ಬೈತಡ್ಕ ಪ್ರಕರಣ: ಅಪಘಾತವೆಂದು ಕರೆ ಮಾಡಿದ್ದು11.52ಕ್ಕೆ, ಆದರೆ ಕಾರು ಬಿದ್ದದ್ದು 12.02ಕ್ಕೆ


Team Udayavani, Jul 11, 2022, 9:14 AM IST

ಬೈತಡ್ಕ ಪ್ರಕರಣ: ಅಪಘಾತವೆಂದು ಕರೆ ಮಾಡಿದ್ದು11.52ಕ್ಕೆ, ಆದರೆ ಕಾರು ಬಿದ್ದದ್ದು 12.02ಕ್ಕೆ

ಪುತ್ತೂರು: ಕಡಬ ತಾಲೂಕಿನ ಕಾಣಿಯೂರು ಸಮೀಪದ ಬೈತಡ್ಕ ಎಂಬಲ್ಲಿ  ಮಂಜೇಶ್ವರ -ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿ ನಿರ್ಮಿಸಲಾದ ಬೈತಡ್ಕ ಮಸೀದಿಯ ಬಳಿಯಿರುವ ಕಿರುಸೇತುವೆಯಿಂದ ಕಾರೊಂದು ಕೆಳಗೆ ಬಿದ್ದು ಯುವಕರಿಬ್ಬರು ನಾಪತ್ತೆಯಾದ ಘಟನೆ ಕುರಿತಂತೆ ಮೂಡಿರುವ ದೂರವಾಣಿ ಕರೆ ಸಮಯದ ಗೊಂದಲಕ್ಕೆ ಸಂಬಂಧಿಸಿದಂತೆ ಕಾರು ಬಿದ್ದ ಸಮಯ ಹಾಗೂ ಯುವಕರಿಬ್ಬರು ಕರೆ ಮಾಡಿರುವ ಸಮಯದ ಬಗ್ಗೆ ನಿಖರ ಮಾಹಿತಿ ಸಂಗ್ರಹಿಸಲಾಗಿದೆ.

ನಾಪತ್ತೆಯಾಗಿರುವ ಯುವಕರನ್ನು ಬಂಟ್ವಾಳ ತಾಲೂಕಿನ ವಿಟ್ಲಮುಡ್ನೂರು ಗ್ರಾಮದ ಕುಂಡಡ್ಕ-ಸಾಂತ್ಯಡ್ಕ ನಿವಾಸಿ ಚೋಮ ನಾಯ್ಕ ಅವರ ಪುತ್ರ ಧನುಷ್ (25) ಹಾಗೂ ವಿಟ್ಲ ಕನ್ಯಾನ ನಿವಾಸಿ ಧನುಷ್ (21) ಎಂದು ಗುರುತಿಸಲಾಗಿದೆ.

ಸವಣೂರಿನಲ್ಲಿ ಪೊಲೀಸ್ ಚೆಕ್ ಪೋಸ್ಟ್‌ನಲ್ಲಿ ರಾತ್ರಿ 11.53 ಕ್ಕೆ ತಪಾಸಣೆಗೆ ಒಳಪಟ್ಟು ಮುಂದೆ ಸಾಗಿ 12. 02 ನಿಮಿಷಕ್ಕೆ ಕಾರು ಸೇತುವೆಗೆ ಢಿಕ್ಕಿಯಾಗಿ ತಡೆಗೋಡೆ ಮುರಿದು ಕೆಳಕ್ಕೆ ಬಿದ್ದಿದೆ. ನಾಪತ್ತೆಯಾಗಿರುವ ಪೈಕಿ ವಿಟ್ಲ ಕನ್ಯಾನ ನಿವಾಸಿ ಧನುಷ್ ಕುಂಡಡ್ಕ-ಸಾಂತ್ಯಡ್ಕ ನಿವಾಸಿ ಧನುಷ್ ಅವರ ತಾಯಿಗೆ ಕರೆ ಮಾಡಿ ನಮ್ಮ ಕಾರು ಹಳೆಯಂಗಡಿಯಲ್ಲಿ ಲಾರಿಗೆ ಢಿಕ್ಕಿಯಾಗಿದೆ,  ನಾವು ಬದುಕಿ ಉಳಿದಿರುವುದೇ ಹೆಚ್ಚು, ಏನೂ ತೊಂದರೆಯಿಲ್ಲ, ನಾವು ಮನೆಗೆ ಮುಟ್ಟುವಾಗ ಬೆಳಿಗ್ಗೆ ಆಗಬಹುದು ಎಂದು ಹೇಳಿರುವ ವಿಚಾರ ಕೆಲವು ಸಂಶಯಗಳನ್ನು ಹುಟ್ಟು ಹಾಕಿದೆ.

