Vamanjoor ದೇವರಪದವು: ಒಳಚರಂಡಿ ಸಮಸ್ಯೆ

ನೂತನವಾಗಿ ಒಳಚರಂಡಿ ನಿರ್ಮಾಣಗೊಂಡರೂ ಬಳಕೆಗೆ ಅಲಭ್ಯ

Team Udayavani, Aug 6, 2024, 3:52 PM IST

Screenshot (111)

ವಾಮಂಜೂರು: ಮಂಗಳೂರು ಪಾಲಿಕೆ ವ್ಯಾಪ್ತಿಯ ವಾಮಂಜೂರು ದೇವರಪದವು ನಿವಾಸಿಗಳಿಗೆ ಒಳಚರಂಡಿಯ ಸಮಸ್ಯೆ ಕಾಡುತ್ತಿದೆ. ಪಾಲಿಕೆ ವತಿಯಿಂದ ಸುಸಜ್ಜಿತ ಒಳಚರಂಡಿ ನಿರ್ಮಾಣವಾಗಿದ್ದು, ನಿವಾಸಿಗಳ ಬಳಕೆಗೆ ಲಭ್ಯವಾಗಿಲ್ಲ. 2 ವರ್ಷಗಳ ಹಿಂದೆ ಕಾಮಗಾರಿ ಪೂರ್ಣಗೊಂಡಿದ್ದು, ಮನೆ ಶೌಚಾಲಯಗಳನ್ನು ಒಳಚರಂಡಿಗೆ ಜೋಡಿಸಿಲ್ಲ. ಇದರಿಂದಾಗಿ ಸುಸಜ್ಜಿತ ಡ್ರೈನೇಜ್‌ ಬಳಕೆಗೆ ಸಿಗದಂತಾಗಿದೆ. ಪಾಲಿಕೆ ವತಿಯಿಂದ ಒಳಚರಂಡಿ ನಿರ್ಮಿಸಿ ಅಲ್ಲಲ್ಲಿ ಮ್ಯಾನ್‌ ಹೋಲ್‌ ಸ್ಥಾಪಿಸಲಾಗಿದೆ. ಆದರೆ ಮನೆಯ ಪೈಪ್‌ಗ್ಳನ್ನು ಇನ್ನೂ ಅವುಗಳಿಗೆ ಸೇರಿಸಿಲ್ಲ. ಈ ಬಗ್ಗೆ ಪಾಲಿಕೆಗೆ ಮನವಿ ಮಾಡಲಾಗಿದ್ದು, ಕಾಮಗಾರಿ ಬಾಕಿ ಉಳಿದಿದೆ ಎಂದು ತಿಳಿಸಿದ್ದು, ಲೈನ್‌ ಜೋಡಿಸುವ ಕಾರ್ಯ ವಿಳಂಬವಾಗಿದೆ.

ಬಾವಿಗಳಿಗೆ ಸೇರುತ್ತಿದೆ ಕೊಳಚೆ ನೀರು

ಪ್ರಸ್ತುತ ಮನೆ ವಠಾರಗಳಲ್ಲಿ ಪಿಟ್‌ಗಳನ್ನು ಮಾಡಿ ಅವುಗಳಿಗೆ ಶೌಚಾಲಯದ ಕೊಳಚೆ ನೀರನ್ನು ಸೇರಿಸಲಾಗುತ್ತಿದೆ. ಮಳೆಗಾಲದಲ್ಲಿ ಇವುಗಳು ತುಂಬಿ ತುಳುಕುತ್ತಿವೆ. ಮತ್ತೂಂದೆಡೆ ಪಾತ್ರೆಗಳನ್ನು ತೊಳೆದ ನೀರನ್ನು ಮನೆಯಂಗಳದಲ್ಲಿರುವ ತೆಂಗಿನ ಮರಗಳ ಬುಡಕ್ಕೆ ಸೇರಿಸಲಾಗುತ್ತಿದೆ. ಈ ಭಾಗದ ಕೆಲವು ಮನೆಗಳ ಬಾವಿಗೆ ಶೌಚಾಲಯ, ಕೊಳಚೆ ನೀರು ಸೇರುತ್ತಿದೆ. ಇದರಿಂದಾಗಿ ಮನೆ ಪಕ್ಕದಲ್ಲಿರುವ ಬಾವಿಯ ನೀರು ಕಲುಷಿತಗೊಳ್ಳುವ ಅನುಮಾನವಿದ್ದು ಸೇವಿಸಲು ಭೀತಿ ಎದುರಾಗಿದೆ ಎಂದು ಸ್ಥಳೀಯ ನಿವಾಸಿಯೊಬ್ಬರು ಆರೋಪಿಸಿದ್ದಾರೆ.

