Vidhan Sabha ಚುನಾವಣೆಯ ಟ್ಯಾಕ್ಸಿ ಚಾಲಕರ ಬಾಡಿಗೆಯೇ ಇನ್ನೂ ಪಾವತಿಯಾಗಿಲ್ಲ !

ಬಂತು ಮತ್ತೂಂದು ಲೋಕಸಭೆ ಚುನಾವಣೆ

Team Udayavani, Mar 20, 2024, 9:49 AM IST

4taxi-drivers

ಮಂಗಳೂರು: ವಿಧಾನಸಭಾ ಚುನಾವಣೆ ಮುಗಿದು 10 ತಿಂಗಳು ಕಳೆದರೂ ಅಂದು ಚುನಾವಣಾಧಿಕಾರಿಗಳು ಓಡಾಟಕ್ಕೆ ಬಳಸಿದ ಟ್ಯಾಕ್ಸಿಗಳಿಗೆ ಇನ್ನೂ ಬಾಡಿಗೆಯನ್ನು ಚುನಾವಣಾ ಆಯೋಗವಾಗಲೀ, ಜಿಲ್ಲಾಡಳಿತ ವಾಗಲೀ, ಸಂಬಂಧಿತ ಸರಕಾರಿ ಇಲಾಖೆಯಾಗಲೀ ಪಾವತಿಸಿಲ್ಲ. ಆದರೆ ಮತ್ತೂಂದು ಚುನಾವಣೆ ಬಂದಿದೆ !

ಚುನಾವಣೆ ಕಾರ್ಯಕ್ಕೆ ಆಯೋಗ, ಜಿಲ್ಲಾಡಳಿತವು ಸ್ಥಳೀಯ ಖಾಸಗಿ ಟ್ಯಾಕ್ಸಿಗಳನ್ನು ಪ್ರತಿ ವರ್ಷವೂ ಬಳಸಿಕೊಳ್ಳುತ್ತದೆ. ಆದರೆ ಸಕಾಲದಲ್ಲಿ ಬಾಡಿಗೆ ಪಾವತಿಸುವುದೇ ಇಲ್ಲ. ಗ್ರಾಮೀಣ ಭಾಗಕ್ಕೆ ಬಳಕೆಯಾಗಿರುವ ವಾಹನಗಳ ಮಾಲಿಕರಿಗೆ ಈ ಸಮಸ್ಯೆ ಇನ್ನೂ ಅಧಿಕ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ವಿಧಾನಸಭಾ ಚುನಾವಣೆ ಸಂದರ್ಭ ಬಳಸಲಾದ ಟ್ಯಾಕ್ಸಿಗಳ ಪೈಕಿ ಶೇ. 40 ರಷ್ಟು ವಾಹನಗಳ ಮಾಲಕರಿಗೆ ಇನ್ನೂ ಬಾಡಿಗೆ ಪಾವತಿಯಾಗಿಲ್ಲ.

ಚುನಾವಣೆ ಮುಗಿದು 10 ತಿಂಗಳಾದರೂ ಹಣಕ್ಕಾಗಿ ಚಾಲಕರು ಆರ್‌ಟಿಒ, ಜಿಲ್ಲಾಧಿಕಾರಿ, ಪೊಲೀಸ್‌ ಆಯುಕ್ತರ ಕಚೇರಿ ಎಂದೆಲ್ಲ ಅಲೆದಾಡಬೇಕು ಎಂಬುದು ಚಾಲಕರ ದೂರು.

ಬಲವಂತವಾಗಿ ಬಳಕೆ

ಚುನಾವಣೆ ಘೋಷಣೆಯಾದ ಬಳಿಕ ವಿವಿಧ ಭಾಗದಿಂದ ಅಧಿಕಾರಿಗಳು ಆಗಮಿಸುತ್ತಾರೆ. ಜಿಲ್ಲಾಡಳಿತ ಟ್ಯಾಕ್ಸಿಗಳನ್ನು ಬಲವಂತವಾಗಿ ಪಡೆಯುತ್ತಾರೆ.ವಾಹನದಲ್ಲಿ ಪ್ರಯಾಣಿಕರಿದ್ದಲ್ಲಿ ಅರ್ಧದಲ್ಲೇ ಇಳಿಸಬೇಕಾದ ಅನಿವಾರ್ಯವೂ ಇದೆ. ಕರ್ತವ್ಯದ ನೆಪದಲ್ಲಿ ನಮ್ಮ ವಾಹನಗಳನ್ನು ದುರ್ಬಳಕೆ ಮಾಡಿಕೊಂಡು ಪ್ರವಾಸಕ್ಕೆ ತೆರಳುವ ಅಧಿಕಾರಿಗಳೂ ಇದ್ದಾರೆ. ಇಂತಹ ಸಂದರ್ಭದಲ್ಲಿ ಏನು ಮಾಡಬೇಕೆಂದು ಅರ್ಥವಾಗುತ್ತಿಲ್ಲ ಎನ್ನುತ್ತಾರೆ ಅಸಹಾಯಕ ಚಾಲಕರು.

