Bajila-ಬೈಪಾಡಿ-ಪುತ್ತಿಲ ಮಾರ್ಗ; ಹದಗೆಟ್ಟ ಕೂಡು ರಸ್ತೆ, ಗುಂಡಿ


Team Udayavani, Oct 27, 2024, 4:10 PM IST

4

ಮಡಂತ್ಯಾರು: ಕೊಯ್ಯೂರು ಗ್ರಾಮದ ಬಜಿಲ-ಬಂದಾರು ಗ್ರಾಮದ ಬೈಪಾಡಿ-ಪುತ್ತಿಲ ಕೂಡು ರಸ್ತೆಯ ಮೂಲಕ ಕೊಯ್ಯೂರು, ಬೆಳ್ತಂಗಡಿ ತಲುಪುವ ಅರ್ಧ ಕಿ.ಮೀ. ರಸ್ತೆಯಲ್ಲಿರುವ ಡಾಮರು ಸಂಪೂರ್ಣವಾಗಿ ಎದ್ದು ಹೋಗಿದ್ದು, ವಾಹನ ಸವಾರರು ಹೊಂಡ-ಗುಂಡಿಗಳನ್ನು ತಪ್ಪಿಸಿ ಪ್ರಯಾಣಿಸುವುದರಲ್ಲಿ ಹೈರಾಣರಾಗಿದ್ದಾರೆ.

ಈ ಮಾರ್ಗದಲ್ಲೇ ಪುರಾತನ ಕಾಲದ ದೇವಸ್ಥಾನವಿದ್ದು ನೂರಾರು ಭಕ್ತರು ಇದೇ ರಸ್ತೆಯಲ್ಲಿ ಸಂಚರಿಸುತ್ತಾರೆ. ಈ ರಸ್ತೆಯಲ್ಲಿ ಬರುವಾಗ ಹೊಂಡ, ಗುಂಡಿಗಳನ್ನು ತಪ್ಪಿಸಿಕೊಂಡು ಮುಂದುವರೆದಾಗ 2 ಕಿ.ಮೀ.ಪ್ರಯಾಣ ಮಾಡಿದ ಕಷ್ಟದ ಅನುಭವ ಆಗುತ್ತದೆ ಎಂದು ಅವರು ಹೇಳುತ್ತಾರೆ.

ಈ ಮಾರ್ಗವು ಕೊಯ್ಯೂರು- ಬಂದಾರು ಪಂಚಾಯತ್‌ಗಳ ಸಂಪರ್ಕ ಕಲ್ಪಿಸುತ್ತದೆ. 2 ಗ್ರಾಮದ ಪಂಚಾಯತ್‌ ವ್ಯಾಪ್ತಿ ಯಲ್ಲಿ ಸುಮಾರು 300ಕ್ಕೂ ಹೆಚ್ಚು ಕೃಷಿಕರ ಮನೆಗಳು ಇವೆ. ಜತೆಗೆ ಕೊಯ್ಯೂರು-ಉಜಿರೆಗೆ ಹೋಗುವ ಸರಕಾರಿ ಬಸ್‌ ಸಂಚಾರವು ಇಲ್ಲಿ ಇದೆ. ರಸ್ತೆಯಲ್ಲಿನ ಹೊಂಡದಿಂದ ಈ ಭಾಗದ ಗ್ರಾಮಸ್ಥರು, ಶಾಲಾ ವಿದ್ಯಾರ್ಥಿಗಳು, ಹೈನುಗಾರಿಕೆ ಕೃಷಿಕರು, ನೂರಾರು ವಾಹನಗಳು, ಸಾವಿರಾರು ಜನರಿಗೆ ಸಮಸ್ಯೆಯಾಗಿದೆ.