200ಕ್ಕೂ ಅಧಿಕ ಮನೆಗಳು

ಈ ಪರಿಸರದಲ್ಲಿ 200ಕ್ಕೂ ಅಧಿಕ ಮನೆಗಳಿವೆ. ಬಹುತೇಕ ಎಲ್ಲ ಮನೆಗಳ ಕೊಳಚೆ ನೀರು ಮನೆಯ ಸುತ್ತಮುತ್ತಲಲ್ಲೇ ಪಿಟ್‌ಗಳಿಗೆ ಸೇರಿಸಲಾಗುತ್ತಿದೆ. ಇದರ ಬದಲು ಒಳ ಚರಂಡಿಗೆ ಸಂಪರ್ಕ ನೀಡುವಂತೆ ಇಲ್ಲಿನ ನಿವಾಸಿಗಳು ಆಗ್ರಹಿಸುತ್ತಿದ್ದಾರೆ. ಕಾಮಗಾರಿ ಮುಗಿದು ವರ್ಷ ಕಳೆದರೂ ಮನೆಯ ಲೈನ್‌ಗಳನ್ನು ಲಿಂಕ್‌ ಮಾಡದಿರುವುದು ಸ್ಥಳೀಯರ ಅಸಮಾಧಾನಕ್ಕೆ ಕಾರಣವಾಗಿದೆ.

ರಸ್ತೆಯಲ್ಲೇ ಮಳೆ ನೀರು ನಿಂತು ಸಂಕಷ್ಟ

ಇಲ್ಲಿ ಪ್ರತ್ಯೇಕ ಫುಟ್‌ಪಾತ್‌ ಇಲ್ಲದ ಕಾರಣ ಸ್ಥಳೀಯರು ರಸ್ತೆಯಲ್ಲೇ ನಡೆದಾಡುತ್ತಾರೆ. ಮತ್ತೂಂದೆಡೆ ಮಳೆ ನೀರು ಹರಿಯಲು ವ್ಯವಸ್ಥೆ ಇಲ್ಲದ ಕಾರಣ ಮಳೆ ನೀರು ರಸ್ತೆಯಲ್ಲೇ ಹರಿಯುತ್ತಿದೆ. ಭಾರೀ ಮಳೆಯ ಸಂದರ್ಭ ರಸ್ತೆ ಸಂಪೂರ್ಣ ಜಾಲಾವೃತಗೊಳ್ಳುತ್ತದೆ. ಶಾಲಾ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಓಡಾಡುತ್ತಿದ್ದು, ಮಳೆ ಬಂದಾಗ ಪರದಾಡುತ್ತಾರೆ.

ಮಳೆಯ ಕಾರಣ ಕಾಮಗಾರಿ ವಿಳಂಬ

ದೇವರಪದವು ಪ್ರದೇಶದಲ್ಲಿ ಮುಖ್ಯ ಲೈನ್‌ ಲಿಂಕ್‌ ಮಾಡುವ ಕೆಲಸ ಬಾಕಿ ಇದೆ. ಖಾಸಗಿಯವರ ಜಾಗದಲ್ಲಿ ಲೈನ್‌ ಹಾದು ಹೋಗುವ ಕಾರಣ ಅವರ ಮನ ವೊಲಿಸಿ ಅನುಮತಿ ಪಡೆಯಲಾಗಿದೆ. ಮಳೆಯ ಕಾರಣ ಕಾಮಗಾರಿ ನಡೆಸಲಾಗಿಲ್ಲ. ಶೀಘ್ರದಲ್ಲೇ ಲಿಂಕ್‌ ಮಾಡಿ ಮನೆಗಳ ಸಂಪರ್ಕ ಸೇರಿಸಲಾಗುವುದು.

