SKDRDP; 100 ಕೋ.ರೂ. ವೆಚ್ಚದಲ್ಲಿ ಹೈಟೆಕ್‌ ಹಬ್‌ ರಚನೆ

ಎಸ್‌ಕೆಡಿಆರ್‌ಡಿಪಿ ಕೃಷಿ ವಿಸ್ತರಣ ಕಾರ್ಯಕ್ರಮಕ್ಕೆ ಸಚಿವ ಚೆಲುವರಾಯ ಸ್ವಾಮಿ ಚಾಲನೆ

Team Udayavani, Oct 14, 2023, 10:33 PM IST

Belthangady 100 ಕೋ.ರೂ. ವೆಚ್ಚದಲ್ಲಿ ಹೈಟೆಕ್‌ ಹಬ್‌ ರಚನೆ

ಬೆಳ್ತಂಗಡಿ: ಕೃಷಿ ಪ್ರಧಾನ ಭಾರತದಲ್ಲಿ ರೈತನೇ ಆಧಾರ. ಈ ದಿಸೆಯಲ್ಲಿ ಸರಕಾರವು 100 ಕೋ. ರೂ. ವೆಚ್ಚದಲ್ಲಿ ಹೈಟೆಕ್‌ ಹಬ್‌ ರಚಿಸಿ ರೈತರಿಗೆ ಸುಧಾರಿತ ಯಂತ್ರೋಪಕರಣ ಖರೀದಿಗೆ ಅನುಕೂಲ ಕಲ್ಪಿಸಲು ಮುಂದಾಗಿದೆ. ಶೀಘ್ರವೇ ಸಂಪುಟ ಸಭೆಯಲ್ಲಿ ಚರ್ಚಿಸಿ ಅನುಮೋದನೆ ಪಡೆಯಲಾಗುವುದು ಎಂದು ಕೃಷಿ ಸಚಿವ ಎನ್‌. ಚೆಲುವರಾಯಸ್ವಾಮಿ ಹೇಳಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿ ವೃದ್ಧಿ ಯೋಜನೆ, ಬಿಸಿ ಟ್ರಸ್ಟ್‌ ವತಿಯಿಂದ 2023-24ನೇ ಸಾಲಿನ ಕೃಷಿ ವಿಸ್ತರಣ ಹಾಗೂ ಕೃಷಿ ಯಂತ್ರೋಪಕರಣಗಳ ವಿತರಣ ಕಾರ್ಯಕ್ರಮಕ್ಕೆ ಶನಿವಾರ ಧರ್ಮಸ್ಥಳದಲ್ಲಿ ಚಾಲನೆ ನೀಡಿ ಮಾತನಾಡಿದರು.

ಕೃಷಿಯಲ್ಲಿ ಆಧುನಿಕತೆಯನ್ನು ಅಳವಡಿಸಿಕೊಂಡಾಗ ಕೃಷಿ ಲಾಭದಾಯಕವಾಗುತ್ತದೆ. ಈ ನೆಲೆಯಲ್ಲಿ ಡಾ| ಹೆಗ್ಗಡೆಯವರು ತಮ್ಮ ಸಂಸ್ಥೆಯ ಮುಖಾಂತರ ಜನಪರ ಯೋಜನೆಗಳಿಂದ ನಾಡು ಸಮೃದ್ಧಿಗೊಳಿಸಿದ್ದಾರೆ. ರಾಜ್ಯದಲ್ಲಿ ಇನ್ನಷ್ಟು ಹೆಚ್ಚುವರಿ ಕೃಷಿ ಯಂತ್ರಧಾರೆ ಕೇಂದ್ರ ಸ್ಥಾಪಿಸಲು ಸರಕಾರದಿಂದ ನೆರವು ಒದಗಿಸಲಾಗುವುದು. ಈಗಾಗಲೆ ಬಾಡಿಗೆ ಸೇವಾ ಕೇಂದ್ರಗಳ ಕಡೆಗೆ ನಿಗಾವಹಿಸಲು ಜಿಲ್ಲಾ ಮಟ್ಟದಲ್ಲಿ ಸಿಇಒ ಅಧ್ಯಕ್ಷತೆಯಲ್ಲಿ ಕಮಿಟಿ ರಚಿಸುವಂತೆ ಆದೇಶಿಸಲಾಗಿದೆ ಎಂದರು.