ಹೈನುಗಾರಿಕರು ಹಾಗೂ ಕೃಷಿಕರು ತಮ್ಮ ದ್ವಿಚಕ್ರ ವಾಹನದಲ್ಲಿ ತರಕಾರಿ, ಹಾಲು ಸಾಗಾಟ ಮಾಡುವ ಸಂದರ್ಭ ರಸ್ತೆಯಲ್ಲಿ ಚೆಲ್ಲಿ ಹಾಲಿನ ಅಭಿಷೇಕವಾದ ಘಟನೆಗಳ ಬಗ್ಗೆ ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರಸ್ತೆಯ ಗುಂಡಿ ಮುಚ್ಚಲು ಸಂಬಂಧಿಸಿದ ಇಲಾಖೆ ಗ್ರಾ.ಪಂ. ಹಾಗೂ ಜನಪ್ರತಿನಿಧಿಗಳಿಗೆ ಈಗಾಗಲೇ ಮನವಿ ಮಾಡಿದರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸ್ಥಳೀಯರು ಅಸಮಾ ಧಾನ ವ್ಯಕ್ತ ಪಡಿಸಿದ್ದಾರೆ.

ರಸ್ತೆಯಲ್ಲೇ ನೀರು; ಸಂಚಾರಕ್ಕೆ ಅಡ್ಡಿ
ಅಂದಾಜು ಅರ್ಧ ಕಿ.ಮೀ. ರಸ್ತೆ ಹದಗೆಟ್ಟು, ಸರಿಯಾದ ಚರಂಡಿ ವ್ಯವಸ್ಥೆ ಇಲ್ಲದೆ ಮಳೆ ನೀರು ರಸ್ತೆಯ ಮೂಲಕ ಶೇಖರಣೆಯಾಗಿ ಹೆಚ್ಚಿನ ನೀರು ರಸ್ತೆಯ ಇಕ್ಕೆಲಗಳಲ್ಲಿ ಹಾದು ಹೋಗುತ್ತದೆ. ಈ ಭಾಗದ ಗ್ರಾಮಸ್ಥರು, ಶಾಲಾ ಮಕ್ಕಳು ಕೆಸರು ನೀರಿನಲ್ಲೇ ನಿತ್ಯ ಓಡಾಡುವಾಗ ಅಗುವ ತೊಂದರೆಗಳನ್ನು ತಪ್ಪಿಸಿಕೊಂಡು ಹೋಗುವುದಕ್ಕೆ ಕಷ್ಟ. ದೊಡ್ಡ ಗಾತ್ರದ ಗುಂಡಿಗಳಲ್ಲಿ ನೀರು ತುಂಬಿರುವುದರಿಂದ ವಾಹನ ಸವಾರರಿಗೆ ಅರಿವಿಗೆ ಬಾರದೆ ಹೊಂಡಕ್ಕೆ ಬೀಳುವುದರಿಂದ ತೊಂದರೆ ಆಗುತ್ತಿದೆ.

ಟಾಪ್ ನ್ಯೂಸ್

BJP-Team

Waqf Property: ವಕ್ಫ್ ವಿವಾದ: ವಿಜಯಪುರ ರೈತರ ಅಹವಾಲು ಆಲಿಸಲು ಬಿಜೆಪಿಯಿಂದ ತಂಡ ರಚನೆ

15

Movie: 45 ಕೋಟಿ ಬಜೆಟ್‌, 60 ಸಾವಿರ ಗಳಿಕೆ; ಇದು ಭಾರತದ ಬಿಗೆಸ್ಟ್ ಫ್ಲಾಪ್ ಸಿನಿಮಾ

1-a-PK

Pakistan; ನಾಯಕತ್ವ ತೊರೆದ ಬಾಬರ್ ಅಜಂ: ವೈಟ್ ಬಾಲ್ ಕಪ್ತಾನನಾಗಿ ರಿಜ್ವಾನ್

Sharanagowda-Kandakura

JDS: ದೇವೇಗೌಡರ ಕುಟುಂಬ ಬಲಿ ಪಡೆಯೋದಾದ್ರೆ ಶಿವರಾಮೇಗೌಡ್ರು ಸಂಸದರಾಗ್ತಿದ್ರಾ?: ಕಂದಕೂರ

1-mp-lungi

Video Viral; ಲುಂಗಿಯಲ್ಲಿ ಡ್ಯೂಟಿ ಮಾಡಿದ ಎಸ್ ಐ!: ಮಹಿಳೆಯೊಂದಿಗೆ ಅಸಭ್ಯ ವರ್ತನೆ

BBK11: ಶಾಕಿಂಗ್.! ಫಿನಾಲೆವರೆಗೂ ಬರ್ತಾರೆ ಅನ್ಕೊಂಡಿದ್ದ‌ ಆ ಸ್ಪರ್ಧಿ ಇವತ್ತೇ ಮನೆಯಿಂದ ಔಟ್?

