Bantwal: ಕಲ್ಲಡ್ಕದಲ್ಲಿ ಸರ್ವೀಸ್‌ ರಸ್ತೆಗೆ ಡಾಮರು

ಮಳೆಗಾಲದಲ್ಲಿ ಅನುಭವಿಸಿದ ಕಷ್ಟಕ್ಕೆ ಸದ್ಯ ಮುಕ್ತಿ; ಕೆಎನ್‌ಆರ್‌ ಕನ್‌ಸ್ಟ್ರಕ್ಷನ್ಸ್‌ ಕಾಮಗಾರಿ

Team Udayavani, Nov 12, 2024, 12:36 PM IST

2

ಬಂಟ್ವಾಳ: ಹೆದ್ದಾರಿ ಕಾಮಗಾರಿ ಅವ್ಯವಸ್ಥೆಯಿಂದ ಹಲವು ರೀತಿಯ ಟ್ರೋಲ್‌ ಜತೆಗೆ ಟೀಕೆಗೆ ಗುರಿಯಾಗಿದ್ದ ಕಲ್ಲಡ್ಕದಲ್ಲಿ ಇದೀಗ ಸರ್ವೀಸ್‌ ರಸ್ತೆಗೆ ಡಾಮರು ಹಾಕುವ ಕಾರ್ಯ ಆರಂಭಗೊಂಡಿದೆ. ಮಳೆ ದೂರವಾದ ಹಿನ್ನೆಲೆಯಲ್ಲಿ ಕಲ್ಲಡ್ಕದ ಪೂರ್ಲಿಪ್ಪಾಡಿ ಭಾಗದಿಂದ ಒಂದು ಬದಿಯಲ್ಲಿ ಡಾಮರು ಹಾಕಲಾಗುತ್ತಿದೆ.

ಕಳೆದ 2-3 ವರ್ಷಗಳಿಂದ ಹೆದ್ದಾರಿ ಪ್ರಯಾಣಿಕರು ಸಾಕಷ್ಟು ತೊಂದರೆ ಅನುಭವಿಸಿದ್ದು, ಈ ಬಾರಿಯ ಮಳೆಗಾಲದಲ್ಲಿ ಕಲ್ಲಡ್ಕ ಪೇಟೆಯನ್ನು ಎಲ್ಲ ರೀತಿಯಿಂದಲೂ ಹಿಂಡಿ ಹಿಪ್ಪೆ ಮಾಡಲಾಗಿತ್ತು. ಮಳೆ ಬಂದರೆ ಕೆಸರು, ಬಿಸಿಲಾದರೆ ಧೂಳು ಎಂಬ ಸ್ಥಿತಿ ಇತ್ತು. ಹೆದ್ದಾರಿ ತುಂಬಾ ಕೆಸರು ತುಂಬಿ ನಡೆದಾಡುವುದು ಕಷ್ಟವಾಗಿರುವ ಜತೆಗೆ ಹೊಂಡಗಳು ಸೃಷ್ಟಿಯಾಗಿ ವಾಹನ ಸಾಗುವುದು ತೀರಾ ತ್ರಾಸದಾಯಕವಾಗಿತ್ತು. ಚರಂಡಿಗಳನ್ನು ಅಗೆದು ಮಣ್ಣು ತುಂಬಿರುವುದರಿಂದ ಮಳೆ ನೀರು ಬಂದರೆ ಕೃತಕ ನೆರೆ ಸೃಷ್ಟಿಯಾಗುತ್ತಿದೆ. ಹೀಗೆ ಎಲ್ಲ ರೀತಿಯಿಂದಲೂ ಬರೀ ಸಮಸ್ಯೆಗಳೇ ತುಂಬಿದ್ದವು.

ಪ್ರಸ್ತುತ ಸರ್ವೀಸ್‌ ರಸ್ತೆಗೆ ಡಾಮರು ಕಾಮಗಾರಿ ಆರಂಭಗೊಂಡಿರುವುದರಿಂದ ಕಲ್ಲಡ್ಕದ ನಾಗರಿಕರ ಜತೆಗೆ ಹೆದ್ದಾರಿ ಪ್ರಯಾಣಿಕರು ಕೊಂಚ ನೆಮ್ಮದಿ ಆಗಿದ್ದು, ಪೇಟೆಯಲ್ಲಿ ಸಾಗಿರುವ ಎರಡೂ ಬದಿಯ ಪೂರ್ತಿ ಸರ್ವೀಸ್‌ ರಸ್ತೆಗೆ ಡಾಮರು ಹಾಕುತ್ತಾರೋ ಅಥವಾ ಹಿಂದೆ ಮಾಡಿದ ರೀತಿ ಅರ್ಧಂಬರ್ಧ ಕಾಮಗಾರಿ ಮಾಡಿ ಮುಗಿಸುತ್ತಾರೋ ಎಂಬುದನ್ನು ಕಾದು ನೋಡಬೇಕಿದೆ.

