Bantwala: ಶಾಮಿಯಾನದ ಕೆಲಸಗಾರ ವಿದ್ಯುತ್ ಶಾಕ್ ಗೆ ಬಲಿ
Team Udayavani, Jul 20, 2024, 2:39 PM IST
ಬಂಟ್ವಾಳ: ಶಾಮಿಯಾನದ ಲಾರಿ ಪಲ್ಟಿಯಾಗಿ ಓರ್ವ ಮೃತಪಟ್ಟ ಘಟನೆ ಪುಂಜಾಲಕಟ್ಟೆಯಲ್ಲಿ ನಡೆದ ಮರುದಿನವೇ ಶಾಮಿಯಾನದ ಕೆಲಸಗಾರನೋರ್ವ ವಿದ್ಯುತ್ ಶಾಕ್ ಗೆ ಬಲಿಯಾದ ದುರಂತ ಘಟನೆ ತಾಲೂಕಿನಲ್ಲಿ ನಡೆದಿದೆ.
ಲಾರಿಯೊಂದರಿಂದ ಶಾಮಿಯಾನದ ಸಾಮಾಗ್ರಿಗಳನ್ನು ಇಳಿಸುವ ವೇಳೆ ವಿದ್ಯುತ್ ವಯರ್ ತಾಗಿ ನಾಲ್ವರು ಕೆಲಸಗಾರರಿಗೆ ಗಾಯವಾಗಿದ್ದು, ಅದರಲ್ಲಿ ಓರ್ವ ಗಂಭೀರವಾಗಿ ಗಾಯಗೊಂಡು ಚಿಂತಾಜನಕ ಸ್ಥಿತಿಯಲ್ಲಿ ಮಂಗಳೂರು ಆಸ್ಪತ್ರೆಗೆ ಸಾಗಿಸುವ ವೇಳೆ ದಾರಿ ಮಧ್ಯೆ ಮೃತಪಟ್ಟ ಘಟನೆ ಕಡೇಶಿವಾಲಯ ಸಮೀಪ ಕೆಮ್ಮನ್ ಕಾಡಬೆಟ್ಟು ಎಂಬಲ್ಲಿ ಜು.20ರ ಶನಿವಾರ ಮಧ್ಯಾಹ್ನ ನಡೆದಿದೆ.
ಕಡೇಶಿವಾಲಯ ಗ್ರಾಮದ ಕಾಡಬೆಟ್ಟು ಎಂಬಲ್ಲಿ ಖಾಸಗಿ ಕಾರ್ಯಕ್ರಮದ ನಿಮಿತ್ತ ಕಲ್ಲಡ್ಕದ ಚಂದ್ರಶೇಖರ ಸಾಲಿಯನ್ ಅವರ ಮಾಲಿಕತ್ವದ ಸಾಲಿಯನ್ ಶಾಮಿಯಾನದ 5 ಜನ ಕೆಲಸಗಾರರಿಗೆ ವಿದ್ಯುತ್ ತಂತಿ ತಗುಲಿ ಕುಂದನ್ ಕುಮಾರ್ (20) ಮೃತಪಟ್ಟಿದ್ದು, ಬಾಕಿ 4 ಜನ ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ.
ಮೃತ ಕುಂದನ್ ಕುಮಾರ್ ಮೂಲತ ಬಿಹಾರ ರಾಜ್ಯದ ನಿವಾಸಿ. 4 ಜನ ಗಾಯಾಳುಗಳ ಪೈಕಿ ಎರಡು ಜನ ಜಾರ್ಖಂಡ್, ಒಬ್ಬರು ಪಶ್ಚಿಮ ಬಂಗಾಳ ಹಾಗೂ ಇನ್ನೊಬ್ಬರು ಕಡೇಶಿವಾಲಯ ಗ್ರಾಮದ ಸ್ಥಳಿಯ ನಿವಾಸಿ.
ಬಂಟ್ವಾಳ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಂಟ್ವಾಳ ಕಂದಾಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bantwala: ಶರಣ್ ಪಂಪ್ ವೆಲ್ ಗೆ ಸವಾಲು ಹಾಕಿದ ಶರೀಫ್… ಬಂಟ್ವಾಳದಲ್ಲಿ ಬಿಗುವಿನ ವಾತಾವರಣ
Eid Milad: ರ್ಯಾಲಿ ವಿಚಾರ ಪ್ರಚೋದನಕಾರಿ ಹೇಳಿಕೆ: ಇಬ್ಬರ ವಿರುದ್ಧ ಪ್ರಕರಣ ದಾಖಲು
Cocoa; ವ್ಯಾಪಕವಾಗಿ ಕರಟಿದ ಕೊಕ್ಕೋ; ವಿಪರೀತ ಮಳೆ ತಂದೊಡ್ಡಿದೆ ಬೆಳೆಗಾರರಿಗೆ ಭಾರೀ ನಷ್ಟ
Sullia: ಬೈಕ್ ಗಳ ನಡುವೆ ಅಪಘಾತ
ವಿಟ್ಲ: ಅಡಿಕೆ ಸುಲಿಯುವ ಯಂತ್ರ ಕಂಡು ಹಿಡಿದ ನರಸಿಂಹ ಭಟ್ ವಿಧಿವಶ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.