Bantwala: ಉಕ್ಕಿ ಹರಿದ ನೇತ್ರಾವತಿ ನದಿ ನೀರು; ಮುಳುಗಡೆ ಪ್ರದೇಶಕ್ಕೆ ಜಿಲ್ಲಾಧಿಕಾರಿ ಭೇಟಿ
Team Udayavani, Jul 31, 2024, 12:06 PM IST
ಬಂಟ್ವಾಳ: ನೇತ್ರಾವತಿ ನದಿಯಲ್ಲಿ ನೀರು ಉಕ್ಕಿ ಹರಿದ ಪರಿಣಾಮ ಬಂಟ್ವಾಳದಲ್ಲಿ ಮುಳುಗಡೆಯಾದ ಪ್ರದೇಶಕ್ಕೆ ದ.ಕ.ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಭೇಟಿ ನೀಡಿ ಪರಿಶೀಲನೆ ನಡೆಸಿ ಸಂತ್ರಸ್ತರೊಂದಿಗೆ ಸಮಾಲೋಚನೆ ನಡೆಸಿದರು.
ಈ ವೇಳೆ ಬಂಟ್ವಾಳ ಎಸ್.ವಿ.ಎಸ್.ಕನ್ನಡ ಮಾಧ್ಯಮ ಶಾಲೆಯಲ್ಲಿ ತೆರೆದಿರುವ ಕಾಳಜಿ ಕೇಂದ್ರಕ್ಕೆ ಭೇಟಿ ನೀಡಿ ಕೇಂದ್ರದಲ್ಲಿ ವಾಸ್ತವ್ಯವಿರುವ ಸಂತ್ರಸ್ತರಿಗೆ ನೀಡಿರುವ ಸೌಲಭ್ಯಗಳ ಬಗ್ಗೆ ತಹಶಿಲ್ದಾರ್ ಅರ್ಚನಾ ಭಟ್ ಅವರಿಂದ ಮಾಹಿತಿ ಪಡೆದುಕೊಂಡರು. ಅದರ ಜೊತೆಗೆ ಸಂತ್ರಸ್ತರೊಂದಿಗೆ ಮಾತುಕತೆ ನಡೆಸಿ, ಮುಳುಗಡೆಯಾದ ಮನೆಗಳ ಸ್ಥಿತಿಗತಿಯ ಕುರಿತು ವಿವರ ಪಡೆದುಕೊಂಡರು.
ಈ ವೇಳೆ ಪತ್ರಕರ್ತರೊಂದಿಗೆ ಮಾತನಾಡಿ, ಈಗಾಗಲೇ ತಗ್ಗು ಪ್ರದೇಶಗಳು ಜಲಾವೃತಗೊಂಡ ಹಿನ್ನೆಲೆ ಅನೇಕ ಮನೆಗಳಿಗೆ ನೀರು ನುಗ್ಗಿದೆ. ಅಂತಹ ಮನೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇನೆ. ಜೊತೆಗೆ ಕಾಳಜಿ ಕೇಂದ್ರದಲ್ಲಿರುವ ಸಂತ್ರಸ್ತರನ್ನು ಭೇಟಿಯಾಗಿ ಅವರ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದಿದ್ದೇನೆ ಎಂದರು.
ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಸ್ಥಳೀಯರು ನೀಡಿದ ಅಹವಾಲು ಸ್ವೀಕರಿಸಿ, ತೋಡಿನಿಂದ ಉಂಟಾಗುವ ಸಮಸ್ಯೆ ಬಗ್ಗೆ ಶೀಘ್ರವಾಗಿ ಸರಿಪಡಿಸಲು ಅಧಿಕಾರಿಗಳಿಗೆ ಸೂಚಿಸಿದ್ಧೇನೆ. ಪಾಕೃತಿಕ ವಿಕೋಪದಡಿಯಲ್ಲಿ ಕೊಡುವ ತಲಾ 10 ಸಾವಿರ ರೂ. ಅನ್ನು ಸಂತ್ರಸ್ತರಿಗೆ ನೀಡಲು ಸೂಚನೆ ನೀಡಿದ್ದೇನೆ ಎಂದು ಹೇಳಿದರು.
ನೆರೆ ಬಂದು ಹೋದ ಬಳಿಕ ಮನೆಯಲ್ಲಿರುವ ಕೆಸರನ್ನು ತೆಗಿಸಲು ಅಧಿಕಾರಿಗಳಿಗೆ ತಿಳಿಸಿದ್ದು, ಈಗಾಗಲೇ ನೆರೆ ಕಡಿಮೆಯಾದ ಮನೆಗಳ ಕೆಸರನ್ನು ತೆಗೆದು ಶುಚಿ ಮಾಡುವ ಕಾರ್ಯ ಕೈಗೊಂಡಿದ್ದಾರೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಸಹಾಯಕ ಕಮಿಷನರ್ ಹರ್ಷವರ್ದನ್ ಪಿ.ಜೆ, ಪ್ರೋಬೆಷನರಿ ಐ.ಎ.ಎಸ್ ಅಧಿಕಾರಿ ಶ್ರವಣ್, ತಹಶಿಲ್ದಾರ್ ಅರ್ಚನಾ ಭಟ್, ಪುರಸಭಾ ಮುಖ್ಯಾಧಿಕಾರಿ ಲೀನಾ ಬ್ರಿಟ್ಟೊ, ಆರೋಗ್ಯಾಧಿಕಾರಿ ಆಶೋಕ್ ರೈ, ಪುರಸಭಾ ಆರೋಗ್ಯ ಅಧಿಕಾರಿ ರತ್ನ ಪ್ರಸಾದ್, ಕಂದಾಯ ನಿರೀಕ್ಷಕ ಜನಾರ್ದನ, ವಿಜಯ್, ಸಿಬ್ಬಂದಿ ಸದಾಶಿವ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್ ಸಿಸ್ಟಮ್
Bantwala: ಶರಣ್ ಪಂಪ್ ವೆಲ್ ಗೆ ಸವಾಲು ಹಾಕಿದ ಶರೀಫ್… ಬಂಟ್ವಾಳದಲ್ಲಿ ಬಿಗುವಿನ ವಾತಾವರಣ
Eid Milad: ರ್ಯಾಲಿ ವಿಚಾರ ಪ್ರಚೋದನಕಾರಿ ಹೇಳಿಕೆ: ಇಬ್ಬರ ವಿರುದ್ಧ ಪ್ರಕರಣ ದಾಖಲು
Cocoa; ವ್ಯಾಪಕವಾಗಿ ಕರಟಿದ ಕೊಕ್ಕೋ; ವಿಪರೀತ ಮಳೆ ತಂದೊಡ್ಡಿದೆ ಬೆಳೆಗಾರರಿಗೆ ಭಾರೀ ನಷ್ಟ
Sullia: ಬೈಕ್ ಗಳ ನಡುವೆ ಅಪಘಾತ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.