ಬಂಟ್ವಾಳ ಸರಕಾರಿ ಆಸ್ಪತ್ರೆ: ಲ್ಯಾಬ್‌ ಟೆಕ್ನಿಶಿಯನ್‌ ಕೊರತೆ


Team Udayavani, Jul 2, 2024, 5:17 PM IST

Bantwal

ಬಂಟ್ವಾಳ: ಬಂಟ್ವಾಳ ಸರಕಾರಿ ಆಸ್ಪತ್ರೆ (ತಾಲೂಕು ಸಾರ್ವಜನಿಕ ಆಸ್ಪತ್ರೆ)ಯಲ್ಲಿ ರೋಗಿಗಳ ಕಾಯಿಲೆ ಪತ್ತೆಗೆ ರಕ್ತ ಪರೀಕ್ಷೆಗೆ ನೀಡಿದರೆ ವರದಿ ಬರುವುದು ತೀರಾ ವಿಳಂಬವಾಗುತ್ತಿದ್ದು, ಹೀಗಾಗಿ ಬೆಳಗ್ಗೆ ಬಂದವರು ಸಂಜೆಯ ವರೆಗೂ ಕಾಯಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಕಾದು ಕಾದು ವರದಿ ಕೈ ಸೇರುವ ಹೊತ್ತಿಗೆ ರೋಗಿಯನ್ನು ನೋಡಿದ ವೈದ್ಯರು ಹೋಗಿಯಾ ಗಿರುತ್ತದೆ ಎಂಬ ಆರೋಪ ಕೇಳಿಬಂದಿದೆ.

ಸರಕಾರಿ ಆಸ್ಪತ್ರೆಯಲ್ಲಿ ಒಬ್ಬರೇ ಲ್ಯಾಬ್‌ ಟೆಕ್ನಿಶಿಯನ್‌ ಇರುವುದರಿಂದ ಈ ಸಮಸ್ಯೆ ಉಂಟಾಗಿದ್ದು, ಹೆಚ್ಚುವರಿ ಟೆಕ್ನಿಶಿಯನ್‌ ಬೇಕು ಎಂದು ದ.ಕ.ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಪತ್ರ ಬರೆದರೂ ಅದರ ಪ್ರಕ್ರಿಯೆಗಳು ಪೂರ್ಣಗೊಂಡು ಟೆಕ್ನಿಶಿಯನ್‌ ಬರುವುದಕ್ಕೆ ಇನ್ನಷ್ಟು ಸಮಯ ತಗಲುವ ಸಾಧ್ಯತೆ ಇದೆ ಎನ್ನಲಾಗಿದೆ. ಹೀಗಾಗಿ ನಿತ್ಯವೂ ಹತ್ತಾರು ಮಂದಿ ದಿನವಿಡೀ ರಕ್ತ ಪರೀಕ್ಷಾ ಕೇಂದ್ರದ ಮುಂಭಾಗ ಕಾಯಬೇಕಾದ ಸ್ಥಿತಿ ನಿರ್ಮಾಣವಾಗಿದೆ.

ಸಾಮಾನ್ಯವಾಗಿ ರೋಗಿಗಳು ಬಂದು ರಕ್ತ ಪರೀಕ್ಷೆ ಮಾಡಿಸಿ ಅದರ ವರದಿ ಕೈ ಸೇರಿದ ಬಳಿಕವೂ ವೈದ್ಯರು ಔಷಧ ಸೂಚಿಸುತ್ತಿದ್ದು,
ಒಳರೋಗಿಗಳು ಆಸ್ಪತ್ರೆಯಲ್ಲೇ ಇರುವುದರಿಂದ ದೊಡ್ಡ ಸಮಸ್ಯೆಯಾಗುವುದಿಲ್ಲ. ಆದರೆ ಹೊರರೋಗಿಗಳು ಒಂದು ಗಂಟೆಯಲ್ಲಿ
ಸಿಗುವ ವರದಿಗೆ ದಿನವಿಡೀ ಕಾದು ಅದರ ಬಳಿಕವೇ ಔಷಧ ಪಡೆಯಬೇಕಿದೆ. ಆ ವೇಳೆ ವೈದ್ಯರು ಹೋಗಿದ್ದರೆ ಮರುದಿನ ಮತ್ತೆ
ಬರಬೇಕಾದ ಸ್ಥಿತಿ ಇದೆ.

