![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Jan 31, 2024, 12:15 AM IST
ಅರಂತೋಡು: ಅರಂತೋಡು ಗ್ರಾಮದ ದೇರಾಜೆ ಸಮೀಪ ಕಳುಬೈಲು ಎಂಬಲ್ಲಿ ಸುಮಾರು 45 ವರ್ಷಗಳ ಹಿಂದಿನ ಕಿಂಡಿ ಆಣೆಕಟ್ಟಿನ ಸ್ಲ್ಯಾಬ್ ಮುರಿದು ಬಿದ್ದು ದಂಪತಿ ಗಾಯಗೊಂಡ ಘಟನೆ ಶುಕ್ರವಾರ ನಡೆದಿದ್ದು ತಡವಾಗಿ ವರದಿಯಾಗಿದೆ.
ದೇರಾಜೆ ಕಳುಬೈಲು ನಿವಾಸಿ ಚಂದ್ರಪ್ರಕಾಶ್ ಹಾಗೂ ಅವರ ಪತ್ನಿ ವೇದಾವತಿ ತಮ್ಮ ರಬ್ಬರ್ ತೋಟಕ್ಕೆ ಕೆಲಸಕ್ಕೆ ಹೋಗಿ ಮರಳಿ ಈ ಕಿಂಡಿ ಆಣೆಕಟ್ಟಿನ ಮೂಲಕ ನಡೆದು ಬರುತ್ತಿದ್ದ ಸಂದರ್ಭ ಆಣೆಕಟ್ಟಿನ ಸ್ಲ್ಯಾಬ್ ಏಕಾಏಕಿ ಮುರಿದು ಬಿದ್ದಿದೆ.
ಈ ವೇಳೆ ಅವರಿಬ್ಬರು ಸುಮಾರು 15 ಅಡಿಗಳ ಆಳಕ್ಕೆ ಬಿದ್ದು ಗಾಯಗೊಂಡರು. ತತ್ಕ್ಷಣ ಸ್ಥಳೀಯರು ಸ್ಥಳಕ್ಕೆ ಧಾವಿಸಿ ಅವರನ್ನು ಅಲ್ಲಿಂದ ಮೇಲೆತ್ತಿ ಸುಳ್ಯ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಘಟನೆಯಿಂದ ವೇದಾವತಿಯವರ ಕಾಲು ಮುರಿತಕ್ಕೊಳಗಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಂದ್ರಪ್ರಕಾಶರವರು ಸಣ್ಣ ಪುಟ್ಟ ಗಾಯದಿಂದ ಪಾರಾಗಿದ್ದಾರೆ.
You seem to have an Ad Blocker on.
To continue reading, please turn it off or whitelist Udayavani.