Belthanagdy:ಹಿರಿಯ ಸಹಕಾರಿ,ಉಜಿರೆ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸೇವಾಸಂಘದ ಅಧ್ಯಕ್ಷ ನಿಧನ
Team Udayavani, Oct 6, 2024, 12:33 PM IST
ಬೆಳ್ತಂಗಡಿ: ಉಜಿರೆ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸೇವಾ ಸಂಘದಲ್ಲಿ ಅಧ್ಯಕ್ಷ, ಹಿರಿಯ ಸಹಕಾರಿ, ಉಜಿರೆ ಇಚ್ಚಿಲ ನಿವಾಸಿ ಇ.ಸುಂದರ ಗೌಡ (74) ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅ.6ರಂದು ನಿಧನ ಹೊಂದಿದರು.
ಅವರು ಪತ್ನಿ, ಪುತ್ರ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
ಉಜಿರೆ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸೇವಾ ಸಂಘದಲ್ಲಿ ಕಳೆದ 40 ವರ್ಷದಿಂದ ಅಧ್ಯಕ್ಷರಾಗಿ, 43 ವರ್ಷರಿಂದ ನಿರ್ದೇಶಕರಾಗಿ, ಉಜಿರೆ ರಬ್ಬರ್ ಸೊಸೈಟಿ ಮಂಗಳೂರಿನ ಮಾಸ್ ಲಿಮಿಟೆಡ್ ನ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದ ಅವರು ಕಾಂಗ್ರೆಸ್ ಪಕ್ಷದ ಹಿರಿಯ ಕಾರ್ಯಕರ್ತರಾಗಿ ಮಾಜಿ ಶಾಸಕ ದಿ.ಕೆ.ವಸಂತ ಬಂಗೇರ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದರು.
ಮೂರು ಬಾರಿ ಜಿಲ್ಲಾ ಪಂಚಾಯತಿ ಸದಸ್ಯರಾಗಿಯು ಆಯ್ಕೆಯಾಗಿದ್ದರು. ಉಜಿರೆ ರಬ್ಬರ್ ಸೊಸೈಟಿ ಕಳೆದ ನಾಲ್ಕು ಅವಧಿಯಲ್ಲಿ ನಿರ್ದೇಶಕರಾಗಿ, ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ನ ನಿರ್ದೇಶಕರಾಗಿ, ಜಿಲ್ಲಾ ಸಹಕಾರಿ ಯೂನಿಯನ್ ಉಪಾಧ್ಯಕ್ಷರಾಗಿ, ಬೆಳ್ತಂಗಡಿ ಎಪಿಎಂಸಿ ನಿರ್ದೇಶಕರಾಗಿದ್ದರು. ಉಜಿರೆ ಕಾಲಭೈರವ ಒಕ್ಕಲಿಗರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದಲ್ಲಿ ಕಳೆದ ಐದು ವರ್ಷಗಳಿಂದ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.
ಸಮಾಜ ಸೇವೆಯಲ್ಲಿ ಮುಂಚೂಣಿಯಲ್ಲಿದ್ದ ಅವರು ಹಲವು ಸಂಘ, ಸಂಸ್ಥೆಗಳಲ್ಲಿ ತೊಡಗಿಸಿಕೊಂಡಿದ್ದರು. ಕಳೆದ ಅನೇಕ ವರ್ಷಗಳಿಂದ ಉದ್ಯಮವನ್ನು ನಡೆಸುತ್ತಿದ್ದರು.
ಮೃತರು ಅನಾರೋಗ್ಯದಿಂದ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಇಂದು ನಿಧನರಾಗಿದ್ದು, ಅವರ ಪುತ್ರಿ ವಿದೇಶದಲ್ಲಿದ್ದು, ಬಂದ ಬಳಿಕ ನಾಳೆ ಅಂತ್ಯಸಂಸ್ಕಾರ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Delhi: ರಾಮಲೀಲಾ ಪ್ರದರ್ಶನದ ವೇಳೆ ಕುಸಿದು ಬಿದ್ದು ರಾಮನ ಪಾತ್ರಧಾರಿ ಮೃತ್ಯು
Mangaluru: ಕಲೆಗೆ ಜೀವ ತಳೆವ ನವದುರ್ಗೆಯರು!
ಕನ್ನಡ ಜ್ಯೋತಿ ರಥ; ಕಾಪು ತಾಲೂಕಿಗೆ ಸ್ವಾಗತ; ಕನ್ನಡ ಅಮೃತ ಭಾಷೆಯಾಗಿ ಬೆಳಗಲಿ: ತಹಶೀಲ್ದಾರ್
Mumtaz Ali; ಮೊಯ್ದೀನ್ ಬಾವ ಸೋದರ ನಾಪತ್ತೆ; ಸೇತುವೆಯಲ್ಲಿ ಕಾರು ಬಿಟ್ಟು ಆತ್ಮಹತ್ಯೆ ಶಂಕೆ !
Bigg Boss Kannada11: ಬಿಗ್ ಬಾಸ್ ಮನೆಯಿಂದ ಈ ವಾರ ಹೊರಗೆ ಬರುವುದು ಇವರೇ..?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.