Bantwala: ಕಿಟಕಿ ಸರಳಿಗೆ ನೇಣು ಬಿಗಿದು ಆತ್ಮಹತ್ಯೆ
Team Udayavani, Jun 26, 2024, 2:09 PM IST
ಬಂಟ್ವಾಳ: ಯುವಕನೋರ್ವ ಮನೆಯ ಕಿಟಕಿಯ ಸರಳಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನರಿಕೊಂಬು ಎಂಬಲ್ಲಿ ನಡೆದಿದೆ.
ಇಲ್ಲಿನ ಶೇಖರ ಪೂಜಾರಿ ಅವರ ಎರಡನೇ ಮಗ ರಮೇಶ್ (22) ಆತ್ಮಹತ್ಯೆ ಮಾಡಿಕೊಂಡ ಯುವಕ.
ಯಾವುದೋ ವಿಷ ಪದಾರ್ಥ ಸೇವಿಸಿ ಬಳಿಕ ಕಿಟಕಿಗೆ ಹಗ್ಗ ಬಿಗಿದು ಆತ್ಮಹತ್ಯೆ ಮಾಡಿಕೊಂಡಿರಬೇಕು ಎಂದು ಶಂಕಿಸಲಾಗಿದೆ. ಆತ್ಮಹತ್ಯೆಗೆ ಸ್ಪಷ್ಟವಾದ ಕಾರಣ ಈವರೆಗೆ ದೊರೆತಿಲ್ಲ.
ಆತ್ಯಂತ ಸೌಮ್ಯ ಸ್ವಭಾವದ ಶ್ರಮ ಜೀವಿಯಾಗಿದ್ದ ಈತ ಇಲ್ಲಿನ ಸ್ಥಳೀಯ ದಿನಸಿ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ. ಈತನ ಅಣ್ಣಾ ಕೂಡ ಕಳೆದ ವರ್ಷ ಇವರ ಹಳೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದ.
ಶೇಖರ ಪೂಜಾರಿ ಅವರಿಗೆ ಇಬ್ಬರು ಗಂಡು ಮಕ್ಕಳು. ಇದೀಗ ಇಬ್ಬರು ಕೂಡ ಆತ್ಮಹತ್ಯೆ ಮಾಡಿಕೊಂಡಂತಾಗಿದೆ.
ಘಟನಾ ಸ್ಥಳಕ್ಕೆ ನರಿಕೊಂಬು ಗ್ರಾ.ಪಂ.ಅಧ್ಯಕ್ಷ ಸಂತೋಷ್ ಕುಮಾರ್ ಹಾಗೂ ಊರಿನ ಅನೇಕರು ಭೇಟಿ ನೀಡಿದ್ದಾರೆ. ಬಂಟ್ವಾಳ ನಗರ ಠಾಣಾ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.