Bantwal: ನಿಯಂತ್ರಣ ತಪ್ಪಿ ಹೊಂಡಕ್ಕೆ ಉರುಳಿ ಬಿದ್ದ ಕೆಎಸ್‌ಆರ್‌ಟಿಸಿ ಬಸ್ಸು;13 ಮಂದಿಗೆ ಗಾಯ


Team Udayavani, Sep 23, 2024, 6:02 PM IST

Bantwal: KSRTC ಬಸ್ ಪಲ್ಟಿ; ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಯಾಣಿಕರು ಪಾರು..!

ಬಂಟ್ವಾಳ: ಬಿ.ಸಿ.ರೋಡು-ಪುಂಜಾಲಕಟ್ಟೆ ಹೆದ್ದಾರಿಯ ವಗ್ಗ ಸಮೀಪದ ಕೊಪ್ಪಳ ಬಳಿ ಧರ್ಮಸ್ಥಳದಿಂದ ಮಂಗಳೂರಿಗೆ ಆಗಮಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಬದಿಯ ಹೊಂಡಕ್ಕೆ ಉರುಳಿ ಬಿದ್ದ ಘಟನೆ ಸೋಮವಾರ ಸಂಜೆ ನಡೆದಿದೆ.

ಬಸ್ಸಿನಲ್ಲಿ ಸುಮಾರು 50 ಮಂದಿ ಪ್ರಯಾಣಿಕರಿದ್ದು, 13 ಮಂದಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಕರೆತರಲಾಗಿದ್ದು, ತಲೆ ಹಾಗೂ ಬೆನ್ನುಮೂಲೆ ಗಾಯಗೊಂಡಿರುವ ತನುಶ್ರೀ(17), ಶಾಕೀರ್‌(32), ಶೋಭಾ ಶೆಟ್ಟಿ(48), ಕಸ್ತೂರಿ(68) ಹಾಗೂ ವಿಶ್ವನಾಥ(70) ಅವರನ್ನು ಮಂಗಳೂರು ಆಸ್ಪತ್ರೆಗೆ ಸಾಗಿಸಲಾಗಿದೆ.

ಉಳಿದಂತೆ ಸಣ್ಣಪುಟ್ಟ ಗಾಯಗೊಂಡಿರುವ ಪವನ್‌(30), ನಿಖೀತ(29), ಸುಧಾಮ(23), ಹೇಮಾವತಿ(43), ರಾಜಶ್ರೀ(27), ಹೇಮಲತಾ(40), ಶಿಲ್ಪಾ(16) ಹಾಗೂ ಸ್ವಾತಿ(16) ಚಿಕಿತ್ಸೆ ಪಡೆದು ಮನೆಗೆ ತೆರಳಿದ್ದಾರೆ ಎಂದು ಬಂಟ್ವಾಳ ಆಸ್ಪತ್ರೆಯ ಮೂಲಗಳು ತಿಳಿಸಿದೆ.


ಬಸ್ಸು ಸಂಪೂರ್ಣ ಮಗುಚಿ ಬಿದ್ದ ಕಾರಣ ಅದರೊಳಗಿದ್ದ ಪ್ರಯಾಣಿಕರಿಗೆ ಹೊರ ಬರಲು ಸಾಧ್ಯವಾಗದೆ ಇದ್ದು, ಬಳಿಕ ಸ್ಥಳೀಯರ ನೆರವಿನಿಂದ ಪ್ರಯಾಣಿಕರು ಹೊರಬಂದರು.

ಬಸ್ಸು ವೇಗವಾಗಿ ಸಂಚರಿಸುತ್ತಿದ್ದು, ಈ ವೇಳೆ ಯಾವುದೇ ವಾಹನ ಅಡ್ಡ ಬಂತ್ತೆಂದು ಚಾಲಕ ಬ್ರೇಕ್‌ ಹಾಕಿದ್ದು, ಈ ವೇಳೆ ಬಸ್ಸು ಏಕಾಏಕಿ ಹೆದ್ದಾರಿಯ ಅಂಚಿಗೆ ಸಂಚರಿಸಿ ಪಲ್ಟಿ ಹೊಡೆದಿದೆ ಎಂದು ಬಸ್ಸು ಚಾಲಕ ಹೇಳಿರುವುದಾಗಿ ಸಂಚಾರ ಪೊಲೀಸರು ತಿಳಿಸಿದ್ದಾರೆ. ಬಸ್ಸಿನ ಟಯರ್‌ ಸವೆದು ಬ್ರೇಕ್‌ ಸಿಗದೆ ಬಸ್ಸು ಪಲ್ಟಿಯಾಗಿದೆ ಎಂದು ಸ್ಥಳೀಯ ಒಂದಷ್ಟು ಮಂದಿ ಆರೋಪಿಸಿದ್ದಾರೆ. ಆದರೆ ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಘಟನಾ ಸ್ಥಳಕ್ಕೆ ಬಂಟ್ವಾಳ ಸಂಚಾರ ಠಾಣಾ ಪಿಎಸ್‌ಐ ಸುತೇಶ್‌ ಕೆ.ಪಿ. ಭೇಟಿ ನೀಡಿ ಪರಿಶೀಲಿಸಿದ್ದು, ಬಳಿಕ ಕ್ರೇಮ್‌ ಮೂಲಕ ಬಸ್ಸನ್ನು ತೆರವು ಮಾಡಲಾಯಿತು. ಈ ವೇಳೆ ಕೆಲಹೊತ್ತು ಹೆದ್ದಾರಿಯಲ್ಲಿ ಸಂಚಾರದೊತ್ತಡ ಉಂಟಾಗಿತ್ತು ಎನ್ನಲಾಗಿದೆ.

