Subrahmanya ಕುಮಾರಪರ್ವತ ಚಾರಣಕ್ಕೆ ಮತ್ತೆ ಅವಕಾಶ
Team Udayavani, Oct 7, 2023, 1:16 AM IST
ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಹಿಂಭಾಗದಲ್ಲಿರುವ ಕುಮಾರಪರ್ವತ ಚಾರಣ ಅ. 7ರ ಶನಿವಾರದಿಂದ ಆರಂಭಗೊಳ್ಳಲಿದೆ. ಇದೀಗ ಮಳೆಯ ಪ್ರಮಾಣ ಕಡಿಮೆಯಾದ ಕಾರಣ ಚಾರಣಕ್ಕೆ ಅವಕಾಶ ಒದಗಿಸಲಾಗಿದೆ ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ಮಾದ್ಯಮಕ್ಕೆ ತಿಳಿಸಿದ್ದಾರೆ.
ಈ ಹಿಂದೆ ಜಿಲ್ಲೆಯಾದ್ಯಂತ ಸುರಿಯುತ್ತಿದ್ದ ಭಾರೀ ಮಳೆಯ ಕಾರಣ ಚಾರಣಿಗರ ಹಿತದೃಷ್ಟಿಯಿಂದ ಕುಮಾರಪರ್ವತ ಚಾರಣವನ್ನು ಅ. 3ರಿಂದ ನಿಷೇಧಿಸಲಾಗಿತ್ತು. ಅದಕ್ಕಿಂತ ಮೊದಲು ಮೇ ತಿಂಗಳಿನಿಂದ ಸೆ.29ರ ತನಕ ಅರಣ್ಯ ಇಲಾಖೆಯು ಬಿರು ಬೇಸಗೆ ಮತ್ತು ಅಧಿಕ ಮಳೆಯ ಕಾರಣದಿಂದಾಗಿ ನಿರ್ಬಂಧ ವಿಧಿಸಿತ್ತು. ಆ ಬಳಿಕ ಸೆ. 30ರಿಂದ ನಿರ್ಬಂಧ ತೆರವುಗೊಳಿಸಿ ಚಾರಣಕ್ಕೆ ಅವಕಾಶ ನೀಡಿತ್ತು.
ಸ್ವಚ್ಛತೆಗೆ ಇಲಾಖೆ ಕ್ರಮ
ಕುಮಾರಪರ್ವತ ಚಾರಣ ಮತ್ತೆ ಆರಂಭಗೊಳ್ಳಲಿರುವುದರಿಂದ ಪರ್ವತದ ದಾರಿಯಲ್ಲಿ ಮತ್ತು ಪರ್ವತದಲ್ಲಿ ಸ್ವಚ್ಛತೆ ಕಾಪಾಡಲು ವಿಶೇಷ ವ್ಯವಸ್ಥೆಯನ್ನು ಇಲಾಖೆ ಮಾಡಿದೆ. ಕುಮಾರಪರ್ವತ, ಗಿರಿಗದ್ದೆ, ಕಲ್ಲಚಪ್ಪರ ಸೇರಿದಂತೆ ಪರ್ವತಾರೋಹಣದ ಹಾದಿಯಲ್ಲಿಸ್ವಚ್ಛತೆ ಕಾಪಾಡಲು ಬೇಕಾದ ಸೂಕ್ತ ವ್ಯವಸ್ಥೆ ಮಾಡಲಾಗಿದೆ. ಸೂಚನಾ ಫಲಕವನ್ನು ಅಲ್ಲಲ್ಲಿ ಅಳವಡಿಸಿ ಜಾಗೃತಿ ಮಾಡಿಸುವ ಕಾರ್ಯ ಮಾಡಲಾಗಿದೆ. ಪ್ಲಾಸ್ಟಿಕ್ ಬಾಟಲಿ, ಕವರ್, ವಸ್ತುಗಳನ್ನು ಕೊಂಡೊಯ್ಯದಂತೆ ನಿರ್ಬಂಧ ವಿಧಿಸಲಾಗಿದೆ. ಅಲ್ಲಲ್ಲಿ ಕಸದ ತೊಟ್ಟಿಗಳ ವ್ಯವಸ್ಥೆಯನ್ನು ಇಲಾಖೆ ಕಲ್ಪಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Putturu: ಭಾರೀ ಮಳೆಗೆ ಪೆರುವಾಜೆ ದೇವಾಲಯ ಜಲಾವೃತ
Puttur: ಮೊದಲ ಕಿನ್ನಿಪಿಲಿಗೆ 48 ವರ್ಷ!; 15ರಿಂದ 75ಕ್ಕೇರಿದ ಟೀಮ್
Belthanagdy:ಹಿರಿಯ ಸಹಕಾರಿ,ಉಜಿರೆ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸೇವಾಸಂಘದ ಅಧ್ಯಕ್ಷ ನಿಧನ
New Guideline For Trekkers: ಇಂದಿನಿಂದ ಕುಮಾರ ಪರ್ವತ ಚಾರಣಕ್ಕೆ ಅವಕಾಶ
Putturu: ವಿದೇಶಗಳಿಂದ ಅಡಿಕೆ ಆಮದು ಪರಿಣಾಮ ಅಧ್ಯಯನ: ಸಂಸದ ಕ್ಯಾ.ಬ್ರಿಜೇಶ್ ಚೌಟ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.