ಹಿಂದೆ ಸರ್ವೀಸ್‌ ರಸ್ತೆಗೆ ಹಾಕಿದ್ದ ಡಾಮರು ಸ್ವಲ್ಪ ಸಮಯದಲ್ಲೇ ಕಿತ್ತು, ಮತ್ತೆ ಹೊಂಡಗಳು ಕಾಣಿಸಿಕೊಂಡಿದ್ದವು. ಹೀಗಾಗಿ ಈ ಬಾರಿಯೂ ಅದೇ ಸ್ಥಿತಿ ಇರುತ್ತದೆಯೇ ಎಂಬ ಆತಂಕವೂ ಜನತೆಯಲ್ಲಿದೆ. ಒಟ್ಟಿನಲ್ಲಿ ಪ್ರಸ್ತುತ ನಡೆಯುತ್ತಿರುವ ಕಾಮಗಾರಿಯನ್ನು ನೋಡುವಾಗ ಉತ್ತಮ ರೀತಿಯಲ್ಲಿ ಕಾಣುತ್ತಿದ್ದು, ಅವುಗಳ ಗುಣಮಟ್ಟ ಹೇಗಿರುತ್ತದೆ ಎಂಬುದನ್ನು ಈಗಲೇ ಹೇಳುವಂತಿಲ್ಲ. ಒಟ್ಟಿನಲ್ಲಿ ಗುತ್ತಿಗೆ ಸಂಸ್ಥೆಯಾದ ಕೆಎನ್‌ಆರ್‌ ಕನ್‌ಸ್ಟ್ರಕ್ಷನ್ಸ್‌ ಮಳೆ ದೂರವಾದ ತತ್‌ಕ್ಷಣ ಡಾಮರು ಹಾಕುವುದಾಗಿ ನೀಡಿದ ಭರವಸೆಯಂತೆ ಕಾಮಗಾರಿ ಆರಂಭಿಸಿರುವುದು ಸಮಾಧಾನದ ವಿಚಾರವಾಗಿದೆ.

ಉದಯವಾಣಿ ಅಭಿಯಾನ ನಡೆಸಿತ್ತು
ಬಿ.ಸಿ.ರೋಡು-ಅಡ್ಡಹೊಳೆ ಚತುಷ್ಪಥ ಹೆದ್ದಾರಿ ಅಭಿವೃದ್ಧಿ ಕಾಮಗಾರಿಯಿಂದ ಜನತೆಗೆ ಆಗಿರುವ ತೊಂದರೆಗಳ ಕುರಿತು ಉದಯವಾಣಿ ಸುದಿನದಲ್ಲಿ ಅ. 19ರಿಂದ 30ರ ವರೆಗೆ ರಾ.ಹೆದ್ದಾರಿ ಕಾಮಗಾರಿ; ಯಾವಾಗ ಮುಗಿಸ್ತೀರಿ ಅಭಿಯಾನವನ್ನು ನಡೆಸಿ ಸಮಸ್ಯೆಗಳ ಇಂಚಿಂಚು ಬೆಳಕು ಚೆಲ್ಲಲಾಗಿತ್ತು. ಜತೆಗೆ ದ.ಕ.ಸಂಸದರು, ಬಂಟ್ವಾಳ, ಪುತ್ತೂರು, ಸುಳ್ಯ ಶಾಸಕರ ಜತೆಗೆ ಮಾತನಾಡಿ ಕಾಮಗಾರಿಗೆ ವೇಗ ನೀಡುವ ಕುರಿತು ಅಭಿಪ್ರಾಯ ಪಡೆಯಲಾಗಿತ್ತು. ಕೆಎನ್‌ಆರ್‌ ಕನ್‌ಸ್ಟ್ರಕ್ಷನ್ಸ್‌ನವರು ಸ್ವತಃ ಉದಯವಾಣಿಯನ್ನು ಸಂಪರ್ಕಿಸಿ ಕಾಮಗಾರಿ ಪೂರ್ಣಗೊಳ್ಳುವ ಹಂತ ಹಂತದ ಮಾಹಿತಿ ನೀಡಿದ್ದರು. ಸರಣಿಯ ಕುರಿತು ಸಾರ್ವಜನಿಕರು, ಓದುಗರು ಪ್ರಶಂಸೆಯನ್ನೂ ವ್ಯಕ್ತಪಡಿಸಿದ್ದರು. ಇದೀಗ ಸರಣಿ ವರದಿಗಳಿಗೆ ಸ್ಪಂದನೆ ಎಂಬಂತೆ ಕಲ್ಲಡ್ಕದ ಸರ್ವೀಸ್‌ ರಸ್ತೆಗಳಿಗೆ ಡಾಮರು ಹಾಕಲಾಗುತ್ತಿದೆ.

ಟಾಪ್ ನ್ಯೂಸ್

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

8-kukke

Subrahmanya: ಮುಜರಾಯಿ ಸಚಿವರ ನೇತೃತ್ವದಲ್ಲಿ ಕುಕ್ಕೆ ದೇಗುಲದ ಅಭಿವೃದ್ಧಿ ಸಭೆ

3(1

Sullia: ಜಳಕದಹೊಳೆ ಸೇತುವೆ; ಸಂಚಾರ ನಿಷೇಧ

2(1

Uppinangady: ಕಾಂಕ್ರೀಟ್‌ ರಸ್ತೆಯೇ ಕಿತ್ತೋಗಿದೆ

1

Bantwal: ಕೃಷಿಕರ ತೋಟಗಳಿಗೆ ನುಗ್ಗಿದ ಜಕ್ರಿಬೆಟ್ಟು ಅಣೆಕಟ್ಟು ನೀರು!

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.