ವಿಚಾರಣೆಯಲ್ಲಿ ನಿಖರ ಮಾಹಿತಿ

ಪೊಲೀಸರು ತನಿಖೆ ನಡೆಸಿದಾಗ ಧನುಷ್ ತಾಯಿಗೆ ಕರೆ ಮಾಡಿರುವುದು 11.52 ಕ್ಕೆ ಎಂದು ಸ್ಪಷ್ಟವಾಗಿ ತಿಳಿದು ಬಂದಿದೆ. ಕಾರು ಹೊಳೆಗೆ ಬಿದ್ದಿರುವುದು 12.02 ನಿಮಿಷಕ್ಕೆ. ಹಾಗಾಗಿ ಕಾರು ಹೊಳಗೆ ಬೀಳುವ ಮುಂಚೆ ಕರೆ ಮಾಡಲಾಗಿದೆ ಎಂದು ನಿರ್ಧಾರಕ್ಕೆ ಬರಲಾಗಿದೆ. ಈ ಹಿನ್ನೆಲೆಯಲ್ಲಿ ಯುವಕರು ಕಾರಿನೊಂದಿಗೆ ಹೊಳೆಗೆ ಬಿದ್ದಿದ್ದಾರೆ ಎಂದು ಶಂಕಿಸಲಾಗಿದೆ.

ಸಾಕ್ಷಿಯಾದ ಸಿಸಿ ಕ್ಯಾಮರಾ

ಕಾರು ಸೇತುವೆ ತಡೆಗೋಡೆಗೆ ಢಿಕ್ಕಿ ಹೊಡೆದು ಹೊಳೆಗೆ ಬಿದ್ದಿರುವ ಪ್ರಕರಣಕ್ಕೆ ಮಸೀದಿಯಯಲ್ಲಿ ಅಳವಡಿಸಿರುವ ಸಿಸಿ ಕ್ಯಾಮರಾ ಸಾಕ್ಷಿಯಾಯಿತು. ರವಿವಾರ ಬಕ್ರೀದ್ ಹಬ್ಬವಾಗಿದ್ದರಿಂದ ಮುಸ್ಲಿಮ್ ಬಾಂಧವರು ಮುಂಜಾವಿನ 4.30 ವೇಳೆಗೆ ಮಸೀದಿಗೆ ಆಗಮಿಸುವಾಗ ಸೇತುವೆಯ ತಡೆಗೋಡೆ ಮುರಿದು ಹೋಗಿರುವುದು ಗೋಚರಿಸಿತು. ಬಳಿಕ ಮಸೀದಿಯ ಸಿಸಿ ಕ್ಯಾಮರಾ ಪರಿಶೀಲನೆ ನಡೆಸಿದಾಗ ಕಾರೊಂದು ಸೇತುವೆಗೆ ಢಿಕ್ಕಿ ಹೊಡೆದು ಕೆಳಗೆ ಬಿದ್ದಿರುವುದು ಬೆಳಕಿಗೆ ಬಂದಿತು. ತಕ್ಷಣ ಮಸೀದಿಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ:ದಿನಕ್ಕೆ 8 ಬಾರಿ ಊಟ ಮಾಡುತ್ತಿದ್ದರಂತೆ ನಟ ಪ್ರಭಾಸ್‌ : ಯಾಕೆ ಗೊತ್ತೇ…?

ಮಧ್ಯಾಹ್ನದ ವೇಳಗೆ ಕಾರು ಹೊಳೆಗೆ ಬಿದ್ದಿರುವ ಬಗ್ಗೆ ಅಂತೆ ಕಂತೆಗಳ ಸುದ್ದಿ ಎಲ್ಲೆಲ್ಲೋ ಹರಿದಾಡುತ್ತಿತ್ತು. ಕಾರು ಹೇಗೆ ಬಿದ್ದಿದೆ ಹಾಗೂ ಎಷ್ಟು ಹೊತ್ತಿಗೆ ಬಿದ್ದಿಗೆ ಎನ್ನುವ ವಿಚಾರ ಸ್ಪಷ್ಟಪಡಿಸಲು ಮತ್ತೆ ಸಿಸಿ ಕ್ಯಾಮರಾ ಮೊರೆ ಹೋಗಿ ನಾಪತ್ತೆಯಾಗಿರುವ ಇಬ್ಬರು ಧನುಷ್‌ಗಳ  ಪೈಕಿ ಒಬ್ಬ ಧನುಷ್ ಕಾರು ಹೊಳೆಗೆ ಬೀಳುವ ಮುಂಚೆಯೇ ಕರೆ ಮಾಡಿರುವುದನ್ನು ಖಚಿತಪಡಿಸಿಕೊಂಡರು.

ಟಾಪ್ ನ್ಯೂಸ್

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

8-kukke

Subrahmanya: ಮುಜರಾಯಿ ಸಚಿವರ ನೇತೃತ್ವದಲ್ಲಿ ಕುಕ್ಕೆ ದೇಗುಲದ ಅಭಿವೃದ್ಧಿ ಸಭೆ

3(1

Sullia: ಜಳಕದಹೊಳೆ ಸೇತುವೆ; ಸಂಚಾರ ನಿಷೇಧ

2(1

Uppinangady: ಕಾಂಕ್ರೀಟ್‌ ರಸ್ತೆಯೇ ಕಿತ್ತೋಗಿದೆ

1

Bantwal: ಕೃಷಿಕರ ತೋಟಗಳಿಗೆ ನುಗ್ಗಿದ ಜಕ್ರಿಬೆಟ್ಟು ಅಣೆಕಟ್ಟು ನೀರು!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.