4 ಮಂದಿಯ ಕೆಲಸ ಒಬ್ಬರಿಂದ
ಬಂಟ್ವಾಳ ಆಸ್ಪತ್ರೆಯಲ್ಲಿ ದಾಖಲೆಯ ಪ್ರಕಾರ ನಾಲ್ಕು ಮಂದಿ ಲ್ಯಾಬ್‌ ಟೆಕ್ನಿಶಿಯನ್‌ ಕೆಲಸ ಮಾಡಬೇಕಿದ್ದು, ಆದರೆ ಸದ್ಯದ ಪರಿಸ್ಥಿತಿಯಲ್ಲಿ ನಾಲ್ಕೂ ಮಂದಿಯ ಕೆಲಸವನ್ನು ಒಬ್ಬರೇ ನಿರ್ವಹಿಸುತ್ತಿದ್ದಾರೆ. ಒಟ್ಟು 4 ಹುದ್ದೆಗಳಲ್ಲಿ ಒಂದು ಹುದ್ದೆ ಖಾಲಿ
ಇದ್ದು, ಒಬ್ಬರು ಕೆಲಸ ಬಿಟ್ಟು ತೆರಳಿದ್ದಾರೆ. ಇನ್ನೊಬ್ಬರು ತಾಯಿಯ ಅನಾರೋಗ್ಯದ ಕಾರಣಕ್ಕೆ ರಜೆಯಲ್ಲಿ ಊರಿಗೆ ಹೋಗಿದ್ದು,
ಸದ್ಯ ಒಬ್ಬರೇ ಸಿಬಂದಿ ರಕ್ತ ಹಾಗೂ ಇತರ ಪರೀಕ್ಷೆ ಮಾಡಿ ವರದಿ ತಯಾರಿಸಬೇಕಿದೆ.

ರಕ್ತ, ಇತರ ಪರೀಕ್ಷೆಗಳು ಬಹಳ ಸೂಕ್ಷ್ಮ ವಿಚಾರಗಳಾಗಿದ್ದು, ನಾಲ್ಕು ಮಂದಿ ಮಾಡುವ ಕೆಲಸವನ್ನು ಒಬ್ಬರೇ ನಿರ್ವಹಿಸುವುದರಿಂದ ಅವರ ಮೇಲೂ ಒತ್ತಡ ಬೀಳುವ ಸಾಧ್ಯತೆ ಇದೆ. ಇಂತಹ ಸಂದರ್ಭದಲ್ಲಿ ವರದಿಗಳು ಅದಲು-ಬದಲಾಗುವ ಅಪಾಯವನ್ನೂ ಅಲ್ಲಗಳೆಯುವಂತಿಲ್ಲ.

ಡಿಎಚ್‌ಒಗೆ ಪತ್ರ
ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಶೀಘ್ರ ಲ್ಯಾಬ್‌ ಟೆಕ್ನಿಶಿಯನ್‌ ನೀಡುವಂತೆ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಗಳು ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ. ಟೆಕ್ನಿಶಿಯನ್‌ ಹುದ್ದೆಗೆ ಅರ್ಹವಾದ ಅಭ್ಯರ್ಥಿಗಳು ಇದ್ದರೂ, ಸರಕಾರದ ಪ್ರಕ್ರಿಯೆಗಳು ವಿಳಂಬವಾಗುತ್ತಿರುವುದರಿಂದ ಅವರ ನೇಮಕಾತಿ ಸಾಧ್ಯವಾಗುತ್ತಿಲ್ಲ. ಈ ಕುರಿತು ಬಂಟ್ವಾಳ ಶಾಸಕರ ಗಮನಕ್ಕೂ ತರಲಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿದೆ.