ಘಟನೆಯ ಕುರಿತು ಬಂಟ್ವಾಳ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Rain

Rain: ದ.ಕ.ಜಿಲ್ಲೆಯ ಹಲವೆಡೆ ಮಳೆ; ಸೆ.24ಕ್ಕೆ ಕರಾವಳಿಗೆ ರೆಡ್‌ ಅಲರ್ಟ್‌

1-ravi

Secularism ಯುರೋಪಿಯನ್ ಪರಿಕಲ್ಪನೆ, ಭಾರತದಲ್ಲಿ ಅಗತ್ಯವಿಲ್ಲ: ತಮಿಳುನಾಡು ರಾಜ್ಯಪಾಲ

Yadagiri

Yadagiri: ಸಿಡಿಲು ಬಡಿದು‌ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಮೃತ್ಯು!

1-udaaa

Israeli ಪಡೆಗಳಿಂದ ಲೆಬನಾನ್ ಮೇಲೆ ಭಾರೀ ದಾಳಿ: 182 ಕ್ಕೂ ಹೆಚ್ಚು ಮೃ*ತ್ಯು

Kannan

ಪ್ರಸ್ತುತ ರಾಜಕೀಯ ನಾಯಕರಿಗೆ ಸಮಾಜ ಕಟ್ಟುವ ಕೈಂಕರ್ಯ ಮರೆತಿದೆ: ಹಿರೇಮಗಳೂರು ಕಣ್ಣನ್ 

1-dssadas

Badlapur ಪೊಲೀಸ್ ರಿವಾಲ್ವರ್ ಕಸಿದು ಗುಂಡು ಹಾರಿಸಿದ ರೇ*ಪ್ ಆರೋಪಿ!!

siddanna-2

MUDA ಹಗರಣ: ಸಿಎಂ ಸಿದ್ದರಾಮಯ್ಯ ಭವಿಷ್ಯ ಹೈಕೋರ್ಟ್ ನಲ್ಲಿ ನಾಳೆ ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bantwal: ಶ್ಮಶಾನ ಭೂಮಿಯಲ್ಲಿ 200ಕ್ಕೂ ಅಧಿಕ ಇಂಗುಗುಂಡಿ ರಚನೆ

Bantwal: ಶ್ಮಶಾನ ಭೂಮಿಯಲ್ಲಿ 200ಕ್ಕೂ ಅಧಿಕ ಇಂಗುಗುಂಡಿ ರಚನೆ

Sullia ನಗರ: ಕೊಂಚ ಎಚ್ಚರ ತಪ್ಪಿದರೂ ಹರೋಹರ!

Sullia ನಗರ: ಕೊಂಚ ಎಚ್ಚರ ತಪ್ಪಿದರೂ ಹರೋಹರ!

Uppinagdy-Miss

Uppinangady: ನೆಲ್ಯಾಡಿಯ ಕಾಲೇಜು ವಿದ್ಯಾರ್ಥಿ ನಾಪತ್ತೆ

Sampaje: ಸಹಪಾಠಿಯ ಮರ್ಮಾಂಗ ಎಳೆದ ವಿದ್ಯಾರ್ಥಿಗಳು!

Sampaje: ಸಹಪಾಠಿಯ ಮರ್ಮಾಂಗ ಎಳೆದ ವಿದ್ಯಾರ್ಥಿಗಳು!

4

Puttur: ಸ್ಕೂಟಿ-ಕಾರು ಅಪಘಾತ: ಗಾಯಾಳು ಸಾವು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

8

Virajpete: ಮನೆಯಂಗಳದಲ್ಲಿ ಕಾಡಾನೆ; ಗ್ರಾಮಸ್ಥರಲ್ಲಿ ಆತಂಕ

1-rrrr

Embarrassing; ಹಣ ನೀಡದೆ ಮದ್ಯದ ಬಾಟಲಿ ಸಮೇತ ಪರಾರಿಯಾಗಿ ಬಂಧನಕ್ಕೊಳಗಾದ ಪೊಲೀಸ್!

Rain

Rain: ದ.ಕ.ಜಿಲ್ಲೆಯ ಹಲವೆಡೆ ಮಳೆ; ಸೆ.24ಕ್ಕೆ ಕರಾವಳಿಗೆ ರೆಡ್‌ ಅಲರ್ಟ್‌

1-ravi

Secularism ಯುರೋಪಿಯನ್ ಪರಿಕಲ್ಪನೆ, ಭಾರತದಲ್ಲಿ ಅಗತ್ಯವಿಲ್ಲ: ತಮಿಳುನಾಡು ರಾಜ್ಯಪಾಲ

Untitled-1

Udupi-D.K; ಪ್ರತ್ಯೇಕ ಪ್ರಕರಣ: ನಾಲ್ವರು ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.