ನೆಲದ ಫ‌ಲವತ್ತತೆ ಹೆಚ್ಚಿಸುವ ಸೆಗಣಿ ಹುಡಿ

ರಾಸಾಯನಿಕ ಗೊಬ್ಬರಕ್ಕೆ ಪರ್ಯಾಯ,ಎಂಜಿನಿಯರ್‌ ಪದವೀಧರನ ಕೃಷಿ ಯಶೋಗಾಥೆ

Team Udayavani, Oct 20, 2021, 5:03 AM IST

ನೆಲದ ಫ‌ಲವತ್ತತೆ ಹೆಚ್ಚಿಸುವ ಸೆಗಣಿ ಹುಡಿ

ಸವಣೂರು: ರಾಸಾಯನಿಕ ಗೊಬ್ಬರಕ್ಕೆ ಪರ್ಯಾಯವಾಗಿ ಸೆಗಣಿ ಹುಡಿ ಬಳಸಿ ಉತ್ತಮ ಇಳುವರಿ ಪಡೆಯುವಲ್ಲಿ ಪುತ್ತೂರು ತಾಲೂಕಿನ ಮುಂಡೂರು ಗ್ರಾಮದ ಎಂಜಿನಿಯರಿಂಗ್‌ ಪದವೀಧರ ಕೃಷಿಕರೊಬ್ಬರೊಬ್ಬರು ಯಶಸ್ವಿಯಾಗಿದ್ದಾರೆ.

ಹಿಂದಾರು ನಿವಾಸಿ ಜಯಗುರು ಆಚಾರ್‌ ಈ ಮೂಲಕ ಸಾವಯವ ಕೃಷಿಗೆ ಹೊಸ ರೂಪ ನೀಡಿದ್ದಾರೆ. ಕೃಷಿಗೆ ಸೆಗಣಿ ಬಳಕೆ ಸಾಂಪ್ರದಾಯಿಕ ವಿಧಾನ. ಆದರೆ ಸೆಗಣಿಯನ್ನು ಸಂಸ್ಕರಿಸಿ ಬಳಸುವ ಮೂಲಕ ಭೂಮಿಯ ಫಲವತ್ತತೆಯನ್ನೂ ಹೆಚ್ಚಿಸಿಕೊಳ್ಳಬಹುದು ಎಂದು ಅವರು ತೋರಿಸಿಕೊಟ್ಟಿದ್ದಾರೆ.

ಸೆಗಣಿ ಹುಡಿ ತಯಾರಿ ಹೇಗೆ?
ಹಟ್ಟಿಯಿಂದ ಸೆಗಣಿ ಸಂಗ್ರಹಿಸಿ ತೊಟ್ಟಿಗೆ ಹಾಕಿ, ಪಂಪ್‌ ಮೂಲಕ ಸೆಗಣಿಯಿಂದ ನೀರಿನ ಅಂಶವನ್ನು ಬೇರ್ಪಡಿಸುವ ಯಂತ್ರಕ್ಕೆ ಹಾಯಿಸಲಾಗುತ್ತದೆ. ಆ ಯಂತ್ರದಲ್ಲಿ ಒಂದು ಕಡೆ ಸೆಗಣಿಯ ಹುಡಿ ತಯಾರಾದರೆ, ಇನ್ನೊಂದು ಕಡೆ ಸೆಗಣಿಯ ನೀರಿನಂಶ ಪ್ರತ್ಯೇಕಗೊಂಡು ಟ್ಯಾಂಕ್‌ನಲ್ಲಿ ಶೇಖರಣೆಗೊಳ್ಳುತ್ತದೆ. ತೋಟಕ್ಕೆ ಬಳಸಿ ಉಳಿದ ಸೆಗಣಿ ಹುಡಿ ಗೊಬ್ಬರವನ್ನು ತಲಾ 40 ಕೆ.ಜಿ.ಯ ಪ್ಯಾಕೆಟ್‌ ಮಾಡಿ ಮಾರಾಟ ಮಾಡುತ್ತಿದ್ದಾರೆ.

ಉಪ ಉತ್ಪನ್ನಗಳು
ಸೆಗಣಿ ಹುಡಿ ಗೊಬ್ಬರದ ಜತೆಗೆ ಗೋಮೂತ್ರ, ದನಗಳನ್ನು ತೊಳೆದ ನೀರು, ಸೆಗಣಿ ನೀರು ಸೇರಿಸಿ ಸ್ಲರಿ ತಯಾರಿಸಲಾಗುತ್ತಿದೆ. ಟ್ಯಾಂಕ್‌ ಮೂಲಕ ಸ್ಲರಿಯನ್ನು ತೋಟದಲ್ಲಿರುವ ಅಡಿಕೆ, ತೆಂಗು, ತರಕಾರಿ ತೋಟಕ್ಕೆ ಬಳಸುವ ಜತೆಗೆ ಪರಿಸರದ ತೋಟಗಳಿಗೂ ಟ್ಯಾಂಕರ್‌ ಮೂಲಕ ಪೂರೈಸುತ್ತಿದ್ದಾರೆ. ಸೆಗಣಿ ಹುಡಿಯಂತೆ ಸ್ಲರಿಗೂ ಬೇಡಿಕೆ ಇದೆ.

