ಕಾಡುಕೋಣ ಸಾವು: ತನಿಖೆಗೆ ಆಗ್ರಹ

ನಿಡಿಗಲ್‌ ಸಮೀಪದ ರಕ್ಷಿತಾರಣ್ಯದಲ್ಲಿ ಅಂತ್ಯಸಂಸ್ಕಾರ

Team Udayavani, May 7, 2020, 5:36 AM IST

ಕಾಡುಕೋಣ ಸಾವು: ತನಿಖೆಗೆ ಆಗ್ರಹ

ಸಾಂದರ್ಭಿಕ ಚಿತ್ರ.

ಬೆಳ್ತಂಗಡಿ/ಮಂಗಳೂರು: ಮಂಗಳೂರು ನಗರಕ್ಕೆ ಮಂಗಳವಾರ ಬಂದ ಕಾಡುಕೋಣವನ್ನು ಸೆರೆಹಿಡಿದ ಕ್ರಮ ಅವೈಜ್ಞಾನಿಕ ವಾಗಿದ್ದ ಕಾರಣ ಅದು ಸಾವನ್ನಪ್ಪಿದ್ದು, ಕೂಲಂಕಷವಾಗಿ ತನಿಖೆ ನಡೆಸಬೇಕು ಎಂದು ಪ್ರಾಣಿಪ್ರಿಯರು ಆಗ್ರಹಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಹೋರಾಟಗಾರ ಜೆರಾರ್‌x ಟವರ್‌ ಅವರು ಬುಧವಾರ ಬರ್ಕೆ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

ಕಾಡುಕೋಣ ಸಾವನ್ನಪ್ಪುತ್ತಿದ್ದಂತೆ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಆಕ್ರೋಶ ಭರಿತ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ.
“ಮೊದಲು ಆ ಕಾಡುಕೋಣ ನಗರಕ್ಕೆ ಹೇಗೆ ಬಂತು ಎಂಬ ಪ್ರಶ್ನೆ ಮೂಡುತ್ತದೆ. ದಾರಿ ತಪ್ಪಿ ಬಂದಿದ್ದರೆ ಅದರ ಜೀವಕ್ಕೆ ಅಪಾಯವಾಗದಂತೆ ಹಿಡಿದು ಕಾಡಿಗೆ ಬಿಡುವುದಕ್ಕೆ ಅರಣ್ಯ ಇಲಾಖೆ ಕ್ರಮ ಕೈಗೊಳ್ಳಬೇಕಿತ್ತು’ ಎಂದು ಪರಿಸರವಾದಿ ದಿನೇಶ್‌ ಹೊಳ್ಳ ಪ್ರತಿಕ್ರಿಯಿಸಿದ್ದಾರೆ.

ಚಾರ್ಮಾಡಿಯಲ್ಲಿ ಸಾವು
ನಗರದಲ್ಲಿ ಓಡಾಡಿ ಸುಸ್ತಾಗಿದ್ದ ಕಾಡು ಕೋಣ ವನ್ನು ಪೂರ್ವಾಹ್ನ 11 ಗಂಟೆ ವೇಳೆಗೆ ಅರಿವಳಿಕೆ ಚುಚ್ಚು ಮದ್ದು ನೀಡಿ ಸೆರೆಹಿಡಿದು ಲಾರಿಯಲ್ಲಿ ಚಾರ್ಮಾಡಿಯ ಅರಣ್ಯಕ್ಕೆ ಕೊಂಡೊಯ್ಯಲಾಗಿತ್ತು. ಎರಡೂವರೆ ಗಂಟೆ ಬಳಿಕ ಬಿ.ಸಿ. ರೋಡ್‌ಗೆ ತಲುಪುವಾಗ ಕೋಣಕ್ಕೆ ಪ್ರಜ್ಞೆ ಬಂದಿತ್ತು. ಚಾರ್ಮಾಡಿ ತಲುಪಿದ ಬಳಿಕವೂ 2 ತಾಸು ಕಾಲ ಪ್ರಜ್ಞೆಯಿತ್ತು.

