![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, Apr 21, 2020, 5:50 AM IST
ಬೆಳ್ತಂಗಡಿ: ಪ್ರತಿ ಸೋಮವಾರ ಬೆಳ್ತಂಗಡಿ ಸಂತೆ ಮಾರುಕಟ್ಟೆ ಪ್ರದೇಶದಲ್ಲಿ ನಡೆಸಲಾಗುತ್ತಿದ್ದ ವಾರದ ಸಂತೆಯನ್ನು ಕೋವಿಡ್ 19 ಮುನ್ನೆಚ್ಚರಿಕೆ ಕ್ರಮವಾಗಿ ಸೋಮವಾರ ವಾಣಿ ಕಾಲೇಜು ಸಮೀಪದ ಎಪಿಎಂಸಿ ಪ್ರಾಂಗಣದಲ್ಲಿ ತಾತ್ಕಾಲಿಕವಾಗಿ ನಡೆಸಲಾಯಿತು.
ಬೆಳ್ತಂಗಡಿ ವಾರದ ಸಂತೆಯು ಮೊದಲ ಬಾರಿಗೆ ಎಪಿಎಂಸಿ ಪ್ರಾಂಗಣಕ್ಕೆ ಸ್ಥಳಾಂತರವಾದ್ದರಿಂದ ಅಲ್ಲಿನ ವ್ಯಾಪಾರ ವಹಿವಾಟುಗಳನ್ನು ಶಾಸಕ ಹರೀಶ್ ಪೂಂಜ ಪರಿಶೀಲಿಸಿದರು. ಸಾರ್ವಜನಿಕರಿಗೆ ಖರೀದಿ ಮಾಡುವಾಗ ಸಾಮಾಜಿಕ ಅಂತರ ಕಾಪಾಡಿಕೊಳ್ಳುವಂತೆ ಜಾಗೃತಿ ಮೂಡಿ ಸಲಾಯಿತು. ವ್ಯಾಪಾರದ ಬಗ್ಗೆ ಮಾಹಿತಿ ಪಡೆದುಕೊಂಡರು.
ಸೋಮವಾರ ಬೆಳಗ್ಗೆ 5.30 ರಿಂದಲೇ ಎಪಿಎಂಸಿ ಪ್ರಾಂಗಣದಲ್ಲಿ ತರಕಾರಿ, ಹಣ್ಣುಹಂಪಲು, ಒಣ ಮೀನು ವ್ಯಾಪಾರ ವಹಿವಾಟು ಆರಂಭಗೊಂಡಿದ್ದವು. ಸುಮಾರು 25 ಅಂಗಡಿಗಳಿಗೆ ಫ್ಲಾ Âಟ್ ಫಾರಂ ನಂಬರ್ ನೀಡಲಾಗಿತ್ತು. ದ್ವಿಚಕ್ರ, ತ್ರಿಚಕ್ರ ವಾಹನ ಪಾರ್ಕಿಂಗ್ಗೆ ಅವಕಾಶ ಕಲ್ಪಿಸಿಕೊಡಲಾಗಿತ್ತು.
ಪೊಲೀಸರಿಂದ ಬಂದೋಬಸ್ತ್
ಸಂತೆಕಟ್ಟೆ ಪ್ರದೇಶದಲ್ಲಿ ಯಾವುದೇ ವ್ಯಾಪಾರ ವಹಿವಾಟುಗಳು ನಡೆಯ ದಂತೆ, ಜನ ಜಂಗುಳಿ, ವಾಹನಗಳ ಓಡಾಟವು ಹೆಚ್ಚಾಗದಂತೆ ಪೊಲೀಸರನ್ನು ನಿಯೋಜಿಸಲಾಗಿತ್ತು. ಸಂತೆಕಟ್ಟೆ ಬಳಿ ಬ್ಯಾರಿಕೇಡ್ ಹಾಕಿ ಸೂಚನಾಫಲಕ ಅಳವಡಿಸಲಾಗಿತ್ತು. ರವಿವಾರ ರಾತ್ರಿಯಿಂದಲೇ ಅಂಗಡಿಗಳನ್ನು ಎಪಿಎಂಸಿ ಪ್ರಾಂಗಣಕ್ಕೆ ಸ್ಥಳಾಂತರಿಸಲು ಕ್ರಮ ಕೈಗೊಳ್ಳಲಾಗಿತ್ತು.