ಕೂಡಲೇ ಪಾವತಿಸಿ

ಹಾಗಾಗಿ ಮೊದಲೇ ಲಿಖೀತವಾಗಿ ವ್ಯವಹಾರ ನಡೆಸಿ ಚುನಾವಣೆಯ ಬಳಿಕ 24 ಗಂಟೆಯೊಳಗೆ ಹಣ ಪಾವತಿಸಿದಲ್ಲಿ ಪ್ರಯೋಜನವಾಗಲಿದೆ. ಇದರೊಂದಿಗೆ ಬಾಕಿ ಮೊತ್ತವನ್ನು ಕೂಡಲೇ ಪಾವತಿಸಬೇಕು ಎಂದು ಆಗ್ರಹಿಸಿದ್ದಾರೆ ಟ್ಯಾಕ್ಸಿ ಚಾಲಕರು.

12 ಗಂಟೆ ದುಡಿದರೂ ಅರ್ಧ ದಿನ !

ಚುನಾವಣೆ ಕರ್ತವ್ಯಕ್ಕೆ ಅಧಿಕಾರಿಗಳನ್ನು ಕರೆದೊಯ್ಯುವ ಟ್ಯಾಕ್ಸಿ ಚಾಲಕರಿಗೆ ಯಾವುದೇ ವ್ಯವಸ್ಥೆ ಇರುವುದಿಲ್ಲ. ರಸ್ತೆ ಬದಿ ವಾಹನ ನಿಲ್ಲಿಸಿ ಅಲ್ಲೇ ವಿಶ್ರಾಂತಿ ಪಡೆಯಬೇಕು. ಯಾವುದೇ ಆಹಾರ ಪೂರೈಕೆಯೂ ಇರದು. 12 ಗಂಟೆ ದುಡಿದರೆ ಅರ್ಧ ದಿನವೆಂದು ಪರಿಗಣಿಸುತ್ತಾರೆ. 24 ಗಂಟೆ ದುಡಿದರೆ ಮಾತ್ರವೇ ಪೂರ್ತಿ ದಿನವೆಂದು ಪರಿಗಣಿಸುತ್ತಾರೆ. ಇದು ಯಾವ ನ್ಯಾಯ? ಎಂಬುದು ಚಾಲಕರ ಪ್ರಶ್ನೆ

ಚುನಾವಣೆ ಸಂದರ್ಭ ನಾವು ಸಂಪೂರ್ಣ ಸಹಕಾರ ನೀಡುತ್ತೇವೆ. ಇಲಾಖೆ ತಿಳಿಸಿದಲ್ಲಿಗೆ ತೆರಳುತ್ತೇವೆ. ಆದರೆ ನಮಗೆ ಪಾರದರ್ಶಕವಾದ ವ್ಯವಸ್ಥೆಯಾಗಬೇಕು. ಆಯಾ ಜಿಲ್ಲಾಧಿಕಾರಿಗಳು ಇದರ ಮುತುವರ್ಜಿ ವಹಿಸಿ ಸೂಕ್ತ ಬಾಡಿಗೆ ಹಣ ಪಾವತಿಸಬೇಕು. -ರಾಧಾಕೃಷ್ಣ ಹೊಳ್ಳ, ರಾಜ್ಯಾಧ್ಯಕ್ಷರು, ಕರ್ನಾಟಕ ರಾಜ್ಯ ಟ್ರಾವೆಲ್ಸ್‌ ಮಾಲಕರ ಸಂಘ