ಕೊರತೆಯಿಂದ ಸಾಕಷ್ಟು ತೊಂದರೆ
ಪ್ರಸ್ತುತ ದಿನಗಳಲ್ಲಿ ಒಳರೋಗಿಗಳು, ಐಸಿಯು ರೋಗಿಗಳು ಹೆಚ್ಚಿದ್ದು, ಹೀಗಾಗಿ ಪರೀಕ್ಷೆಗಳು ಕೂಡ ಹೆಚ್ಚಿರುತ್ತದೆ. ಆದರೆ ಲ್ಯಾಬ್‌
ಟೆಕ್ನಿಶಿಯನ್‌ ಕೊರತೆಯಿಂದ ಸಾಕಷ್ಟು ತೊಂದರೆಯಾಗುತ್ತಿದ್ದು, ವರದಿಗಳು ವಿಳಂಬವಾಗುತ್ತಿರುವುದು ನಿಜ. ಶೀಘ್ರ ಒಬ್ಬರು
ಟೆಕ್ನಿಶಿಯನ್‌ ನೀಡುವಂತೆ ಡಿಎಚ್‌ಒ ಅವರಿಗೆ ಪತ್ರವನ್ನೂ ಬರೆಯಲಾಗಿದೆ.

*ಡಾ| ಪುಷ್ಪಲತಾ, ಆಡಳಿತ ವೈದ್ಯಾಧಿಕಾರಿಗಳು, ಸರಕಾರಿ ಆಸ್ಪತ್ರೆ ಬಂಟ್ವಾಳ

*ಕಿರಣ್‌ ಸರಪಾಡಿ

ಟಾಪ್ ನ್ಯೂಸ್

Kollur: ಸೊಸೈಟಿ ಗುಡ್ಡೆ ಬಳಿ ಧರೆ ಕುಸಿದು ಮಣ್ಣಿನಡಿ ಸಿಲುಕಿ ಮಹಿಳೆ ಸಾವು

Kollur: ಸೊಸೈಟಿ ಗುಡ್ಡೆ ಬಳಿ ಧರೆ ಕುಸಿದು ಮಣ್ಣಿನಡಿ ಸಿಲುಕಿ ಮಹಿಳೆ ಸಾವು

Dengue-nagendra

Hunasuru: ಡೆಂಗ್ಯೂಗೆ ಆರೋಗ್ಯಾಧಿಕಾರಿಯೇ ಮೃತ್ಯು!

