Bantwal: ಮೊಡಂಕಾಪು ಕಾರ್ಮೆಲ್‌ ಪ್ರೌಢಶಾಲೆಯಲ್ಲಿ ಜಲಜಾಗೃತಿಗಾಗಿ ವಿಶಿಷ್ಟ ಸ್ಪರ್ಧೆ

76 ವಿದ್ಯಾರ್ಥಿಗಳಿಂದ 162 ಇಂಗು ಗುಂಡಿ

Team Udayavani, Sep 15, 2024, 12:55 PM IST

Bantwal: ಮೊಡಂಕಾಪು ಕಾರ್ಮೆಲ್‌ ಪ್ರೌಢಶಾಲೆಯಲ್ಲಿ ಜಲಜಾಗೃತಿಗಾಗಿ ವಿಶಿಷ್ಟ ಸ್ಪರ್ಧೆ
ಬಂಟ್ವಾಳ: ನೀರಿನ ಅಭಾವವನ್ನು ನೀಗಿಸುವುದಕ್ಕೆ ಮಳೆಗಾಲದಲ್ಲಿ ಹರಿದು ಹೋಗುವ ನೀರನ್ನು ಇಂಗಿಸಿ ಅಂತರ್ಜಲ ವೃದ್ಧಿಸುವುದೇ ಪರಿಹಾರ ಎಂಬ ಆಲೋಚನೆಯೊಂದಿಗೆ ಮೊಡಂಕಾಪು ಕಾರ್ಮೆಲ್‌ ಪ್ರೌಢಶಾಲೆಯ ವಿದ್ಯಾರ್ಥಿಗಳು ತಾವೇ ಮನೆಗಳಲ್ಲಿ ಇಂಗು ಗುಂಡಿಗಳನ್ನು ನಿರ್ಮಿಸುತ್ತಿದ್ದಾರೆ. ಈ ಸಾಲಿನಲ್ಲಿ ಶಾಲೆಯ 76 ವಿದ್ಯಾರ್ಥಿಗಳು 162 ಇಂಗು ಗುಂಡಿಗಳು ನಿರ್ಮಿಸಿದ್ದು, ಗುಂಡಿಗಳು ಒಟ್ಟು 54,971 ಲೀ. ನೀರು ಇಂಗಿಸುವ ಸಾಮರ್ಥ್ಯ ಹೊಂದಿದೆ.
ಹಸಿರು ಭವಿಷ್ಯ ಪರಿಸರ ಸಂಘ
ಶಾಲೆಯ ಹಸಿರು ಭವಿಷ್ಯ ಪರಿಸರ ಸಂಘದ ವತಿಯಿಂದ ಮಳೆ ನೀರನ್ನು ಇಂಗಿಸೋಣ, ಜೀವನ ಹಸನುಗೊಳಿಸೋಣ ಎಂಬ ಧ್ಯೇಯದಡಿ ವಿದ್ಯಾರ್ಥಿಗಳಿಗೆ ಜುಲೈ ಹಾಗೂ ಆಗಸ್ಟ್‌ ತಿಂಗಳಲ್ಲಿ ಇಂಗು ಗುಂಡಿ ನಿರ್ಮಿಸುವ ಸ್ಪರ್ಧೆಯನ್ನು ಆಯೋಜಿಸಲಾಗಿದ್ದು, ವಿದ್ಯಾರ್ಥಿಗಳು ಹೆತ್ತವರು, ನೆರೆಕರೆಯವರ ಸಹಾಯ ಪಡೆದು ಮನೆಯ ಸುತ್ತಮುತ್ತ ಗುಡ್ಡ ಹಾಗೂ ಅರಣ್ಯ ಪ್ರದೇಶಗಳಲ್ಲಿ ಇಂಗು ಗುಂಡಿಗಳನ್ನು ನಿರ್ಮಿಸಿ ಮಾರ್ಗದರ್ಶಿ ಶಿಕ್ಷಕರಿಗೆ ಅದರ ಫೋಟೋಗಳನ್ನು ಕಳುಹಿಸಿದ್ದಾರೆ. ವಿಜ್ಞಾನ ಪಾಠದ ಒಂದು ಕಾರ್ಯ ಯೋಜನೆಯಾಗಿ ಈ ಸ್ಪರ್ಧೆಯಲ್ಲಿ ಭಾಗವಹಿಸಲಾಗುತ್ತಿದೆ.
