ಸುಳ್ಯ: ಕೈ ಪಾಳಯದಲ್ಲಿ ಶಮನವಾಗದ ಮುನಿಸು


Team Udayavani, Apr 5, 2023, 6:52 AM IST

ಸುಳ್ಯ: ಕೈ ಪಾಳಯದಲ್ಲಿ ಶಮನವಾಗದ ಮುನಿಸು

ಸುಳ್ಯ: ಮೂರು ದಶಕಗಳಿಂದ ಸುಳ್ಯ ಕ್ಷೇತ್ರದಲ್ಲಿ ಗೆಲುವನ್ನೇ ಕಾಣದ ಕಾಂಗ್ರೆಸ್‌ ಈ ಬಾರಿ ಗೆಲ್ಲಬೇಕೆಂದು ನಿರ್ಧರಿಸಿರುವಾಗಲೇ ಹೈಕಮಾಂಡ್‌ ಆಯ್ಕೆ ಮಾಡಿದ ಅಭ್ಯರ್ಥಿಯ ಹಿನ್ನೆಲೆಯಲ್ಲಿ ಕಾಂಗ್ರೆಸ್‌ನಲ್ಲಿ ಎರಡು ಬಣಗಳು ಸೃಷ್ಟಿಯಾಗಿವೆ.

ಒಂದು ವಾರದಿಂದ ಅಭ್ಯರ್ಥಿ ಆಯ್ಕೆ ಸಂಬಂಧ ವಾಕ್ಸಮರ ತಾರಕಕ್ಕೇರಿದೆ. ಘೋಷಿತ ಅಭ್ಯರ್ಥಿ ಹಾಗೂ ಆಕಾಂಕ್ಷಿಗಳ ನಡುವಿನ ಸಮರ ಜೋರಾಗಿ ಸದ್ದು ಮಾಡುತ್ತಿದೆ.

ಕೈ ಶಾಸಕರಿಲ್ಲ
1989ರಲ್ಲಿ ಕೆ.ಕುಶಲ ಅವರು ಕಾಂಗ್ರೆಸ್‌ ಅಭ್ಯರ್ಥಿಯಾಗಿ ಗೆದ್ದ ಬಳಿಕ ಇದುವರೆಗೂ ಕ್ಷೇತ್ರವನ್ನು ಪ್ರತಿ ನಿಧಿಸುವ ಅವಕಾಶ ಲಭಿಸಿಲ್ಲ. ಬಿಜೆಪಿ ನಿರಂತರವಾಗಿ ಕ್ಷೇತ್ರದಲ್ಲಿ ಹಿಡಿತ ಸಾಧಿ ಸುತ್ತ ಬಂದಿದ್ದು ಕಾಂಗ್ರೆಸ್‌ಗೆ ಗೆಲುವು ಮರೀಚಿಕೆಯಾಗಿದೆ. ಈ ಬಾರಿ ಆರಂಭದಿಂದಲೇ ಬಿಜೆಪಿ ಯಲ್ಲಿನ ಅಭ್ಯರ್ಥಿ ಆಯ್ಕೆಯ ಗೊಂದಲದ ಲಾಭ ಪಡೆಯಲು ಕಾಂಗ್ರೆಸ್‌ ತಂತ್ರಗಾರಿಕೆ ರೂಪಿಸಿತ್ತು. ಆದರೆ ಅಭ್ಯರ್ಥಿ ಆಯ್ಕೆ ವಿಷಯದಲ್ಲಿ ಗೊಂದಲ ಸೃಷ್ಟಿಯಾಗಿದ್ದು ಎಲ್ಲ ಲೆಕ್ಕಾ ಚಾರವನ್ನೂ ತಲೆಕೆಳಗಾಗಿಸಿದೆ.

ಸುಳ್ಯ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿ ಸುಳ್ಯ ಬ್ಲಾಕ್‌ಗೆ ಉಸ್ತುವಾರಿ ಯನ್ನಾಗಿ ಮಡಿಕೇರಿ ನಗರಸಭೆ ಮಾಜಿ ಅಧ್ಯಕ್ಷ ನಂದಕುಮಾರ್‌ ಹಾಗೂ ಕಡಬ ಬ್ಲಾಕ್‌ಗೆ ಕೆಪಿಸಿಸಿ ಸಂಯೋಜಕ ಜಿ.ಕೃಷ್ಣಪ್ಪ ಅವರನ್ನು ನಿಯೋಜಿಸಲಾಗಿತ್ತು. ಈ ಇಬ್ಬರೂ ಎರಡು ಅವಧಿಯಿಂದ ಕ್ಷೇತ್ರದ ಟಿಕೆಟ್‌ ಆಕಾಂಕ್ಷಿಗಳಾಗಿದ್ದರು. ನಂದಕುಮಾರ್‌ ಅವರೇ ಅಭ್ಯರ್ಥಿಯಾಗುತ್ತಾರೆ ಎಂಬ ಅಭಿಪ್ರಾಯವಿತ್ತು. ಆದರೆ ಹೈಕಮಾಂಡ್‌ ಕೃಷ್ಣಪ್ಪ ಅವರಿಗೆ ಅವಕಾಶ ನೀಡಿತು. ಇದು ನಂದ ಕುಮಾರ್‌ ಬೆಂಬಲಿಗರ ಆಕ್ರೋಶಕ್ಕೆ ಕಾರಣ ವಾಗಿದೆ. ಹೀಗಾಗಿ ಪ್ರತಿ ಭಟನೆ, ನಾಯಕರ ಭೇಟಿ ಸಹಿತ ನಂದಕುಮಾರ್‌ ಬೆಂಬಲಿಗರು ವಿವಿಧ ರೀತಿಯಲ್ಲಿ ಆಕ್ರೋಶ ವ್ಯಕ್ತಪಡಿಸ ತೊಡಗಿದ್ದಾರೆ. ಪದೇಪದೆ ಕ್ಷೇತ್ರದ ಹಲವೆಡೆ ಸಭೆಗಳನ್ನು ನಡೆಸಿ ನಾಯಕರ ಮೇಲೆ ಒತ್ತಡ ಹಾಕುವ ತಂತ್ರವನ್ನೂ ಅನುಸರಿಸುತ್ತಿದ್ದಾರೆ.

