Bantwal: ಗ್ಯಾಸ್ ಸಿಲಿಂಡರ್ ಕಳವು ಪ್ರಕರಣ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Team Udayavani, Sep 4, 2024, 6:20 AM IST
ಬಂಟ್ವಾಳ: ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗ್ಯಾಸ್ ಸಿಲಿಂರ್ಡ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಿಂದ ಶಿಕ್ಷೆಗೊಳಪಟ್ಟು ಬಳಿಕ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಕೋಟೆರ್ಕಾ ನಿವಾಸಿ ಶರೀಫ್ ಸಿ.ಅಬ್ಟಾಸ್ ಬಂಧಿತ ಆರೋಪಿಯಾಗಿದ್ದು, ಆತನನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರು ಪಡಿಸಿದಾಗ ನ್ಯಾಯಾಲಯ 1 ವರ್ಷ ಜೈಲು ಶಿಕ್ಷೆ ಹಾಗೂ 5 ಸಾವಿರ ರೂ. ದಂಡ ವಿಧಿಸಿ ಆದೇಶ ನೀಡಿದೆ.
ಆರೋಪಿಯು ಸುಮಾರು 22 ವರ್ಷಗಳ ಹಿಂದೆ ಬಿ.ಸಿ.ರೋಡಿನ ಗ್ಯಾಸ್ ಏಜನ್ಸಿಯೊಂದರಿಂದ ಗ್ಯಾಸ್ ಸಿಲಿಂರ್ಡ ಗಳನ್ನು ಕಳವು ಮಾಡಿದ ಪ್ರಕರಣದಲ್ಲಿ ಭಾಗಿಯಾಗಿ ಆತನಿಗೆ ಶಿಕ್ಷೆ ವಿಧಿಸಲಾಗಿತ್ತು. ಬಳಿಕ ಆರೋಪಿಯು ಕಳೆದ 14 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದನು.
ಆತನ ಕುರಿತು ಖಚಿತ ಮಾಹಿತಿ ಪಡೆದ ಪೊಲೀಸರು ಮಂಗಳೂರಿನ ಬೈಕಂಪಾಡಿಯಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ. ಬಂಟ್ವಾಳ ನಗರ ಠಾಣಾ ಪೊಲೀಸ್ ಇನ್ಸ್ಪೆಕ್ಟರ್ ತಪದ್ಮನಾಭ ಅವರ ಮಾರ್ಗದರ್ಶನದಲ್ಲಿ ಪಿಎಸ್ಐ ರಾಮಕೃಷ್ಣ ಅವರ ನೇತೃತ್ವದಲ್ಲಿ ಸಿಬಂದಿ ಗಣೇಶ, ರಾಜೇಶ್ ಹಾಗೂ ಇರ್ಷಾದ್ ಅವರು ಬಂಧಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Viral Disease: ಕೇರಳದಲ್ಲಿ ಎಂ ಫಾಕ್ಸ್ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್
Mangaluru: ಕದ್ರಿ ಪಾರ್ಕ್ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ
Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್ ಅಧಿಕಾರಿ: ಪುಷ್ಪಾ ಅಮರನಾಥ್
Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ
ISPRL Programme: ಪಾದೂರು ಜಲ್ಲಿ ಕ್ರಷರ್: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.