Sand Mining: ಬಂಟ್ವಾಳ ಅಕ್ರಮ ಮರಳು ಅಡ್ಡೆಗೆ ದಾಳಿ; 20 ದೋಣಿ ವಶ
Team Udayavani, Oct 4, 2024, 5:10 PM IST
ಬಂಟ್ವಾಳ: ತಾಲೂಕಿನ ತುಂಬೆ, ಮಾರಿಪಳ್ಳ, ಭಾಗದ ನೇತ್ರಾವತಿ ನದಿಯಲ್ಲಿ ನಡೆಯುತ್ತಿದ್ದ ಅಕ್ರಮ ಮರಳು ಅಡ್ಡೆಗೆ ಆ.4ರ ಶುಕ್ರವಾರ ದಾಳಿ ನಡೆಸಿರುವ ಬಂಟ್ವಾಳ ಕಂದಾಯ ಇಲಾಖೆ ಹಾಗೂ ಗಣಿ ಇಲಾಖೆ ತಂಡ ಒಟ್ಟು 20 ದೋಣಿಗಳನ್ನು ವಶಪಡಿಸಿಕೊಂಡಿದೆ.
ದ.ಕ. ಜಿಲ್ಲಾಧಿಕಾರಿಯ ಆದೇಶದಂತೆ ಗಣಿ ಇಲಾಖೆಯ ತಂಡವು, ಬಂಟ್ವಾಳ ಕಂದಾಯ ಇಲಾಖೆ ಹಾಗೂ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ನೆರವು ಪಡೆದು, ಕಾರ್ಯಚರಣೆ ನಡೆಸಿತ್ತು. ದಾಳಿಯ ವೇಳೆ ಸುಮಾರು 20 ದೋಣಿಗಳನ್ನು ವಶಪಡಿಸಿಕೊಂಡು, ಮಂಗಳೂರು ತಾಲೂಕಿನ ಅಡ್ಯಾರಿಗೆ ಸ್ಥಳಾಂತರಿಸಲಾಗಿದೆ.
ವಶಪಡಿಸಿಕೊಂಡ ಯಾವುದೇ ದೋಣಿಗಳಲ್ಲಿ ಮರಳು ಪತ್ತೆಯಾಗಿಲ್ಲ. ಜೊತೆಗೆ ದಾಳಿಯ ವೇಳೆ ಮರಳುಗಾರಿಕೆಯಲ್ಲಿ ತೊಡಗಿದ್ದ ಕಾರ್ಮಿಕರು ಪರಾರಿಯಾಗಿದ್ದಾರೆ.
ಕಾರ್ಯಾಚರಣೆಯಲ್ಲಿ ಗಣಿ ಇಲಾಖೆಯ ಉಪನಿರ್ದೇಶಕಿ ಕೃಷ್ಣವೇಣಿ, ಹಿರಿಯ ಭೂ ವಿಜ್ಞಾನಿ ಗಿರೀಶ್ ಮೋಹನ್, ಭೂ ವಿಜ್ಞಾನಿ ಮಹಾದೇಶ್ವರ, ಬಂಟ್ವಾಳ ತಹಶೀಲ್ದಾರ್ ಅರ್ಚನಾ ಭಟ್, ಮಂಗಳೂರು ಕಂದಾಯ ಇಲಾಖೆಯ ಪ್ರಶಾಂತ್ ಪಾಟೀಲ್, ಬಂಟ್ವಾಳ ಕಂದಾಯ ನಿರೀಕ್ಷಕ ಜನಾರ್ದನ, ಗ್ರಾಮಕರಣಿಕರು ಹಾಗೂ ಬಂಟ್ವಾಳ ಗ್ರಾಮಾಂತರ ಪೊಲೀಸರ ತಂಡ ಭಾಗವಹಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Navaratri: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಹುಲಿ ವೇಷ ಕುಣಿತ ವೀಕ್ಷಿಸಿದ ನಟಿ ರಕ್ಷಿತಾ ಪ್ರೇಮ್
Bantwala ಬೈಪಾಸ್ ಜಂಕ್ಷನ್ ಅವ್ಯವಸ್ಥೆ; ಹೆಚ್ಚುತ್ತಿರುವ ಅಪಘಾತ
Bantwala: ಹುಲಿ ಕುಟುಂಬದಲ್ಲಿ ಆಕೆ ಬ್ಲ್ಯಾಕ್ ಟೈಗರ್!
Subrahmanya: ಕುಮಾರ ಪರ್ವತ ಚಾರಣ: ಅ.6ರ ಬಳಿಕ ಅವಕಾಶ ನಿರೀಕ್ಷೆ
Bantwala: ದ್ವಿಚಕ್ರಗಳೆರಡರ ಅಪಘಾತ ಪ್ರಕರಣ; ಗಂಭೀರ ಗಾಯಗೊಂಡಿದ್ದ ಸವಾರ ಮೃತ್ಯು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
MUDA Case: ಸಿದ್ದರಾಮಯ್ಯ ಕಳಂಕ ರಹಿತರೆಂದು ತನಿಖೆಯಲ್ಲಿ ಸಾಬೀತಾಗಲಿ: ಎಂಎಲ್ಸಿ ಸಿ.ಟಿ.ರವಿ
UV Fusion: ಮೃಗಗಳ ಜಗತ್ತು
Belagavi DCC Bank ಅಧ್ಯಕ್ಷ ಸ್ಥಾನಕ್ಕೆ ರಮೇಶ್ ಕತ್ತಿ ದಿಢೀರ್ ರಾಜೀನಾಮೆ
Tirupati laddu; ತನಿಖೆಗೆ ಸ್ವತಂತ್ರ ಎಸ್ಐಟಿ: ಸುಪ್ರೀಂ ನಿರ್ಧಾರಕ್ಕೆ ಟಿಡಿಪಿ ಸ್ವಾಗತ
India: SCO ಶೃಂಗದಲ್ಲಿ ಪಾಲ್ಗೊಳ್ಳಲು ವಿದೇಶಾಂಗ ಸಚಿವ ಜೈಶಂಕರ್ ಪಾಕ್ ಗೆ ಪ್ರಯಾಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.