ಸರಕಾರ ಕೃಷಿ ಭಾಗ್ಯ ತರಲಿ: ಫಲಾನುಭವಿಗಳಿಗೆ ವಿವಿಧ ಕೃಷಿ ಯಂತ್ರೋಪಕರಣಗಳ ವಿತರಣೆ ಮಾಡಿ ಮಾತನಾಡಿದ ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆಯವರು, ಆಧುನಿಕ ಜೀವನಕ್ಕೆ ಕೃಷಿಯ ಸಂಪನ್ಮೂಲ ಹೊಂದಾಣಿಕೆ ಮಾಡಲು ಸಾಧ್ಯವಿಲ್ಲ. ಎಲ್ಲ ದೇಶಗಳು ಕೃಷಿಗೆ ಬೆಂಬಲ ನೀಡಿ ಪರಿವರ್ತನೆ ಮಾಡಿಕೊಳ್ಳುತ್ತಿದೆ. ಯಂತ್ರೋಪಕರಣ ವೆಚ್ಚ ಅಧಿಕವಾಗಿರುವುದರಿಂದ ಸರಕಾರ ಅದನ್ನು ಯೋಗ್ಯ ದರದಲ್ಲಿ ರೈತರಿಗೆ ಒದಗಿಸಲು ಪ್ರಯತ್ನಿಸಬೇಕು. ಜತೆಗೆ ಸರಕಾರ ಕೃಷಿ ಭಾಗ್ಯ ತರುವ ಮೂಲಕ ಕೃಷಿಕರ ಬಾಳು ಬೆಳಗಿಸಬೇಕು ಎಂದು ಆಶಿಸಿದರು.

ಡಾ| ಹೇಮಾವತಿ ವೀ. ಹೆಗ್ಗಡೆ ಕೃಷಿ ಕಾರ್ಯಕ್ರಮಗಳ ವಾರ್ಷಿಕ ವರದಿ ಬಿಡುಗಡೆಗೊಳಿಸಿದರು. ಡಿ. ಹಷೇìಂದ್ರ ಕುಮಾರ್‌ ಮಾಹಿತಿ ಪತ್ರ ಬಿಡುಗಡೆ ಮಾಡಿದರು. ವಿಧಾನ ಪರಿಷತ್‌ ಸದಸ್ಯ ಕೆ.ಪ್ರತಾಪಸಿಂಹ ನಾಯಕ್‌ ವಾರ್ಷಿಕ ಸಸಿ ವಿತರಣ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಸಚಿವರ ಪತ್ನಿ ಧನಲಕ್ಷಿ$¾à, ಧರ್ಮಸ್ಥಳ ಗ್ರಾ.ಪಂ. ಅಧ್ಯಕ್ಷೆ ವಿಮಲಾ, ಜಿಲ್ಲಾ ಜಂಟಿ ಕೃಷಿ ನಿರ್ದೇಶಕ ಡಾ| ಎಚ್‌. ಕೆಂಪೇಗೌಡ, ಶ್ರೀ ಕ್ಷೇ.ಧ.ಗ್ರಾ.ಯೋಜನೆ ಟ್ರಸ್ಟಿ ಸಂಪತ್‌ ಸಾಮ್ರಾಜ್ಯ, ಸಿಒಒ ಅನಿಲ್‌ ಕುಮಾರ್‌ ಎಸ್‌.ಎಸ್‌. ಉಪಸ್ಥಿತರಿದ್ದರು.

