Bantwal: ಶ್ಮಶಾನ ಭೂಮಿಯಲ್ಲಿ 200ಕ್ಕೂ ಅಧಿಕ ಇಂಗುಗುಂಡಿ ರಚನೆ

ಚಿಗುರು ಸಂಜೀವಿನಿ ಒಕ್ಕೂಟದ ಸದಸ್ಯೆಯರಿಂದ ಸಾಧನೆ

Team Udayavani, Sep 23, 2024, 1:16 PM IST

Bantwal: ಶ್ಮಶಾನ ಭೂಮಿಯಲ್ಲಿ 200ಕ್ಕೂ ಅಧಿಕ ಇಂಗುಗುಂಡಿ ರಚನೆ

ಬಂಟ್ವಾಳ: ಹರಿದು ನದಿ ಸೇರುವ ನೀರನ್ನು ಹಿಡಿದಿಟ್ಟು ಭೂಮಿಗೆ ಇಳಿಸಿ ಅಂತರ್ಜಲ ಮಟ್ಟ ಹೆಚ್ಚಿಸಲು ಪಣತೊಟ್ಟ ಮಹಿಳೆಯರ ತಂಡವೊಂದು ಗುಡ್ಡ ಪ್ರದೇಶದಲ್ಲಿ ಬರೋಬ್ಬರಿ 200ಕ್ಕೂ ಅಧಿಕ ಇಂಗು ಗುಂಡಿಗಳನ್ನು ರಚಿಸಿ ನೀರಿಂಗಿಸುವಲ್ಲಿ ಯಶಸ್ವಿಯಾಗಿದೆ. ಇದು ಮಣ್ಣಿನ ತೇವಾಂಶ ಕಾಪಾಡುವುದಕ್ಕೂ ಸಹಕಾರಿಯಾಗಿದೆ.

ಬಂಟ್ವಾಳ ತಾಲೂಕಿನ ವಿಟ್ಲಮುಟ್ನೂರು ಗ್ರಾಪಂನ ಚಿಗುರು ಸಂಜೀವಿನಿ ಒಕ್ಕೂ ಟದ 6 ಮಂದಿ ಮಹಿಳೆಯರು ಈ ಸಾಧನೆ ಮಾಡಿದ್ದು, ಪ್ರಸ್ತುತ ಅವರ ಶ್ರಮಕ್ಕೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ. ಪಂಚಾಯತ್‌ ವ್ಯಾಪ್ತಿಯ ಕುಂಡಡ್ಕ ಕುಶಾಲನಗರದಲ್ಲಿ 1.80 ಎಕ್ರೆ ಶ್ಮಶಾನ ಮೀಸಲು ಜಾಗವಿದ್ದು, ಅದರಲ್ಲಿ 50 ಸೆಂಟ್ಸ್‌ ವ್ಯಾಪ್ತಿಯಲ್ಲಿ ಶ್ಮಶಾನವಿದೆ. ಉಳಿದ ಜಾಗದಲ್ಲಿ ಗೇರು ನೆಡುತೋಪು ಇದ್ದು, ಇದೇ ಜಾಗದಲ್ಲಿ ಪ್ರಸ್ತುತ ಇಂಗು ಗುಂಡಿಗಳನ್ನು ರಚಿಸಲಾಗಿದೆ.

ನರೇಗಾ: ಇಂಗು ಗುಂಡಿ ರಚನೆ
ಮಹಾತ್ಮಾ ಗಾಂಧೀ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ (ನರೇಗಾ) ಯೋಜನೆಯಡಿ ಇಂಗುಗುಂಡಿ ನಿರ್ಮಾ ಣಕ್ಕೆ ಗ್ರಾಪಂ ಆಡಳಿತ ಮಂಡಳಿ ನಿರ್ಧರಿ ಸಿದ್ದು, ಅದರಲ್ಲೂ ಮಹಿಳೆಯರಿಗೆ ಉದ್ಯೋಗ ಕೊಡಬೇಕು ಎಂದು ತೀರ್ಮಾ ನಿಸಿದ್ದರು. ಈ ವಿಚಾರವನ್ನು ಸಂಜೀವಿನಿ ಒಕ್ಕೂಟದ ಸದಸ್ಯೆಯರಲ್ಲಿ ತಿಳಿಸಿದಾಗ ಚಿಗುರು ಸಂಜೀವಿನಿ ಒಕ್ಕೂಟದ 6 ಮಂದಿ ಮಹಿಳೆಯರು ತಾವೇ ಇಂಗು ಗುಂಡಿಗಳನ್ನು ರಚಿಸುವುದಾಗಿ ಮುಂದೆ ಬಂದಿದ್ದರು.