ಕಳೆದೆರಡು ವರ್ಷಗಳಿಂದ ಪೂರ್ಣ ಪ್ರಮಾಣದಲ್ಲಿ ಹೈನುಗಾರಿಕೆಯಲ್ಲಿ ತೊಡಗಿಕೊಂಡಿರುವ ಜಯಗುರು ಅವರ ಮನೆಯಲ್ಲಿ 130 ಗೋವುಗಳಿವೆ. ದಿನಕ್ಕೆ 750 ಲೀ. ಹಾಲನ್ನು ಡಿಪೋಗೆ ನೀಡುತ್ತಿದ್ದಾರೆ. ಸೆಗಣಿಯನ್ನು ಹುಡಿ ಗೊಬ್ಬರ ಮಾಡುವುದರಿಂದ ಸಾಗಾಣಿಕೆಯೂ ಸುಲಭ. ವಾಸನೆ ಇರುವುದಿಲ್ಲ, ತೋಟಕ್ಕೆ ಸುಲಭವಾಗಿ ಹಾಕಬಹುದು. ಜತೆಗೆ ಗೋನಂದಾಜಲವನ್ನೂ ಬಳಸುತ್ತಿದ್ದು, ಇವೆಲ್ಲದರ ಬಳಕೆಯಿಂದ ಇಳುವರಿ ಅಧಿಕವಾಗಿದೆ.

ಇದನ್ನೂ ಓದಿ:ರೈತರಿಗೆ ಗೌರವ ಕೊಡುವ ಕಾರ್ಯವಾಗಲಿ  : ಸಚಿವ ಶಿವರಾಮ ಹೆಬ್ಬಾರ

ಗೋ ಆಧಾರಿತ ಕೃಷಿ ಕ್ರಾಂತಿ
ಕಂಪೆನಿಯೊಂದರಲ್ಲಿ ಎಂಜಿನಿಯರಿಂಗ್‌ ಆಗಿದ್ದ ಜಯಗುರು 2019ರಲ್ಲಿ ವೃತ್ತಿಗೆ ವಿದಾಯ ಹೇಳಿ ತಂದೆ ನರಿಮೊಗರು ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯ ಸಂಚಾಲಕ ಭಾಸ್ಕರ ಆಚಾರ್‌ ಅವರು ನಡೆಸುತ್ತಿದ್ದ ಹೈನುಗಾರಿಕೆಯಲ್ಲಿ ಕೈಜೋಡಿಸಿದರು. ಬಳಿಕ ತನ್ನ ಕೃಷಿ ಭೂಮಿಯನ್ನು ರಾಸಾಯನಿಕ ಮುಕ್ತ ಮಾಡಬೇಕೆಂಬ ಕನಸಿನಂತೆ ಅದರಲ್ಲಿ ಯಶಸ್ವಿಯಾಗಿದ್ದಾರೆ. ಪ್ರಸ್ತುತ ದ್ರವ ರೂಪದ ಗೊಬ್ಬರ ತಯಾರಿಸುವ ಪ್ರಯೋಗ ಆರಂಭಿಸಿರುವುದಲ್ಲದೆ ಆ ಮೂಲಕ ಗೋ ಆಧಾರಿತ ಕೃಷಿ ಕ್ರಾಂತಿಗೆ ಮುಂದಡಿಯಿಟ್ಟಿದ್ದಾರೆ.

ಫಲವತ್ತತೆ ಅಧಿಕ
ನಾನು ತೋಟಕ್ಕೆ ಯಾವುದೇ ರಾಸಾಯನಿಕ ಗೊಬ್ಬರ ಹಾಕುತ್ತಿಲ್ಲ. ಸೆಗಣಿ ಹುಡಿ ಗೊಬ್ಬರ ಸಾಗಾಟವೂ ಸುಲಭ. ವಾಸನೆ ಇರುವುದಿಲ್ಲ. ತೋಟಕ್ಕೆ ಸುಲಭವಾಗಿ ಬಳಸಬಹುದು. ಗೋನಂದಾಜಲವನ್ನೂ ಬಳಸುತ್ತಿದ್ದು, ಇವೆಲ್ಲರ ಬಳಕೆಯಿಂದ ತೋಟದಲ್ಲಿ ಇಳುವರಿ ಹೆಚ್ಚಳಗೊಂಡಿದೆ. ಭೂಮಿಯ ಫಲವತ್ತತೆ ಅ ಧಿಕವಾಗಿದೆ. ಇಳುವರಿ ಹೆಚ್ಚಿರುವುದಲ್ಲದೆ ಅಡಿಕೆ ಕೊಳೆರೋಗವೂ ದೂರವಾಗಿದೆ.
-ಜಯಗುರು ಆಚಾರ್‌ ಹಿಂದಾರು,
ಯುವ ಕೃಷಿಕ

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

8-kukke

Subrahmanya: ಮುಜರಾಯಿ ಸಚಿವರ ನೇತೃತ್ವದಲ್ಲಿ ಕುಕ್ಕೆ ದೇಗುಲದ ಅಭಿವೃದ್ಧಿ ಸಭೆ

3(1

Sullia: ಜಳಕದಹೊಳೆ ಸೇತುವೆ; ಸಂಚಾರ ನಿಷೇಧ

2(1

Uppinangady: ಕಾಂಕ್ರೀಟ್‌ ರಸ್ತೆಯೇ ಕಿತ್ತೋಗಿದೆ

1

Bantwal: ಕೃಷಿಕರ ತೋಟಗಳಿಗೆ ನುಗ್ಗಿದ ಜಕ್ರಿಬೆಟ್ಟು ಅಣೆಕಟ್ಟು ನೀರು!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.