Mangaluru: ಬಗೆಹರಿಯದ ಬಜಾಲ್‌ ಅಂಡರ್‌ಪಾಸ್‌ ಅವ್ಯವಸ್ಥೆ

ದೊರೆಯದ ಶಾಶ್ವತ ಪರಿಹಾರ; ಮಳೆ ಬಂದರೆ ಸುತ್ತು ಬಳಸಿ ತೆರಳುವುದು ಅನಿವಾರ್ಯ

Team Udayavani, Jul 27, 2024, 2:38 PM IST

Screenshot (6) copy

ಮಹಾನಗರ: ಸ್ಮಾರ್ಟ್‌ಸಿಟಿ, ಪಾಲಿಕೆ ಸಹಿತ ಮಂಗಳೂರು ನಗರದಲ್ಲಿ ವಿವಿಧ ಅಭಿವೃದ್ಧಿ ಕೆಲಸ ನಡೆದರೂ ಪಡೀಲ್‌ ಬಳಿಯ ಬಜಾಲ್‌ ಅಂಡರ್‌ಪಾಸ್‌ನಲ್ಲಿ ಕೃತಕ ನೆರೆ ಸೃಷ್ಟಿಯಾಗುವ ಸಮಸ್ಯೆಗೆ ಇನ್ನೂ ಶಾಶ್ವತ ಪರಿಹಾರ ದೊರಕಿಲ್ಲ.

ನಗರದಲ್ಲಿ ಸಾಧಾರಣ ಮಳೆಯಾದರೂ ಪಡೀಲ್‌ ಜಂಕ್ಷನ್‌ ಬಳಿಯಿಂದ ಬಜಾಲ್‌ ಸಂಪರ್ಕಿತ ರಸ್ತೆಯಲ್ಲಿರುವ ಅಂಡರ್‌ ಪಾಸ್‌ನಲ್ಲಿ ನೀರು ನಿಂತು ವಾಹನ ಸಂಚಾರಕ್ಕೆ ತೊಂದರೆ ಉಂಟಾಗುತ್ತದೆ. ಈ ರೈಲ್ವೇ ಕೆಳಸೇತುವೆಯಲ್ಲಿ ಮಳೆ ನೀರು ಹರಿಯಲು ಸಮರ್ಪಕ ಚರಂಡಿ ವ್ಯವಸ್ಥೆ ಇಲ್ಲದಿರುವುದೇ ಈ ಸಮಸ್ಯೆಗೆ ಕಾರಣ.ಜೋರಾಗಿ ಮಳೆ ಸುರಿದರೆ
ವಾಹನಗಳು ಈ ಅಂಡರ್‌ ಪಾಸ್‌ ಮುಖೇನ ಸಂಚರಿಸಲು ಬಹಳ ಕಷ್ಟವಾಗುತ್ತದೆ.

ಬಜಾಲ್‌, ಜಲ್ಲಿಗುಡ್ಡೆ,ವೀರನಗರ, ಕರ್ಮಾರ್‌ ಸಹಿತ ಸುತ್ತಮುತ್ತಲಿನ ಮಂದಿ ಇದೇ ಅಂಡರ್‌ಪಾಸ್‌ ಮುಖೇನ ನಗರಪ್ರವೇಶಿಸುತ್ತಿದ್ದು, ಮಳೆ ಬಂದರೆ ಸುತ್ತು ಬಳಸಿ ನಗರಕ್ಕೆ ಆಗಮಿಸಬೇಕಾದ ಅನಿವಾರ್ಯ ಎದುರಾಗಿದೆ. ಈ ಭಾಗದಲ್ಲಿ ರೈಲ್ವೇ ಅಂಡರ್‌ಪಾಸ್‌ ನಿರ್ಮಾಣ ಮಾಡುವುದಕ್ಕೂ ಮೊದಲು ರೈಲು ಬರುವುದಕ್ಕೂ ಮುನ್ನ ಗೇಟ್‌ ಮುಚ್ಚಲಾಗುತ್ತಿತ್ತು. ಇದರಿಂದ ಪಾದಚಾರಿಗಳು ಗಂಟೆಗಟ್ಟಲೆ ಕಾಯಬೇಕಾದ ಪರಿಸ್ಥಿತಿ ಇತ್ತು. ಸಾರ್ವಜನಿಕರು ಅನೇಕ ಬಾರಿ ಮನವಿ ಮಾಡಿದ ಬಳಿಕ ಕೆಲವು ವರ್ಷಗಳ ಹಿಂದೆ ಇಲ್ಲಿ ಅಂಡರ್‌ ಪಾಸ್‌ ನಿರ್ಮಾಣವಾಯಿತು.

ಅಸಮರ್ಪಕ ಕಾಮಗಾರಿ

ಅಂಡರ್‌ಪಾಸ್‌ನಿರ್ಮಾಣದ ವೇಳೆ ಸಮರ್ಪಕ ಯೋಜನ ಆಧಾರಿತ ಕಾಮಗಾರಿ ಮಾಡದ ಪರಿಣಾಮ ಸದ್ಯ ಸಮಸ್ಯೆಗೆ ಕಾರಣವಾಗಿದೆ. ಈಗ ಅಂಡರ್‌ ಪಾಸ್‌ಬದಿಯಲ್ಲಿ ತೋಡು ಇದ್ದು, ಇದು ಕೂಡ ಅಸಮರ್ಪಕವಾಗಿದ್ದು ಪೂರ್ಣಗೊಳ್ಳಬೇಕಿದೆ. ತೋಡಿಗೆ ಅಡ್ಡಲಾಗಿ ಡ್ರೈನೇಜ್‌ ಪೈಪ್‌ಲೈನ್‌ ಹಾದುಹೋಗುತ್ತಿದ್ದು, ಇದರಿಂದ ನೀರು ಸರಾಗವಾಗಿ ಹರಿಯುತ್ತಿಲ್ಲ. ಪೈಪ್‌ ಲೈನ್‌ ಸ್ಥಳಾಂತರ ಕೆಲಸ ಆಗಬೇಕು. ಈ ಎಲ್ಲ ಕಾರಣದಿಂದಾಗಿ ಅಂಡರ್‌ಪಾಸ್‌ನಲ್ಲಿ ಶೇಖರಣೆಗೊಂಡ ನೀರು ಹರಿಯಲು ಸರಿಯಾಗಿ ಜಾಗವಿಲ್ಲ. ಕಳೆದ ಕೆಲವು ದಿನಗಳ ಹಿಂದೆ ಸುರಿದ ಭಾರೀ ಮಳೆಗೆ ವಾಹನವೊಂದು ನೀರಿನಲ್ಲಿ ಸಿಲುಕಿಕೊಂಡಿತ್ತು. ಸದ್ಯ ಮಳೆ ಬಂದರೆ ಪಂಪ್‌ ಮುಖೇನ ನೀರು ಹೊರ ತೆಗೆಯಲಾಗುತ್ತದೆ. ಈ ಸಮಸ್ಯೆಗೆ ಶಾಶ್ವತ ಪರಿಹಾರಬೇಕು ಎನ್ನುತ್ತಾರೆ ಸಾರ್ವಜನಿಕರು.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Dinesh-Gundurao

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.