ಅದರಂತೆ 6 ಅಡಿ ಉದ್ದ, 2 ಅಡಿ ಅಗಲ ಹಾಗೂ 2 ಅಡಿ ಆಳದ ಗುಂಡಿಗಳನ್ನು ಕೊರೆದಿದ್ದಾರೆ. ನರೇಗಾ ಯೋಜನೆಯಡಿ 1 ಗುಂಡಿಗೆ ಪ್ರಸ್ತುತ ಆರ್ಥಿಕ ವರ್ಷದಲ್ಲಿ 300 ರೂ. ನಿಗದಿಪಡಿಸಲಾಗಿದ್ದು, ಕಾಮಗಾರಿ ನಿರ್ವಹಿಸಿದ ಮಹಿಳೆಯರಿಗೆ ನರೇಗಾ ಯೋಜನೆಯಿಂದ ಗ್ರಾಮದಲ್ಲೇ ಉದ್ಯೋಗದ ಅವಕಾಶ ಸಿಕ್ಕಿದೆ. ಮುಂದಿನ ದಿನಗಳಲ್ಲಿ ವೈಯಕ್ತಿಕ ಕಾಮಗಾರಿ ಕೈಗೊಳ್ಳುವವರು ಪಂಚಾಯತ್‌ಗೆ ಅರ್ಜಿ ಸಲ್ಲಿಸಬಹುದಾಗಿದೆ.

ಹಲವು ಕಾಮಗಾರಿಗಳ ನಿರ್ವಹಣೆ
ಇದೇ ಒಕ್ಕೂಟದ ಸದಸ್ಯೆಯರು 2022-2023ರ ಆರ್ಥಿಕ ವರ್ಷದಲ್ಲಿ ಮಾಧವ ನಾಯಕ್‌ ಅವರ ಜಮೀನಿನಲ್ಲಿ 180 ಇಂಗು ಗುಂಡಿ ರಚನೆ, ಕಂಬಳಬೆಟ್ಟು ಅಮೈ ಬಾಲಕೃಷ್ಣ ಗೌಡ ಅವರ ಮನೆ ಬಳಿ ಪರಂಬೂಕು ತೋಡಿನ ಹೂಳೆತ್ತುವ ಕಾಮಗಾರಿ, 2023-24ರಲ್ಲಿ ಹೊಯಿಗೆ ಶಾಂತಿಮಾರುನಲ್ಲಿ ಪರಂಬೋಕು ತೋಡಿನ ಹೂಳೆತ್ತುವ ಕಾಮಗಾರಿಯನ್ನು ನಿರ್ವಹಿಸಿದ್ದರು. ಒಕ್ಕೂಟದ ಸದಸ್ಯರು ಈ ಕೆಲಸದ ಜತೆಗೆ ಬೇಕರಿ ಉತ್ಪನ್ನ ತಯಾರಿ, ಮಲ್ಲಿಗೆ ಕೃಷಿಯಂತಹ ಸ್ವ-ಉದ್ಯೋಗದ ಮೂಲಕ ಬದುಕು ಕಂಡುಕೊಂಡಿದ್ದಾರೆ.

