![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jan 23, 2024, 12:08 AM IST
ಬಂಟ್ವಾಳ: ಅಯೋಧ್ಯೆಯ ನೂತನ ಮಂದಿರದಲ್ಲಿ ಸೋಮವಾರ ಶ್ರೀರಾಮನ ಪ್ರಾಣ ಪ್ರತಿಷ್ಠೆಯ ಹಿನ್ನೆಲೆಯಲ್ಲಿ ರವಿವಾರ ರಾತ್ರಿ ಬಂಟ್ವಾಳ ಶ್ರೀ ತಿರುಮಲ ವೆಂಕಟರಮಣ ಸ್ವಾಮಿ ದೇವಸ್ಥಾನದ ಬಳಿಯ ನೇತ್ರಾವತಿ ನದಿಯ ಮಧ್ಯೆ ಶ್ರೀ ಸತ್ಯನಾರಾಯಣ ಪೂಜೆ ನೆರವೇರಿತು.
ಅಯೋಧ್ಯೆ ಕರಸೇವೆಯಲ್ಲಿ 2 ಬಾರಿ ಪಾಲ್ಗೊಂಡಿರುವ ಬಂಟ್ವಾಳ ಪುರಸಭಾ ಸದಸ್ಯ ಎ. ಗೋವಿಂದ ಪ್ರಭು ನೇತೃತ್ವದಲ್ಲಿ ಪೂಜಾ ಕಾರ್ಯ ನಡೆದಿದ್ದು, ಪ್ರಸ್ತುತ ಅಯೋಧ್ಯೆಗೆ ತೆರಳಲು ಸಾಧ್ಯವಾಗುತ್ತಿಲ್ಲ ಎಂದು ಅವರು ಸರಯೂ ನದಿಯಷ್ಟೇ ಪವಿತ್ರವಾಗಿರುವ ನೇತ್ರಾವತಿಯಲ್ಲಿ ಪೂಜೆಯನ್ನು ನಡೆಸುವ ನಿರ್ಧಾರ ಕೈಗೊಂಡಿದ್ದರು.
ನದಿಯ ಮಧ್ಯೆ ಪೂಜಾ ಮಂಟಪವು ದೀಪದ ಬೆಳಕಿನಲ್ಲಿ ಕಂಗೊಳಿಸಿದ್ದು, ಅದರ ಪಕ್ಕದಲ್ಲೇ ಶ್ರೀರಾಮನ ಮೂರ್ತಿ ಇರುವ ಸ್ತಬ್ಧಚಿತ್ರವು ಭಕ್ತರ ಗಮನ ಸೆಳೆಯಿತು. ಸಾವಿರಾರು ಮಂದಿ ಪಾಲ್ಗೊಂಡಿದ್ದು, ನದಿಯ ಮಧ್ಯೆ ತೆರಳಿ ಪ್ರಸಾದ ಸ್ವೀಕರಿಸಿ ಬಳಿಕ ವಿಶೇಷ ಫಲಾಹಾರ ಸೇವಿಸಿದರು.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.