯ ಪುರಸ್ಕಾರ

2024-25ರ ರಾಷ್ಟ್ರೀಯ, ರಾಜ್ಯ ಪ್ರಶಸ್ತಿ ಘೋಷಣೆ-S.R.ಗುಂಜಾಳರಿಗೆ ಬಸವ ರಾಷ್ಟ್ರೀಯ ಪುರಸ್ಕಾರ

Dinesh-Gundurao

Mangaluru: ಶಿಷ್ಟಾಚಾರ ಉಲ್ಲಂಘಿಸಿದ ಅಧಿಕಾರಿಗಳ ವಿರುದ್ಧ ಕ್ರಮವಾಗಲಿ: ದಿನೇಶ್ ಗುಂಡೂರಾವ್

PAKvsSA: Pakistan players’ excessive behaviour: ICC fines three including Shaheen Afridi

PAKvsSA: ಪಾಕ್‌ ಆಟಗಾರರ ಅತಿರೇಕ: ಶಹೀನ್‌ ಅಫ್ರಿದಿ ಸೇರಿ ಮೂವರಿಗೆ ಐಸಿಸಿ ದಂಡ

Pampa Award:‌ ಜಾನಪದ ವಿದ್ವಾಂಸ ಡಾ.ಬಿ.ಎ.ವಿವೇಕ್ ರೈಗೆ 2024-25ನೇ ಸಾಲಿನ ಪಂಪ ಪ್ರಶಸ್ತಿ

Pampa Award:‌ ಜಾನಪದ ವಿದ್ವಾಂಸ ಡಾ.ಬಿ.ಎ.ವಿವೇಕ್ ರೈಗೆ 2024-25ನೇ ಸಾಲಿನ ಪಂಪ ಪ್ರಶಸ್ತಿ

Drug Case: ಮತ್ತೆ ಜೀವ ಪಡೆದ ಸ್ಯಾಂಡಲ್‌ವುಡ್‌ ಡ್ರಗ್ಸ್‌ ಕೇಸ್‌: ಸಂಜನಾ ಗಲ್ರಾನಿಗೆ ಸಂಕಷ್ಟ

Drug Case: ಮತ್ತೆ ಜೀವ ಪಡೆದ ಸ್ಯಾಂಡಲ್‌ವುಡ್‌ ಡ್ರಗ್ಸ್‌ ಕೇಸ್‌: ಸಂಜನಾ ಗಲ್ರಾನಿಗೆ ಸಂಕಷ್ಟ

Job Opportunities: ಕರ್ನಾಟಕ ಲೋಕಸೇವಾ ಆಯೋಗ-945 ವಿವಿಧ ಹುದ್ದೆಗೆ ಅರ್ಜಿ ಆಹ್ವಾನ

Job Opportunities: ಕರ್ನಾಟಕ ಲೋಕಸೇವಾ ಆಯೋಗ-945 ವಿವಿಧ ಹುದ್ದೆಗೆ ಅರ್ಜಿ ಆಹ್ವಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14

Mangaluru: ಗಡುವು ಮೀರಿದರೂ ಜಾರಿಯಾಗದ ನಿಯಮ!

Dinesh-Gundurao

Mangaluru: ಶಿಷ್ಟಾಚಾರ ಉಲ್ಲಂಘಿಸಿದ ಅಧಿಕಾರಿಗಳ ವಿರುದ್ಧ ಕ್ರಮವಾಗಲಿ: ದಿನೇಶ್ ಗುಂಡೂರಾವ್

7

Mudbidri: ರಸ್ತೆ ಕಿತ್ತುಹೋಗಿದೆ, ದಾರಿ ದೀಪ ಕೆಟ್ಟು ಹೋಗಿದೆ

6

Mangaluru: ಮಾ. 7ರಿಂದ ಸಪ್‌ ಚಾಂಪಿಯನ್‌ಶಿಪ್‌

5

Mangaluru: ‘ಶಿವದೂತೆ ಗುಳಿಗೆ’ ಬಳಿಕ ‘ಶಿವಾಜಿ’ ಸಂಚಲನ!

MUST WATCH

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

udayavani youtube

ಪ್ರಥಮ ಶಿವಮೊಗ್ಗ ಕಂಬಳಕ್ಕೆ ಸರ್ವ ಸಿದ್ದತೆ: ಮಾಹಿತಿ ನೀಡಿದ ಈಶ್ವರಪ್ಪ

udayavani youtube

ಮಹಿಳೆಯರ ಸಣ್ಣ ಉದ್ದಿಮೆಗಳ ಬೆಂಬಲಕ್ಕೆ ‘ ಪವರ್ ಪರ್ಬ’

udayavani youtube

ಶ್ರೀ ಕೃಷ್ಣ ಮುಖ್ಯ ಪ್ರಾಣ ದೇವರ ದರ್ಶನ ಪಡೆದ e ಹಾಗೂ ಡಾ| ವೀರೇಂದ್ರ ಹೆಗ್ಗಡೆ

udayavani youtube

ಧರ್ಮಸ್ಥಳ ಕ್ಷೇತ್ರದಂತೆ ಎಸ್.ಡಿ.ಎಂ ಉಜಿರೆ ವೈದ್ಯಕೀಯ ತಂಡದಿಂದ ನಡೆಯಿತೇ ಪವಾಡ

ಹೊಸ ಸೇರ್ಪಡೆ

Belagavi: Kalloli-based soldier Praveen passed away while on duty

Belagavi: ಕರ್ತವ್ಯದಲ್ಲಿದ್ದ ವೇಳೆ ಕಲ್ಲೋಳಿ ಮೂಲದ ಯೋಧ ಪ್ರವೀಣ್ ನಿಧನ

Sandalwood: ʼಇಂಟರ್‌ವಲ್ʼ ನಲ್ಲಿ ಹೊಸಬರ ತುಂಟಾಟ: ಮಾ.7ಕ್ಕೆ ಚಿತ್ರ ರಿಲೀಸ್

Sandalwood: ʼಇಂಟರ್‌ವಲ್ʼ ನಲ್ಲಿ ಹೊಸಬರ ತುಂಟಾಟ: ಮಾ.7ಕ್ಕೆ ಚಿತ್ರ ರಿಲೀಸ್

15

Kaup: ಅಮ್ಮನ ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ದಿನಗಣನೆ

14

Mangaluru: ಗಡುವು ಮೀರಿದರೂ ಜಾರಿಯಾಗದ ನಿಯಮ!

2024-25ರ ರಾಷ್ಟ್ರೀಯ, ರಾಜ್ಯ ಪ್ರಶಸ್ತಿ ಘೋಷಣೆ-S.R.ಗುಂಜಾಳರಿಗೆ ಬಸವ ರಾಷ್ಟ್ರೀಯ ಪುರಸ್ಕಾರ

2024-25ರ ರಾಷ್ಟ್ರೀಯ, ರಾಜ್ಯ ಪ್ರಶಸ್ತಿ ಘೋಷಣೆ-S.R.ಗುಂಜಾಳರಿಗೆ ಬಸವ ರಾಷ್ಟ್ರೀಯ ಪುರಸ್ಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.