Mangaluru: ಬಗೆಹರಿಯದ ಬಜಾಲ್‌ ಅಂಡರ್‌ಪಾಸ್‌ ಅವ್ಯವಸ್ಥೆ

ದೊರೆಯದ ಶಾಶ್ವತ ಪರಿಹಾರ; ಮಳೆ ಬಂದರೆ ಸುತ್ತು ಬಳಸಿ ತೆರಳುವುದು ಅನಿವಾರ್ಯ

Team Udayavani, Jul 27, 2024, 2:38 PM IST

Screenshot (6) copy

ಮಹಾನಗರ: ಸ್ಮಾರ್ಟ್‌ಸಿಟಿ, ಪಾಲಿಕೆ ಸಹಿತ ಮಂಗಳೂರು ನಗರದಲ್ಲಿ ವಿವಿಧ ಅಭಿವೃದ್ಧಿ ಕೆಲಸ ನಡೆದರೂ ಪಡೀಲ್‌ ಬಳಿಯ ಬಜಾಲ್‌ ಅಂಡರ್‌ಪಾಸ್‌ನಲ್ಲಿ ಕೃತಕ ನೆರೆ ಸೃಷ್ಟಿಯಾಗುವ ಸಮಸ್ಯೆಗೆ ಇನ್ನೂ ಶಾಶ್ವತ ಪರಿಹಾರ ದೊರಕಿಲ್ಲ.

ನಗರದಲ್ಲಿ ಸಾಧಾರಣ ಮಳೆಯಾದರೂ ಪಡೀಲ್‌ ಜಂಕ್ಷನ್‌ ಬಳಿಯಿಂದ ಬಜಾಲ್‌ ಸಂಪರ್ಕಿತ ರಸ್ತೆಯಲ್ಲಿರುವ ಅಂಡರ್‌ ಪಾಸ್‌ನಲ್ಲಿ ನೀರು ನಿಂತು ವಾಹನ ಸಂಚಾರಕ್ಕೆ ತೊಂದರೆ ಉಂಟಾಗುತ್ತದೆ. ಈ ರೈಲ್ವೇ ಕೆಳಸೇತುವೆಯಲ್ಲಿ ಮಳೆ ನೀರು ಹರಿಯಲು ಸಮರ್ಪಕ ಚರಂಡಿ ವ್ಯವಸ್ಥೆ ಇಲ್ಲದಿರುವುದೇ ಈ ಸಮಸ್ಯೆಗೆ ಕಾರಣ.ಜೋರಾಗಿ ಮಳೆ ಸುರಿದರೆ
ವಾಹನಗಳು ಈ ಅಂಡರ್‌ ಪಾಸ್‌ ಮುಖೇನ ಸಂಚರಿಸಲು ಬಹಳ ಕಷ್ಟವಾಗುತ್ತದೆ.

ಬಜಾಲ್‌, ಜಲ್ಲಿಗುಡ್ಡೆ,ವೀರನಗರ, ಕರ್ಮಾರ್‌ ಸಹಿತ ಸುತ್ತಮುತ್ತಲಿನ ಮಂದಿ ಇದೇ ಅಂಡರ್‌ಪಾಸ್‌ ಮುಖೇನ ನಗರಪ್ರವೇಶಿಸುತ್ತಿದ್ದು, ಮಳೆ ಬಂದರೆ ಸುತ್ತು ಬಳಸಿ ನಗರಕ್ಕೆ ಆಗಮಿಸಬೇಕಾದ ಅನಿವಾರ್ಯ ಎದುರಾಗಿದೆ. ಈ ಭಾಗದಲ್ಲಿ ರೈಲ್ವೇ ಅಂಡರ್‌ಪಾಸ್‌ ನಿರ್ಮಾಣ ಮಾಡುವುದಕ್ಕೂ ಮೊದಲು ರೈಲು ಬರುವುದಕ್ಕೂ ಮುನ್ನ ಗೇಟ್‌ ಮುಚ್ಚಲಾಗುತ್ತಿತ್ತು. ಇದರಿಂದ ಪಾದಚಾರಿಗಳು ಗಂಟೆಗಟ್ಟಲೆ ಕಾಯಬೇಕಾದ ಪರಿಸ್ಥಿತಿ ಇತ್ತು. ಸಾರ್ವಜನಿಕರು ಅನೇಕ ಬಾರಿ ಮನವಿ ಮಾಡಿದ ಬಳಿಕ ಕೆಲವು ವರ್ಷಗಳ ಹಿಂದೆ ಇಲ್ಲಿ ಅಂಡರ್‌ ಪಾಸ್‌ ನಿರ್ಮಾಣವಾಯಿತು.

