Belthangady ಅಂಗಮಾರಿ ರೋಗ ಲಕ್ಷಣ: ಪರಿಶೀಲನೆ


Team Udayavani, Sep 7, 2024, 6:40 AM IST

Belthangady ಅಂಗಮಾರಿ ರೋಗ ಲಕ್ಷಣ: ಪರಿಶೀಲನೆ

ಬೆಳ್ತಂಗಡಿ: ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಅಪರೂ ಪಕ್ಕೆ ಕಾಣಿಸಿಕೊಳ್ಳುವ ಬ್ಯಾಕ್ಟೀರಿಯ ದುಂಡಾಣು ಅಂಗಮಾರಿ (Bacteria Blight) ರೋಗವು ಬೆಳ್ತಂಗಡಿ ತಾಲೂಕಿನ ಬೆಳಾಲು ಹಾಗೂ ಮೇಲಂತಬೆಟ್ಟು ಗ್ರಾಮದ ಗದ್ದೆಯಲ್ಲಿ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಬೆಳ್ತಂಗಡಿ ಕೃಷಿ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಪರಿಶೀಲಿಸಿದ್ದಾರೆ.

ಬೆಳಾಲು ಗ್ರಾಮದ ಲಿಂಗಪ್ಪ ಪೂಜಾರಿ ಹಾಗೂ ಮೇಲಂತಬೆಟ್ಟು ಗ್ರಾಮದ ರಘುರಾಮ್‌ ಶೆಟ್ಟರ ಗದ್ದೆಯಲ್ಲಿ ಈ ರೋಗದ ಲಕ್ಷಣ ಕಾಣಿಸಿಕೊಂಡಿರುವ ಕುರಿತು “ಉದಯವಾಣಿ’ಯಲ್ಲಿ ವರದಿ ಪ್ರಕಟವಾಗಿತ್ತು. ತಾಲೂಕಿನ ಇತರೆಡೆ ಹಾಗೂ ಸುಳ್ಯಮತ್ತು ಕಡಬ ತಾಲೂಕಿನಲ್ಲೂ ಈ ಸಮಸ್ಯೆ ಕಾಣಿಸಿಕೊಂಡಿರುವ ಕುರಿತು ಅಧಿಕಾರಿಗಳಿಗೆ ರೈತರು ತಿಳಿಸಿದ್ದಾರೆ.

ಸೂಕ್ತ ರಸಗೊಬ್ಬರ: ಸಲಹೆ
ರೋಗ ಲಕ್ಷಣ ಕುರಿತು ಮಂಗಳೂರು ಕೃಷಿ ವಿಜ್ಞಾನ ಕೇಂದ್ರದ ಮಣ್ಣು ವಿಜ್ಞಾನ ವಿಭಾಗದ ಡಾ| ಮಲ್ಲಿಕಾರ್ಜುನ್‌ ಪರಿಶೀಲಿಸಿ, ಗದ್ದೆಯಲ್ಲಿ ಪೊಟ್ಯಾಷ್‌ ಕೊರತೆಯಾಗಿರುವ ಸಾಧ್ಯತೆ ಬಗ್ಗೆ ಸೂಚಿಸಿದ್ದಾರೆ. ಸಸ್ಯರೋಗ ವಿಭಾಗ ತಜ್ಞ ಡಾ| ಕೇಧಾರ್‌ನಾಥ್‌ ಪರಿಶೀಲಿಸಿ, ಒಂದು ಎಕ್ರೆ ಗದ್ದೆಗೆ 12 ಕೆ.ಜಿ. ಯೂರಿಯಾ, 12 ಕೆ.ಜಿ. ಪೊಟ್ಯಾಶ್‌, 2 ಕೆ.ಜಿ. ಮೆಗ್ನಿಶಿಯಂ ಸಲ್ಫೆಟ್‌, 2 ಕೆ.ಜಿ. ಝಿಂಕ್‌ (ಸತು) ಸಲ್ಫೆಟ್‌ ಬೆರೆಸಿ ಕೇವಲ ತೇವಾಂಶ ಮಾತ್ರ ಇರುವಂತೆ ನೋಡಿಕೊಂಡು ರಸ ಗೊಬ್ಬರ ನೀಡುವಂತೆ ಸೂಚಿಸಿದ್ದಾರೆ.