ಸಾರ್ವಜನಿಕರು ತರಕಾರಿ, ಹಣ್ಣು ಹಂಪಲು ಖರೀದಿಗೆ ಸಂತೆಕಟ್ಟೆ ಬಳಿ ಬಂದವರಿಗೆ ಪೊಲೀಸರು ಸೂಚನೆ ನೀಡಿ ಎಪಿಎಂಸಿ ಪ್ರಾಂಗಣಕ್ಕೆ ಕಳುಹಿಸುತ್ತಿದ್ದರು.
ತಹಶೀಲ್ದಾರ್ ಗಣಪತಿ ಶಾಸ್ತ್ರಿ, ನಗರ ಪಂಚಾಯತ್ ಮುಖ್ಯಾಧಿಕಾರಿ ಸುಧಾಕರ್ ಎಂ.ಎಚ್., ಎ.ಪಿ.ಎಂ.ಸಿ. ಅಧ್ಯಕ್ಷ ಕೇಶವ ಗೌಡ ಬೆಳಾಲು, ಬೆಳ್ತಂಗಡಿ ಠಾಣೆ ವೃತ್ತ ನಿರೀಕ್ಷಕ ಸಂದೇಶ್ ಪಿ.ಜಿ., ಎಪಿಎಂಸಿ ಕಾರ್ಯದರ್ಶಿ ರವೀಂದ್ರ, ನಗರ ಪಂಚಾ ಯತ್ ಎಂಜಿನಿಯರ್ ಮಹಾವೀರ ಆರಿಗ ಮೊದಲಾದವರು ಉಪಸ್ಥಿತರಿದ್ದರು.
ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ
ಪ್ರತಿ ಸೋಮವಾರ ಸಂತೆಯಿಂದಾಗಿ ಹೆದ್ದಾರಿ ಸಂಚಾರ, ಬೇಕಾಬಿಟ್ಟಿ ವಾಹನ ಪಾರ್ಕಿಂಗ್ ಮಾಡುತ್ತಿದ್ದ ಪರಿಣಾಮ ನಗರದಲ್ಲಿ ಸಂಚಾರ ದಟ್ಟಣೆ ಎದುರಿಸಬೇಕಾಗಿತ್ತು. ಈ ಕುರಿತು ಹಲವು ದಶಕಗಳಿಂದ ಸಂತೆಮಾರುಕಟ್ಟೆ ಸ್ಥಳಾಂತರಕ್ಕೆ ಒತ್ತಾಸೆ ಕೇಳಿಬಂದಿತ್ತು. ಆದರೆ ರಾಜಕೀಯ ಲಾಬಿಯಿಂದ ಈಡೇರಿಲ್ಲ. ಅತ್ತ ಎಪಿಎಂಸಿ ಪ್ರಾಂಗಣದಲ್ಲಿ ಸರಕಾರ ಸಾರ್ವಜನಿಕರ ಅನುಕೂಲಕ್ಕೆ ನಿರ್ಮಿಸಿದ ಕಟ್ಟಡಗಳು ಪ್ರಯೋಜನಕ್ಕೆ ಬಾರದಂತಾಗಿತ್ತು. ಈಗಿನಂತೆ ಮುಂದೆಯೂ ವಾರದ ಸಂತೆ ಎಪಿಎಂಸಿಯಲ್ಲೇ ನಡೆಸುವಂತೆ ಜನಭಿಪ್ರಾಯ ಕೇಳಿಬಂದಿದೆ.
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.