ಸರಕಾರದ ಆದೇಶ ಗಾಳಿಗೆ; ಶುಲ್ಕ ಪಾವತಿಗೆ ವಿ.ವಿ. ಸೂಚನೆ


Team Udayavani, Sep 22, 2020, 1:22 AM IST

ಸರಕಾರದ ಆದೇಶ ಗಾಳಿಗೆ; ಶುಲ್ಕ ಪಾವತಿಗೆ ವಿ.ವಿ. ಸೂಚನೆ

ಸಾಂದರ್ಭಿಕ ಚಿತ್ರ

ವಿಟ್ಲ: ಶಾಲಾ ಕಾಲೇಜುಗಳು ಪೋಷಕರಿಂದ ಶುಲ್ಕ ವಸೂಲಿ ಮಾಡಬಾರದು ಎಂದು ಆದೇಶಿಸಿದ್ದರೂ ಸರಕಾರದ ಆದೇಶಕ್ಕೂ ಚಟುವಟಿಕೆಗಳಿಗೂ ತಾಳ ಮೇಳವಿಲ್ಲ! ಇದಕ್ಕೆ ಉದಾಹರಣೆ ಮಂಗಳೂರು ವಿಶ್ವವಿದ್ಯಾನಿಲಯದ್ದು. ಎಲ್ಲ ಪದವಿ ಕಾಲೇಜುಗಳು ವಿದ್ಯಾರ್ಥಿಗಳ ಶುಲ್ಕವನ್ನು ಸೆ. 30ರೊಳಗೆ ಪಾವತಿಸಬೇಕೆಂದು ಆದೇಶಿಸಿದೆ.

ಮಂಗಳೂರು ವಿ.ವಿ. ವ್ಯಾಪ್ತಿಯ ಅನುದಾನ ರಹಿತ ಕಾಲೇಜುಗಳಿಗೆ ಆದೇಶ ತಲುಪಿದ್ದು, ಆಡಳಿತ ಮಂಡಳಿಗಳು ತಬ್ಬಿಬ್ಟಾಗಿವೆ. ವಿದ್ಯಾರ್ಥಿಗಳ ಸೇರ್ಪಡೆ ಪ್ರಕ್ರಿಯೆ ಪೂರ್ಣಗೊಂಡಿಲ್ಲ. ಕಾಲೇಜುಗಳ ತರಗತಿ ಆರಂಭಿಸುವ ಬಗ್ಗೆ ಸರಕಾರ ಇನ್ನೂ ಯಾವುದೇ ಪ್ರಕಟನೆ ನೀಡಿಲ್ಲ. ಶುಲ್ಕ ವಸೂಲಿ ಮಾಡಬಾರದು ಎಂಬ ಎಚ್ಚರಿಕೆಯನ್ನೂ ಸರಕಾರ ನೀಡಿದೆ. ಆದರೆ ವಿ.ವಿ.ಯು ಪದವಿ ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳ ಶುಲ್ಕವನ್ನು ಪಾವತಿಸಲು ಆದೇಶಿಸಿದೆ. .

ಒಂದೆಡೆ ವಿದ್ಯಾರ್ಥಿಗಳ ಹೆತ್ತವರು ಶುಲ್ಕ ಪಾವತಿಸದೇ ಖಾಸಗಿ ವಿದ್ಯಾ ಸಂಸ್ಥೆಗಳು ಕಷ್ಟದಲ್ಲಿವೆ. ಉಪನ್ಯಾಸಕ ವೃಂದದವರಿಗೆ ವೇತನ ನೀಡಲಾಗದೇ ಒದ್ದಾಡುತ್ತಿದ್ದಾರೆ. ಹೆತ್ತವರಿಗೆ ಶುಲ್ಕ ಪಾವತಿಸುವಂತೆ ವಿನಂತಿಸಿದರೆ ಶಿಕ್ಷಣ ಇಲಾಖೆಗೆ ದೂರು ನೀಡಬೇಕೆಂದೂ ಸರಕಾರ ಹೇಳುತ್ತಿದೆ. ಆದರೆ ತರಗತಿ ಸೇರ್ಪಡೆ ಪ್ರಕ್ರಿಯೆಯೂ ಪೂರ್ತಿಯಾಗದೇ ಆನ್‌ಲೈನ್‌ ತರಗತಿಗಳನ್ನು ಆರಂಭಿಸಿ, ಶುಲ್ಕದ ವಿ.ವಿ.ಯ ಪಾಲನ್ನು ಕೊಡಬೇಕು ಎಂದು ಆದೇಶ ನೀಡಿದ ಬಗ್ಗೆ ವ್ಯಾಪಕ ಟೀಕೆ ವ್ಯಕ್ತವಾಗಿದೆ.

ಸರಕಾರದ ನಿಯಮ ಮೀರಿ ಮಂಗಳೂರು ವಿಶ್ವ ವಿದ್ಯಾನಿಲಯ ನಡೆದುಕೊಳ್ಳುವುದಿಲ್ಲ. ಸೆ. 30ರೊಳಗೆ ಶುಲ್ಕ ಪಾವತಿಸಲು ಕಾಲೇಜುಗಳಿಗೆ ಆದೇಶ ನೀಡಲಾಗಿದೆ. ಆದರೆ, ವರ್ಷದ ಶುಲ್ಕವನ್ನು ಒಮ್ಮೆಲೇ ಕಟ್ಟಬೇಕೆಂಬ ಒತ್ತಡವಿಲ್ಲ. ವಿದ್ಯಾರ್ಥಿಗಳಿಗೆ ಹಂತ ಹಂತವಾಗಿ ಶುಲ್ಕ ಪಾವತಿಸಲು ಅವಕಾಶವಿದೆ. ಶುಲ್ಕ ಪಾವತಿಸಲು ತೊಂದರೆ ಇರುವ ವಿದ್ಯಾರ್ಥಿಗಳಿಗೆ ಹೊರೆಯಾಗದಂತೆ ಸೂಕ್ತ ಎಚ್ಚರ ವಹಿಸಲಾಗುವುದು.
-ಡಾ| ಪಿ.ಎಸ್‌. ಯಡಪಡಿತ್ತಾಯ, ಕುಲಪತಿ, ಮಂಗಳೂರು ವಿ.ವಿ.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Dinesh-Gundurao

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.