ಭತ್ತಕ್ಕೆ ಸಿಂಪಡಣೆ
ಬಿಸಿಲು ಹೆಚ್ಚಾದಾಗ ರೋಗ ನಿಧಾನವಾಗಿ ಹತೋಟಿಗೆ ಬರುವ ಸಾಧ್ಯತೆಯಿದ್ದು, ತತ್‌ಕ್ಷಣಕ್ಕೆ ಪ್ರತಿ ಎಕ್ರೆಗೆ (Streptomycin) 6 ಗ್ರಾಂ 200 ಲೀಟರಿಗೆ ಬೆರೆಸಿ ಸಿಂಪಡಣೆ ಅಥವಾ 500 ಗ್ರಾಂ ಕಾಪರ್‌ ಆಕ್ಸಿ ಕ್ಲೋರೈಡ್‌ 200 ಲೀಟರ್‌ ನೀರಿಗೆ ಬೆರೆಸಿ ಒಂದೆರಡು ಬಾರಿ ಸಿಂಪಡಿಸಲು ಕೃಷಿ ಅಧಿಕಾರಿಗಳು ಸೂಚಿಸಿದಂತೆ ರೈತರು ಕ್ರಮ ಕೈಗೊಂಡಿದ್ದಾರೆ. ಮುಂದೆ ತೆನೆ ಬರುವ ಹಂತದಲ್ಲಿ ಎಲೆ ಕವಚ ಅಥವಾ ತೆನೆ ಕವಚ (Sheat Blight) ಕೊಳೆರೋಗ ಎದುರಾದಲ್ಲೂ ಈ ರೀತಿ ರಾಸಾಯನಿಕ ಸಿಂಪಡಿಸುವುದು ಸೂಕ್ತವಾಗಿದೆ ಎಂದು ಕೃಷಿ ಅಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

anHassan ಬೇಲೂರು: ಕುರಿಮಂದೆಯಂತೆ ಕಾಡಾನೆ ಹಿಂಡು ಸಂಚಾರ!

Hassan ಬೇಲೂರು: ಕುರಿಮಂದೆಯಂತೆ ಕಾಡಾನೆ ಹಿಂಡು ಸಂಚಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bantwala: ಶರಣ್ ಪಂಪುವೆಲ್ ಗೆ ಸವಾಲು ಹಾಕಿದ ಶರೀಫ್: ಬಂಟ್ವಾಳದಲ್ಲಿ ಬಿಗುವಿನ ವಾತಾವರಣ

Bantwala: ಶರಣ್ ಪಂಪ್ ವೆಲ್ ಗೆ ಸವಾಲು ಹಾಕಿದ ಶರೀಫ್… ಬಂಟ್ವಾಳದಲ್ಲಿ ಬಿಗುವಿನ ವಾತಾವರಣ

police

Eid Milad: ರ್‍ಯಾಲಿ ವಿಚಾರ ಪ್ರಚೋದನಕಾರಿ ಹೇಳಿಕೆ: ಇಬ್ಬರ ವಿರುದ್ಧ ಪ್ರಕರಣ ದಾಖಲು

Cocoa; ವ್ಯಾಪಕವಾಗಿ ಕರಟಿದ ಕೊಕ್ಕೋ; ವಿಪರೀತ ಮಳೆ ತಂದೊಡ್ಡಿದೆ ಬೆಳೆಗಾರರಿಗೆ ಭಾರೀ ನಷ್ಟ

Cocoa; ವ್ಯಾಪಕವಾಗಿ ಕರಟಿದ ಕೊಕ್ಕೋ; ವಿಪರೀತ ಮಳೆ ತಂದೊಡ್ಡಿದೆ ಬೆಳೆಗಾರರಿಗೆ ಭಾರೀ ನಷ್ಟ

ಸುಳ್ಯ: ಬೈಕ್‌ ಗಳ ನಡುವೆ ಅಪಘಾತ

Sullia: ಬೈಕ್‌ ಗಳ ನಡುವೆ ಅಪಘಾತ

Arack

ವಿಟ್ಲ: ಅಡಿಕೆ ಸುಲಿಯುವ ಯಂತ್ರ ಕಂಡು ಹಿಡಿದ ನರಸಿಂಹ ಭಟ್‌ ವಿಧಿವಶ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.