Bantwal ರಸ್ತೆಯಲ್ಲಿ ಬಿದ್ದುಸಿಕ್ಕಿದ 2.43 ಲಕ್ಷರೂ.ಮರಳಿಸಿ ಮದ್ರಸಾ ಅಧ್ಯಾಪಕನ ಪ್ರಾಮಾಣಿಕತೆ
Team Udayavani, May 30, 2024, 12:52 AM IST
ಬಂಟ್ವಾಳ: ಬಂಟ್ವಾಳ ಕೆಳಗಿನಪೇಟೆಯಲ್ಲಿ ರಸ್ತೆಯಲ್ಲಿ ಬಿದ್ದು ಸಿಕ್ಕಿದ ಸುಮಾರು 2.43 ಲಕ್ಷ ರೂ.ಗಳ ಕಟ್ಟನ್ನು ವಾರಸುದಾರರಿಗೆ ಹಸ್ತಾಂತರಿಸುವ ಮೂಲಕ ಕೆಳಗಿನಪೇಟೆ ಮನಾರುಲ್ ಇಸ್ಲಾಂ ಮದ್ರಸಾದ ಅಧ್ಯಾಪಕರೊಬ್ಬರು ಪ್ರಾಮಾಣಿಕತೆ ಮೆರೆದಿದ್ದಾರೆ.
ಅಧ್ಯಾಪಕ ಅಬ್ದುಲ್ ಮಜೀದ್ ಫೈಝಿ ಮೇ 28ರಂದು ಬೆಳಗ್ಗೆ ತರಗತಿ ಮುಗಿಸಿದ ಬಳಿಕ ವಿದ್ಯಾರ್ಥಿಗಳನ್ನು ರಸ್ತೆ ದಾಟಿಸುತ್ತಿದ್ದ ಸಂದರ್ಭ ಕಟ್ಟೊಂದು ಬಿದ್ದು ಸಿಕ್ಕಿತು. ಪರೀಕ್ಷಿಸಿದಾಗ ಅದರಲ್ಲಿ ನೋಟಿನ ಕಂತೆಗಳು ಪತ್ತೆಯಾದವು.
ಈ ಕುರಿತು ಮದ್ರಸಾ ಆಡಳಿತ ಸಮಿತಿಯವರ ಗಮನಕ್ಕೆ ತಂದಿದ್ದು, ಅವರು ಪರಿಶೀಲನೆ ನಡೆಸಿದಾಗ ಸ್ಥಳೀಯರಾದ ಶ್ರೀಪತಿ ಶ್ರೀಕಾಂತ್ ಭಟ್ ಅದರ ವಾರಸುದಾರರೆಂಬುದು ಪತ್ತೆಯಾಯಿತು ಅವರನ್ನು ಮದ್ರಸಾಕ್ಕೆ ಆಗಮಿಸಿ ಅಬ್ದುಲ್ ಮಜೀದ್ ಫೈಝಿ ಅವರಿಂದ ಹಣವನ್ನು ಪಡೆದುಕೊಂಡು ಕೃತಜ್ಞತೆ ಅರ್ಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.