BBK11: ಶಾಕಿಂಗ್.! ಫಿನಾಲೆವರೆಗೂ ಬರ್ತಾರೆ ಅನ್ಕೊಂಡಿದ್ದ‌ ಆ ಸ್ಪರ್ಧಿ ಇವತ್ತೇ ಮನೆಯಿಂದ ಔಟ್?

MB Patil 2

Waqf; ವಿಜಯಪುರದಲ್ಲಿ ಗೆಜೆಟ್ ದೋಷದಿಂದ ರೈತರ ಜಮೀನಿನಲ್ಲಿ ಗೊಂದಲ: ಎಂ.ಬಿ.ಪಾಟೀಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3

Subramanya: ಪ್ರಗತಿಯಲ್ಲಿ ಪ್ಲಾಟ್‌ಫಾರ್ಮ್ ಶೆಲ್ಟರ್‌ ಕಾಮಗಾರಿ

1(1)

Puttur: ನೆಲ್ಯಾಡಿ-ಪೆರಿಯಶಾಂತಿ; ತಿರುಗಿ ತಿರುಗಿ ಸುಸ್ತು!

RAGHAVAN

Sulya: ಪೊಲೀಸರಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದ ಆರೋಪಿ ಬಂಧನ

1-VHP

VHP ಆವರಣದ ಸಂಘರ್ಷ: ಸಮಸ್ಯೆ ಇತ್ಯರ್ಥಕ್ಕೆ ಹಿರಿಯರ ನೇತೃತ್ವಕ್ಕೆ ಸಂಘದ ಮುಖಂಡರ ಸೂಚನೆ?

Kalladka: ಹೊಟೇಲ್‌ಗೆ ನುಗ್ಗಿದ ಕಳ್ಳ: ವೀಡಿಯೋ ವೈರಲ್‌

Kalladka: ಹೊಟೇಲ್‌ಗೆ ನುಗ್ಗಿದ ಕಳ್ಳ: ವೀಡಿಯೋ ವೈರಲ್‌

MUST WATCH

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

ಹೊಸ ಸೇರ್ಪಡೆ

14

Dandeli:ಮನೆಯಿಂದ ಹೊರ ಹಾಕಲ್ಪಟ್ಟ ವೃದ್ಧ; ಆಶ್ರಯ ನೀಡಲು ಮುಂದಾದ ಚಿನ್ನಯ್ಯ ಆಶೀರ್ವಾದಂ ಗಜ್ಜ

BJP-Team

Waqf Property: ವಕ್ಫ್ ವಿವಾದ: ವಿಜಯಪುರ ರೈತರ ಅಹವಾಲು ಆಲಿಸಲು ಬಿಜೆಪಿಯಿಂದ ತಂಡ ರಚನೆ

puttige-4

Udupi; ಗೀತಾರ್ಥ ಚಿಂತನೆ-76: ಕುಲಕ್ಷಯ=ಕುಲಸಂಸ್ಕೃತಿಯ ಕ್ಷಯ

15

Movie: 45 ಕೋಟಿ ಬಜೆಟ್‌, 60 ಸಾವಿರ ಗಳಿಕೆ; ಇದು ಭಾರತದ ಬಿಗೆಸ್ಟ್ ಫ್ಲಾಪ್ ಸಿನಿಮಾ

1-a-PK

Pakistan; ನಾಯಕತ್ವ ತೊರೆದ ಬಾಬರ್ ಅಜಂ: ವೈಟ್ ಬಾಲ್ ಕಪ್ತಾನನಾಗಿ ರಿಜ್ವಾನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.