![1-sidda](https://www.udayavani.com/wp-content/uploads/2025/02/1-sidda-415x281.jpg)
![1-sidda](https://www.udayavani.com/wp-content/uploads/2025/02/1-sidda-415x281.jpg)
Team Udayavani, Apr 11, 2024, 12:07 AM IST
ಬಂಟ್ವಾಳ: ಬಿ.ಸಿ.ರೋಡು ಸಮೀಪದ ಶಾಂತಿಯಂಗಡಿ ಭಾಗದಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವೇಳೆ ಧೂಳಿನಿಂದ ಅಪಘಾತಗಳು ನಡೆಯುತ್ತಿವೆ ಎಂದು ಸ್ಥಳೀಯರ ತಂಡವೊಂದು ಪ್ರಶ್ನಿಸಿದ ವೇಳೆ ಹೆದ್ದಾರಿ ಕಾಮಗಾರಿ ನಿರ್ವಹಿಸುವ ಕಾರ್ಮಿಕರು ತಂಡದ ಮೇಲೆ ಹಲ್ಲೆ ನಡೆಸಿ ಅವಾಚ್ಯ ಶಬ್ದಗಳಿಂದ ಬೈದು ಜೀವ ಬೆದರಿಕೆಯೊಡ್ಡಿದ ಘಟನೆ ಎ. 9ರಂದು ನಡೆದಿದೆ.
ಶಾಂತಿಯಂಗಡಿ ಭಾಗದಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವೇಳೆ ಯಾವುದೇ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳದೆ ಕಾಮಗಾರಿ ನಿರ್ವಹಿಸುತ್ತಿರುವುದರಿಂದ ಧೂಳು ಎದ್ದು ಅಪಘಾತಗಳು ಸಂಭವಿಸುತ್ತಿವೆ ಎಂದು ಸ್ಥಳೀಯರು ಪ್ರಶ್ನಿಸಿದ್ದರು. ಈ ವೇಳೆ ಕಾರ್ಮಿಕರು ಹಲ್ಲೆ ನಡೆಸಿ ಜೀವ ಬೆದರಿಕೆ ಒಡ್ಡಿದ್ದಾರೆ ಎಂದು ಅಬ್ದುಲ್ ಸಮದ್ ಪೊಲೀಸರಿಗೆ ನೀಡಿದ ದೂರಿನಲ್ಲಿ ಆರೋಪಿಸಿದ್ದಾರೆ.
You seem to have an Ad Blocker on.
To continue reading, please turn it off or whitelist Udayavani.