Belthangady: ರಸ್ತೆ ಮಧ್ಯೆಯೇ ಬಸ್ ನಿಲ್ಲಿಸಿದರೆ ಶಿಸ್ತು ಕ್ರಮ
Team Udayavani, Sep 17, 2024, 1:02 PM IST
ಬೆಳ್ತಂಗಡಿ: ಸರಕಾರಿ ಸಾರಿಗೆ ಸಹಿತ ಖಾಸಗಿ ಬಸ್ ಚಾಲಕರು ರಸ್ತೆ ಮಧ್ಯೆಯೇ ಪ್ರಯಾಣಿಕರನ್ನು ಇಳಿಸುವ ಅಥವಾ ಬಸ್ ಹತ್ತಿಸುವುದರಿಂದ ಸಾರ್ವಜನಿಕರಿಗೆ ಹಾಗೂ ವಾಹನ ಸವಾರರಿಗೆ ಸಮಸ್ಯೆ ಉಂಟಾಗುತ್ತಿರುವ ವಿಚಾರವಾಗಿ ಪುತ್ತೂರು ವಿಭಾಗೀಯ ಸಂಚಾರ ಅಧಿಕಾರಿಗಳು ಚಾಲಕರಿಗೆ ತಿಳುವಳಿಕೆ ನೀಡಿರುವುದಾಗಿ ತಿಳಿಸಿದ್ದಾರೆ.
ಬೆಳ್ತಂಗಡಿಯಿಂದ ಧರ್ಮಸ್ಥಳ ಮಾರ್ಗವಾಗಿ ಸಂಚರಿಸುತ್ತಿದ್ದ ಸಾರಿಗೆ ಬಸ್ ಕಳೆದ ಕೆಲ ದಿನಗಳ ಹಿಂದೆ ವಿದ್ಯಾರ್ಥಿಗಳಿಗೆ ನಡುರಸ್ತೆಯಲ್ಲೇ ನಿಲ್ಲಿಸಿ ಪಿಕಪ್ ಮಾಡಿರುವ ಫೋಟೋ ಸಹಿತ ಉದಯವಾಣಿ ಸುದಿನದಲ್ಲಿ ವರದಿ ಪ್ರಕಟಿಸಲಾಗಿತ್ತು. ಈ ಸಂಬಂಧ ಸಂಬಂಧಪಟ್ಟ ಚಾಲಕರಿಗೆ ಮೊದಲನೆಯದಾಗಿ ತಿಳುವಳಿಕೆ ನೋಟೀಸ್ ನೀಡುವ ಕ್ರಮಕ್ಕೆ ಮುಂದಾಗಿದ್ದು, ಮಾತ್ರವಲ್ಲದೆ ಎಲ್ಲ ಕೆಎಸ್ಆರ್ಟಿಸಿ ವಿಭಾಗೀಯ ಸಂಚಾರಕ್ಕೊಳಪಟ್ಟಂತೆ ಚಾಲಕರಿಗೆ ಅರಿವು ಮೂಡಿಸಲು ಪ್ರತ್ಯೇಕ ತಂಡ ನಿಯೋಜಿಸಲು ಕ್ರಮ ವಹಿಸಿದೆ.
ರಸ್ತೆ ಮಧ್ಯೆ ಬಸ್ ನಿಲ್ಲಿಸಿ ಪ್ರಯಾಣಿಕರನ್ನು ಪಿಕಪ್, ಡ್ರಾಪ್ ಮಾಡುವ ವಿಚಾರ ಈಗಾಗಲೆ ಗಮನಕ್ಕೆ ಬಂದಿದ್ದು, ಪ್ರಾಥಮಿಕವಾಗಿ ಎಲ್ಲ ಚಾಲಕರಿಗೆ ತಿಳಿವಳಿಕೆ ನೀಡಲಾಗುವುದು. ಈಗಾಗಲೆ ನಿಯಮ ಉಲ್ಲಂಘಿಸಿದ ಚಾಲಕರ ಮೇಲೆ ಶಿಸ್ತು ಕ್ರಮ ವಹಿಸಲಾಗುವುದು. ಜತೆಗೆ ಮುಂದೆ ಹೀಗಾಗದಂತೆ ಇಲಾಖೆ ಎಚ್ಚರಿಕೆ ವಹಿಸಲಿದೆ.
-ಜೈಶಾಂತ್, ಪುತ್ತೂರು ವಿಭಾಗೀಯ ಸಂಚಾರ ಅಧಿಕಾರಿ
ಈ ಕುರಿತು ಸಾರಿಗೆ ಇಲಾಖೆಗೆ ಸಾರ್ವಜನಿಕರು ದೂರು ನೀಡಿರುವ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ತಿಳಿಸಿದ್ದು, ಚಾಲಕರಿಗೆ ಸೂಚನೆ ನೀಡಲಾಗಿದೆ. ಜತೆಗೆ ಸಾರಿಗೆ ಸಂಚಾರ ನಿಯಂತ್ರಣ ಅಧಿಕಾರಿಗಳಿಗೆ ಈ ಕುರಿತು ಚಾಲಕರಿಗೆ ನಿಯಮ ಉಲ್ಲಂಘಿಸದಂತೆ ಕ್ರಮವಹಿಸಲು ಮೇಲಾಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
ಪ್ರತೀ ಪೇಜರ್ನಲ್ಲಿ 3 ಗ್ರಾಂ. ಸ್ಫೋಟಕ: ಪೇಜರಲ್ಲಿ ಸ್ಫೋಟಕ ಇಟ್ಟಿದ್ದು ಇಸ್ರೇಲ್ನ ಮೊಸಾದ್?
Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್!
Mohana Singh: ತೇಜಸ್ ಯುದ್ಧ ವಿಮಾನಕ್ಕೆ ಮೊದಲ ಮಹಿಳಾ ಪೈಲಟ್ ಆಗಿ ಮೋಹನಾ ಸಿಂಗ್ ನೇಮಕ
Laddoo: ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು… YSR ಕಾಂಗ್ರೆಸ್ ವಿರುದ್ಧ ನಾಯ್ಡು ಆರೋಪ
Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.