ಯಕ್ಷಗಾನ ಕಲಾವಿದರ ಪರಿಶ್ರಮ ಶ್ಲಾಘನೀಯ: ಡಾ| ಸುಧೀರ್‌ ರಾಜ್‌


Team Udayavani, Apr 18, 2018, 3:10 PM IST

18-April-16.jpg

ಮೂಡಬಿದಿರೆ: ಭಾರತೀಯ ಕಲಾ ಸಂಸ್ಕೃತಿಯಲ್ಲಿ ಶ್ರೀಮಂತ ಕಲೆ ಎಂದರೆ ಅದು ಯಕ್ಷಗಾನ. ಭಕ್ತಿ, ಶಕ್ತಿ, ಶಾಂತಿ, ಆಧ್ಯಾತ್ಮಗಳಿಂದ ಕೂಡಿದ ಮನಸ್ಸಿಗೆ ಸುಖ ನೀಡುವ ಕಲೆ ಇದಾಗಿದೆ. ಕಲಾವಿದರು ತಾವು ಬಡವರಾಗಿ ಉಳಿದರೂ ಈ ಕಲೆಯನ್ನು ತಲೆಮಾರುಗಳಿಂದ ಈಗಿನವರೆಗೂ ದಾಟಿಸಿಕೊಂಡು ಬರುವಲ್ಲಿ ತೋರಿರುವ ಶ್ರದ್ಧೆ, ಪರಿಶ್ರಮವನ್ನು ಶ್ಲಾಘನೀಯ ಎಂದು ನಿಟ್ಟೆ ಜ| ಕೆ. ಎಸ್‌. ಹೆಗ್ಡೆ ಉದ್ಯಮಾಡಳಿತ ಕಾಲೇಜಿನ ಪ್ರಾಧ್ಯಾಪಕ ಡಾ| ಸುಧೀರ್‌ ರಾಜ್‌ ಕೆ. ತಿಳಿಸಿದರು. 

ಕಾಂತಾವರ ಯಕ್ಷದೇಗುಲದ ಆಶ್ರಯದಲ್ಲಿ ಏರ್ಪಡಿಸಲಾಗಿರುವ ನಾಲ್ಕನೇ ವರ್ಷದ ಬೇಸಗೆ ರಜಾಕಾಲದ ಉಚಿತ ಯಕ್ಷಗಾನ ತರಬೇತಿ ಶಿಬಿರವನ್ನು ಅವರು ಉದ್ಘಾಟಿಸಿ, ಮಾತನಾಡಿದರು.

ಯಕ್ಷದೇಗುಲದ ಅಧ್ಯಕ್ಷ ಶ್ರೀಪತಿ ರಾವ್‌ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕಾಂತಾವರ ಗ್ರಾಮ ಪಂಚಾಯತ್‌ ಅಧ್ಯಕ್ಷ ಜಯ ಎಸ್‌. ಕೋಟ್ಯಾನ್‌, ಶಾಲಾ ಮುಖ್ಯ ಅಧ್ಯಾಪಿಕೆ ಶ್ಯಾಮಲಾ ಕುಮಾರಿ ಹಾಗೂ ಧರ್ಮರಾಜ ಕಂಬಳಿ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಉತ್ತಮ ದಾಖಲಾತಿ
ಹಳ್ಳಿಯ ವಾತಾವರಣದಲ್ಲಿ ನಡೆಯುತ್ತಿರುವ ಹದಿನೈದು ದಿನಗಳ ಈ ಶಿಬಿರದಲ್ಲಿ 87 ಮಂದಿ ಪಾಲ್ಗೊಳ್ಳುತ್ತಿರುವುದು ವಿಶೇಷವಾಗಿದೆ ಎಂದು ಸಭಾಧ್ಯಕ್ಷ ಶ್ರೀಪತಿ ರಾವ್‌ ಅಭಿಪ್ರಾಯಪಟ್ಟರು. ಕಲಾವಿದ, ಯಕ್ಷಗುರು ಮಹಾವೀರ ಪಾಂಡಿ ಸ್ವಾಗತಿಸಿ, ಶಿಬಿರದ ನಿಯಮ ಹಾಗೂ ತರಗತಿಗಳ ವಿವರ ತಿಳಿಸಿ ವಂದಿಸಿದರು.

ಅಜೆಕಾರು, ಕಾರ್ಕಳ, ನಿಟ್ಟೆ, ರೆಂಜಾಳ, ಕಾಂತಾವರ, ಬೋಳ, ಬಾರಾಡಿ, ಮಾರ್ನಾಡು, ಪುತ್ತಿಗೆ, ನಾರಾವಿ, ದೂರದ ಕೋಟ ಸೇರಿದಂತೆ ವಿವಿಧೆಡೆಗಳಿಂದ 2ನೇ ತರಗತಿಯಿಂದ ದ್ವಿತೀಯ ಪಿಯುಸಿವರೆಗಿನ 87 ಮಂದಿ ಹುಡುಗ, ಹುಡುಗಿಯರು ಸರಿಸಮವಾಗಿ ಈ ಶಿಬಿರದಲ್ಲಿ ಪಾಲ್ಗೊಳ್ಳುತ್ತಿದ್ದಾರೆ.

ಪ್ರಯತ್ನ ಶ್ಲಾಘನೀಯ
ಈ ಕಲೆಯನ್ನು ಶ್ರದ್ಧೆಯಿಂದ ತಮ್ಮದಾಗಿಸಿಕೊಳ್ಳುವವರಿಗೆ ಜ್ಞಾನ, ದರ್ಶನ, ಭಕ್ತಿ, ಶಕ್ತಿ, ಸಂಸ್ಕಾರ ಒದಗಿಬರುವುದು. ಕಲೆಯ ಉಳಿವು, ಬೆಳವಣಿಗೆಯಲ್ಲಿ ಇಂಥ ಶಿಬಿರಗಳ ಪಾತ್ರ ಮಹತ್ವಪೂರ್ಣವಾಗಿದೆ ಎಂದ ಅವರು ಯಕ್ಷಗುರು ಮಹಾವೀರ ಪಾಂಡಿ ಅವರ ಪ್ರಯತ್ನ ಶ್ಲಾಘನೀಯ ಎಂದು ಅವರು ಅಭಿಪ್ರಾಯಪಟ್ಟರು.

ಟಾಪ್ ನ್ಯೂಸ್

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.