![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, Oct 3, 2023, 10:49 PM IST
ಬಂಟ್ವಾಳ: ರಾ.ಹೆ. 75ರ ಬಿ.ಸಿ.ರೋಡು ತಲಪಾಡಿಯ ಕೆಎಸ್ಸಾರ್ಟಿಸಿ ಡಿಪ್ಪೊ ಮುಂಭಾಗದಲ್ಲಿ ಬೈಕೊಂದಕ್ಕೆ ಕಾರೊಂದು ಹಿಂಬದಿಯಿಂದ ಢಿಕ್ಕಿಯಾಗಿ ಸವಾರ ಗಾಯಗೊಂಡ ಘಟನೆ ಅ. 2ರಂದು ರಾತ್ರಿ ನಡೆದಿದೆ.
ಘಟನೆಯಲ್ಲಿ ಬೈಕ್ ಸವಾರ ಶಿವಪ್ರಸಾದ್ ಗಾಯಗೊಂಡರು. ಇವರು ಸಹಸವಾರನ ಜತೆ ಬಿ.ಸಿ.ರೋಡಿನಿಂದ ಮಂಗಳೂರು ಕಡೆಗೆ ಹೋಗುತ್ತಿದ್ದಾಗ ಕಾರು ಹಿಂಬದಿಯಿಂದ ಢಿಕ್ಕಿ ಹೊಡೆದಿದೆ.
ಢಿಕ್ಕಿಯಾದ ರಭಸಕ್ಕೆ ಬೈಕ್ ಪಲ್ಟಿಯಾಗಿ ಸವಾರರು ರಸ್ತೆಗೆ ಎಸೆಯಲ್ಪಿಟ್ಟಿದ್ದು, ಸಹಸವಾರ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.
ಬಂಟ್ವಾಳ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
You seem to have an Ad Blocker on.
To continue reading, please turn it off or whitelist Udayavani.