![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, Sep 23, 2023, 1:24 PM IST
ಬಂಟ್ವಾಳ: ಕಾರು ಢಿಕ್ಕಿಯಾಗಿ ರಿಕ್ಷಾ ಚಾಲಕ ಮೃತಪಟ್ಟ ಘಟನೆ ವಗ್ಗ ಸಮೀಪದ ಕಾಡಬೆಟ್ಟು ಕ್ರಾಸ್ ಎಂಬಲ್ಲಿ ನಡೆದಿದೆ.
ಕೆಂಪುಗುಡ್ಡೆ ನಿವಾಸಿ ವಿನಾಯಕ ಪೈ ಮೃತಪಟ್ಟ ದುರ್ದೈವಿ.
ವಿನಾಯಕ ಪೈ ತಮ್ಮ ಮನೆಯಲ್ಲಿ ಕೆಲಸ ಮಾಡುವ ಕೂಲಿ ಕಾರ್ಮಿಕರಿಗೆ ಬೆಳಗ್ಗಿನ ಉಪಹಾರ ತರಲೆಂದು ವಗ್ಗದ ಹೊಟೇಲ್ ವೊಂದಕ್ಕೆ ಹೋಗುವ ವೇಳೆ ಈ ಅಪಘಾತ ನಡೆದಿದೆ ಎನ್ನಲಾಗಿದೆ.
ಬೆಳ್ತಂಗಡಿ ಕಡೆಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ವ್ಯಾಗನಾರ್ ಕಾರು ರಿಕ್ಷಾಕ್ಕೆ ಡಿಕ್ಕಿಯಾದ ಪರಿಣಾಮ ಗಂಭೀರ ಗಾಯಗೊಂಡ ವಿನಾಯಕ ಪೈ ಅವರನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಆಸ್ಪತ್ರೆ ಸಾಗಿಸುವ ದಾರಿ ಮಧ್ಯದಲ್ಲಿ ಅವರು ಅಸುನೀಗಿದ್ದಾರೆ ಎಂದು ಮಾಹಿತಿ ಲಭಿಸಿದೆ.
ಬಂಟ್ವಾಳ ಟ್ರಾಫಿಕ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
You seem to have an Ad Blocker on.
To continue reading, please turn it off or whitelist Udayavani.