ಇಂಗು ಗುಂಡಿ ನಿರ್ಮಿಸಿದ ಎಲ್ಲವಿದ್ಯಾರ್ಥಿ ಗಳಿಗೆ ಬಹುಮಾನ ನೀಡುವುದರ ಜತೆಗೆ ಅತ್ಯಧಿಕ ಗುಂಡಿಗಳನ್ನು ನಿರ್ಮಿಸಿದ ವಿದ್ಯಾರ್ಥಿಗಳಾದ ಮಿಶಲ್‌ ಲೋಬೊ, ಜೀವನ್‌, ರಿಯೋನ ಪಿಂಟೊ, ರೋಯ್ಸನ್‌ ಲೋಬೊ, ರಶ್ವಿ‌ತ ಅವರಿಗೆ ಮುಖ್ಯಶಿಕ್ಷಕಿ ಸಿ| ನವೀನ ಅವರು ಬಹುಮಾನ ನೀಡಿ ಗೌರವಿಸಿದರು. ಮಿಶಲ್‌ ಲೋಬೋ ಅವರು 40 ಇಂಗು ಗುಂಡಿಗಳನ್ನು ನಿರ್ಮಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಈ ಜಲ ಜಾಗೃತಿಯಲ್ಲಿ ವಿದ್ಯಾರ್ಥಿಗಳು ಕಳೆದ 5 ವರ್ಷಗಳಿಂದ ವಿಜ್ಞಾನ ಶಿಕ್ಷಕ ರೋಷನ್‌ ಪಿಂಟೊ ಅವರ ಮಾರ್ಗದರ್ಶನದಲ್ಲಿ ಒಟ್ಟು 631 ಇಂಗು ಗುಂಡಿಗಳನ್ನು ನಿರ್ಮಿಸಿದ್ದಾರೆ.
631 ಇಂಗು ಗುಂಡಿಗಳ ನಿರ್ಮಾಣ
5 ವರ್ಷಗಳಿಂದ ವಿಜ್ಞಾನ ಶಿಕ್ಷಕ ರೋಷನ್‌ ಪಿಂಟೊ ಅವರ ಮಾರ್ಗದರ್ಶನದಲ್ಲಿ ಒಟ್ಟು 631 ಇಂಗು ಗುಂಡಿಗಳ ನಿರ್ಮಾಣ ಮಾಡಲಾಗಿದೆ. ಮಿಶಲ್‌ ಲೋಬೋ ಅವರು ಗರಿಷ್ಠ 40 ಇಂಗು ಗುಂಡಿ ನಿರ್ಮಿಸಿದ್ದಾರೆ.
ನೀರು ಪವಿತ್ರ, ನೈಸರ್ಗಿಕ ಮತ್ತು ಸುಲಭವಾಗಿ ಲಭ್ಯವಿರುವ ಸಂಪನ್ಮೂಲವಾಗಿದ್ದು, ನೀರಿನ ಕುರಿತು ಮಾತನಾಡುವುದಕ್ಕಿಂತ ಕೃತಿಯಲ್ಲಿ ಮಾಡಿ ತೋರಿಸುವುದು ಬಹಳ ಮುಖ್ಯ. ನೀರಿಗಾಗಿ ನಾವು ಏನು ಮಾಡಿದ್ದೇವೆ ಅನ್ನೋದು ಬಹಳ ಅಗತ್ಯವಾಗಿದೆ. ನೀರಿನ ರಕ್ಷಣೆಯ ಕುರಿತು ಹೆಜ್ಜೆ ಹಾಕಿದಾಗ ಮಾತ್ರ ನೀರು ಉಳಿಸಲು ಸಾಧ್ಯ. ಈ ನಿಟ್ಟಿನಲ್ಲಿ ನಮ್ಮ ಶಾಲೆಯ ವಿದ್ಯಾರ್ಥಿನಿಯರು ಪ್ರತೀ ವರ್ಷ ಇಂಗುಗುಂಡಿಗಳನ್ನು ನಿರ್ಮಿಸಿ ಸಮಾಜಕ್ಕೆ ಮಾದರಿಯಾಗುತ್ತಿದ್ದು, ಶಾಲಾ ಮುಖ್ಯಶಿಕ್ಷಕಿ ಸಿ| ನವೀನಾ ಹಾಗೂ ಎಲ್ಲ ಶಿಕ್ಷಕರು ಉತ್ತಮ ರೀತಿಯಲ್ಲಿ ಸಹಕರಿಸುತ್ತಿದ್ದಾರೆ. – ರೋಷನ್‌ ಪಿಂಟೋ, ಮಾರ್ಗದರ್ಶಿ ಶಿಕ್ಷಕರು