ಅಸಮರ್ಪಕ ಕಾಮಗಾರಿ

ಅಂಡರ್‌ಪಾಸ್‌ನಿರ್ಮಾಣದ ವೇಳೆ ಸಮರ್ಪಕ ಯೋಜನ ಆಧಾರಿತ ಕಾಮಗಾರಿ ಮಾಡದ ಪರಿಣಾಮ ಸದ್ಯ ಸಮಸ್ಯೆಗೆ ಕಾರಣವಾಗಿದೆ. ಈಗ ಅಂಡರ್‌ ಪಾಸ್‌ಬದಿಯಲ್ಲಿ ತೋಡು ಇದ್ದು, ಇದು ಕೂಡ ಅಸಮರ್ಪಕವಾಗಿದ್ದು ಪೂರ್ಣಗೊಳ್ಳಬೇಕಿದೆ. ತೋಡಿಗೆ ಅಡ್ಡಲಾಗಿ ಡ್ರೈನೇಜ್‌ ಪೈಪ್‌ಲೈನ್‌ ಹಾದುಹೋಗುತ್ತಿದ್ದು, ಇದರಿಂದ ನೀರು ಸರಾಗವಾಗಿ ಹರಿಯುತ್ತಿಲ್ಲ. ಪೈಪ್‌ ಲೈನ್‌ ಸ್ಥಳಾಂತರ ಕೆಲಸ ಆಗಬೇಕು. ಈ ಎಲ್ಲ ಕಾರಣದಿಂದಾಗಿ ಅಂಡರ್‌ಪಾಸ್‌ನಲ್ಲಿ ಶೇಖರಣೆಗೊಂಡ ನೀರು ಹರಿಯಲು ಸರಿಯಾಗಿ ಜಾಗವಿಲ್ಲ. ಕಳೆದ ಕೆಲವು ದಿನಗಳ ಹಿಂದೆ ಸುರಿದ ಭಾರೀ ಮಳೆಗೆ ವಾಹನವೊಂದು ನೀರಿನಲ್ಲಿ ಸಿಲುಕಿಕೊಂಡಿತ್ತು. ಸದ್ಯ ಮಳೆ ಬಂದರೆ ಪಂಪ್‌ ಮುಖೇನ ನೀರು ಹೊರ ತೆಗೆಯಲಾಗುತ್ತದೆ. ಈ ಸಮಸ್ಯೆಗೆ ಶಾಶ್ವತ ಪರಿಹಾರಬೇಕು ಎನ್ನುತ್ತಾರೆ ಸಾರ್ವಜನಿಕರು.

ಟಾಪ್ ನ್ಯೂಸ್

director suri

Cini Talk: ಸಿನಿಮಾ ನಿರ್ದೇಶಕ ಬಿಝಿನೆಸ್‌ ಮ್ಯಾನ್‌ ಅಲ್ಲ!: ನಿರ್ದೇಶಕ ಸೂರಿ ಮಾತು

Victory is possible if CP Yogeshwar becomes candidate for Channapatna: Arvind Bellad

BJP: ಚನ್ನಪಟ್ಟಣಕ್ಕೆ ಸಿಪಿ ಯೋಗೇಶ್ವರ್ ಅಭ್ಯರ್ಥಿಯಾದರೆ ಗೆಲುವು ಸಾಧ್ಯ: ಅರವಿಂದ ಬೆಲ್ಲದ್

ESI Hospital : ಕೋಲ್ಕತ್ತಾದ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ಓರ್ವ ರೋಗಿ ಮೃತ್ಯು

ESI Hospital: ಬೆಳ್ಳಂಬೆಳಗ್ಗೆ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ರೋಗಿ ಮೃತ್ಯು

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

4-bng-crime

Bengaluru: ಪತ್ನಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

Kulai: ಬೃಹತ್‌ ಟ್ರಕ್‌ ಓಡಾಟದಿಂದ ರಸ್ತೆಗೆ ಹಾನಿ

10

Lalbagh: ಪಾಲಿಕೆ ಚುನಾವಣೆ ಸನ್ನಿಹಿತ; ಮೀಸಲಾತಿಯದೇ ಆತಂಕ!

7–ullala

Ullala: ಇನ್ಸ್‌ಪೆಕ್ಟರ್ ಕೊಠಡಿಯೊಳಗೆಯೇ ಹಿಂದೂ ಸಂಘಟನೆ ಮುಖಂಡನಿಗೆ ಮುಸ್ಲಿಂ ಯುವಕ ಹಲ್ಲೆ

7

Mangaluru: ನಿತ್ಯ ಟ್ರಾಫಿಕ್‌ ಜಾಮ್‌ ಗೋಳು; ವಾಹನ ಸವಾರರ ಪರದಾಟ

Crime

Mangaluru: ಬಸ್‌ ನಿರ್ವಾಹಕನ ಕೊಲೆ; ಆರೋಪಿಗಳ ಸುಳಿವು ಲಭ್ಯ?

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

2

Puttur: ಎಪಿಎಂಸಿ ವಸತಿಗೃಹದಲ್ಲಿ ಅನಧಿಕೃತ ವಾಸ; ಮಹಿಳೆ ಹೊರಕ್ಕೆ

8-bng

Bengaluru: ಬಸ್‌ಗಳಲ್ಲಿ ಮೊಬೈಲ್‌ ಕದಿಯುತ್ತಿದ್ದ ಆರೋಪಿ ಸೆರೆ

1(1)

Belthangady: ರಸ್ತೆ ಶೋಚನೀಯ; ನಿರ್ವಹಣೆಯ ಕೊರತೆ; ರಸ್ತೆಯಲ್ಲಿ ಇಂಗು ಗುಂಡಿ ತರಹದ ಹೊಂಡ

director suri

Cini Talk: ಸಿನಿಮಾ ನಿರ್ದೇಶಕ ಬಿಝಿನೆಸ್‌ ಮ್ಯಾನ್‌ ಅಲ್ಲ!: ನಿರ್ದೇಶಕ ಸೂರಿ ಮಾತು

7-bng

Bengaluru: ದ್ವಿಚಕ್ರ ವಾಹನ ಕಳ್ಳತನ ಆರೋಪಿ ಸೆರೆ, 4 ಬೈಕ್‌ ಜಪ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.