ನಂದಕುಮಾರ್‌ ಅವರನ್ನು ಬಿಜೆಪಿಗೆ ಕರೆ ತರುವ ಪ್ರಯತ್ನ ನಡೆಯುತ್ತಿದೆ ಎನ್ನಲಾಗಿದೆ. ಆದರೆ ಬಿಜೆಪಿಯಲ್ಲೂ ಆಕಾಂಕ್ಷಿಗಳ ಸಂಖ್ಯೆಯೇ ಹೆಚ್ಚಿದ್ದು, ನಂದಕುಮಾರ್‌ಗೆ ಅವಕಾಶ ಸಾಧ್ಯತೆ ಕಡಿಮೆ. ಹಾಗಾಗಿ ನಂದಕುಮಾರ್‌ ಬಿಜೆಪಿಗೆ ಹೋಗಲಾರರು ಎಂದು ವಿಶ್ಲೇಷಿಸಲಾಗುತ್ತಿದೆ.

ಒಂದೇ ಕಲ್ಲಿಗೆ ಎರಡು ಹಕ್ಕಿ?
ಒಂದುವೇಳೆ ಕಾಂಗ್ರೆಸ್‌ ಹೈಕಮಾಂಡ್‌ ನಿರ್ಧಾರವನ್ನು ಬದಲಿಸದಿದ್ದರೆ, ನಂದಕುಮಾರ್‌ ಅವರನ್ನು ಪಕ್ಷೇತರರನ್ನಾಗಿ ಕಣಕ್ಕಿಳಿಸಲು ಬೆಂಬಲಿಗರು ನಿರ್ಧರಿಸಿದ್ದಾರೆ. ಅದರ ಪೂರ್ವಭಾವಿಯಾಗಿ ನಿಂತಿಕಲ್‌ನಲ್ಲಿ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎನ್ನಲಾಗಿದೆ. ಒಂದು ವೇಳೆ ಬಿಜೆಪಿಯು ಎಸ್‌.ಅಂಗಾರ ಅವರನ್ನು ಕಣಕ್ಕಿಳಿಸಿದಲ್ಲಿ ಅವರ ವಿರುದ್ಧ ಅಸಮಾಧಾನ ಹೊಂದಿರುವ ಗುಂಪಿನ ಲಾಭ ಹಾಗೂ ತಮ್ಮ ಪರವಾಗಿ ಇರುವ ಕಾಂಗ್ರೆಸ್‌ನಲ್ಲಿನ ಗುಂಪಿನ ಸಹಕಾರದಿಂದ ನಂದಕುಮಾರ್‌ ಪಕ್ಷೇತರರಾಗಿ ಸ್ಪರ್ಧಿಸಿದರೆ ಹೆಚ್ಚು ಅನುಕೂಲ. ಎರಡೂ ಪಕ್ಷಗಳ ಅಸಮಾಧಾನಿತರ ಮತಗಳನ್ನು ಪಡೆಯುವಲ್ಲಿ ನಂದಕುಮಾರ್‌ ಯಶಸ್ವಿಯಾದರೆ ಕಣ ಚಿತ್ರಣ ಬದಲಾದೀತು ಎಂಬುದು ಅವರ ಬೆಂಬಲಿಗರ ಲೆಕ್ಕಾಚಾರ.

–  ಕಿರಣ್‌ ಪ್ರಸಾದ್‌ ಕುಂಡಡ್ಕ

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

8-kukke

Subrahmanya: ಮುಜರಾಯಿ ಸಚಿವರ ನೇತೃತ್ವದಲ್ಲಿ ಕುಕ್ಕೆ ದೇಗುಲದ ಅಭಿವೃದ್ಧಿ ಸಭೆ

3(1

Sullia: ಜಳಕದಹೊಳೆ ಸೇತುವೆ; ಸಂಚಾರ ನಿಷೇಧ

2(1

Uppinangady: ಕಾಂಕ್ರೀಟ್‌ ರಸ್ತೆಯೇ ಕಿತ್ತೋಗಿದೆ

1

Bantwal: ಕೃಷಿಕರ ತೋಟಗಳಿಗೆ ನುಗ್ಗಿದ ಜಕ್ರಿಬೆಟ್ಟು ಅಣೆಕಟ್ಟು ನೀರು!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.