![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, May 16, 2020, 5:15 AM IST
ಉಪ್ಪಿನಂಗಡಿ: 34ನೇ ನೆಕ್ಕಿಲಾಡಿ ಗ್ರಾಮದ ಮೈಂದಡ್ಕ-ತಾಳೆಹಿತ್ಲು ಪ.ಪಂಗಡ ಕಾಲನಿ ರಸ್ತೆಯ ಕಾಂಕ್ರೀಟ್ ಕಾಮಗಾರಿ ಪೂರ್ಣಗೊಂಡು ವರ್ಷವಾಗುವ ಮೊದಲೇ ಬಿರುಕುಬಿಟ್ಟಿದೆ.
ರಸ್ತೆ ಅಭಿವೃದ್ಧಿಗೆ ಶಾಸಕ ಸಂಜೀವ ಮಠಂದೂರು 10 ಲಕ್ಷ ರೂಪಾಯಿ ಅನುದಾನ ನೀಡಿದ್ದರು. 2018-19ರಲ್ಲಿ ಈ ಕಾಮಗಾರಿಯು ಅನುಮೋದನೆಗೊಂಡಿದ್ದು, 205 ಮೀ. ರಸ್ತೆಗೆ ಕಾಂಕ್ರೀಟ್ ಕಾಮಗಾರಿ ನಡೆಸಲಾಗಿತ್ತು. ಆದರೆ ಅದು ಕಳಪೆಯಾಗಿದೆ. ರಸ್ತೆಯ ಮಧ್ಯಭಾಗದಲ್ಲಿ ಉದ್ದಕ್ಕೆ ಬಿರುಕು ಬಿಡುತ್ತಾ ಸಾಗಿದ್ದು, ದಿನ ಹೋದ ಹಾಗೆ ಅಗಲವಾಗುತ್ತಲೇ ಹೋಗುತ್ತಿದೆ ಎಂದು ಸಾರ್ವಜನಿಕರು ಆರೋಪಿಸುತ್ತಾರೆ.
ಕ್ಯೂರಿಂಗ್ ಮರೆತರೇಕೆ ?
ಕಾಂಕ್ರೀಟ್ ರಸ್ತೆಯನ್ನು ಮಾಡುವಾಗ ರಸ್ತೆಯನ್ನು ಲೆವೆಲಿಂಗ್ ಮಾಡಿ ಶೀಟ್ ಹಾಕಿ ಬಳಿಕ ಅದರ ಮೇಲೆ ಕಾಂಕ್ರೀಟ್ ಹಾಕಬೇಕು. ಸಿಮೆಂಟ್, ಜಲ್ಲಿ, ಮರಳಿನ ಮಿಶ್ರಣವನ್ನು ಸರಿಯಾದ ಪ್ರಮಾಣದಲ್ಲಿ ಹಾಕಬೇಕು. ರಸ್ತೆ ಆದ ಬಳಿಕ ಅದನ್ನು ಬಹಳ ದಿನ ನೀರು ಹಾಕಿ ಕ್ಯೂರಿಂಗ್ ಮಾಡಬೇಕು. ಆದರೆ ಇಲ್ಲಿ ಅದೆಲ್ಲ ನಡೆದಿಲ್ಲ. ರಸ್ತೆಯ ಬದಿ ಮಣ್ಣು ತುಂಬಿಸುವ ಕೆಲಸವೂ ಆಗಿಲ್ಲ. ಮಳೆಗಾಲದಲ್ಲಿ ರಸ್ತೆಯ ಬಿರುಕು ಇನ್ನಷ್ಟು ಹೆಚ್ಚಾಗಿ ರಸ್ತೆಯೇ ಕುಸಿದು ಬೀಳುವ ಭೀತಿ ಇದೆ. ಕಳಪೆ ಕಾಮಗಾರಿಗೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯ ನಿವಾಸಿ ರೂಪೇಶ್ ರೈ ಅಲಿಮಾರ ಅಗ್ರಹಿಸಿದ್ದಾರೆ.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.