ಕಳೆದ ಚುನಾವಣೆಯದ್ದೇ ಟ್ಯಾಕ್ಸಿ ಬಿಲ್‌ ಬಾಕಿ

ಉಡುಪಿ: ಜಿಲ್ಲೆಯಲ್ಲೂ ಈ ವ್ಯವಸ್ಥೆ ಬದಲಿಲ್ಲ. ಕಳೆದ ವಿಧಾನಸಭಾ ಚುನಾವಣೆ ವೇಳೆ ಚುನಾವಣಾ ಆಯೋಗವು ಸಾಕಷ್ಟು ಸಂಖ್ಯೆಯಲ್ಲಿ ವಾಹನಗಳನ್ನು ಪಡೆದಿತ್ತು. ಈ ಪೈಕಿ ಕೆಲವರಿಗೆ ಅರ್ಧ ಬಿಲ್‌ ಪಾವತಿಯಾಗಿದ್ದರೆ, ಉಳಿದವರಿಗೆ ಚಿಕ್ಕಾಸೂ ಪಾವತಿಯಾಗಿಲ್ಲ. ಮೊದಲ ಹಂತದಲ್ಲಿ ವಿವಿಧ ಇಲಾಖೆಗಳಿಂದ 180 ಸರಕಾರಿ ವಾಹನಗಳನ್ನು ಪಡೆದು ಚುನಾವಣೆ ಕರ್ತವ್ಯಕ್ಕೆ ನಿಯೋಜನೆಗೊಂಡ ಅಧಿಕಾರಿ, ಸಿಬಂದಿಗೆ ನೀಡಲಾಗುತ್ತಿದೆ. ಬಳಿಕ ಸರಕಾರಿ ಇಲಾಖೆಯಲ್ಲಿರುವ ಹೊರ ಗುತ್ತಿಗೆ ವಾಹನಗಳು ಮತ್ತು ಖಾಸಗಿ ಟ್ಯಾಕ್ಸಿ ಮಾಲಕರಿಂದ ವಾಹನಗಳನ್ನು ಪಡೆಯಲಾಗುತ್ತದೆ ಎನ್ನುತ್ತವೆ ಮೂಲಗಳು. ಚುನಾವಣೆ ಕರ್ತವ್ಯ ಮಾಡುವುದು ನಮಗೆ ಹೆಮ್ಮೆಯ ವಿಷಯ. ಆದರೆ ನಮ್ಮ ಬೇಡಿಕೆಗಳಿಗೆ ಆಯೋಗ ಮತ್ತು ಜಿಲ್ಲಾಡಳಿತ ಸ್ಪಂದಿಸಬೇಕು. ಜಿಲ್ಲಾ ಚುನಾವಣಾಧಿ ಕಾರಿಯೂ ಆಗಿರುವ ಡಿಸಿ ಅವರಿಗೆ ತಮ್ಮ ಬೇಡಿಕೆ ಈಡೇರಿಸುವಂತೆ ಕೋರುತ್ತೇವೆ. ಟ್ಯಾಕ್ಸಿಗೆ ನ್ಯಾಯಯುತ ದರ ರೂಪಿಸಿ ಬಿಲ್‌ ಪಾವತಿಸಬೇಕು. ಚಾಲಕರನ್ನು 24 ಗಂಟೆ ದುಡಿಸಿಕೊಳ್ಳುವುದನ್ನು 12 ಗಂಟೆಗೆ ಇಳಿಸಬೇಕು. ವಾರ ಮತ್ತು 15 ದಿನಕ್ಕೆ ಬಿಲ್‌ಪಾವತಿ ಮಾಡಬೇಕು, ಚುನಾವಣೆ ಕರ್ತವ್ಯದ ಎಲ್ಲ ಬಿಲ್‌ ಮೊತ್ತ ಜಿಲ್ಲಾಧಿಕಾರಿ ಕಚೇರಿಯಿಂದಲೇ ಆಗಬೇಕು ಎಂದು ಮನವಿ ಸಲ್ಲಿಸುವುದಾಗಿ ಉಡುಪಿ ಜಿಲ್ಲಾ ಟ್ಯಾಕ್ಸಿಮೆನ್‌ ಅಸೋಸಿಯೇಶನ್‌ ಪ್ರ. ಕಾರ್ಯದರ್ಶಿ ರಮೇಶ್‌ ಕೋಟ್ಯಾನ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.