ಸಾರ್ವಜನಿಕರಿಗೆ ಅವಕಾಶ
ಮಳೆ ನೀರನ್ನು ಭೂಮಿಗೆ ಇಂಗಿಸಲು ಇಂಗುಗುಂಡಿ ಸಹಕಾರಿಯಾಗಿದ್ದು, ನರೇಗಾ ಮೂಲಕ ಇಂಗುಗುಂಡಿ ಕಾಮಗಾರಿಯನ್ನು ವೈಯಕ್ತಿಕ ಹಾಗೂ ಸಾರ್ವಜನಿಕವಾಗಿ ಕೈಗೊಳ್ಳಲು ಅವಕಾಶವಿದೆ. ವಿಟ್ಲಮುಟ್ನೂರು ಗ್ರಾಪಂನ ಚಿಗುರು ಸಂಜೀವಿನಿ ಒಕ್ಕೂಟದ ಸದಸ್ಯರು ಇಂಗುಗುಂಡಿ ಕಾಮಗಾರಿ ಮಾಡುವ ಮೂಲಕ ಮಾದರಿಯಾಗಿದ್ದಾರೆ.
-ಸಚಿನ್‌ ಕುಮಾರ್‌, ಕಾರ್ಯನಿರ್ವಹಣಾಧಿಕಾರಿ, ತಾ.ಪಂ.ಬಂಟ್ವಾಳ

ಟಾಪ್ ನ್ಯೂಸ್

Hubli; ತಪ್ಪಿಸಲೆತ್ನಿಸಿದ ಆರೋಪಿ; ಕಾಲಿಗೆ ಗುಂಡು ಹೊಡೆದು ಬಂಧಿಸಿದ ಪೊಲೀಸರು

Hubli; ತಪ್ಪಿಸಲೆತ್ನಿಸಿದ ಆರೋಪಿ; ಕಾಲಿಗೆ ಗುಂಡು ಹೊಡೆದು ಬಂಧಿಸಿದ ಪೊಲೀಸರು

Thirthahalli: ನಿಜವಾದ ಕಾರ್ಮಿಕ ಫಲಾನುಭವಿಗಳಿಗೆ ಇಲ್ವಾ ಕಿಟ್ !?

Thirthahalli: ನಿಜವಾದ ಕಾರ್ಮಿಕ ಫಲಾನುಭವಿಗಳಿಗೆ ಇಲ್ವಾ ಕಿಟ್ !?

America: 1951ರಲ್ಲಿ ಕಿಡ್ನಾಪ್‌ ಆದ ಬಾಲಕ 70 ವರ್ಷಗಳ ಬಳಿಕ ವಾಪಸ್…ಪತ್ತೆ ಕಾರ್ಯವೇ ರೋಚಕ!

America: 1951ರಲ್ಲಿ ಕಿಡ್ನಾಪ್‌ ಆದ ಬಾಲಕ 70 ವರ್ಷಗಳ ಬಳಿಕ ವಾಪಸ್…ಪತ್ತೆ ಕಾರ್ಯವೇ ರೋಚಕ!

Renukaswamy Case: ಮೂವರಿಗೆ ಜಾಮೀನು ಮಂಜೂರು; ದರ್ಶನ್‌ ಕಥೆಯೇನು?

Renukaswamy Case: ಮೂವರಿಗೆ ಜಾಮೀನು ಮಂಜೂರು; ದರ್ಶನ್‌ ಕಥೆಯೇನು?

Mahalakshmi Case: ಪ್ರಮುಖ ಆರೋಪಿಯನ್ನು ಪ.ಬಂಗಾಳದಲ್ಲಿ ಪತ್ತೆ ಮಾಡಲಾಗಿದೆ ಎಂದ ಗೃಹ ಸಚಿವರು

Mahalakshmi Case: ಪ್ರಮುಖ ಆರೋಪಿಯನ್ನು ಪ.ಬಂಗಾಳದಲ್ಲಿ ಗುರುತಿಸಲಾಗಿದೆ ಎಂದ ಗೃಹ ಸಚಿವರು

Which team can reach the Test Championship final? Here’s the calculation

WTC; ಟೆಸ್ಟ್‌ ಚಾಂಪಿಯನ್‌ ಶಿಪ್‌ ಫೈನಲ್‌ ಗೆ ಯಾವ ತಂಡ ತಲುಪಬಹುದು? ಇಲ್ಲಿದೆ ಲೆಕ್ಕಾಚಾರ

Mysore Dasara: ದಸರಾ ಚಲನಚಿತ್ರೋತ್ಸವದಲ್ಲಿ ‘ಪ್ರಚಂಡ ಕುಳ್ಳ’ನ ನೆನಪು

Mysore Dasara: ದಸರಾ ಚಲನಚಿತ್ರೋತ್ಸವದಲ್ಲಿ ‘ಪ್ರಚಂಡ ಕುಳ್ಳ’ನ ನೆನಪು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sullia ನಗರ: ಕೊಂಚ ಎಚ್ಚರ ತಪ್ಪಿದರೂ ಹರೋಹರ!