ಟಾಪ್ ನ್ಯೂಸ್

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

Ramalinga Reddy: “ಸಾರಿಗೆ ಸಿಬಂದಿ ವೇತನ ಪರಿಷ್ಕರಣೆಗೆ ಚರ್ಚೆ

Ramalinga Reddy: “ಸಾರಿಗೆ ಸಿಬಂದಿ ವೇತನ ಪರಿಷ್ಕರಣೆಗೆ ಚರ್ಚೆ

Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್‌: ಅಶ್ವಿ‌ನಿ ವೈಷ್ಣವ್‌

Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್‌: ಅಶ್ವಿ‌ನಿ ವೈಷ್ಣವ್‌

sidda

‘One Nation One Election’ ಪ್ರಸ್ತಾವ: ಒಕ್ಕೂಟ ವ್ಯವಸ್ಥೆಗೆ ವಿರುದ್ಧ: ಸಿಎಂ

cmCM Siddaramaiah ಮೈಸೂರಲ್ಲಿ ಚಿತ್ರನಗರಿ: 110 ಎಕರೆ ಹಸ್ತಾಂತರ

CM Siddaramaiah ಮೈಸೂರಲ್ಲಿ ಚಿತ್ರನಗರಿ: 110 ಎಕರೆ ಹಸ್ತಾಂತರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Subramanya ಚಿನ್ನಾಭರಣ ಕಳವು; ಪ್ರಕರಣ ದಾಖಲು

Subramanya ಚಿನ್ನಾಭರಣ ಕಳವು; ಪ್ರಕರಣ ದಾಖಲು

kalla

Vittalpadanur: 36 ಗ್ರಾಂ ಚಿನ್ನಾಭರಣ ಕಳವು; ಪ್ರಕರಣ ದಾಖಲು

Puttur: ಎಪಿಎಂಸಿ ರೈಲ್ವೇ ಸಂಪರ್ಕ ರಸ್ತೆಗೆ ಭೂ ಸ್ವಾಧೀನವೇ ಸವಾಲು

Puttur: ಎಪಿಎಂಸಿ ರೈಲ್ವೇ ಸಂಪರ್ಕ ರಸ್ತೆಗೆ ಭೂ ಸ್ವಾಧೀನವೇ ಸವಾಲು

Aranthodu: ದೊಡ್ಡೇರಿ ಶಾಲೆ ಮಕ್ಕಳಿಗೆ ಅಕ್ಷರ ದಾಸೋಹ ಕಟ್ಟಡದ ಜಗಲಿಯೇ ಕ್ಲಾಸ್‌ರೂಮ್‌!

Aranthodu: ದೊಡ್ಡೇರಿ ಶಾಲೆ ಮಕ್ಕಳಿಗೆ ಅಕ್ಷರ ದಾಸೋಹ ಕಟ್ಟಡದ ಜಗಲಿಯೇ ಕ್ಲಾಸ್‌ರೂಮ್‌!

1-bantwala-1

Bantwala: ಮಸೀದಿಗೆ ತೆರಳಿದ್ದ ವೇಳೆ ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

Ramalinga Reddy: “ಸಾರಿಗೆ ಸಿಬಂದಿ ವೇತನ ಪರಿಷ್ಕರಣೆಗೆ ಚರ್ಚೆ

Ramalinga Reddy: “ಸಾರಿಗೆ ಸಿಬಂದಿ ವೇತನ ಪರಿಷ್ಕರಣೆಗೆ ಚರ್ಚೆ

Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್‌: ಅಶ್ವಿ‌ನಿ ವೈಷ್ಣವ್‌

Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್‌: ಅಶ್ವಿ‌ನಿ ವೈಷ್ಣವ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.