1983ರ ಕಥೆ! ಅಂದು ಅವಮಾನದಿಂದ ಬಿಸಿಸಿಐಯನ್ನು ಕಾಪಾಡಿದ್ದು ಲತಾ ಮಂಗೇಶ್ಕರ್

1983ರ ಕಥೆ! ಅಂದು ಅವಮಾನದಿಂದ ಬಿಸಿಸಿಐಯನ್ನು ಕಾಪಾಡಿದ್ದು ಲತಾ ಮಂಗೇಶ್ಕರ್

Sagara ಹಣ ಬಿಡುಗಡೆ ಮಾಡಿಸದೆ ಅವಧಿ ಪೂರೈಸಿದ ಹಾಲಪ್ಪ; ಬೇಳೂರು ವ್ಯಂಗ್ಯ

Sagara ಹಣ ಬಿಡುಗಡೆ ಮಾಡಿಸದೆ ಅವಧಿ ಪೂರೈಸಿದ ಹಾಲಪ್ಪ; ಬೇಳೂರು ವ್ಯಂಗ್ಯ

Hosanagar; ವಿಪರೀತ ಮಳೆ: ಸಂಕ ದಾಟುವ ವೇಳೆ ಕೊಚ್ಚಿ ಹೋದ ಮಹಿಳೆ ಸಾವು

Hosanagar; ವಿಪರೀತ ಮಳೆ: ಸಂಕ ದಾಟುವ ವೇಳೆ ಕೊಚ್ಚಿ ಹೋದ ಮಹಿಳೆ ಸಾವು

1-dsdsadsa

Victory parade; ಮುಂಬೈ ನಲ್ಲಿ T20 ಚಾಂಪಿಯನ್ನರಿಗೆ ಸಂಭ್ರಮೋಲ್ಲಾಸದ ಸ್ವಾಗತ

ಶೀಘ್ರದಲ್ಲೇ ಕಿಚ್ಚ ಸುದೀಪ್‌ ʼಹುಚ್ಚʼ, ಶಿವರಾಜ್‌ ಕುಮಾರ್‌ ʼಜೋಗಿʼ ಸಿನಿಮಾ ರೀ-ರಿಲೀಸ್‌

ಶೀಘ್ರದಲ್ಲೇ ಕಿಚ್ಚ ಸುದೀಪ್‌ ʼಹುಚ್ಚʼ, ಶಿವರಾಜ್‌ ಕುಮಾರ್‌ ʼಜೋಗಿʼ ಸಿನಿಮಾ ರೀ-ರಿಲೀಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪುತ್ತೂರು: ಮುಚ್ಚಿಹೋದ ಶಾಲೆಯಿಂದ ಮುಚ್ಚಲಿದ್ದ ಶಾಲೆಗೆ ಜೀವದಾನ!

ಪುತ್ತೂರು: ಮುಚ್ಚಿಹೋದ ಶಾಲೆಯಿಂದ ಮುಚ್ಚಲಿದ್ದ ಶಾಲೆಗೆ ಜೀವದಾನ!

9-Bantwala

Bantwala: ರಾಮಲಕಟ್ಟೆ: ಡಿವೈಡರ್ ಗೆ ಢಿಕ್ಕಿಯಾದ ಖಾಸಗಿ ಬಸ್

6-belthangady

Belthangady: ಉತ್ತಮ ಮಳೆ; ತೆಂಕಾರಂದೂರು ದೇವಸ್ಥಾನದ ಆವರಣದ ತಡೆ ಗೋಡೆ ಕುಸಿತ

3-holiday

Heavy Rain: ಬೆಳ್ತಂಗಡಿ, ಬಂಟ್ವಾಳ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

Sullia ಜಾಲ್ಸೂರು: ಐರಾವತ ಬಸ್‌ – ರಿಕ್ಷಾ ಢಿಕ್ಕಿ

Sullia ಜಾಲ್ಸೂರು: ಐರಾವತ ಬಸ್‌ – ರಿಕ್ಷಾ ಢಿಕ್ಕಿ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

1-sa-dsadsa

Mangaluru; ಮಣ್ಣುಕುಸಿತದಿಂದ ಸಾವನ್ನಪ್ಪಿದ ಕಾರ್ಮಿಕನ ಕುಟುಂಬಕ್ಕೆ 4 ಲಕ್ಷ ರೂ. ಪರಿಹಾರ

Kollur: ಸೊಸೈಟಿ ಗುಡ್ಡೆ ಬಳಿ ಧರೆ ಕುಸಿದು ಮಣ್ಣಿನಡಿ ಸಿಲುಕಿ ಮಹಿಳೆ ಸಾವು

Kollur: ಸೊಸೈಟಿ ಗುಡ್ಡೆ ಬಳಿ ಧರೆ ಕುಸಿದು ಮಣ್ಣಿನಡಿ ಸಿಲುಕಿ ಮಹಿಳೆ ಸಾವು

Dengue-nagendra

Hunasuru: ಡೆಂಗ್ಯೂಗೆ ಆರೋಗ್ಯಾಧಿಕಾರಿಯೇ ಮೃತ್ಯು!

1983ರ ಕಥೆ! ಅಂದು ಅವಮಾನದಿಂದ ಬಿಸಿಸಿಐಯನ್ನು ಕಾಪಾಡಿದ್ದು ಲತಾ ಮಂಗೇಶ್ಕರ್

1983ರ ಕಥೆ! ಅಂದು ಅವಮಾನದಿಂದ ಬಿಸಿಸಿಐಯನ್ನು ಕಾಪಾಡಿದ್ದು ಲತಾ ಮಂಗೇಶ್ಕರ್

1-asdsad

Police ಭ್ರಷ್ಟಾಚಾರದಿಂದ ಬೇಸತ್ತಿದ್ದೇನೆ: ಶಾಸಕ ಕಂದಕೂರ ರಾಜೀನಾಮೆ ಎಚ್ಚರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.