Sullia ನಗರ: ಕೊಂಚ ಎಚ್ಚರ ತಪ್ಪಿದರೂ ಹರೋಹರ!

Uppinagdy-Miss

Uppinangady: ನೆಲ್ಯಾಡಿಯ ಕಾಲೇಜು ವಿದ್ಯಾರ್ಥಿ ನಾಪತ್ತೆ

Sampaje: ಸಹಪಾಠಿಯ ಮರ್ಮಾಂಗ ಎಳೆದ ವಿದ್ಯಾರ್ಥಿಗಳು!

Sampaje: ಸಹಪಾಠಿಯ ಮರ್ಮಾಂಗ ಎಳೆದ ವಿದ್ಯಾರ್ಥಿಗಳು!

4

Puttur: ಸ್ಕೂಟಿ-ಕಾರು ಅಪಘಾತ: ಗಾಯಾಳು ಸಾವು

Panemangalore ಗ್ರಾಮ ಆಡಳಿತ ಕಚೇರಿ; ಶಿಥಿಲ ಕಟ್ಟಡದಲ್ಲೇ ಕಾರ್ಯಾಚರಣೆ

Panemangalore ಗ್ರಾಮ ಆಡಳಿತ ಕಚೇರಿ; ಶಿಥಿಲ ಕಟ್ಟಡದಲ್ಲೇ ಕಾರ್ಯಾಚರಣೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Hubli; ತಪ್ಪಿಸಲೆತ್ನಿಸಿದ ಆರೋಪಿ; ಕಾಲಿಗೆ ಗುಂಡು ಹೊಡೆದು ಬಂಧಿಸಿದ ಪೊಲೀಸರು

Hubli; ತಪ್ಪಿಸಲೆತ್ನಿಸಿದ ಆರೋಪಿ; ಕಾಲಿಗೆ ಗುಂಡು ಹೊಡೆದು ಬಂಧಿಸಿದ ಪೊಲೀಸರು

Arunagiri ಗ್ರಾಮಸ್ಥರಿಂದ ರಸ್ತೆಯ ಗುಂಡಿ ಮುಚ್ಚುವ ಮಹತ್ಕಾರ್ಯ: ಶಿವನ್ ಗೌಡ ಮೆಚ್ಚುಗೆ

Arunagiri ಗ್ರಾಮಸ್ಥರಿಂದ ರಸ್ತೆಯ ಗುಂಡಿ ಮುಚ್ಚುವ ಮಹತ್ಕಾರ್ಯ: ಶಿವನ್ ಗೌಡ ಮೆಚ್ಚುಗೆ

Thirthahalli: ನಿಜವಾದ ಕಾರ್ಮಿಕ ಫಲಾನುಭವಿಗಳಿಗೆ ಇಲ್ವಾ ಕಿಟ್ !?

Thirthahalli: ನಿಜವಾದ ಕಾರ್ಮಿಕ ಫಲಾನುಭವಿಗಳಿಗೆ ಇಲ್ವಾ ಕಿಟ್ !?

America: 1951ರಲ್ಲಿ ಕಿಡ್ನಾಪ್‌ ಆದ ಬಾಲಕ 70 ವರ್ಷಗಳ ಬಳಿಕ ವಾಪಸ್…ಪತ್ತೆ ಕಾರ್ಯವೇ ರೋಚಕ!

America: 1951ರಲ್ಲಿ ಕಿಡ್ನಾಪ್‌ ಆದ ಬಾಲಕ 70 ವರ್ಷಗಳ ಬಳಿಕ ವಾಪಸ್…ಪತ್ತೆ ಕಾರ್ಯವೇ ರೋಚಕ!

Aditya Shashikumar movie rashi

Aditya Shashikumar: ʼರಾಶಿʼ ಪ್ರೀತಿಗೆ ಬಿದ್ದ ಆದಿತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.