-ಹೇಮಲತಾ ರಘು ಸಾಲ್ಯಾನ್‌,ಮಹಾನಗರ ಪಾಲಿಕೆ ಸದಸ್ಯೆ

– ಸಂತೋಷ್‌ ಮೊಂತೇರೊ

ಟಾಪ್ ನ್ಯೂಸ್

8

Bhairadevi Movie: ಭೈರಾದೇವಿಯಾಗಿ ರಾಧಿಕಾ ಎಂಟ್ರಿ

Bengaluru: ಪೊಲೀಸ್‌ ಬಾತ್ಮೀದಾರನ ಬೆತ್ತಲೆಗೊಳಿಸಿ ಹಲ್ಲೆ; ಆರೋಪಿ ಕಾಲಿಗೆ ಗುಂಡೇಟು

Bengaluru: ಪೊಲೀಸ್‌ ಬಾತ್ಮೀದಾರನ ಬೆತ್ತಲೆಗೊಳಿಸಿ ಹಲ್ಲೆ; ಆರೋಪಿ ಕಾಲಿಗೆ ಗುಂಡೇಟು

ಸಕ್ಕರೆ ಕಾರ್ಖಾನೆ ಆರಂಭಕ್ಕೆ ಒತ್ತಾಯಿಸಲು ಸಿಎಂ ಬಳಿ ಬರುವ ರೈತರಿಗೆ ಪೊಲೀಸ್ ಬ್ರೆಕ್

ಸಕ್ಕರೆ ಕಾರ್ಖಾನೆ ಆರಂಭಕ್ಕೆ ಒತ್ತಾಯಿಸಲು ಸಿಎಂ ಬಳಿ ಬರುತ್ತಿದ್ದ ರೈತರಿಗೆ ಪೊಲೀಸ್ ಬ್ರೇಕ್

ಕಲ್ಯಾಣ ಕರ್ನಾಟಕ ಉತ್ಸವ: ಸರ್ದಾರ್ ವಲ್ಲಭಭಾಯಿ ಪಟೇಲ್ ಪುತ್ತಳಿಗೆ ಸಿಎಂ ಮಾಲಾರ್ಪಣೆ

Kalaburagi: ಕಲ್ಯಾಣ ಕರ್ನಾಟಕ ಉತ್ಸವ… ಧ್ವಜಾರೋಹಣ ನೆರವೇರಿಸಿದ ಸಿಎಂ ಸಿದ್ದರಾಮಯ್ಯ

3

Bantwal: ಬಿ.ಸಿ.ರೋಡು ಪ್ರಕರಣ; ಎರಡು ಪ್ರತ್ಯೇಕ ಪ್ರಕರಣ ದಾಖಲು

Heart Attack: ಮಗನ ಹುಟ್ಟುಹಬ್ಬದ ಪಾರ್ಟಿಯಲ್ಲೇ ಕುಸಿದು ಬಿದ್ದು ಮೃತಪಟ್ಟ ತಾಯಿ

Heart Attack: ಮಗನ ಹುಟ್ಟುಹಬ್ಬದ ಪಾರ್ಟಿಯಲ್ಲೇ ಕುಸಿದು ಬಿದ್ದು ಮೃತಪಟ್ಟ ತಾಯಿ

ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ಇಬ್ಬರು ಮಕ್ಕಳು ಸೇರಿ ಐವರು ಮೃತ್ಯು, 10 ಮಂದಿಗೆ ಗಾಯ

ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ಇಬ್ಬರು ಮಕ್ಕಳು ಸೇರಿ ಐವರು ಮೃತ್ಯು, 10 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

NEP ವಿಷಯ ಆಯ್ಕೆ ಕಾರಣ ಸ್ನಾತಕೋತ್ತರ ಪ್ರವೇಶ ಸಂಕಟ!

NEP ವಿಷಯ ಆಯ್ಕೆ ಕಾರಣ ಸ್ನಾತಕೋತ್ತರ ಪ್ರವೇಶ ಸಂಕಟ!

water

Mudubidire: 77 ಕೋ.ರೂ. ವೆಚ್ಚದ ಅಮೃತ್‌ 2.0 ನೀರಿನ ಯೋಜನೆಗೆ ಚಾಲನೆ

Cap-Brijesh-Chowta

Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ

Surathkal: ಕಾಟಿಪಳ್ಳ ಮಸೀದಿ ಕಲ್ಲು ತೂರಾಟ ವಿಚಾರ; ನಾಲ್ವರನ್ನು ಬಂಧಿಸಿದ ಪೊಲೀಸರು

Surathkal: ಕಾಟಿಪಳ್ಳ ಮಸೀದಿಗೆ ಕಲ್ಲು: 6 ಮಂದಿ ಸೆರೆ

Suratkal: ಕಿಡಿಗೇಡಿಗಳಿಂದ ಮಸೀದಿಗೆ ಕಲ್ಲು ತೂರಾಟ, ಪ್ರಕರಣದಾಖಲು

Surathkal: ಬೈಕ್ ನಲ್ಲಿ ಬಂದು ಮಸೀದಿಗೆ ಕಲ್ಲು ಬಿಸಾಡಿದ ಕಿಡಿಗೇಡಿಗಳು… ಪ್ರಕರಣ ದಾಖಲು

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Chithrakoota Ayurveda: ಚಿತ್ರಕೂಟ ಚಿಕಿತ್ಸಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ

Chithrakoota Ayurveda: ಚಿತ್ರಕೂಟ ಚಿಕಿತ್ಸಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ

8

Bhairadevi Movie: ಭೈರಾದೇವಿಯಾಗಿ ರಾಧಿಕಾ ಎಂಟ್ರಿ

Crime: ನಡುರಸ್ತೆಯಲ್ಲೇ ಪೇಂಟರ್‌ ಕೊಲೆ

Crime: ನಡುರಸ್ತೆಯಲ್ಲೇ ಪೇಂಟರ್‌ ಕೊಲೆ

6

Crime: ಏಕಮುಖ ರಸ್ತೆಯಲ್ಲಿ ಬಂದಿದ್ದನ್ನು ಪ್ರಶ್ನಿಸಿದ ಕಾರು ಚಾಲಕನಿಗೆ ಧಮ್ಕಿ

Bengaluru: ಪೊಲೀಸರ ಹಲ್ಲೆಯಿಂದ ಪತಿ ಸಾವು; ಪತ್ನಿ ದೂರು

Bengaluru: ಪೊಲೀಸರ ಹಲ್ಲೆಯಿಂದ ಪತಿ ಸಾವು; ಪತ್ನಿ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.