ಬಳಿಕ ಅದು ಯಾವುದೇ ರೀತಿಯ ಚಲನೆ ತೋರದ ಕಾರಣ ಸಂಶಯದಿಂದ ಚಾರ್ಮಾಡಿ ಯಲ್ಲಿ ರುವ ಸರಕಾರಿ ಪಶು ವೈದ್ಯರನ್ನು ಸ್ಥಳಕ್ಕೆ ಕರೆಯಿಸಿ ಪರೀಕ್ಷಿಸಿದ್ದು, ಅವರು ಸಾವನ್ನು ದೃಢಪಡಿಸಿದರು. ಬಳಿಕ ನಿಡಿಗಲ್‌ ಸಮೀಪದ ನರ್ಸರಿಯಲ್ಲಿ ಅರಣ್ಯ ಇಲಾಖೆ ಮಾರ್ಗಸೂಚಿಯಂತೆ ಕಾಡುಕೋಣವನ್ನು ದಹಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಸ್ಪಷ್ಟಪಡಿಸಿದ್ದಾರೆ.ಕೋಣ ವಿಪರೀತ ಬಳಲಿತ್ತು. ಅರಣ್ಯಕ್ಕೆ ಬಿಡುವ ಮುನ್ನ 4 ಟಬ್‌ ನೀರು ಸುರಿದ ಬಳಿಕ ಚೇತರಿಸಿಕೊಂಡಂತೆ ಕಂಡಿತ್ತು. ಎರಡು ಬಾರಿ ಎದ್ದು ನಿಂತಿತ್ತಾದರು ಮೂರನೇ ಬಾರಿಗೆ ಕುಸಿದು ಬಿದ್ದು ಸಾವನ್ನಪ್ಪಿದೆ ಎಂದು ಬೆಳ್ತಂಗಡಿ ವಲಯ ಅರಣ್ಯಾಧಿಕಾರಿ ಬಿ. ಸುಬ್ಬಯ್ಯ ನಾಯ್ಕ ತಿಳಿಸಿದ್ದಾರೆ.

ಅಂತ್ಯಸಂಸ್ಕಾರ ವೇಳೆ ವಲಯಾರಣ್ಯಾಧಿಕಾರಿಗಳಾದ ಬಿ. ಸುಬ್ಬಯ್ಯ ನಾಯ್ಕ,ಶ್ರೀಧರ್‌,ಸಿಬಂದಿ ಉಪಸ್ಥಿತರಿದ್ದರು.

ಹೈಡೋಸೇಜ್‌ನಿಂದ ಸಾವನ್ನಪ್ಪಿಲ್ಲ
ಅರಿವಳಿಕೆ ಪ್ರಮಾಣ ಹೆಚ್ಚಳದಿಂದ ಮೃತ ಪಟ್ಟಿದೆ ಎಂಬುದು ವದಂತಿಯಷ್ಟೆ. ಮನುಷ್ಯರ ಸಂಪರ್ಕದಿಂದ ದೂರ ಇರುವ ಕಾಡುಪ್ರಾಣಿಗಳು ಒಮ್ಮಿಂದೊಮ್ಮೆಲೆ ಜನನಿಬಿಡ ಪ್ರದೇಶಕ್ಕೆ ಕಾಲಿಟ್ಟರೆ ಭಯಗೊಂಡು ಹೃದಯ ಬಡಿತ ಹೆಚ್ಚಾಗುತ್ತದೆ. ಜಿಂಕೆಯಂಥ ಜೀವಿಗಳು ಮನುಷ್ಯ ಮುಟ್ಟಿದ ಕ್ಷಣ ದಲ್ಲೇ ಸಾವನ್ನಪ್ಪುತ್ತವೆ. ಕಾಡುಕೋಣ ಆರೋಗ್ಯ ವಾಗಿದ್ದರೂ ಬಳಲಿಕೆ ಮತ್ತು ಭಯ ದಿಂದ ಹೃದಯಾ ಘಾತ ವಾಗಿದೆ ಎಂದು ಮರಣೋ ತ್ತರ ಪರೀಕ್ಷೆ ನಡೆಸಿದ ಚಾರ್ಮಾಡಿಯ ಸರಕಾರಿ ಪಶು ವೈದ್ಯಾಧಿಕಾರಿ ಮಂಜ ನಾಯ್ಕ ಮತ್ತು ಅರಿವಳಿಕೆ ನೀಡಿದ್ದ ಪಿಲಿಕುಳದ ಜೈವಿಕ ಉದ್ಯಾನವನದ ಪಶು ಅಧಿಕಾರಿ ಡಾ| ವಿಷ್ಣು ತಿಳಿಸಿದ್ದಾರೆ.

ಅರಿವಳಿಕೆ ಔಷಧ ಅಧಿಕವಾಗಿ ಸಾವ ನ್ನಪ್ಪಿದೆ ಎಂಬುದು ಆರೋಪ ವಷ್ಟೆ. ಶಿಷ್ಟಾಚಾರ ದಂತೆ ಮರಣೋ ತ್ತರ ಪರೀಕ್ಷೆ, ಅಂತ್ಯ ಸಂಸ್ಕಾರ ಎಲ್ಲವೂ ನಡೆದಿವೆ. ಎಲ್ಲ ಪ್ರಕ್ರಿಯೆ ಗಳ ವೀಡಿಯೋ, ಫೋಟೋ ಗಳು ಇಲಾಖೆ ಯಲ್ಲಿವೆ. ಮರಣೋತ್ತರ ಪರೀಕ್ಷೆಯ ವರದಿ ಶುಕ್ರವಾರ ಕೈಸೇರಲಿದೆ.
– ಕರಿಕಾಳನ್‌,
ದ.ಕ. ಜಿಲ್ಲಾ ಉಪ ಅರಣ್ಯ ಸಂರಕ್ಷಣಾಧಿಕಾರಿ

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.