ಯೋಜನೆಯ ಸಿಇಒ ಡಾ| ಎಲ್‌.ಎಚ್‌.ಮಂಜುನಾಥ್‌ ಸ್ವಾಗತಿಸಿದರು. ಯೋಜನಾಧಿಕಾರಿ ಸುರೇಂದ್ರ ವಂದಿಸಿದರು. ಕೃಷಿ ಅಧಿಕಾರಿ ರಾಮ್‌ ಕುಮಾರ್‌ ನಿರೂಪಿಸಿದರು.

ಡೀಸೆಲ್‌ಗೆ ಸಬ್ಸಿಡಿ; ಸರಕಾರ ಚಿಂತಿಸಲಿ
ಪ್ರಸಕ್ತ ಸಾಲಿನಲ್ಲಿ 45.37 ಕೋಟಿ ರೂ. ಅನುದಾನದ ಅಂದಾಜು ಪಟ್ಟಿ ತಯಾರಿಸಲಾಗಿದ್ದು ಸುಮಾರು 15 ಲಕ್ಷ ರೈತರು ಈ ಕಾರ್ಯಕ್ರಮದ ಪ್ರಯೋಜನ ಪಡೆದುಕೊಳ್ಳಲಿದ್ದಾರೆ. ಕಳೆದ 10 ವರ್ಷಗಳಿಂದ ರಾಜ್ಯದ 164 ಹೋಬಳಿಗಳಲ್ಲಿ ಕೃಷಿಯಂತ್ರಧಾರೆ ಕೇಂದ್ರ ಸ್ಥಾಪನೆ ಮಾಡಿ 135 ಕೋ.ರೂ. ವಿನಿಯೋಗ ಮಾಡಲಾಗಿದೆ. ವಾರ್ಷಿಕವಾಗಿ 2.3 ಲಕ್ಷ ರೈತರು ಅನುದಾನಧರಿತ ಯಂತ್ರೋಪಕರಣ ಖರೀದಿಸುತ್ತಾರೆ. ಪ್ರಸಕ್ತ ಯಂತ್ರ ಬಳಕೆ ದುಬಾರಿಯಾಗಿರುವುದರಿಂದ 45 ಕೋ.ರೂ. ನಷ್ಟದಲ್ಲಿದೆ. ಸರಕಾರ ಈ ವಿಚಾರವಾಗಿ ಗಂಭೀರ ಚಿಂತನೆ ನಡೆಸಿ ಡೀಸೆಲ್‌ಗೆ ಸಬ್ಸಿಡಿ ಒದಗಿಸಬೇಕು ಎಂದು ಡಾ| ಎಲ್‌.ಎಚ್‌.ಮಂಜುನಾಥ್‌ ಪ್ರಸ್ತಾವಿಸಿದರು.

ಟಾಪ್ ನ್ಯೂಸ್

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Drug ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು; ಬೆಂಗಳೂರು,ಮಂಗಳೂರಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚಳ

Karnataka Govt.,; ಡ್ರಗ್‌ ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shourya

Dharmasthala: ಶೌರ್ಯ ಯೋಧರು ಆಪತ್ಕಾಲದ ಆಪ್ತ ರಕ್ಷಕರು: ಡಾ.ಡಿ.ವೀರೇಂದ್ರ ಹೆಗ್ಗಡೆ

Suside-Boy

Putturu: ವೃದ್ಧನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

Car-Palti

Sulya: ಎರಡು ಕಾರುಗಳು ಢಿಕ್ಕಿ; ನಿಯಂತ್ರಣ ತಪ್ಪಿ ಕಾರು ಪಲ್ಟಿ

Subramanya ಚಿನ್ನಾಭರಣ ಕಳವು; ಪ್ರಕರಣ ದಾಖಲು

Subramanya ಚಿನ್ನಾಭರಣ ಕಳವು; ಪ್ರಕರಣ ದಾಖಲು

kalla

Vittalpadanur: 36 ಗ್ರಾಂ ಚಿನ್ನಾಭರಣ ಕಳವು; ಪ್ರಕರಣ ದಾಖಲು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Drug ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು; ಬೆಂಗಳೂರು,ಮಂಗಳೂರಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚಳ

Karnataka Govt.,; ಡ್ರಗ್‌ ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.